Homeಮುಖಪುಟಲಸಿಕೆ ಸಂಭ್ರಮದ ಮಧ್ಯೆ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮರೆಯದಿರಿ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

ಲಸಿಕೆ ಸಂಭ್ರಮದ ಮಧ್ಯೆ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮರೆಯದಿರಿ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

ತಮ್ಮ ಸರ್ಕಾರದ ವಿರುದ್ದ ಮಾತನಾಡುತ್ತಲೇ ಅದನ್ನು ಮುಜುಗರಕ್ಕೆ ಈಡಾಗಿಸುತ್ತಿರುವ ಬಿಜೆಪಿಯ ಹಿರಿಯ ನಾಯಕ ಲಡಾಖ್‌ನಲ್ಲಿ 4 ಸಾವಿರ ಚದರ ಕಿಲೋ ಮೀಟರ್ ಚೀನಾ‌ ಆಕ್ರಮಿಸಿರುವುದನ್ನು ಮರೆಯಬೇಡಿ ಎಂದು ಹೇಳಿದ್ದಾರೆ

- Advertisement -
- Advertisement -

ಭಾರತೀಯ ಔಷಧ ನಿಯಂತ್ರಕ ಈಗಾಗಲೇ ಎರಡು ಕೊರೊನಾ ಲಸಿಕೆಗಳಿಗೆ ತುರ್ತು ಬಳಕೆಗೆ ಅನುಮತಿ ನೀಡಿದೆ. ಒಕ್ಕೂಟ ಸರ್ಕಾರ ಈ ಹಿನ್ನಲೆಯಲ್ಲಿ ಅದನ್ನು ತನ್ನ ರಾಜಕೀಯ ಲಾಭಕ್ಕೆ ಬಳಸುತ್ತಿರುವ ಹೊತ್ತಿಗೆ, ಬಿಜೆಪಿಯ ರಾಜ್ಯಸಭಾ ಸಂಸದರಾಗಿರುವ ಸುಬ್ರಮಣಿಯಣ್ ಸ್ವಾಮಿ, “ಈ ಲಸಿಕೆ ಸಂಭ್ರಮದಲ್ಲಿ ಕುಸಿಯುತ್ತಿರುವ ಆರ್ಥಿಕತೆ ಮತ್ತು ಲಡಾಖ್‌ನಲ್ಲಿ 4 ಸಾವಿರ ಚದರ ಕಿಲೋ ಮೀಟರ್ ಭೂಮಿಯನ್ನು ಚೀನಾ‌ ಆಕ್ರಮಿಸಿರುವುದನ್ನು ಮರೆಯಬೇಡಿ” ಎಂದು ಎಚ್ಚರಿಕೆ ನೀಡಿದ್ದಾರೆ.

ಸದಾ ತಮ್ಮ ಸರ್ಕಾರದ ವಿರುದ್ದ ಮಾತನಾಡುತ್ತಲೇ ಅದನ್ನು ಮುಜುಗರಕ್ಕೆ ಈಡಾಗಿಸುತ್ತಿರುವ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ, ಕೊರೊನಾ ಲಸಿಕೆಯ ಸಂಭ್ರಮದಲ್ಲಿ ಕಳೆದು ಹೋಗಬೇಡಿ ಎಂದು ಎಚ್ಚರಿಸಿದ್ದಾರೆ. ಮಂಗಳವಾರ ಟ್ವೀಟ್ ಮಾಡಿರುವ ಅವರು. “ಲಸಿಕೆಯ ಎಲ್ಲಾ ಸಂಭ್ರಮಗಳ ನಡುವೆ ಆರ್ಥಿಕತೆಯು ಕುಸಿಯುತ್ತಿರುವುದು ಮತ್ತು ಲಡಾಖ್‌ನಲ್ಲಿ ಚೀನಾ ಕನಿಷ್ಠ 4000 ಚದರ ಕಿ.ಮೀ. ಆಕ್ರಮಿಸಿರುವುದನ್ನು ಮರೆಯಬೇಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೊಸ ಸಂಸತ್ ಭವನದ ನಿರ್ಮಾಣಕ್ಕೆ ಟಾಟಾ ಕಂಪೆನಿ ಆಯ್ಕೆಯಾಗಿದ್ದು ಹೇಗೆ: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

ಕೊರೊನಾ ನಡುವೆ ಕೂಡಾ ಚೀನಾ ಗಡಿ ತಗಾದೆ ತೆಗೆದು ಭಾರತದ ಭೂಪ್ರದೇಶದ ಒಳಗೆ ಕಾಲಿಟ್ಟಿದೆ. ಇದನ್ನು ಆಡಳಿತ ಪಕ್ಷ ಬಿಜೆಪಿ ನೇರವಾಗಿ ಒಪ್ಪುತ್ತಿಲ್ಲವಾದರೂ, ಮಾಧ್ಯಮಗಳು ಅಲ್ಲಿನ ಉಪಗ್ರಹ ಚಿತ್ರಗಳನ್ನು ಪ್ರಕಟಿಸಿ ಗಡಿಯಲ್ಲಿ ಚೀನಾ ಚಟುವಟಿಕೆಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಇದೀಗ ರೈತರ ಹೋರಾಟ, ಕೊರೊನಾ ಲಸಿಕೆಯ ಅಬ್ಬರದಲ್ಲಿ ಆ ಸುದ್ದಿಗಳು ಹಿನ್ನಲೆಗೆ ಸರಿದಿವೆ.

ಅಲ್ಲದೆ ಕೊರೊನಾ ಪತ್ತೆಯಾಗಿರುವುಕ್ಕಿಂತ ಮುಂಚೆಯೆ ಭಾರತದ ಆರ್ಥಿಕತೆ ಹಿಮ್ಮುಖವಾಗಿಯೇ ಚಲಿಸುತ್ತಿತ್ತು. ಇದಕ್ಕೆ ನೋಟ್ ನಿಷೇಧ ಮತ್ತು ಜಿಎಸ್‌ಟಿ ಸೇರಿದಂತೆ ಬಿಜೆಪಿಯ ಅಸಮರ್ಪಕ ಆರ್ಥಿಕ ನೀತಿಯು ಕಾರಣ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದರು. ಜೊತೆಗೆ ಕೊರೊನಾ ಪತ್ತೆಯಾದ ನಂತರ ಯಾವುದೇ ಮುನ್ನೆಚ್ಚರಿಕೆಯಿಲ್ಲದೆ ಹೇರಲ್ಪಟ್ಟ ಲಾಕ್‌ಡೌನ್‌ನಿಂದಾಗಿ ಭಾರತದ ಆರ್ಥಿಕತೆ ಹಿಮ್ಮುಖವಾಗಿ ಚಲಿಸಲು ಫ್ರಾರಂಭವಾಯಿತು. ಏಷ್ಯಾಖಂಡದಲ್ಲೇ ಅತೀ ಕೆಟ್ಟ ಆರ್ಥಿಕತೆಯನ್ನು ಭಾರತದ್ದಾಗಿದೆ ಎಂದು ವರದಿಗಳು ಸೂಚಿಸುತ್ತದೆ.

ಇದನ್ನೂ ಓದಿ: ಬಿಜೆಪಿ ಐಟಿ ಸೆಲ್ ವರ್ತನೆ ರಾಕ್ಷಸೀಯವಾಗಿದೆ: ಸುಬ್ರಮಣಿಯನ್ ಸ್ವಾಮಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...