Homeಮುಖಪುಟನೆನಪಿಡಿ, ಉಚಿತ ಯೋಜನೆಗಳನ್ನು ಜಾರಿ ಮಾಡಿಯೂ ತಮಿಳುನಾಡು, ಆಂಧ್ರ, ತೆಲಂಗಾಣ ರಾಜ್ಯಗಳು ದಿವಾಳಿಯಾಗಿಲ್ಲ

ನೆನಪಿಡಿ, ಉಚಿತ ಯೋಜನೆಗಳನ್ನು ಜಾರಿ ಮಾಡಿಯೂ ತಮಿಳುನಾಡು, ಆಂಧ್ರ, ತೆಲಂಗಾಣ ರಾಜ್ಯಗಳು ದಿವಾಳಿಯಾಗಿಲ್ಲ

ಆಂಧ್ರಪ್ರದೇಶ ರಾಜ್ಯವು ಈ ನಾಲ್ಕು ವರ್ಷಗಳಲ್ಲಿ 2,10,177 ಕೋಟಿ ರೂಗಳನ್ನು ನೇರ ಫಲಾನುಭವಿಗಳಿಗೆ ವರ್ಗಾವಣೆ ಯೋಜನೆಗಳಿಗೆ ಬಳಸಿದೆ.

- Advertisement -
- Advertisement -

ಕರ್ನಾಟಕದಲ್ಲಿ ನೂತನವಾಗಿ ಅಧಿಕಾರ ಬಂದ ಕಾಂಗ್ರೆಸ್ ಪಕ್ಷವು ತಾನು ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳನ್ನು ಹೆಚ್ಚಿನ ಕಂಡಿಷನ್‌ಗಳಿಲ್ಲದೆ ಜಾರಿಗೊಳಿಸಲು ಮುಂದಾಗಿದೆ. ಜುಲೈ 1 ರಿಂದ ಪ್ರತಿಯೊಂದು ಕುಟುಂಬಕ್ಕೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡಲಾಗುವುದು. ಆಗಸ್ಟ್ 15 ರಂದು ಮನೆಯೊಡತಿಯ ಖಾತೆಗೆ 2,000 ರೂ ಜಮಾ ಮಾಡಲಾಗುವುದು. ಜುಲೈ 1 ರಿಂದ ಬಿಪಿಎಲ್ ಕಾರ್ಡುದಾರರಿಗೆ ಮತ್ತು ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು. ಜೂನ್ 11 ರಂದು ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಲಾಗುವುದು. 2022-23 ರಲ್ಲಿ ವ್ಯಾಸಂಗ ಮಾಡಿ ಪದವಿ ಪಡೆದವರಿಗೆ 24 ತಿಂಗಳುಗಳವರೆಗೆ ಪ್ರತಿ ತಿಂಗಳಿಗೆ 3000 ರೂ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಯೋಜನೆಗಳ ಜಾರಿಗೆ ವಾರ್ಷಿಕ ಅಂದಾಜು 50,000 ಕೋಟಿ ರೂಗಳು ಅಗತ್ಯ ಬೀಳುತ್ತದೆ ಎಂದು ಅಂದಾಜಿಸಲಾಗಿದೆ. ಈ ಸಂದರ್ಭದಲ್ಲಿ ಬಡವರಿಗೆ ಈ ಯೋಜನೆಗಳನ್ನು ಜಾರಿಗೊಳಿಸಿದರೆ ರಾಜ್ಯದ ಅಭಿವೃದ್ದಿ ಕುಂಠಿತಗೊಳ್ಳುತ್ತದೆ, ರಾಜ್ಯ ದಿವಾಳಿಯಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಈಗಾಗಲೇ 5-6 ವರ್ಷಗಳಿಂದ ಇದೇ ಮಾದರಿಯ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿರುವ ದಕ್ಷಿಣದ ಇತರೆ ರಾಜ್ಯಗಳಾದ ತಮಿಳುನಾಡು, ಆಂಧ್ರ, ತೆಲಂಗಾಣಗಳ ಆರ್ಥಿಕ ಪರಿಸ್ಥಿತಿ ನೋಡಿದರೆ ಅವು ದಿವಾಳಿಯಾಗಿಲ್ಲ ಎಂಬುದು ಮನದಟ್ಟಾಗುತ್ತದೆ. ಹಾಗಾಗಿ ಅವರು ನೀಡಿರುವ ಕಲ್ಯಾಣ ಯೋಜನೆಗಳು ಯಾವುವು? ಅವುಗಳಿಗೆ ತಗುಲಿದ ವೆಚ್ಚವೆಷ್ಟು ಎಂಬುದನ್ನು ನೋಡೋಣ.

