Homeಮುಖಪುಟನೆನಪಿಡಿ, ಉಚಿತ ಯೋಜನೆಗಳನ್ನು ಜಾರಿ ಮಾಡಿಯೂ ತಮಿಳುನಾಡು, ಆಂಧ್ರ, ತೆಲಂಗಾಣ ರಾಜ್ಯಗಳು ದಿವಾಳಿಯಾಗಿಲ್ಲ

ನೆನಪಿಡಿ, ಉಚಿತ ಯೋಜನೆಗಳನ್ನು ಜಾರಿ ಮಾಡಿಯೂ ತಮಿಳುನಾಡು, ಆಂಧ್ರ, ತೆಲಂಗಾಣ ರಾಜ್ಯಗಳು ದಿವಾಳಿಯಾಗಿಲ್ಲ

ಆಂಧ್ರಪ್ರದೇಶ ರಾಜ್ಯವು ಈ ನಾಲ್ಕು ವರ್ಷಗಳಲ್ಲಿ 2,10,177 ಕೋಟಿ ರೂಗಳನ್ನು ನೇರ ಫಲಾನುಭವಿಗಳಿಗೆ ವರ್ಗಾವಣೆ ಯೋಜನೆಗಳಿಗೆ ಬಳಸಿದೆ.

- Advertisement -
- Advertisement -

ಕರ್ನಾಟಕದಲ್ಲಿ ನೂತನವಾಗಿ ಅಧಿಕಾರ ಬಂದ ಕಾಂಗ್ರೆಸ್ ಪಕ್ಷವು ತಾನು ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳನ್ನು ಹೆಚ್ಚಿನ ಕಂಡಿಷನ್‌ಗಳಿಲ್ಲದೆ ಜಾರಿಗೊಳಿಸಲು ಮುಂದಾಗಿದೆ. ಜುಲೈ 1 ರಿಂದ ಪ್ರತಿಯೊಂದು ಕುಟುಂಬಕ್ಕೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡಲಾಗುವುದು. ಆಗಸ್ಟ್ 15 ರಂದು ಮನೆಯೊಡತಿಯ ಖಾತೆಗೆ 2,000 ರೂ ಜಮಾ ಮಾಡಲಾಗುವುದು. ಜುಲೈ 1 ರಿಂದ ಬಿಪಿಎಲ್ ಕಾರ್ಡುದಾರರಿಗೆ ಮತ್ತು ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು. ಜೂನ್ 11 ರಂದು ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಲಾಗುವುದು. 2022-23 ರಲ್ಲಿ ವ್ಯಾಸಂಗ ಮಾಡಿ ಪದವಿ ಪಡೆದವರಿಗೆ 24 ತಿಂಗಳುಗಳವರೆಗೆ ಪ್ರತಿ ತಿಂಗಳಿಗೆ 3000 ರೂ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಯೋಜನೆಗಳ ಜಾರಿಗೆ ವಾರ್ಷಿಕ ಅಂದಾಜು 50,000 ಕೋಟಿ ರೂಗಳು ಅಗತ್ಯ ಬೀಳುತ್ತದೆ ಎಂದು ಅಂದಾಜಿಸಲಾಗಿದೆ. ಈ ಸಂದರ್ಭದಲ್ಲಿ ಬಡವರಿಗೆ ಈ ಯೋಜನೆಗಳನ್ನು ಜಾರಿಗೊಳಿಸಿದರೆ ರಾಜ್ಯದ ಅಭಿವೃದ್ದಿ ಕುಂಠಿತಗೊಳ್ಳುತ್ತದೆ, ರಾಜ್ಯ ದಿವಾಳಿಯಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಈಗಾಗಲೇ 5-6 ವರ್ಷಗಳಿಂದ ಇದೇ ಮಾದರಿಯ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿರುವ ದಕ್ಷಿಣದ ಇತರೆ ರಾಜ್ಯಗಳಾದ ತಮಿಳುನಾಡು, ಆಂಧ್ರ, ತೆಲಂಗಾಣಗಳ ಆರ್ಥಿಕ ಪರಿಸ್ಥಿತಿ ನೋಡಿದರೆ ಅವು ದಿವಾಳಿಯಾಗಿಲ್ಲ ಎಂಬುದು ಮನದಟ್ಟಾಗುತ್ತದೆ. ಹಾಗಾಗಿ ಅವರು ನೀಡಿರುವ ಕಲ್ಯಾಣ ಯೋಜನೆಗಳು ಯಾವುವು? ಅವುಗಳಿಗೆ ತಗುಲಿದ ವೆಚ್ಚವೆಷ್ಟು ಎಂಬುದನ್ನು ನೋಡೋಣ.

