Homeಮುಖಪುಟನೆನಪಿಡಿ, ಉಚಿತ ಯೋಜನೆಗಳನ್ನು ಜಾರಿ ಮಾಡಿಯೂ ತಮಿಳುನಾಡು, ಆಂಧ್ರ, ತೆಲಂಗಾಣ ರಾಜ್ಯಗಳು ದಿವಾಳಿಯಾಗಿಲ್ಲ

ನೆನಪಿಡಿ, ಉಚಿತ ಯೋಜನೆಗಳನ್ನು ಜಾರಿ ಮಾಡಿಯೂ ತಮಿಳುನಾಡು, ಆಂಧ್ರ, ತೆಲಂಗಾಣ ರಾಜ್ಯಗಳು ದಿವಾಳಿಯಾಗಿಲ್ಲ

ಆಂಧ್ರಪ್ರದೇಶ ರಾಜ್ಯವು ಈ ನಾಲ್ಕು ವರ್ಷಗಳಲ್ಲಿ 2,10,177 ಕೋಟಿ ರೂಗಳನ್ನು ನೇರ ಫಲಾನುಭವಿಗಳಿಗೆ ವರ್ಗಾವಣೆ ಯೋಜನೆಗಳಿಗೆ ಬಳಸಿದೆ.

- Advertisement -
- Advertisement -

ಕರ್ನಾಟಕದಲ್ಲಿ ನೂತನವಾಗಿ ಅಧಿಕಾರ ಬಂದ ಕಾಂಗ್ರೆಸ್ ಪಕ್ಷವು ತಾನು ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳನ್ನು ಹೆಚ್ಚಿನ ಕಂಡಿಷನ್‌ಗಳಿಲ್ಲದೆ ಜಾರಿಗೊಳಿಸಲು ಮುಂದಾಗಿದೆ. ಜುಲೈ 1 ರಿಂದ ಪ್ರತಿಯೊಂದು ಕುಟುಂಬಕ್ಕೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡಲಾಗುವುದು. ಆಗಸ್ಟ್ 15 ರಂದು ಮನೆಯೊಡತಿಯ ಖಾತೆಗೆ 2,000 ರೂ ಜಮಾ ಮಾಡಲಾಗುವುದು. ಜುಲೈ 1 ರಿಂದ ಬಿಪಿಎಲ್ ಕಾರ್ಡುದಾರರಿಗೆ ಮತ್ತು ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು. ಜೂನ್ 11 ರಂದು ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಲಾಗುವುದು. 2022-23 ರಲ್ಲಿ ವ್ಯಾಸಂಗ ಮಾಡಿ ಪದವಿ ಪಡೆದವರಿಗೆ 24 ತಿಂಗಳುಗಳವರೆಗೆ ಪ್ರತಿ ತಿಂಗಳಿಗೆ 3000 ರೂ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಯೋಜನೆಗಳ ಜಾರಿಗೆ ವಾರ್ಷಿಕ ಅಂದಾಜು 50,000 ಕೋಟಿ ರೂಗಳು ಅಗತ್ಯ ಬೀಳುತ್ತದೆ ಎಂದು ಅಂದಾಜಿಸಲಾಗಿದೆ. ಈ ಸಂದರ್ಭದಲ್ಲಿ ಬಡವರಿಗೆ ಈ ಯೋಜನೆಗಳನ್ನು ಜಾರಿಗೊಳಿಸಿದರೆ ರಾಜ್ಯದ ಅಭಿವೃದ್ದಿ ಕುಂಠಿತಗೊಳ್ಳುತ್ತದೆ, ರಾಜ್ಯ ದಿವಾಳಿಯಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಈಗಾಗಲೇ 5-6 ವರ್ಷಗಳಿಂದ ಇದೇ ಮಾದರಿಯ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿರುವ ದಕ್ಷಿಣದ ಇತರೆ ರಾಜ್ಯಗಳಾದ ತಮಿಳುನಾಡು, ಆಂಧ್ರ, ತೆಲಂಗಾಣಗಳ ಆರ್ಥಿಕ ಪರಿಸ್ಥಿತಿ ನೋಡಿದರೆ ಅವು ದಿವಾಳಿಯಾಗಿಲ್ಲ ಎಂಬುದು ಮನದಟ್ಟಾಗುತ್ತದೆ. ಹಾಗಾಗಿ ಅವರು ನೀಡಿರುವ ಕಲ್ಯಾಣ ಯೋಜನೆಗಳು ಯಾವುವು? ಅವುಗಳಿಗೆ ತಗುಲಿದ ವೆಚ್ಚವೆಷ್ಟು ಎಂಬುದನ್ನು ನೋಡೋಣ.