ತಮಿಳುನಾಡು

ಸದ್ಯ ಆಡಳಿತದಲ್ಲಿರುವ ಸಿಎಂ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವು 2021ರ ವಿಧಾನಸಭಾ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಅರ್ಹ ಮನೆಯ ಮನೆಯೊಡತಿಗೆ ತಿಂಗಳಿಗೆ 1000 ರೂ ನೀಡುವ ಯೋಜನೆಯನ್ನು ಈ ವರ್ಷದ ಸೆಪ್ಟಂಬರ್‌ನಿಂದ ಜಾರಿಗೊಳಿಸಲು ಮುಂದಾಗಿದೆ. ಅಲ್ಲದೇ ಶಾಲೆಗಳಲ್ಲಿ ಮಕ್ಕಳಿಗೆ ಬೆಳಗಿನ ತಿಂಡಿ ನೀಡುವ ಯೋಜನೆ ಜಾರಿಗೊಳಿಸಿದೆ.

ತೆಲಂಗಾಣ

ತೆಲಂಗಾಣವು ಮೇ 2018 ರಿಂದ ರೈತರಿಗಾಗಿ ‘ರೈತ ಬಂಧು’ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಪ್ರತಿ ಬೆಳೆ ಋತುವಿಗೆ ಪ್ರತಿ ಎಕರೆಗೆ 4,000 ರೂಪಾಯಿಗಳ “ಹೂಡಿಕೆ ಬೆಂಬಲ” ವನ್ನು ನೀಡುತ್ತಿದ್ದು, 2019-20 ರಿಂದ ನೀಡುತ್ತಿದ್ದು, 5,000 ರೂಗಳಿಗೆ ಹೆಚ್ಚಿಸಲಾಗಿದೆ. ಕೆ ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರವು ಈ ಯೋಜನೆಗಾಗಿ 10 ಋತುಗಳಲ್ಲಿ ಒಟ್ಟು 65,559 ಕೋಟಿ ರೂಪಾಯಿಗಳನ್ನು ರೈತರಿಗೆ ವಿತರಿಸಿದೆ. ಈ ಹಣವನ್ನು ರಾಜ್ಯದ ಸುಮಾರು 65 ಲಕ್ಷ ಭೂಮಿ ಹೊಂದಿದ ರೈತರ ಆಧಾರ್-ಸೀಡ್ ಖಾತೆಗಳಿಗೆ ಜಮಾ ಮಾಡಲಾಗಿದೆ.

ಇದೇ ಮಾದರಿಯಲ್ಲಿ ಕೇಂದ್ರ ಸರ್ಕಾರವು 2019ರಿಂದ ಪಿಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆಯನ್ನು ಜಾರಿಗೊಳಿಸಿರುವುದನ್ನು ನೋಡಬಹುದು. ಅದರಂತೆ ರೈತರು ವಾರ್ಷಿಕ 6,000 ರೂಗಳ ನೆರವು ಪಡೆಯುತ್ತಿದ್ದಾರೆ.

