Homeಮುಖಪುಟನೆನಪಿಡಿ, ಉಚಿತ ಯೋಜನೆಗಳನ್ನು ಜಾರಿ ಮಾಡಿಯೂ ತಮಿಳುನಾಡು, ಆಂಧ್ರ, ತೆಲಂಗಾಣ ರಾಜ್ಯಗಳು ದಿವಾಳಿಯಾಗಿಲ್ಲ

ನೆನಪಿಡಿ, ಉಚಿತ ಯೋಜನೆಗಳನ್ನು ಜಾರಿ ಮಾಡಿಯೂ ತಮಿಳುನಾಡು, ಆಂಧ್ರ, ತೆಲಂಗಾಣ ರಾಜ್ಯಗಳು ದಿವಾಳಿಯಾಗಿಲ್ಲ

ಆಂಧ್ರಪ್ರದೇಶ ರಾಜ್ಯವು ಈ ನಾಲ್ಕು ವರ್ಷಗಳಲ್ಲಿ 2,10,177 ಕೋಟಿ ರೂಗಳನ್ನು ನೇರ ಫಲಾನುಭವಿಗಳಿಗೆ ವರ್ಗಾವಣೆ ಯೋಜನೆಗಳಿಗೆ ಬಳಸಿದೆ.

- Advertisement -
- Advertisement -

ಕರ್ನಾಟಕದಲ್ಲಿ ನೂತನವಾಗಿ ಅಧಿಕಾರ ಬಂದ ಕಾಂಗ್ರೆಸ್ ಪಕ್ಷವು ತಾನು ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳನ್ನು ಹೆಚ್ಚಿನ ಕಂಡಿಷನ್‌ಗಳಿಲ್ಲದೆ ಜಾರಿಗೊಳಿಸಲು ಮುಂದಾಗಿದೆ. ಜುಲೈ 1 ರಿಂದ ಪ್ರತಿಯೊಂದು ಕುಟುಂಬಕ್ಕೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡಲಾಗುವುದು. ಆಗಸ್ಟ್ 15 ರಂದು ಮನೆಯೊಡತಿಯ ಖಾತೆಗೆ 2,000 ರೂ ಜಮಾ ಮಾಡಲಾಗುವುದು. ಜುಲೈ 1 ರಿಂದ ಬಿಪಿಎಲ್ ಕಾರ್ಡುದಾರರಿಗೆ ಮತ್ತು ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು. ಜೂನ್ 11 ರಂದು ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಲಾಗುವುದು. 2022-23 ರಲ್ಲಿ ವ್ಯಾಸಂಗ ಮಾಡಿ ಪದವಿ ಪಡೆದವರಿಗೆ 24 ತಿಂಗಳುಗಳವರೆಗೆ ಪ್ರತಿ ತಿಂಗಳಿಗೆ 3000 ರೂ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಯೋಜನೆಗಳ ಜಾರಿಗೆ ವಾರ್ಷಿಕ ಅಂದಾಜು 50,000 ಕೋಟಿ ರೂಗಳು ಅಗತ್ಯ ಬೀಳುತ್ತದೆ ಎಂದು ಅಂದಾಜಿಸಲಾಗಿದೆ. ಈ ಸಂದರ್ಭದಲ್ಲಿ ಬಡವರಿಗೆ ಈ ಯೋಜನೆಗಳನ್ನು ಜಾರಿಗೊಳಿಸಿದರೆ ರಾಜ್ಯದ ಅಭಿವೃದ್ದಿ ಕುಂಠಿತಗೊಳ್ಳುತ್ತದೆ, ರಾಜ್ಯ ದಿವಾಳಿಯಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಈಗಾಗಲೇ 5-6 ವರ್ಷಗಳಿಂದ ಇದೇ ಮಾದರಿಯ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿರುವ ದಕ್ಷಿಣದ ಇತರೆ ರಾಜ್ಯಗಳಾದ ತಮಿಳುನಾಡು, ಆಂಧ್ರ, ತೆಲಂಗಾಣಗಳ ಆರ್ಥಿಕ ಪರಿಸ್ಥಿತಿ ನೋಡಿದರೆ ಅವು ದಿವಾಳಿಯಾಗಿಲ್ಲ ಎಂಬುದು ಮನದಟ್ಟಾಗುತ್ತದೆ. ಹಾಗಾಗಿ ಅವರು ನೀಡಿರುವ ಕಲ್ಯಾಣ ಯೋಜನೆಗಳು ಯಾವುವು? ಅವುಗಳಿಗೆ ತಗುಲಿದ ವೆಚ್ಚವೆಷ್ಟು ಎಂಬುದನ್ನು ನೋಡೋಣ.