ತಮಿಳುನಾಡು

ಸದ್ಯ ಆಡಳಿತದಲ್ಲಿರುವ ಸಿಎಂ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವು 2021ರ ವಿಧಾನಸಭಾ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಅರ್ಹ ಮನೆಯ ಮನೆಯೊಡತಿಗೆ ತಿಂಗಳಿಗೆ 1000 ರೂ ನೀಡುವ ಯೋಜನೆಯನ್ನು ಈ ವರ್ಷದ ಸೆಪ್ಟಂಬರ್‌ನಿಂದ ಜಾರಿಗೊಳಿಸಲು ಮುಂದಾಗಿದೆ. ಅಲ್ಲದೇ ಶಾಲೆಗಳಲ್ಲಿ ಮಕ್ಕಳಿಗೆ ಬೆಳಗಿನ ತಿಂಡಿ ನೀಡುವ ಯೋಜನೆ ಜಾರಿಗೊಳಿಸಿದೆ.

ತೆಲಂಗಾಣ

ತೆಲಂಗಾಣವು ಮೇ 2018 ರಿಂದ ರೈತರಿಗಾಗಿ ‘ರೈತ ಬಂಧು’ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಪ್ರತಿ ಬೆಳೆ ಋತುವಿಗೆ ಪ್ರತಿ ಎಕರೆಗೆ 4,000 ರೂಪಾಯಿಗಳ “ಹೂಡಿಕೆ ಬೆಂಬಲ” ವನ್ನು ನೀಡುತ್ತಿದ್ದು, 2019-20 ರಿಂದ ನೀಡುತ್ತಿದ್ದು, 5,000 ರೂಗಳಿಗೆ ಹೆಚ್ಚಿಸಲಾಗಿದೆ. ಕೆ ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರವು ಈ ಯೋಜನೆಗಾಗಿ 10 ಋತುಗಳಲ್ಲಿ ಒಟ್ಟು 65,559 ಕೋಟಿ ರೂಪಾಯಿಗಳನ್ನು ರೈತರಿಗೆ ವಿತರಿಸಿದೆ. ಈ ಹಣವನ್ನು ರಾಜ್ಯದ ಸುಮಾರು 65 ಲಕ್ಷ ಭೂಮಿ ಹೊಂದಿದ ರೈತರ ಆಧಾರ್-ಸೀಡ್ ಖಾತೆಗಳಿಗೆ ಜಮಾ ಮಾಡಲಾಗಿದೆ.

ಇದೇ ಮಾದರಿಯಲ್ಲಿ ಕೇಂದ್ರ ಸರ್ಕಾರವು 2019ರಿಂದ ಪಿಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆಯನ್ನು ಜಾರಿಗೊಳಿಸಿರುವುದನ್ನು ನೋಡಬಹುದು. ಅದರಂತೆ ರೈತರು ವಾರ್ಷಿಕ 6,000 ರೂಗಳ ನೆರವು ಪಡೆಯುತ್ತಿದ್ದಾರೆ.

