Homeಮುಖಪುಟಲಸಿಕೆ ಸಂಭ್ರಮದ ಮಧ್ಯೆ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮರೆಯದಿರಿ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

ಲಸಿಕೆ ಸಂಭ್ರಮದ ಮಧ್ಯೆ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮರೆಯದಿರಿ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

ತಮ್ಮ ಸರ್ಕಾರದ ವಿರುದ್ದ ಮಾತನಾಡುತ್ತಲೇ ಅದನ್ನು ಮುಜುಗರಕ್ಕೆ ಈಡಾಗಿಸುತ್ತಿರುವ ಬಿಜೆಪಿಯ ಹಿರಿಯ ನಾಯಕ ಲಡಾಖ್‌ನಲ್ಲಿ 4 ಸಾವಿರ ಚದರ ಕಿಲೋ ಮೀಟರ್ ಚೀನಾ‌ ಆಕ್ರಮಿಸಿರುವುದನ್ನು ಮರೆಯಬೇಡಿ ಎಂದು ಹೇಳಿದ್ದಾರೆ

- Advertisement -
- Advertisement -

ಭಾರತೀಯ ಔಷಧ ನಿಯಂತ್ರಕ ಈಗಾಗಲೇ ಎರಡು ಕೊರೊನಾ ಲಸಿಕೆಗಳಿಗೆ ತುರ್ತು ಬಳಕೆಗೆ ಅನುಮತಿ ನೀಡಿದೆ. ಒಕ್ಕೂಟ ಸರ್ಕಾರ ಈ ಹಿನ್ನಲೆಯಲ್ಲಿ ಅದನ್ನು ತನ್ನ ರಾಜಕೀಯ ಲಾಭಕ್ಕೆ ಬಳಸುತ್ತಿರುವ ಹೊತ್ತಿಗೆ, ಬಿಜೆಪಿಯ ರಾಜ್ಯಸಭಾ ಸಂಸದರಾಗಿರುವ ಸುಬ್ರಮಣಿಯಣ್ ಸ್ವಾಮಿ, “ಈ ಲಸಿಕೆ ಸಂಭ್ರಮದಲ್ಲಿ ಕುಸಿಯುತ್ತಿರುವ ಆರ್ಥಿಕತೆ ಮತ್ತು ಲಡಾಖ್‌ನಲ್ಲಿ 4 ಸಾವಿರ ಚದರ ಕಿಲೋ ಮೀಟರ್ ಭೂಮಿಯನ್ನು ಚೀನಾ‌ ಆಕ್ರಮಿಸಿರುವುದನ್ನು ಮರೆಯಬೇಡಿ” ಎಂದು ಎಚ್ಚರಿಕೆ ನೀಡಿದ್ದಾರೆ.

ಸದಾ ತಮ್ಮ ಸರ್ಕಾರದ ವಿರುದ್ದ ಮಾತನಾಡುತ್ತಲೇ ಅದನ್ನು ಮುಜುಗರಕ್ಕೆ ಈಡಾಗಿಸುತ್ತಿರುವ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ, ಕೊರೊನಾ ಲಸಿಕೆಯ ಸಂಭ್ರಮದಲ್ಲಿ ಕಳೆದು ಹೋಗಬೇಡಿ ಎಂದು ಎಚ್ಚರಿಸಿದ್ದಾರೆ. ಮಂಗಳವಾರ ಟ್ವೀಟ್ ಮಾಡಿರುವ ಅವರು. “ಲಸಿಕೆಯ ಎಲ್ಲಾ ಸಂಭ್ರಮಗಳ ನಡುವೆ ಆರ್ಥಿಕತೆಯು ಕುಸಿಯುತ್ತಿರುವುದು ಮತ್ತು ಲಡಾಖ್‌ನಲ್ಲಿ ಚೀನಾ ಕನಿಷ್ಠ 4000 ಚದರ ಕಿ.ಮೀ. ಆಕ್ರಮಿಸಿರುವುದನ್ನು ಮರೆಯಬೇಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೊಸ ಸಂಸತ್ ಭವನದ ನಿರ್ಮಾಣಕ್ಕೆ ಟಾಟಾ ಕಂಪೆನಿ ಆಯ್ಕೆಯಾಗಿದ್ದು ಹೇಗೆ: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

ಕೊರೊನಾ ನಡುವೆ ಕೂಡಾ ಚೀನಾ ಗಡಿ ತಗಾದೆ ತೆಗೆದು ಭಾರತದ ಭೂಪ್ರದೇಶದ ಒಳಗೆ ಕಾಲಿಟ್ಟಿದೆ. ಇದನ್ನು ಆಡಳಿತ ಪಕ್ಷ ಬಿಜೆಪಿ ನೇರವಾಗಿ ಒಪ್ಪುತ್ತಿಲ್ಲವಾದರೂ, ಮಾಧ್ಯಮಗಳು ಅಲ್ಲಿನ ಉಪಗ್ರಹ ಚಿತ್ರಗಳನ್ನು ಪ್ರಕಟಿಸಿ ಗಡಿಯಲ್ಲಿ ಚೀನಾ ಚಟುವಟಿಕೆಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಇದೀಗ ರೈತರ ಹೋರಾಟ, ಕೊರೊನಾ ಲಸಿಕೆಯ ಅಬ್ಬರದಲ್ಲಿ ಆ ಸುದ್ದಿಗಳು ಹಿನ್ನಲೆಗೆ ಸರಿದಿವೆ.

ಅಲ್ಲದೆ ಕೊರೊನಾ ಪತ್ತೆಯಾಗಿರುವುಕ್ಕಿಂತ ಮುಂಚೆಯೆ ಭಾರತದ ಆರ್ಥಿಕತೆ ಹಿಮ್ಮುಖವಾಗಿಯೇ ಚಲಿಸುತ್ತಿತ್ತು. ಇದಕ್ಕೆ ನೋಟ್ ನಿಷೇಧ ಮತ್ತು ಜಿಎಸ್‌ಟಿ ಸೇರಿದಂತೆ ಬಿಜೆಪಿಯ ಅಸಮರ್ಪಕ ಆರ್ಥಿಕ ನೀತಿಯು ಕಾರಣ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದರು. ಜೊತೆಗೆ ಕೊರೊನಾ ಪತ್ತೆಯಾದ ನಂತರ ಯಾವುದೇ ಮುನ್ನೆಚ್ಚರಿಕೆಯಿಲ್ಲದೆ ಹೇರಲ್ಪಟ್ಟ ಲಾಕ್‌ಡೌನ್‌ನಿಂದಾಗಿ ಭಾರತದ ಆರ್ಥಿಕತೆ ಹಿಮ್ಮುಖವಾಗಿ ಚಲಿಸಲು ಫ್ರಾರಂಭವಾಯಿತು. ಏಷ್ಯಾಖಂಡದಲ್ಲೇ ಅತೀ ಕೆಟ್ಟ ಆರ್ಥಿಕತೆಯನ್ನು ಭಾರತದ್ದಾಗಿದೆ ಎಂದು ವರದಿಗಳು ಸೂಚಿಸುತ್ತದೆ.

ಇದನ್ನೂ ಓದಿ: ಬಿಜೆಪಿ ಐಟಿ ಸೆಲ್ ವರ್ತನೆ ರಾಕ್ಷಸೀಯವಾಗಿದೆ: ಸುಬ್ರಮಣಿಯನ್ ಸ್ವಾಮಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...