ತಮಿಳುನಾಡು

ಸದ್ಯ ಆಡಳಿತದಲ್ಲಿರುವ ಸಿಎಂ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವು 2021ರ ವಿಧಾನಸಭಾ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಅರ್ಹ ಮನೆಯ ಮನೆಯೊಡತಿಗೆ ತಿಂಗಳಿಗೆ 1000 ರೂ ನೀಡುವ ಯೋಜನೆಯನ್ನು ಈ ವರ್ಷದ ಸೆಪ್ಟಂಬರ್‌ನಿಂದ ಜಾರಿಗೊಳಿಸಲು ಮುಂದಾಗಿದೆ. ಅಲ್ಲದೇ ಶಾಲೆಗಳಲ್ಲಿ ಮಕ್ಕಳಿಗೆ ಬೆಳಗಿನ ತಿಂಡಿ ನೀಡುವ ಯೋಜನೆ ಜಾರಿಗೊಳಿಸಿದೆ.

ತೆಲಂಗಾಣ

ತೆಲಂಗಾಣವು ಮೇ 2018 ರಿಂದ ರೈತರಿಗಾಗಿ ‘ರೈತ ಬಂಧು’ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಪ್ರತಿ ಬೆಳೆ ಋತುವಿಗೆ ಪ್ರತಿ ಎಕರೆಗೆ 4,000 ರೂಪಾಯಿಗಳ “ಹೂಡಿಕೆ ಬೆಂಬಲ” ವನ್ನು ನೀಡುತ್ತಿದ್ದು, 2019-20 ರಿಂದ ನೀಡುತ್ತಿದ್ದು, 5,000 ರೂಗಳಿಗೆ ಹೆಚ್ಚಿಸಲಾಗಿದೆ. ಕೆ ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರವು ಈ ಯೋಜನೆಗಾಗಿ 10 ಋತುಗಳಲ್ಲಿ ಒಟ್ಟು 65,559 ಕೋಟಿ ರೂಪಾಯಿಗಳನ್ನು ರೈತರಿಗೆ ವಿತರಿಸಿದೆ. ಈ ಹಣವನ್ನು ರಾಜ್ಯದ ಸುಮಾರು 65 ಲಕ್ಷ ಭೂಮಿ ಹೊಂದಿದ ರೈತರ ಆಧಾರ್-ಸೀಡ್ ಖಾತೆಗಳಿಗೆ ಜಮಾ ಮಾಡಲಾಗಿದೆ.

ಇದೇ ಮಾದರಿಯಲ್ಲಿ ಕೇಂದ್ರ ಸರ್ಕಾರವು 2019ರಿಂದ ಪಿಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆಯನ್ನು ಜಾರಿಗೊಳಿಸಿರುವುದನ್ನು ನೋಡಬಹುದು. ಅದರಂತೆ ರೈತರು ವಾರ್ಷಿಕ 6,000 ರೂಗಳ ನೆರವು ಪಡೆಯುತ್ತಿದ್ದಾರೆ.