ಇನ್ನು ತೆಲಂಗಾಣದಲ್ಲಿ ಹಿರಿಯ ನಾಗರಿಕರಿಗೆ, ವಿಧವೆಯರಿಗೆ, ಬೀಡಿ ಕಟ್ಟುವವರಿಗೆ ಮತ್ತು ನೀರಾ ಇಳಿಸುವವರಿಗೆ ಆಸರಾ ಪಿಂಚಣಿ ಹೆಸರಿನಲ್ಲಿ ಮಾಸಿಕ 2,016 ರೂಗಳ ಪಿಂಚಣಿ ನೀಡಲಾಗುತ್ತಿದೆ. ವಿಕಲಾಂಕಗರಿಗೆ ಮಾಸಿಕ 3,016 ರೂ ನೀಡಲಾಗುತ್ತಿದೆ. ರೈತ ಬಿಮಾ (5 ಲಕ್ಷ ರೂ ರಕ್ಷಣೆಯೊಂದಿಗೆ ಗುಂಪು ಜೀವ ವಿಮೆ) ಮತ್ತು ರೈತರಿಗೆ ಸಾಲ ಪರಿಹಾರ ನೀಡುತ್ತಿದೆ. ಜೊತೆಗೆ ಕಲ್ಯಾಣ ಲಕ್ಷ್ಮಿ/ಶಾದಿ ಮುಬಾರಕ್ ಯೋಜನೆ ಹೆಸರಿನಲ್ಲಿ ಪರಿಶಿಷ್ಟ ಜಾತಿಗಳು/ಪಂಗಡಗಳು, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನವವಿವಾಹಿತ ವಧುಗಳಿಗೆ  1,00,116 ರೂ ಒಂದು ಬಾರಿಯ ಅನುದಾನ ನೀಡಲಾಗುತ್ತಿದೆ. ರೈತ ಬಂಧು ಹೊರತುಪಡಿಸಿ ಸುಮಾರು 45 ಲಕ್ಷ ಫಲಾನುಭವಿಗಳುಳ್ಳ ಈ ಎಲ್ಲಾ ಯೋಜನೆಗಳಿಗಾಗಿ ಒಟ್ಟು 78,965 ಕೋಟಿ ರೂ.ಗಳನ್ನು ಖರ್ಚು ಮಾಡಿದೆ.

ಆಂಧ್ರ ಪ್ರದೇಶ

ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿಯವರ ಸರ್ಕಾರವು ರೈತ ಭರೋಸ ಎಂಬ ಯೋಜನೆ ಜಾರಿಗೊಳಿಸಿದೆ. ಪ್ರತಿ ರೈತರಿಗೆ ವಾರ್ಷಿಕ 7,500 ರೂಗಳನ್ನು ನೀಡುತ್ತಿದೆ. ಈ ಯೋಜನೆಗಾಗಿ ಇದುವರೆಗೂ 27,062 ಕೋಟಿ ರೂ ಖರ್ಚು ಮಾಡಿದೆ.

ವೈ.ಎಸ್ ಜಗನ್ ಮೋಹನ್ ರೆಡ್ಡಿಯವರ ಅಧಿಕಾರಕ್ಕೆ ಬಂದ 4 ವರ್ಷಗಳಲ್ಲಿ ಕಣುಕಾ ಹೆಸರಿನಲ್ಲಿ ವೃದ್ಧರು ಮತ್ತು ಇತರ ದುರ್ಬಲ ವರ್ಗಗಳಿಗೆ ವೈಎಸ್‌ಆರ್ ಪಿಂಚಣಿಗಾಗಿ ಆಂಧ್ರ ಸರ್ಕಾರ 70,318 ಕೋಟಿ ರೂಗಳನ್ನು ಖರ್ಚು ಮಾಡಿದೆ. ಮಹಿಳಾ ಸ್ವ-ಸಹಾಯ ಗುಂಪುಗಳಿಗೆ 36,922 ಕೋಟಿ ರೂ ಸಹಾಯಧನ ವಿತರಿಸಲಾಗಿದೆ.