ತಮಿಳುನಾಡು

ಸದ್ಯ ಆಡಳಿತದಲ್ಲಿರುವ ಸಿಎಂ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವು 2021ರ ವಿಧಾನಸಭಾ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಅರ್ಹ ಮನೆಯ ಮನೆಯೊಡತಿಗೆ ತಿಂಗಳಿಗೆ 1000 ರೂ ನೀಡುವ ಯೋಜನೆಯನ್ನು ಈ ವರ್ಷದ ಸೆಪ್ಟಂಬರ್‌ನಿಂದ ಜಾರಿಗೊಳಿಸಲು ಮುಂದಾಗಿದೆ. ಅಲ್ಲದೇ ಶಾಲೆಗಳಲ್ಲಿ ಮಕ್ಕಳಿಗೆ ಬೆಳಗಿನ ತಿಂಡಿ ನೀಡುವ ಯೋಜನೆ ಜಾರಿಗೊಳಿಸಿದೆ.

ತೆಲಂಗಾಣ

ತೆಲಂಗಾಣವು ಮೇ 2018 ರಿಂದ ರೈತರಿಗಾಗಿ ‘ರೈತ ಬಂಧು’ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಪ್ರತಿ ಬೆಳೆ ಋತುವಿಗೆ ಪ್ರತಿ ಎಕರೆಗೆ 4,000 ರೂಪಾಯಿಗಳ “ಹೂಡಿಕೆ ಬೆಂಬಲ” ವನ್ನು ನೀಡುತ್ತಿದ್ದು, 2019-20 ರಿಂದ ನೀಡುತ್ತಿದ್ದು, 5,000 ರೂಗಳಿಗೆ ಹೆಚ್ಚಿಸಲಾಗಿದೆ. ಕೆ ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರವು ಈ ಯೋಜನೆಗಾಗಿ 10 ಋತುಗಳಲ್ಲಿ ಒಟ್ಟು 65,559 ಕೋಟಿ ರೂಪಾಯಿಗಳನ್ನು ರೈತರಿಗೆ ವಿತರಿಸಿದೆ. ಈ ಹಣವನ್ನು ರಾಜ್ಯದ ಸುಮಾರು 65 ಲಕ್ಷ ಭೂಮಿ ಹೊಂದಿದ ರೈತರ ಆಧಾರ್-ಸೀಡ್ ಖಾತೆಗಳಿಗೆ ಜಮಾ ಮಾಡಲಾಗಿದೆ.

ಇದೇ ಮಾದರಿಯಲ್ಲಿ ಕೇಂದ್ರ ಸರ್ಕಾರವು 2019ರಿಂದ ಪಿಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆಯನ್ನು ಜಾರಿಗೊಳಿಸಿರುವುದನ್ನು ನೋಡಬಹುದು. ಅದರಂತೆ ರೈತರು ವಾರ್ಷಿಕ 6,000 ರೂಗಳ ನೆರವು ಪಡೆಯುತ್ತಿದ್ದಾರೆ.