ಇನ್ನು ತೆಲಂಗಾಣದಲ್ಲಿ ಹಿರಿಯ ನಾಗರಿಕರಿಗೆ, ವಿಧವೆಯರಿಗೆ, ಬೀಡಿ ಕಟ್ಟುವವರಿಗೆ ಮತ್ತು ನೀರಾ ಇಳಿಸುವವರಿಗೆ ಆಸರಾ ಪಿಂಚಣಿ ಹೆಸರಿನಲ್ಲಿ ಮಾಸಿಕ 2,016 ರೂಗಳ ಪಿಂಚಣಿ ನೀಡಲಾಗುತ್ತಿದೆ. ವಿಕಲಾಂಕಗರಿಗೆ ಮಾಸಿಕ 3,016 ರೂ ನೀಡಲಾಗುತ್ತಿದೆ. ರೈತ ಬಿಮಾ (5 ಲಕ್ಷ ರೂ ರಕ್ಷಣೆಯೊಂದಿಗೆ ಗುಂಪು ಜೀವ ವಿಮೆ) ಮತ್ತು ರೈತರಿಗೆ ಸಾಲ ಪರಿಹಾರ ನೀಡುತ್ತಿದೆ. ಜೊತೆಗೆ ಕಲ್ಯಾಣ ಲಕ್ಷ್ಮಿ/ಶಾದಿ ಮುಬಾರಕ್ ಯೋಜನೆ ಹೆಸರಿನಲ್ಲಿ ಪರಿಶಿಷ್ಟ ಜಾತಿಗಳು/ಪಂಗಡಗಳು, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನವವಿವಾಹಿತ ವಧುಗಳಿಗೆ  1,00,116 ರೂ ಒಂದು ಬಾರಿಯ ಅನುದಾನ ನೀಡಲಾಗುತ್ತಿದೆ. ರೈತ ಬಂಧು ಹೊರತುಪಡಿಸಿ ಸುಮಾರು 45 ಲಕ್ಷ ಫಲಾನುಭವಿಗಳುಳ್ಳ ಈ ಎಲ್ಲಾ ಯೋಜನೆಗಳಿಗಾಗಿ ಒಟ್ಟು 78,965 ಕೋಟಿ ರೂ.ಗಳನ್ನು ಖರ್ಚು ಮಾಡಿದೆ.

ಆಂಧ್ರ ಪ್ರದೇಶ

ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿಯವರ ಸರ್ಕಾರವು ರೈತ ಭರೋಸ ಎಂಬ ಯೋಜನೆ ಜಾರಿಗೊಳಿಸಿದೆ. ಪ್ರತಿ ರೈತರಿಗೆ ವಾರ್ಷಿಕ 7,500 ರೂಗಳನ್ನು ನೀಡುತ್ತಿದೆ. ಈ ಯೋಜನೆಗಾಗಿ ಇದುವರೆಗೂ 27,062 ಕೋಟಿ ರೂ ಖರ್ಚು ಮಾಡಿದೆ.

ವೈ.ಎಸ್ ಜಗನ್ ಮೋಹನ್ ರೆಡ್ಡಿಯವರ ಅಧಿಕಾರಕ್ಕೆ ಬಂದ 4 ವರ್ಷಗಳಲ್ಲಿ ಕಣುಕಾ ಹೆಸರಿನಲ್ಲಿ ವೃದ್ಧರು ಮತ್ತು ಇತರ ದುರ್ಬಲ ವರ್ಗಗಳಿಗೆ ವೈಎಸ್‌ಆರ್ ಪಿಂಚಣಿಗಾಗಿ ಆಂಧ್ರ ಸರ್ಕಾರ 70,318 ಕೋಟಿ ರೂಗಳನ್ನು ಖರ್ಚು ಮಾಡಿದೆ. ಮಹಿಳಾ ಸ್ವ-ಸಹಾಯ ಗುಂಪುಗಳಿಗೆ 36,922 ಕೋಟಿ ರೂ ಸಹಾಯಧನ ವಿತರಿಸಲಾಗಿದೆ.

