Homeಮುಖಪುಟಲಸಿಕೆ ಸಂಭ್ರಮದ ಮಧ್ಯೆ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮರೆಯದಿರಿ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

ಲಸಿಕೆ ಸಂಭ್ರಮದ ಮಧ್ಯೆ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮರೆಯದಿರಿ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

ತಮ್ಮ ಸರ್ಕಾರದ ವಿರುದ್ದ ಮಾತನಾಡುತ್ತಲೇ ಅದನ್ನು ಮುಜುಗರಕ್ಕೆ ಈಡಾಗಿಸುತ್ತಿರುವ ಬಿಜೆಪಿಯ ಹಿರಿಯ ನಾಯಕ ಲಡಾಖ್‌ನಲ್ಲಿ 4 ಸಾವಿರ ಚದರ ಕಿಲೋ ಮೀಟರ್ ಚೀನಾ‌ ಆಕ್ರಮಿಸಿರುವುದನ್ನು ಮರೆಯಬೇಡಿ ಎಂದು ಹೇಳಿದ್ದಾರೆ

- Advertisement -
- Advertisement -

ಭಾರತೀಯ ಔಷಧ ನಿಯಂತ್ರಕ ಈಗಾಗಲೇ ಎರಡು ಕೊರೊನಾ ಲಸಿಕೆಗಳಿಗೆ ತುರ್ತು ಬಳಕೆಗೆ ಅನುಮತಿ ನೀಡಿದೆ. ಒಕ್ಕೂಟ ಸರ್ಕಾರ ಈ ಹಿನ್ನಲೆಯಲ್ಲಿ ಅದನ್ನು ತನ್ನ ರಾಜಕೀಯ ಲಾಭಕ್ಕೆ ಬಳಸುತ್ತಿರುವ ಹೊತ್ತಿಗೆ, ಬಿಜೆಪಿಯ ರಾಜ್ಯಸಭಾ ಸಂಸದರಾಗಿರುವ ಸುಬ್ರಮಣಿಯಣ್ ಸ್ವಾಮಿ, “ಈ ಲಸಿಕೆ ಸಂಭ್ರಮದಲ್ಲಿ ಕುಸಿಯುತ್ತಿರುವ ಆರ್ಥಿಕತೆ ಮತ್ತು ಲಡಾಖ್‌ನಲ್ಲಿ 4 ಸಾವಿರ ಚದರ ಕಿಲೋ ಮೀಟರ್ ಭೂಮಿಯನ್ನು ಚೀನಾ‌ ಆಕ್ರಮಿಸಿರುವುದನ್ನು ಮರೆಯಬೇಡಿ” ಎಂದು ಎಚ್ಚರಿಕೆ ನೀಡಿದ್ದಾರೆ.

ಸದಾ ತಮ್ಮ ಸರ್ಕಾರದ ವಿರುದ್ದ ಮಾತನಾಡುತ್ತಲೇ ಅದನ್ನು ಮುಜುಗರಕ್ಕೆ ಈಡಾಗಿಸುತ್ತಿರುವ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ, ಕೊರೊನಾ ಲಸಿಕೆಯ ಸಂಭ್ರಮದಲ್ಲಿ ಕಳೆದು ಹೋಗಬೇಡಿ ಎಂದು ಎಚ್ಚರಿಸಿದ್ದಾರೆ. ಮಂಗಳವಾರ ಟ್ವೀಟ್ ಮಾಡಿರುವ ಅವರು. “ಲಸಿಕೆಯ ಎಲ್ಲಾ ಸಂಭ್ರಮಗಳ ನಡುವೆ ಆರ್ಥಿಕತೆಯು ಕುಸಿಯುತ್ತಿರುವುದು ಮತ್ತು ಲಡಾಖ್‌ನಲ್ಲಿ ಚೀನಾ ಕನಿಷ್ಠ 4000 ಚದರ ಕಿ.ಮೀ. ಆಕ್ರಮಿಸಿರುವುದನ್ನು ಮರೆಯಬೇಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೊಸ ಸಂಸತ್ ಭವನದ ನಿರ್ಮಾಣಕ್ಕೆ ಟಾಟಾ ಕಂಪೆನಿ ಆಯ್ಕೆಯಾಗಿದ್ದು ಹೇಗೆ: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

ಕೊರೊನಾ ನಡುವೆ ಕೂಡಾ ಚೀನಾ ಗಡಿ ತಗಾದೆ ತೆಗೆದು ಭಾರತದ ಭೂಪ್ರದೇಶದ ಒಳಗೆ ಕಾಲಿಟ್ಟಿದೆ. ಇದನ್ನು ಆಡಳಿತ ಪಕ್ಷ ಬಿಜೆಪಿ ನೇರವಾಗಿ ಒಪ್ಪುತ್ತಿಲ್ಲವಾದರೂ, ಮಾಧ್ಯಮಗಳು ಅಲ್ಲಿನ ಉಪಗ್ರಹ ಚಿತ್ರಗಳನ್ನು ಪ್ರಕಟಿಸಿ ಗಡಿಯಲ್ಲಿ ಚೀನಾ ಚಟುವಟಿಕೆಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಇದೀಗ ರೈತರ ಹೋರಾಟ, ಕೊರೊನಾ ಲಸಿಕೆಯ ಅಬ್ಬರದಲ್ಲಿ ಆ ಸುದ್ದಿಗಳು ಹಿನ್ನಲೆಗೆ ಸರಿದಿವೆ.

ಅಲ್ಲದೆ ಕೊರೊನಾ ಪತ್ತೆಯಾಗಿರುವುಕ್ಕಿಂತ ಮುಂಚೆಯೆ ಭಾರತದ ಆರ್ಥಿಕತೆ ಹಿಮ್ಮುಖವಾಗಿಯೇ ಚಲಿಸುತ್ತಿತ್ತು. ಇದಕ್ಕೆ ನೋಟ್ ನಿಷೇಧ ಮತ್ತು ಜಿಎಸ್‌ಟಿ ಸೇರಿದಂತೆ ಬಿಜೆಪಿಯ ಅಸಮರ್ಪಕ ಆರ್ಥಿಕ ನೀತಿಯು ಕಾರಣ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದರು. ಜೊತೆಗೆ ಕೊರೊನಾ ಪತ್ತೆಯಾದ ನಂತರ ಯಾವುದೇ ಮುನ್ನೆಚ್ಚರಿಕೆಯಿಲ್ಲದೆ ಹೇರಲ್ಪಟ್ಟ ಲಾಕ್‌ಡೌನ್‌ನಿಂದಾಗಿ ಭಾರತದ ಆರ್ಥಿಕತೆ ಹಿಮ್ಮುಖವಾಗಿ ಚಲಿಸಲು ಫ್ರಾರಂಭವಾಯಿತು. ಏಷ್ಯಾಖಂಡದಲ್ಲೇ ಅತೀ ಕೆಟ್ಟ ಆರ್ಥಿಕತೆಯನ್ನು ಭಾರತದ್ದಾಗಿದೆ ಎಂದು ವರದಿಗಳು ಸೂಚಿಸುತ್ತದೆ.

ಇದನ್ನೂ ಓದಿ: ಬಿಜೆಪಿ ಐಟಿ ಸೆಲ್ ವರ್ತನೆ ರಾಕ್ಷಸೀಯವಾಗಿದೆ: ಸುಬ್ರಮಣಿಯನ್ ಸ್ವಾಮಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...