ಇನ್ನು ತೆಲಂಗಾಣದಲ್ಲಿ ಹಿರಿಯ ನಾಗರಿಕರಿಗೆ, ವಿಧವೆಯರಿಗೆ, ಬೀಡಿ ಕಟ್ಟುವವರಿಗೆ ಮತ್ತು ನೀರಾ ಇಳಿಸುವವರಿಗೆ ಆಸರಾ ಪಿಂಚಣಿ ಹೆಸರಿನಲ್ಲಿ ಮಾಸಿಕ 2,016 ರೂಗಳ ಪಿಂಚಣಿ ನೀಡಲಾಗುತ್ತಿದೆ. ವಿಕಲಾಂಕಗರಿಗೆ ಮಾಸಿಕ 3,016 ರೂ ನೀಡಲಾಗುತ್ತಿದೆ. ರೈತ ಬಿಮಾ (5 ಲಕ್ಷ ರೂ ರಕ್ಷಣೆಯೊಂದಿಗೆ ಗುಂಪು ಜೀವ ವಿಮೆ) ಮತ್ತು ರೈತರಿಗೆ ಸಾಲ ಪರಿಹಾರ ನೀಡುತ್ತಿದೆ. ಜೊತೆಗೆ ಕಲ್ಯಾಣ ಲಕ್ಷ್ಮಿ/ಶಾದಿ ಮುಬಾರಕ್ ಯೋಜನೆ ಹೆಸರಿನಲ್ಲಿ ಪರಿಶಿಷ್ಟ ಜಾತಿಗಳು/ಪಂಗಡಗಳು, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನವವಿವಾಹಿತ ವಧುಗಳಿಗೆ  1,00,116 ರೂ ಒಂದು ಬಾರಿಯ ಅನುದಾನ ನೀಡಲಾಗುತ್ತಿದೆ. ರೈತ ಬಂಧು ಹೊರತುಪಡಿಸಿ ಸುಮಾರು 45 ಲಕ್ಷ ಫಲಾನುಭವಿಗಳುಳ್ಳ ಈ ಎಲ್ಲಾ ಯೋಜನೆಗಳಿಗಾಗಿ ಒಟ್ಟು 78,965 ಕೋಟಿ ರೂ.ಗಳನ್ನು ಖರ್ಚು ಮಾಡಿದೆ.

ಆಂಧ್ರ ಪ್ರದೇಶ

ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿಯವರ ಸರ್ಕಾರವು ರೈತ ಭರೋಸ ಎಂಬ ಯೋಜನೆ ಜಾರಿಗೊಳಿಸಿದೆ. ಪ್ರತಿ ರೈತರಿಗೆ ವಾರ್ಷಿಕ 7,500 ರೂಗಳನ್ನು ನೀಡುತ್ತಿದೆ. ಈ ಯೋಜನೆಗಾಗಿ ಇದುವರೆಗೂ 27,062 ಕೋಟಿ ರೂ ಖರ್ಚು ಮಾಡಿದೆ.

ವೈ.ಎಸ್ ಜಗನ್ ಮೋಹನ್ ರೆಡ್ಡಿಯವರ ಅಧಿಕಾರಕ್ಕೆ ಬಂದ 4 ವರ್ಷಗಳಲ್ಲಿ ಕಣುಕಾ ಹೆಸರಿನಲ್ಲಿ ವೃದ್ಧರು ಮತ್ತು ಇತರ ದುರ್ಬಲ ವರ್ಗಗಳಿಗೆ ವೈಎಸ್‌ಆರ್ ಪಿಂಚಣಿಗಾಗಿ ಆಂಧ್ರ ಸರ್ಕಾರ 70,318 ಕೋಟಿ ರೂಗಳನ್ನು ಖರ್ಚು ಮಾಡಿದೆ. ಮಹಿಳಾ ಸ್ವ-ಸಹಾಯ ಗುಂಪುಗಳಿಗೆ 36,922 ಕೋಟಿ ರೂ ಸಹಾಯಧನ ವಿತರಿಸಲಾಗಿದೆ.

