Homeಮುಖಪುಟನೆನಪಿಡಿ, ಉಚಿತ ಯೋಜನೆಗಳನ್ನು ಜಾರಿ ಮಾಡಿಯೂ ತಮಿಳುನಾಡು, ಆಂಧ್ರ, ತೆಲಂಗಾಣ ರಾಜ್ಯಗಳು ದಿವಾಳಿಯಾಗಿಲ್ಲ

ನೆನಪಿಡಿ, ಉಚಿತ ಯೋಜನೆಗಳನ್ನು ಜಾರಿ ಮಾಡಿಯೂ ತಮಿಳುನಾಡು, ಆಂಧ್ರ, ತೆಲಂಗಾಣ ರಾಜ್ಯಗಳು ದಿವಾಳಿಯಾಗಿಲ್ಲ

ಆಂಧ್ರಪ್ರದೇಶ ರಾಜ್ಯವು ಈ ನಾಲ್ಕು ವರ್ಷಗಳಲ್ಲಿ 2,10,177 ಕೋಟಿ ರೂಗಳನ್ನು ನೇರ ಫಲಾನುಭವಿಗಳಿಗೆ ವರ್ಗಾವಣೆ ಯೋಜನೆಗಳಿಗೆ ಬಳಸಿದೆ.

- Advertisement -
- Advertisement -

ಕರ್ನಾಟಕದಲ್ಲಿ ನೂತನವಾಗಿ ಅಧಿಕಾರ ಬಂದ ಕಾಂಗ್ರೆಸ್ ಪಕ್ಷವು ತಾನು ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳನ್ನು ಹೆಚ್ಚಿನ ಕಂಡಿಷನ್‌ಗಳಿಲ್ಲದೆ ಜಾರಿಗೊಳಿಸಲು ಮುಂದಾಗಿದೆ. ಜುಲೈ 1 ರಿಂದ ಪ್ರತಿಯೊಂದು ಕುಟುಂಬಕ್ಕೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡಲಾಗುವುದು. ಆಗಸ್ಟ್ 15 ರಂದು ಮನೆಯೊಡತಿಯ ಖಾತೆಗೆ 2,000 ರೂ ಜಮಾ ಮಾಡಲಾಗುವುದು. ಜುಲೈ 1 ರಿಂದ ಬಿಪಿಎಲ್ ಕಾರ್ಡುದಾರರಿಗೆ ಮತ್ತು ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು. ಜೂನ್ 11 ರಂದು ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಲಾಗುವುದು. 2022-23 ರಲ್ಲಿ ವ್ಯಾಸಂಗ ಮಾಡಿ ಪದವಿ ಪಡೆದವರಿಗೆ 24 ತಿಂಗಳುಗಳವರೆಗೆ ಪ್ರತಿ ತಿಂಗಳಿಗೆ 3000 ರೂ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಯೋಜನೆಗಳ ಜಾರಿಗೆ ವಾರ್ಷಿಕ ಅಂದಾಜು 50,000 ಕೋಟಿ ರೂಗಳು ಅಗತ್ಯ ಬೀಳುತ್ತದೆ ಎಂದು ಅಂದಾಜಿಸಲಾಗಿದೆ. ಈ ಸಂದರ್ಭದಲ್ಲಿ ಬಡವರಿಗೆ ಈ ಯೋಜನೆಗಳನ್ನು ಜಾರಿಗೊಳಿಸಿದರೆ ರಾಜ್ಯದ ಅಭಿವೃದ್ದಿ ಕುಂಠಿತಗೊಳ್ಳುತ್ತದೆ, ರಾಜ್ಯ ದಿವಾಳಿಯಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಈಗಾಗಲೇ 5-6 ವರ್ಷಗಳಿಂದ ಇದೇ ಮಾದರಿಯ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿರುವ ದಕ್ಷಿಣದ ಇತರೆ ರಾಜ್ಯಗಳಾದ ತಮಿಳುನಾಡು, ಆಂಧ್ರ, ತೆಲಂಗಾಣಗಳ ಆರ್ಥಿಕ ಪರಿಸ್ಥಿತಿ ನೋಡಿದರೆ ಅವು ದಿವಾಳಿಯಾಗಿಲ್ಲ ಎಂಬುದು ಮನದಟ್ಟಾಗುತ್ತದೆ. ಹಾಗಾಗಿ ಅವರು ನೀಡಿರುವ ಕಲ್ಯಾಣ ಯೋಜನೆಗಳು ಯಾವುವು? ಅವುಗಳಿಗೆ ತಗುಲಿದ ವೆಚ್ಚವೆಷ್ಟು ಎಂಬುದನ್ನು ನೋಡೋಣ.