ಜಗನಣ್ಣ ಅಮ್ಮವೋಡಿ ಯೋಜನೆಯಡಿ ಕಡಿಮೆ ಆದಾಯದ ಕುಟುಂಬಗಳ 1-12 ನೇ ತರಗತಿಯ ಶಾಲಾ ಮಕ್ಕಳ ತಾಯಂದಿರಿಗೆ ವಾರ್ಷಿಕ 15,000 ರೂಗಳನ್ನು ನೀಡಲಾಗುತ್ತಿದ್ದು, ಇದರಿಂದ 19,674 ಕೋಟಿ ರೂ ಖರ್ಚಾಗಿದೆ. ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಶುಲ್ಕವನ್ನು ಮರುಪಾವತಿಸಲು ಜಗನಣ್ಣ ವಿದ್ಯಾ ದೀವೆನಾ ಯೋಜನೆಯಡಿ 9,947 ಕೋಟಿ ರೂಗಳನ್ನು ವ್ಯಯಿಸಲಾಗಿದೆ. ಡಾ ವೈಎಸ್ಆರ್ ಆರೋಗ್ಯಶ್ರೀ ರೂ 5-ಲಕ್ಷ/ಕುಟುಂಬ/ವರ್ಷ ನಗದು ರಹಿತ ಆರೋಗ್ಯ ವಿಮೆಗಾಗಿ 8,845 ಕೋಟಿ ರೂ ವೆಚ್ಚ ಮಾಡಲಾಗಿದೆ.

ಒಟ್ಟಾರೆಯಾಗಿ ಆಂಧ್ರಪ್ರದೇಶ ರಾಜ್ಯವು ಈ ನಾಲ್ಕು ವರ್ಷಗಳಲ್ಲಿ 2,10,177 ಕೋಟಿ ರೂಗಳನ್ನು ನೇರ ಫಲಾನುಭವಿಗಳಿಗೆ ವರ್ಗಾವಣೆ ಯೋಜನೆಗಳಿಗೆ ಬಳಸಿದೆ. ಅಲ್ಲದೇ ಅದು ಸಮುದಾಯವಾರು ಖರ್ಚಿನ ವಿವರದ ಲೆಕ್ಕ ಸಹ ಇಟ್ಟಿದೆ. ರೂ 99,141 ಕೋಟಿ ಹಿಂದುಳಿದ ಸಮುದಾಯಗಳಿಗೆ, ರೂ 34,921 ಕೋಟಿ ಪರಿಶಿಷ್ಟ ಜಾತಿ ಸಮುದಾಯಗಳಿಗೆ, ರೂ 20,460 ಕೋಟಿ ಪರಿಶಿಷ್ಟ ಪಂಗಡ ಸಮುದಾಯಗಳಿಗೆ, ರೂ 11,886 ಕೋಟಿ ಅಲ್ಪಸಂಖ್ಯಾತರಿಗೆ ಮತ್ತು ಇತರರಿಗೆ 33,403 ಕೋಟಿ ರೂ ವಿನಿಯೋಗಿಸಲಾಗಿದೆ ಎಂದು ಹೇಳಿದೆ.

ಈ ರಾಜ್ಯಗಳು ಮಾತ್ರವಲ್ಲದೇ ದೆಹಲಿ ಸರ್ಕಾರ 200 ಯೂನಿಟ್‌ವರೆಗೂ ಉಚಿತ ವಿದ್ಯುತ್, ಉಚಿತ ಶಿಕ್ಷಣ, ಆರೋಗ್ಯ, ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದಂತಹ ಯೋಜನೆಗಳನ್ನು ಜಾರಿಗೊಳಿಸಿದೆ. ಪಂಜಾಬ್ ರಾಜ್ಯವು 300 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡುತ್ತಿದೆ. ಈ ಯಾವ ರಾಜ್ಯಗಳು ಸಹ ಆರ್ಥಿಕವಾಗಿ ದಿವಾಳಿಯಾಗಿಲ್ಲ ಎಂಬುದನ್ನು ಗಮನಿಸಬೇಕು.