ಇನ್ನು ತೆಲಂಗಾಣದಲ್ಲಿ ಹಿರಿಯ ನಾಗರಿಕರಿಗೆ, ವಿಧವೆಯರಿಗೆ, ಬೀಡಿ ಕಟ್ಟುವವರಿಗೆ ಮತ್ತು ನೀರಾ ಇಳಿಸುವವರಿಗೆ ಆಸರಾ ಪಿಂಚಣಿ ಹೆಸರಿನಲ್ಲಿ ಮಾಸಿಕ 2,016 ರೂಗಳ ಪಿಂಚಣಿ ನೀಡಲಾಗುತ್ತಿದೆ. ವಿಕಲಾಂಕಗರಿಗೆ ಮಾಸಿಕ 3,016 ರೂ ನೀಡಲಾಗುತ್ತಿದೆ. ರೈತ ಬಿಮಾ (5 ಲಕ್ಷ ರೂ ರಕ್ಷಣೆಯೊಂದಿಗೆ ಗುಂಪು ಜೀವ ವಿಮೆ) ಮತ್ತು ರೈತರಿಗೆ ಸಾಲ ಪರಿಹಾರ ನೀಡುತ್ತಿದೆ. ಜೊತೆಗೆ ಕಲ್ಯಾಣ ಲಕ್ಷ್ಮಿ/ಶಾದಿ ಮುಬಾರಕ್ ಯೋಜನೆ ಹೆಸರಿನಲ್ಲಿ ಪರಿಶಿಷ್ಟ ಜಾತಿಗಳು/ಪಂಗಡಗಳು, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನವವಿವಾಹಿತ ವಧುಗಳಿಗೆ  1,00,116 ರೂ ಒಂದು ಬಾರಿಯ ಅನುದಾನ ನೀಡಲಾಗುತ್ತಿದೆ. ರೈತ ಬಂಧು ಹೊರತುಪಡಿಸಿ ಸುಮಾರು 45 ಲಕ್ಷ ಫಲಾನುಭವಿಗಳುಳ್ಳ ಈ ಎಲ್ಲಾ ಯೋಜನೆಗಳಿಗಾಗಿ ಒಟ್ಟು 78,965 ಕೋಟಿ ರೂ.ಗಳನ್ನು ಖರ್ಚು ಮಾಡಿದೆ.

ಆಂಧ್ರ ಪ್ರದೇಶ

ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿಯವರ ಸರ್ಕಾರವು ರೈತ ಭರೋಸ ಎಂಬ ಯೋಜನೆ ಜಾರಿಗೊಳಿಸಿದೆ. ಪ್ರತಿ ರೈತರಿಗೆ ವಾರ್ಷಿಕ 7,500 ರೂಗಳನ್ನು ನೀಡುತ್ತಿದೆ. ಈ ಯೋಜನೆಗಾಗಿ ಇದುವರೆಗೂ 27,062 ಕೋಟಿ ರೂ ಖರ್ಚು ಮಾಡಿದೆ.

ವೈ.ಎಸ್ ಜಗನ್ ಮೋಹನ್ ರೆಡ್ಡಿಯವರ ಅಧಿಕಾರಕ್ಕೆ ಬಂದ 4 ವರ್ಷಗಳಲ್ಲಿ ಕಣುಕಾ ಹೆಸರಿನಲ್ಲಿ ವೃದ್ಧರು ಮತ್ತು ಇತರ ದುರ್ಬಲ ವರ್ಗಗಳಿಗೆ ವೈಎಸ್‌ಆರ್ ಪಿಂಚಣಿಗಾಗಿ ಆಂಧ್ರ ಸರ್ಕಾರ 70,318 ಕೋಟಿ ರೂಗಳನ್ನು ಖರ್ಚು ಮಾಡಿದೆ. ಮಹಿಳಾ ಸ್ವ-ಸಹಾಯ ಗುಂಪುಗಳಿಗೆ 36,922 ಕೋಟಿ ರೂ ಸಹಾಯಧನ ವಿತರಿಸಲಾಗಿದೆ.