ಜಗನಣ್ಣ ಅಮ್ಮವೋಡಿ ಯೋಜನೆಯಡಿ ಕಡಿಮೆ ಆದಾಯದ ಕುಟುಂಬಗಳ 1-12 ನೇ ತರಗತಿಯ ಶಾಲಾ ಮಕ್ಕಳ ತಾಯಂದಿರಿಗೆ ವಾರ್ಷಿಕ 15,000 ರೂಗಳನ್ನು ನೀಡಲಾಗುತ್ತಿದ್ದು, ಇದರಿಂದ 19,674 ಕೋಟಿ ರೂ ಖರ್ಚಾಗಿದೆ. ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಶುಲ್ಕವನ್ನು ಮರುಪಾವತಿಸಲು ಜಗನಣ್ಣ ವಿದ್ಯಾ ದೀವೆನಾ ಯೋಜನೆಯಡಿ 9,947 ಕೋಟಿ ರೂಗಳನ್ನು ವ್ಯಯಿಸಲಾಗಿದೆ. ಡಾ ವೈಎಸ್ಆರ್ ಆರೋಗ್ಯಶ್ರೀ ರೂ 5-ಲಕ್ಷ/ಕುಟುಂಬ/ವರ್ಷ ನಗದು ರಹಿತ ಆರೋಗ್ಯ ವಿಮೆಗಾಗಿ 8,845 ಕೋಟಿ ರೂ ವೆಚ್ಚ ಮಾಡಲಾಗಿದೆ.

ಒಟ್ಟಾರೆಯಾಗಿ ಆಂಧ್ರಪ್ರದೇಶ ರಾಜ್ಯವು ಈ ನಾಲ್ಕು ವರ್ಷಗಳಲ್ಲಿ 2,10,177 ಕೋಟಿ ರೂಗಳನ್ನು ನೇರ ಫಲಾನುಭವಿಗಳಿಗೆ ವರ್ಗಾವಣೆ ಯೋಜನೆಗಳಿಗೆ ಬಳಸಿದೆ. ಅಲ್ಲದೇ ಅದು ಸಮುದಾಯವಾರು ಖರ್ಚಿನ ವಿವರದ ಲೆಕ್ಕ ಸಹ ಇಟ್ಟಿದೆ. ರೂ 99,141 ಕೋಟಿ ಹಿಂದುಳಿದ ಸಮುದಾಯಗಳಿಗೆ, ರೂ 34,921 ಕೋಟಿ ಪರಿಶಿಷ್ಟ ಜಾತಿ ಸಮುದಾಯಗಳಿಗೆ, ರೂ 20,460 ಕೋಟಿ ಪರಿಶಿಷ್ಟ ಪಂಗಡ ಸಮುದಾಯಗಳಿಗೆ, ರೂ 11,886 ಕೋಟಿ ಅಲ್ಪಸಂಖ್ಯಾತರಿಗೆ ಮತ್ತು ಇತರರಿಗೆ 33,403 ಕೋಟಿ ರೂ ವಿನಿಯೋಗಿಸಲಾಗಿದೆ ಎಂದು ಹೇಳಿದೆ.

ಈ ರಾಜ್ಯಗಳು ಮಾತ್ರವಲ್ಲದೇ ದೆಹಲಿ ಸರ್ಕಾರ 200 ಯೂನಿಟ್‌ವರೆಗೂ ಉಚಿತ ವಿದ್ಯುತ್, ಉಚಿತ ಶಿಕ್ಷಣ, ಆರೋಗ್ಯ, ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದಂತಹ ಯೋಜನೆಗಳನ್ನು ಜಾರಿಗೊಳಿಸಿದೆ. ಪಂಜಾಬ್ ರಾಜ್ಯವು 300 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡುತ್ತಿದೆ. ಈ ಯಾವ ರಾಜ್ಯಗಳು ಸಹ ಆರ್ಥಿಕವಾಗಿ ದಿವಾಳಿಯಾಗಿಲ್ಲ ಎಂಬುದನ್ನು ಗಮನಿಸಬೇಕು.