ತಮಿಳುನಾಡು

ಸದ್ಯ ಆಡಳಿತದಲ್ಲಿರುವ ಸಿಎಂ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವು 2021ರ ವಿಧಾನಸಭಾ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಅರ್ಹ ಮನೆಯ ಮನೆಯೊಡತಿಗೆ ತಿಂಗಳಿಗೆ 1000 ರೂ ನೀಡುವ ಯೋಜನೆಯನ್ನು ಈ ವರ್ಷದ ಸೆಪ್ಟಂಬರ್‌ನಿಂದ ಜಾರಿಗೊಳಿಸಲು ಮುಂದಾಗಿದೆ. ಅಲ್ಲದೇ ಶಾಲೆಗಳಲ್ಲಿ ಮಕ್ಕಳಿಗೆ ಬೆಳಗಿನ ತಿಂಡಿ ನೀಡುವ ಯೋಜನೆ ಜಾರಿಗೊಳಿಸಿದೆ.

ತೆಲಂಗಾಣ

ತೆಲಂಗಾಣವು ಮೇ 2018 ರಿಂದ ರೈತರಿಗಾಗಿ ‘ರೈತ ಬಂಧು’ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಪ್ರತಿ ಬೆಳೆ ಋತುವಿಗೆ ಪ್ರತಿ ಎಕರೆಗೆ 4,000 ರೂಪಾಯಿಗಳ “ಹೂಡಿಕೆ ಬೆಂಬಲ” ವನ್ನು ನೀಡುತ್ತಿದ್ದು, 2019-20 ರಿಂದ ನೀಡುತ್ತಿದ್ದು, 5,000 ರೂಗಳಿಗೆ ಹೆಚ್ಚಿಸಲಾಗಿದೆ. ಕೆ ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರವು ಈ ಯೋಜನೆಗಾಗಿ 10 ಋತುಗಳಲ್ಲಿ ಒಟ್ಟು 65,559 ಕೋಟಿ ರೂಪಾಯಿಗಳನ್ನು ರೈತರಿಗೆ ವಿತರಿಸಿದೆ. ಈ ಹಣವನ್ನು ರಾಜ್ಯದ ಸುಮಾರು 65 ಲಕ್ಷ ಭೂಮಿ ಹೊಂದಿದ ರೈತರ ಆಧಾರ್-ಸೀಡ್ ಖಾತೆಗಳಿಗೆ ಜಮಾ ಮಾಡಲಾಗಿದೆ.

ಇದೇ ಮಾದರಿಯಲ್ಲಿ ಕೇಂದ್ರ ಸರ್ಕಾರವು 2019ರಿಂದ ಪಿಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆಯನ್ನು ಜಾರಿಗೊಳಿಸಿರುವುದನ್ನು ನೋಡಬಹುದು. ಅದರಂತೆ ರೈತರು ವಾರ್ಷಿಕ 6,000 ರೂಗಳ ನೆರವು ಪಡೆಯುತ್ತಿದ್ದಾರೆ.