ಜಗನಣ್ಣ ಅಮ್ಮವೋಡಿ ಯೋಜನೆಯಡಿ ಕಡಿಮೆ ಆದಾಯದ ಕುಟುಂಬಗಳ 1-12 ನೇ ತರಗತಿಯ ಶಾಲಾ ಮಕ್ಕಳ ತಾಯಂದಿರಿಗೆ ವಾರ್ಷಿಕ 15,000 ರೂಗಳನ್ನು ನೀಡಲಾಗುತ್ತಿದ್ದು, ಇದರಿಂದ 19,674 ಕೋಟಿ ರೂ ಖರ್ಚಾಗಿದೆ. ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಶುಲ್ಕವನ್ನು ಮರುಪಾವತಿಸಲು ಜಗನಣ್ಣ ವಿದ್ಯಾ ದೀವೆನಾ ಯೋಜನೆಯಡಿ 9,947 ಕೋಟಿ ರೂಗಳನ್ನು ವ್ಯಯಿಸಲಾಗಿದೆ. ಡಾ ವೈಎಸ್ಆರ್ ಆರೋಗ್ಯಶ್ರೀ ರೂ 5-ಲಕ್ಷ/ಕುಟುಂಬ/ವರ್ಷ ನಗದು ರಹಿತ ಆರೋಗ್ಯ ವಿಮೆಗಾಗಿ 8,845 ಕೋಟಿ ರೂ ವೆಚ್ಚ ಮಾಡಲಾಗಿದೆ.

ಒಟ್ಟಾರೆಯಾಗಿ ಆಂಧ್ರಪ್ರದೇಶ ರಾಜ್ಯವು ಈ ನಾಲ್ಕು ವರ್ಷಗಳಲ್ಲಿ 2,10,177 ಕೋಟಿ ರೂಗಳನ್ನು ನೇರ ಫಲಾನುಭವಿಗಳಿಗೆ ವರ್ಗಾವಣೆ ಯೋಜನೆಗಳಿಗೆ ಬಳಸಿದೆ. ಅಲ್ಲದೇ ಅದು ಸಮುದಾಯವಾರು ಖರ್ಚಿನ ವಿವರದ ಲೆಕ್ಕ ಸಹ ಇಟ್ಟಿದೆ. ರೂ 99,141 ಕೋಟಿ ಹಿಂದುಳಿದ ಸಮುದಾಯಗಳಿಗೆ, ರೂ 34,921 ಕೋಟಿ ಪರಿಶಿಷ್ಟ ಜಾತಿ ಸಮುದಾಯಗಳಿಗೆ, ರೂ 20,460 ಕೋಟಿ ಪರಿಶಿಷ್ಟ ಪಂಗಡ ಸಮುದಾಯಗಳಿಗೆ, ರೂ 11,886 ಕೋಟಿ ಅಲ್ಪಸಂಖ್ಯಾತರಿಗೆ ಮತ್ತು ಇತರರಿಗೆ 33,403 ಕೋಟಿ ರೂ ವಿನಿಯೋಗಿಸಲಾಗಿದೆ ಎಂದು ಹೇಳಿದೆ.

ಈ ರಾಜ್ಯಗಳು ಮಾತ್ರವಲ್ಲದೇ ದೆಹಲಿ ಸರ್ಕಾರ 200 ಯೂನಿಟ್‌ವರೆಗೂ ಉಚಿತ ವಿದ್ಯುತ್, ಉಚಿತ ಶಿಕ್ಷಣ, ಆರೋಗ್ಯ, ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದಂತಹ ಯೋಜನೆಗಳನ್ನು ಜಾರಿಗೊಳಿಸಿದೆ. ಪಂಜಾಬ್ ರಾಜ್ಯವು 300 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡುತ್ತಿದೆ. ಈ ಯಾವ ರಾಜ್ಯಗಳು ಸಹ ಆರ್ಥಿಕವಾಗಿ ದಿವಾಳಿಯಾಗಿಲ್ಲ ಎಂಬುದನ್ನು ಗಮನಿಸಬೇಕು.