ಜಗನಣ್ಣ ಅಮ್ಮವೋಡಿ ಯೋಜನೆಯಡಿ ಕಡಿಮೆ ಆದಾಯದ ಕುಟುಂಬಗಳ 1-12 ನೇ ತರಗತಿಯ ಶಾಲಾ ಮಕ್ಕಳ ತಾಯಂದಿರಿಗೆ ವಾರ್ಷಿಕ 15,000 ರೂಗಳನ್ನು ನೀಡಲಾಗುತ್ತಿದ್ದು, ಇದರಿಂದ 19,674 ಕೋಟಿ ರೂ ಖರ್ಚಾಗಿದೆ. ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಶುಲ್ಕವನ್ನು ಮರುಪಾವತಿಸಲು ಜಗನಣ್ಣ ವಿದ್ಯಾ ದೀವೆನಾ ಯೋಜನೆಯಡಿ 9,947 ಕೋಟಿ ರೂಗಳನ್ನು ವ್ಯಯಿಸಲಾಗಿದೆ. ಡಾ ವೈಎಸ್ಆರ್ ಆರೋಗ್ಯಶ್ರೀ ರೂ 5-ಲಕ್ಷ/ಕುಟುಂಬ/ವರ್ಷ ನಗದು ರಹಿತ ಆರೋಗ್ಯ ವಿಮೆಗಾಗಿ 8,845 ಕೋಟಿ ರೂ ವೆಚ್ಚ ಮಾಡಲಾಗಿದೆ.

ಒಟ್ಟಾರೆಯಾಗಿ ಆಂಧ್ರಪ್ರದೇಶ ರಾಜ್ಯವು ಈ ನಾಲ್ಕು ವರ್ಷಗಳಲ್ಲಿ 2,10,177 ಕೋಟಿ ರೂಗಳನ್ನು ನೇರ ಫಲಾನುಭವಿಗಳಿಗೆ ವರ್ಗಾವಣೆ ಯೋಜನೆಗಳಿಗೆ ಬಳಸಿದೆ. ಅಲ್ಲದೇ ಅದು ಸಮುದಾಯವಾರು ಖರ್ಚಿನ ವಿವರದ ಲೆಕ್ಕ ಸಹ ಇಟ್ಟಿದೆ. ರೂ 99,141 ಕೋಟಿ ಹಿಂದುಳಿದ ಸಮುದಾಯಗಳಿಗೆ, ರೂ 34,921 ಕೋಟಿ ಪರಿಶಿಷ್ಟ ಜಾತಿ ಸಮುದಾಯಗಳಿಗೆ, ರೂ 20,460 ಕೋಟಿ ಪರಿಶಿಷ್ಟ ಪಂಗಡ ಸಮುದಾಯಗಳಿಗೆ, ರೂ 11,886 ಕೋಟಿ ಅಲ್ಪಸಂಖ್ಯಾತರಿಗೆ ಮತ್ತು ಇತರರಿಗೆ 33,403 ಕೋಟಿ ರೂ ವಿನಿಯೋಗಿಸಲಾಗಿದೆ ಎಂದು ಹೇಳಿದೆ.

ಈ ರಾಜ್ಯಗಳು ಮಾತ್ರವಲ್ಲದೇ ದೆಹಲಿ ಸರ್ಕಾರ 200 ಯೂನಿಟ್‌ವರೆಗೂ ಉಚಿತ ವಿದ್ಯುತ್, ಉಚಿತ ಶಿಕ್ಷಣ, ಆರೋಗ್ಯ, ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದಂತಹ ಯೋಜನೆಗಳನ್ನು ಜಾರಿಗೊಳಿಸಿದೆ. ಪಂಜಾಬ್ ರಾಜ್ಯವು 300 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡುತ್ತಿದೆ. ಈ ಯಾವ ರಾಜ್ಯಗಳು ಸಹ ಆರ್ಥಿಕವಾಗಿ ದಿವಾಳಿಯಾಗಿಲ್ಲ ಎಂಬುದನ್ನು ಗಮನಿಸಬೇಕು.