ಭ್ರಷ್ಟಾಚಾರವನ್ನು ಸಂಪೂರ್ಣ ತಡೆಗಟ್ಟಿದರೆ, ಸೋರಿಕೆ ನಿಲ್ಲಿಸಿದರೆ ರಾಜ್ಯದ ಬೊಕ್ಕಸದ ಹಣ ಉಳಿಯುತ್ತದೆ. “ಒಂದು ಫ್ಲೈ ಓವರ್ ಕಟ್ಟಲು 3,000 ಕೋಟಿ ಟೆಂಡರ್ ಇದ್ದರೆ ದೆಹಲಿ ಸರ್ಕಾರ ಅದನ್ನು ಕೇವಲ 2,200 ಕೋಟಿ ರೂಗಳಲ್ಲಿ ಕಟ್ಟುತ್ತೇವೆ. ಉಳಿದ 800 ಕೋಟಿ ಹಣವನ್ನು ಈ ಉಚಿತ ಯೋಜನೆಗಳಿಗೆ ವಿನಿಯೋಗಿಸುತ್ತೇವೆ” ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದರು. ಇನ್ನು ಜನತೆ ಉಚಿತ ಯೋಜನೆಗಳಿಂದ ತಮಗೆ ಉಳಿತಾಯವಾದ ಹಣವನ್ನು ಇತರೆಡೆ ಬಳಸುತ್ತಾರೆ. ಇದರಿಂದ ಉತ್ಪಾದನೆ, ಉದ್ಯೋಗ ಸೃಷ್ಟಿ, ತೆರಿಗೆ ಸಂಗ್ರಹ, ಜಿಡಿಪಿ ಹೆಚ್ಚಳವಾಗುತ್ತದೆ. ಈ ಸರಪಳಿಯು ರಾಜ್ಯದ ಆರ್ಥಿಕತೆಯನ್ನು ಮೇಲೆತ್ತುತ್ತದೆಯೇ ಹೊರತು ಕೆಳಗಿಳಿಸುವುದಿಲ್ಲ ಎಂದು ಆರ್ಥಿಕ ತಜ್ಞರು ಹೇಳುತ್ತಾರೆ. ಇನ್ನು ರಾಜ್ಯದ ಅಭಿವೃದ್ದಿ ಕುಂಠಿತಗೊಳ್ಳುತ್ತದೆ ಎಂದು ಕೆಲವರು ಆರೋಪಿಸುತ್ತಾರೆ. ಅವರ ಪ್ರಕಾರ ರಾಜ್ಯವೆಂದರೆ ಅಲ್ಲಿ ವಾಸಿಸುವ ಜನರಲ್ಲವೇ? ಜನರಿಗೆ ಒಳ್ಳೇಯದಾದರೆ ಅದು ರಾಜ್ಯಕ್ಕೆ ಒಳ್ಳೇಯದು ತಾನೇ?

ಇನ್ನು ನಾವು ಕಟ್ಟುವ ತೆರಿಗೆ ಉಚಿತ ಯೋಜನೆಗಳಿಗೆ ಹೋಗುತ್ತದೆ ಎಂದು ಮೇಲ್ವರ್ಗದವರು ಹಲುಬುವುದು ಸಹ ತಪ್ಪಾದ ಕಥನವಾಗಿದೆ. ಏಕೆಂದರೆ 2021-22ರ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆಯಾಗಿ ಭಾರತೀಯರು ಪಾವತಿಸಿದ 6.73 ಲಕ್ಷ ಕೋಟಿ ರೂಗಳಿಗೆ ಹೋಲಿಸಿದರೆ, ಪರೋಕ್ಷ ತೆರಿಗೆಯಿಂದ 20.73 ಲಕ್ಷ ಕೋಟಿ ರೂ ಸಂಗ್ರಹಿಸಲಾಗಿದೆ. ಅಂದರೆ ಈ ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಡವರು ಮತ್ತು ಮಧ್ಯಮ ವರ್ಗದವರು ಕಟ್ಟುವ ಪರೋಕ್ಷ ತೆರಿಗೆಯ ಪಾಲು ಬೃಹತ್ ಪ್ರಮಾಣದಲ್ಲಿದೆ. ಅಂದರೆ ಬಡವರ ತೆರಿಗೆ ದುಡ್ಡನ್ನು ಅವರಿಗಾಗಿ ಬಳಸುವುದು ಸರಿಯಾದ ಕ್ರಮವಾಗಿದೆ. ಹಾಗಾಗಿ ಕಲ್ಯಾಣ ಯೋಜನೆಗಳನ್ನು ಉಚಿತ ಯೋಜನೆಗಳು ಎಂದು ಕರೆಯಬಾರದು, ಅವುಗಳು ಜನರ ಹಕ್ಕು ಎಂಬ ವಾದ ಸಹ ಆರಂಭವಾಗಿದೆ.

ಇದನ್ನೂ ಓದಿ: ದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ: ಇಲ್ಲಿದೆ ಪೂರ್ಣ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...