ಇನ್ನು ತೆಲಂಗಾಣದಲ್ಲಿ ಹಿರಿಯ ನಾಗರಿಕರಿಗೆ, ವಿಧವೆಯರಿಗೆ, ಬೀಡಿ ಕಟ್ಟುವವರಿಗೆ ಮತ್ತು ನೀರಾ ಇಳಿಸುವವರಿಗೆ ಆಸರಾ ಪಿಂಚಣಿ ಹೆಸರಿನಲ್ಲಿ ಮಾಸಿಕ 2,016 ರೂಗಳ ಪಿಂಚಣಿ ನೀಡಲಾಗುತ್ತಿದೆ. ವಿಕಲಾಂಕಗರಿಗೆ ಮಾಸಿಕ 3,016 ರೂ ನೀಡಲಾಗುತ್ತಿದೆ. ರೈತ ಬಿಮಾ (5 ಲಕ್ಷ ರೂ ರಕ್ಷಣೆಯೊಂದಿಗೆ ಗುಂಪು ಜೀವ ವಿಮೆ) ಮತ್ತು ರೈತರಿಗೆ ಸಾಲ ಪರಿಹಾರ ನೀಡುತ್ತಿದೆ. ಜೊತೆಗೆ ಕಲ್ಯಾಣ ಲಕ್ಷ್ಮಿ/ಶಾದಿ ಮುಬಾರಕ್ ಯೋಜನೆ ಹೆಸರಿನಲ್ಲಿ ಪರಿಶಿಷ್ಟ ಜಾತಿಗಳು/ಪಂಗಡಗಳು, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನವವಿವಾಹಿತ ವಧುಗಳಿಗೆ  1,00,116 ರೂ ಒಂದು ಬಾರಿಯ ಅನುದಾನ ನೀಡಲಾಗುತ್ತಿದೆ. ರೈತ ಬಂಧು ಹೊರತುಪಡಿಸಿ ಸುಮಾರು 45 ಲಕ್ಷ ಫಲಾನುಭವಿಗಳುಳ್ಳ ಈ ಎಲ್ಲಾ ಯೋಜನೆಗಳಿಗಾಗಿ ಒಟ್ಟು 78,965 ಕೋಟಿ ರೂ.ಗಳನ್ನು ಖರ್ಚು ಮಾಡಿದೆ.

ಆಂಧ್ರ ಪ್ರದೇಶ

ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿಯವರ ಸರ್ಕಾರವು ರೈತ ಭರೋಸ ಎಂಬ ಯೋಜನೆ ಜಾರಿಗೊಳಿಸಿದೆ. ಪ್ರತಿ ರೈತರಿಗೆ ವಾರ್ಷಿಕ 7,500 ರೂಗಳನ್ನು ನೀಡುತ್ತಿದೆ. ಈ ಯೋಜನೆಗಾಗಿ ಇದುವರೆಗೂ 27,062 ಕೋಟಿ ರೂ ಖರ್ಚು ಮಾಡಿದೆ.

ವೈ.ಎಸ್ ಜಗನ್ ಮೋಹನ್ ರೆಡ್ಡಿಯವರ ಅಧಿಕಾರಕ್ಕೆ ಬಂದ 4 ವರ್ಷಗಳಲ್ಲಿ ಕಣುಕಾ ಹೆಸರಿನಲ್ಲಿ ವೃದ್ಧರು ಮತ್ತು ಇತರ ದುರ್ಬಲ ವರ್ಗಗಳಿಗೆ ವೈಎಸ್‌ಆರ್ ಪಿಂಚಣಿಗಾಗಿ ಆಂಧ್ರ ಸರ್ಕಾರ 70,318 ಕೋಟಿ ರೂಗಳನ್ನು ಖರ್ಚು ಮಾಡಿದೆ. ಮಹಿಳಾ ಸ್ವ-ಸಹಾಯ ಗುಂಪುಗಳಿಗೆ 36,922 ಕೋಟಿ ರೂ ಸಹಾಯಧನ ವಿತರಿಸಲಾಗಿದೆ.