ಭ್ರಷ್ಟಾಚಾರವನ್ನು ಸಂಪೂರ್ಣ ತಡೆಗಟ್ಟಿದರೆ, ಸೋರಿಕೆ ನಿಲ್ಲಿಸಿದರೆ ರಾಜ್ಯದ ಬೊಕ್ಕಸದ ಹಣ ಉಳಿಯುತ್ತದೆ. “ಒಂದು ಫ್ಲೈ ಓವರ್ ಕಟ್ಟಲು 3,000 ಕೋಟಿ ಟೆಂಡರ್ ಇದ್ದರೆ ದೆಹಲಿ ಸರ್ಕಾರ ಅದನ್ನು ಕೇವಲ 2,200 ಕೋಟಿ ರೂಗಳಲ್ಲಿ ಕಟ್ಟುತ್ತೇವೆ. ಉಳಿದ 800 ಕೋಟಿ ಹಣವನ್ನು ಈ ಉಚಿತ ಯೋಜನೆಗಳಿಗೆ ವಿನಿಯೋಗಿಸುತ್ತೇವೆ” ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದರು. ಇನ್ನು ಜನತೆ ಉಚಿತ ಯೋಜನೆಗಳಿಂದ ತಮಗೆ ಉಳಿತಾಯವಾದ ಹಣವನ್ನು ಇತರೆಡೆ ಬಳಸುತ್ತಾರೆ. ಇದರಿಂದ ಉತ್ಪಾದನೆ, ಉದ್ಯೋಗ ಸೃಷ್ಟಿ, ತೆರಿಗೆ ಸಂಗ್ರಹ, ಜಿಡಿಪಿ ಹೆಚ್ಚಳವಾಗುತ್ತದೆ. ಈ ಸರಪಳಿಯು ರಾಜ್ಯದ ಆರ್ಥಿಕತೆಯನ್ನು ಮೇಲೆತ್ತುತ್ತದೆಯೇ ಹೊರತು ಕೆಳಗಿಳಿಸುವುದಿಲ್ಲ ಎಂದು ಆರ್ಥಿಕ ತಜ್ಞರು ಹೇಳುತ್ತಾರೆ. ಇನ್ನು ರಾಜ್ಯದ ಅಭಿವೃದ್ದಿ ಕುಂಠಿತಗೊಳ್ಳುತ್ತದೆ ಎಂದು ಕೆಲವರು ಆರೋಪಿಸುತ್ತಾರೆ. ಅವರ ಪ್ರಕಾರ ರಾಜ್ಯವೆಂದರೆ ಅಲ್ಲಿ ವಾಸಿಸುವ ಜನರಲ್ಲವೇ? ಜನರಿಗೆ ಒಳ್ಳೇಯದಾದರೆ ಅದು ರಾಜ್ಯಕ್ಕೆ ಒಳ್ಳೇಯದು ತಾನೇ?

ಇನ್ನು ನಾವು ಕಟ್ಟುವ ತೆರಿಗೆ ಉಚಿತ ಯೋಜನೆಗಳಿಗೆ ಹೋಗುತ್ತದೆ ಎಂದು ಮೇಲ್ವರ್ಗದವರು ಹಲುಬುವುದು ಸಹ ತಪ್ಪಾದ ಕಥನವಾಗಿದೆ. ಏಕೆಂದರೆ 2021-22ರ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆಯಾಗಿ ಭಾರತೀಯರು ಪಾವತಿಸಿದ 6.73 ಲಕ್ಷ ಕೋಟಿ ರೂಗಳಿಗೆ ಹೋಲಿಸಿದರೆ, ಪರೋಕ್ಷ ತೆರಿಗೆಯಿಂದ 20.73 ಲಕ್ಷ ಕೋಟಿ ರೂ ಸಂಗ್ರಹಿಸಲಾಗಿದೆ. ಅಂದರೆ ಈ ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಡವರು ಮತ್ತು ಮಧ್ಯಮ ವರ್ಗದವರು ಕಟ್ಟುವ ಪರೋಕ್ಷ ತೆರಿಗೆಯ ಪಾಲು ಬೃಹತ್ ಪ್ರಮಾಣದಲ್ಲಿದೆ. ಅಂದರೆ ಬಡವರ ತೆರಿಗೆ ದುಡ್ಡನ್ನು ಅವರಿಗಾಗಿ ಬಳಸುವುದು ಸರಿಯಾದ ಕ್ರಮವಾಗಿದೆ. ಹಾಗಾಗಿ ಕಲ್ಯಾಣ ಯೋಜನೆಗಳನ್ನು ಉಚಿತ ಯೋಜನೆಗಳು ಎಂದು ಕರೆಯಬಾರದು, ಅವುಗಳು ಜನರ ಹಕ್ಕು ಎಂಬ ವಾದ ಸಹ ಆರಂಭವಾಗಿದೆ.

ಇದನ್ನೂ ಓದಿ: ದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ: ಇಲ್ಲಿದೆ ಪೂರ್ಣ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...