ಭ್ರಷ್ಟಾಚಾರವನ್ನು ಸಂಪೂರ್ಣ ತಡೆಗಟ್ಟಿದರೆ, ಸೋರಿಕೆ ನಿಲ್ಲಿಸಿದರೆ ರಾಜ್ಯದ ಬೊಕ್ಕಸದ ಹಣ ಉಳಿಯುತ್ತದೆ. “ಒಂದು ಫ್ಲೈ ಓವರ್ ಕಟ್ಟಲು 3,000 ಕೋಟಿ ಟೆಂಡರ್ ಇದ್ದರೆ ದೆಹಲಿ ಸರ್ಕಾರ ಅದನ್ನು ಕೇವಲ 2,200 ಕೋಟಿ ರೂಗಳಲ್ಲಿ ಕಟ್ಟುತ್ತೇವೆ. ಉಳಿದ 800 ಕೋಟಿ ಹಣವನ್ನು ಈ ಉಚಿತ ಯೋಜನೆಗಳಿಗೆ ವಿನಿಯೋಗಿಸುತ್ತೇವೆ” ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದರು. ಇನ್ನು ಜನತೆ ಉಚಿತ ಯೋಜನೆಗಳಿಂದ ತಮಗೆ ಉಳಿತಾಯವಾದ ಹಣವನ್ನು ಇತರೆಡೆ ಬಳಸುತ್ತಾರೆ. ಇದರಿಂದ ಉತ್ಪಾದನೆ, ಉದ್ಯೋಗ ಸೃಷ್ಟಿ, ತೆರಿಗೆ ಸಂಗ್ರಹ, ಜಿಡಿಪಿ ಹೆಚ್ಚಳವಾಗುತ್ತದೆ. ಈ ಸರಪಳಿಯು ರಾಜ್ಯದ ಆರ್ಥಿಕತೆಯನ್ನು ಮೇಲೆತ್ತುತ್ತದೆಯೇ ಹೊರತು ಕೆಳಗಿಳಿಸುವುದಿಲ್ಲ ಎಂದು ಆರ್ಥಿಕ ತಜ್ಞರು ಹೇಳುತ್ತಾರೆ. ಇನ್ನು ರಾಜ್ಯದ ಅಭಿವೃದ್ದಿ ಕುಂಠಿತಗೊಳ್ಳುತ್ತದೆ ಎಂದು ಕೆಲವರು ಆರೋಪಿಸುತ್ತಾರೆ. ಅವರ ಪ್ರಕಾರ ರಾಜ್ಯವೆಂದರೆ ಅಲ್ಲಿ ವಾಸಿಸುವ ಜನರಲ್ಲವೇ? ಜನರಿಗೆ ಒಳ್ಳೇಯದಾದರೆ ಅದು ರಾಜ್ಯಕ್ಕೆ ಒಳ್ಳೇಯದು ತಾನೇ?

ಇನ್ನು ನಾವು ಕಟ್ಟುವ ತೆರಿಗೆ ಉಚಿತ ಯೋಜನೆಗಳಿಗೆ ಹೋಗುತ್ತದೆ ಎಂದು ಮೇಲ್ವರ್ಗದವರು ಹಲುಬುವುದು ಸಹ ತಪ್ಪಾದ ಕಥನವಾಗಿದೆ. ಏಕೆಂದರೆ 2021-22ರ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆಯಾಗಿ ಭಾರತೀಯರು ಪಾವತಿಸಿದ 6.73 ಲಕ್ಷ ಕೋಟಿ ರೂಗಳಿಗೆ ಹೋಲಿಸಿದರೆ, ಪರೋಕ್ಷ ತೆರಿಗೆಯಿಂದ 20.73 ಲಕ್ಷ ಕೋಟಿ ರೂ ಸಂಗ್ರಹಿಸಲಾಗಿದೆ. ಅಂದರೆ ಈ ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಡವರು ಮತ್ತು ಮಧ್ಯಮ ವರ್ಗದವರು ಕಟ್ಟುವ ಪರೋಕ್ಷ ತೆರಿಗೆಯ ಪಾಲು ಬೃಹತ್ ಪ್ರಮಾಣದಲ್ಲಿದೆ. ಅಂದರೆ ಬಡವರ ತೆರಿಗೆ ದುಡ್ಡನ್ನು ಅವರಿಗಾಗಿ ಬಳಸುವುದು ಸರಿಯಾದ ಕ್ರಮವಾಗಿದೆ. ಹಾಗಾಗಿ ಕಲ್ಯಾಣ ಯೋಜನೆಗಳನ್ನು ಉಚಿತ ಯೋಜನೆಗಳು ಎಂದು ಕರೆಯಬಾರದು, ಅವುಗಳು ಜನರ ಹಕ್ಕು ಎಂಬ ವಾದ ಸಹ ಆರಂಭವಾಗಿದೆ.

ಇದನ್ನೂ ಓದಿ: ದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ: ಇಲ್ಲಿದೆ ಪೂರ್ಣ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...