ಜಗನಣ್ಣ ಅಮ್ಮವೋಡಿ ಯೋಜನೆಯಡಿ ಕಡಿಮೆ ಆದಾಯದ ಕುಟುಂಬಗಳ 1-12 ನೇ ತರಗತಿಯ ಶಾಲಾ ಮಕ್ಕಳ ತಾಯಂದಿರಿಗೆ ವಾರ್ಷಿಕ 15,000 ರೂಗಳನ್ನು ನೀಡಲಾಗುತ್ತಿದ್ದು, ಇದರಿಂದ 19,674 ಕೋಟಿ ರೂ ಖರ್ಚಾಗಿದೆ. ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಶುಲ್ಕವನ್ನು ಮರುಪಾವತಿಸಲು ಜಗನಣ್ಣ ವಿದ್ಯಾ ದೀವೆನಾ ಯೋಜನೆಯಡಿ 9,947 ಕೋಟಿ ರೂಗಳನ್ನು ವ್ಯಯಿಸಲಾಗಿದೆ. ಡಾ ವೈಎಸ್ಆರ್ ಆರೋಗ್ಯಶ್ರೀ ರೂ 5-ಲಕ್ಷ/ಕುಟುಂಬ/ವರ್ಷ ನಗದು ರಹಿತ ಆರೋಗ್ಯ ವಿಮೆಗಾಗಿ 8,845 ಕೋಟಿ ರೂ ವೆಚ್ಚ ಮಾಡಲಾಗಿದೆ.

ಒಟ್ಟಾರೆಯಾಗಿ ಆಂಧ್ರಪ್ರದೇಶ ರಾಜ್ಯವು ಈ ನಾಲ್ಕು ವರ್ಷಗಳಲ್ಲಿ 2,10,177 ಕೋಟಿ ರೂಗಳನ್ನು ನೇರ ಫಲಾನುಭವಿಗಳಿಗೆ ವರ್ಗಾವಣೆ ಯೋಜನೆಗಳಿಗೆ ಬಳಸಿದೆ. ಅಲ್ಲದೇ ಅದು ಸಮುದಾಯವಾರು ಖರ್ಚಿನ ವಿವರದ ಲೆಕ್ಕ ಸಹ ಇಟ್ಟಿದೆ. ರೂ 99,141 ಕೋಟಿ ಹಿಂದುಳಿದ ಸಮುದಾಯಗಳಿಗೆ, ರೂ 34,921 ಕೋಟಿ ಪರಿಶಿಷ್ಟ ಜಾತಿ ಸಮುದಾಯಗಳಿಗೆ, ರೂ 20,460 ಕೋಟಿ ಪರಿಶಿಷ್ಟ ಪಂಗಡ ಸಮುದಾಯಗಳಿಗೆ, ರೂ 11,886 ಕೋಟಿ ಅಲ್ಪಸಂಖ್ಯಾತರಿಗೆ ಮತ್ತು ಇತರರಿಗೆ 33,403 ಕೋಟಿ ರೂ ವಿನಿಯೋಗಿಸಲಾಗಿದೆ ಎಂದು ಹೇಳಿದೆ.

ಈ ರಾಜ್ಯಗಳು ಮಾತ್ರವಲ್ಲದೇ ದೆಹಲಿ ಸರ್ಕಾರ 200 ಯೂನಿಟ್‌ವರೆಗೂ ಉಚಿತ ವಿದ್ಯುತ್, ಉಚಿತ ಶಿಕ್ಷಣ, ಆರೋಗ್ಯ, ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದಂತಹ ಯೋಜನೆಗಳನ್ನು ಜಾರಿಗೊಳಿಸಿದೆ. ಪಂಜಾಬ್ ರಾಜ್ಯವು 300 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡುತ್ತಿದೆ. ಈ ಯಾವ ರಾಜ್ಯಗಳು ಸಹ ಆರ್ಥಿಕವಾಗಿ ದಿವಾಳಿಯಾಗಿಲ್ಲ ಎಂಬುದನ್ನು ಗಮನಿಸಬೇಕು.