ಭ್ರಷ್ಟಾಚಾರವನ್ನು ಸಂಪೂರ್ಣ ತಡೆಗಟ್ಟಿದರೆ, ಸೋರಿಕೆ ನಿಲ್ಲಿಸಿದರೆ ರಾಜ್ಯದ ಬೊಕ್ಕಸದ ಹಣ ಉಳಿಯುತ್ತದೆ. “ಒಂದು ಫ್ಲೈ ಓವರ್ ಕಟ್ಟಲು 3,000 ಕೋಟಿ ಟೆಂಡರ್ ಇದ್ದರೆ ದೆಹಲಿ ಸರ್ಕಾರ ಅದನ್ನು ಕೇವಲ 2,200 ಕೋಟಿ ರೂಗಳಲ್ಲಿ ಕಟ್ಟುತ್ತೇವೆ. ಉಳಿದ 800 ಕೋಟಿ ಹಣವನ್ನು ಈ ಉಚಿತ ಯೋಜನೆಗಳಿಗೆ ವಿನಿಯೋಗಿಸುತ್ತೇವೆ” ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದರು. ಇನ್ನು ಜನತೆ ಉಚಿತ ಯೋಜನೆಗಳಿಂದ ತಮಗೆ ಉಳಿತಾಯವಾದ ಹಣವನ್ನು ಇತರೆಡೆ ಬಳಸುತ್ತಾರೆ. ಇದರಿಂದ ಉತ್ಪಾದನೆ, ಉದ್ಯೋಗ ಸೃಷ್ಟಿ, ತೆರಿಗೆ ಸಂಗ್ರಹ, ಜಿಡಿಪಿ ಹೆಚ್ಚಳವಾಗುತ್ತದೆ. ಈ ಸರಪಳಿಯು ರಾಜ್ಯದ ಆರ್ಥಿಕತೆಯನ್ನು ಮೇಲೆತ್ತುತ್ತದೆಯೇ ಹೊರತು ಕೆಳಗಿಳಿಸುವುದಿಲ್ಲ ಎಂದು ಆರ್ಥಿಕ ತಜ್ಞರು ಹೇಳುತ್ತಾರೆ. ಇನ್ನು ರಾಜ್ಯದ ಅಭಿವೃದ್ದಿ ಕುಂಠಿತಗೊಳ್ಳುತ್ತದೆ ಎಂದು ಕೆಲವರು ಆರೋಪಿಸುತ್ತಾರೆ. ಅವರ ಪ್ರಕಾರ ರಾಜ್ಯವೆಂದರೆ ಅಲ್ಲಿ ವಾಸಿಸುವ ಜನರಲ್ಲವೇ? ಜನರಿಗೆ ಒಳ್ಳೇಯದಾದರೆ ಅದು ರಾಜ್ಯಕ್ಕೆ ಒಳ್ಳೇಯದು ತಾನೇ?

ಇನ್ನು ನಾವು ಕಟ್ಟುವ ತೆರಿಗೆ ಉಚಿತ ಯೋಜನೆಗಳಿಗೆ ಹೋಗುತ್ತದೆ ಎಂದು ಮೇಲ್ವರ್ಗದವರು ಹಲುಬುವುದು ಸಹ ತಪ್ಪಾದ ಕಥನವಾಗಿದೆ. ಏಕೆಂದರೆ 2021-22ರ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆಯಾಗಿ ಭಾರತೀಯರು ಪಾವತಿಸಿದ 6.73 ಲಕ್ಷ ಕೋಟಿ ರೂಗಳಿಗೆ ಹೋಲಿಸಿದರೆ, ಪರೋಕ್ಷ ತೆರಿಗೆಯಿಂದ 20.73 ಲಕ್ಷ ಕೋಟಿ ರೂ ಸಂಗ್ರಹಿಸಲಾಗಿದೆ. ಅಂದರೆ ಈ ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಡವರು ಮತ್ತು ಮಧ್ಯಮ ವರ್ಗದವರು ಕಟ್ಟುವ ಪರೋಕ್ಷ ತೆರಿಗೆಯ ಪಾಲು ಬೃಹತ್ ಪ್ರಮಾಣದಲ್ಲಿದೆ. ಅಂದರೆ ಬಡವರ ತೆರಿಗೆ ದುಡ್ಡನ್ನು ಅವರಿಗಾಗಿ ಬಳಸುವುದು ಸರಿಯಾದ ಕ್ರಮವಾಗಿದೆ. ಹಾಗಾಗಿ ಕಲ್ಯಾಣ ಯೋಜನೆಗಳನ್ನು ಉಚಿತ ಯೋಜನೆಗಳು ಎಂದು ಕರೆಯಬಾರದು, ಅವುಗಳು ಜನರ ಹಕ್ಕು ಎಂಬ ವಾದ ಸಹ ಆರಂಭವಾಗಿದೆ.

ಇದನ್ನೂ ಓದಿ: ದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ: ಇಲ್ಲಿದೆ ಪೂರ್ಣ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...