ಭ್ರಷ್ಟಾಚಾರವನ್ನು ಸಂಪೂರ್ಣ ತಡೆಗಟ್ಟಿದರೆ, ಸೋರಿಕೆ ನಿಲ್ಲಿಸಿದರೆ ರಾಜ್ಯದ ಬೊಕ್ಕಸದ ಹಣ ಉಳಿಯುತ್ತದೆ. “ಒಂದು ಫ್ಲೈ ಓವರ್ ಕಟ್ಟಲು 3,000 ಕೋಟಿ ಟೆಂಡರ್ ಇದ್ದರೆ ದೆಹಲಿ ಸರ್ಕಾರ ಅದನ್ನು ಕೇವಲ 2,200 ಕೋಟಿ ರೂಗಳಲ್ಲಿ ಕಟ್ಟುತ್ತೇವೆ. ಉಳಿದ 800 ಕೋಟಿ ಹಣವನ್ನು ಈ ಉಚಿತ ಯೋಜನೆಗಳಿಗೆ ವಿನಿಯೋಗಿಸುತ್ತೇವೆ” ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದರು. ಇನ್ನು ಜನತೆ ಉಚಿತ ಯೋಜನೆಗಳಿಂದ ತಮಗೆ ಉಳಿತಾಯವಾದ ಹಣವನ್ನು ಇತರೆಡೆ ಬಳಸುತ್ತಾರೆ. ಇದರಿಂದ ಉತ್ಪಾದನೆ, ಉದ್ಯೋಗ ಸೃಷ್ಟಿ, ತೆರಿಗೆ ಸಂಗ್ರಹ, ಜಿಡಿಪಿ ಹೆಚ್ಚಳವಾಗುತ್ತದೆ. ಈ ಸರಪಳಿಯು ರಾಜ್ಯದ ಆರ್ಥಿಕತೆಯನ್ನು ಮೇಲೆತ್ತುತ್ತದೆಯೇ ಹೊರತು ಕೆಳಗಿಳಿಸುವುದಿಲ್ಲ ಎಂದು ಆರ್ಥಿಕ ತಜ್ಞರು ಹೇಳುತ್ತಾರೆ. ಇನ್ನು ರಾಜ್ಯದ ಅಭಿವೃದ್ದಿ ಕುಂಠಿತಗೊಳ್ಳುತ್ತದೆ ಎಂದು ಕೆಲವರು ಆರೋಪಿಸುತ್ತಾರೆ. ಅವರ ಪ್ರಕಾರ ರಾಜ್ಯವೆಂದರೆ ಅಲ್ಲಿ ವಾಸಿಸುವ ಜನರಲ್ಲವೇ? ಜನರಿಗೆ ಒಳ್ಳೇಯದಾದರೆ ಅದು ರಾಜ್ಯಕ್ಕೆ ಒಳ್ಳೇಯದು ತಾನೇ?

ಇನ್ನು ನಾವು ಕಟ್ಟುವ ತೆರಿಗೆ ಉಚಿತ ಯೋಜನೆಗಳಿಗೆ ಹೋಗುತ್ತದೆ ಎಂದು ಮೇಲ್ವರ್ಗದವರು ಹಲುಬುವುದು ಸಹ ತಪ್ಪಾದ ಕಥನವಾಗಿದೆ. ಏಕೆಂದರೆ 2021-22ರ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆಯಾಗಿ ಭಾರತೀಯರು ಪಾವತಿಸಿದ 6.73 ಲಕ್ಷ ಕೋಟಿ ರೂಗಳಿಗೆ ಹೋಲಿಸಿದರೆ, ಪರೋಕ್ಷ ತೆರಿಗೆಯಿಂದ 20.73 ಲಕ್ಷ ಕೋಟಿ ರೂ ಸಂಗ್ರಹಿಸಲಾಗಿದೆ. ಅಂದರೆ ಈ ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಡವರು ಮತ್ತು ಮಧ್ಯಮ ವರ್ಗದವರು ಕಟ್ಟುವ ಪರೋಕ್ಷ ತೆರಿಗೆಯ ಪಾಲು ಬೃಹತ್ ಪ್ರಮಾಣದಲ್ಲಿದೆ. ಅಂದರೆ ಬಡವರ ತೆರಿಗೆ ದುಡ್ಡನ್ನು ಅವರಿಗಾಗಿ ಬಳಸುವುದು ಸರಿಯಾದ ಕ್ರಮವಾಗಿದೆ. ಹಾಗಾಗಿ ಕಲ್ಯಾಣ ಯೋಜನೆಗಳನ್ನು ಉಚಿತ ಯೋಜನೆಗಳು ಎಂದು ಕರೆಯಬಾರದು, ಅವುಗಳು ಜನರ ಹಕ್ಕು ಎಂಬ ವಾದ ಸಹ ಆರಂಭವಾಗಿದೆ.

ಇದನ್ನೂ ಓದಿ: ದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ: ಇಲ್ಲಿದೆ ಪೂರ್ಣ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...