Homeಅಂಕಣಗಳುಬಹುಜನ ಭಾರತ; ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ

ಬಹುಜನ ಭಾರತ; ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ

- Advertisement -
- Advertisement -

ಬ್ರಿಟಿಷರ ನೇಣುಗಂಬಕ್ಕೆ ನಗುನಗುತ್ತಲೇ ಕೊರಳೊಡ್ಡಿದ್ದ ಆ ಸ್ವಾತಂತ್ರ್ಯ ಕ್ರಾಂತಿಯ ಕಿಡಿ ಉಸಿರಾಡಿದ್ದು ಇಪ್ಪತ್ಮೂರೇ ವರ್ಷ. ಉಕ್ಕು ಹರೆಯದ ಈ ಬಿಸಿ ಗುಂಡಿಗೆ ದಾಸ್ಯದ ವಿರುದ್ಧ ಮಾತ್ರವೇ ಅಲ್ಲ, ಸಮ ಸಮಾಜ, ಸಹಬಾಳುವೆಗಾಗಿ ಮಿಡಿದ ಪರಿ ಅಭೂತಪೂರ್ವ.

ಭಗತ್ ಸಿಂಗ್ ದೇಹ ಬಹು ಹಿಂದೆಯೇ ಮಣ್ಣು ಸೇರಿರಬಹುದು. ಆದರೆ ಕೋಮುವಾದ, ಅಮಾನವೀಯ ಅಸ್ಪೃಶ್ಯತೆ, ಧರ್ಮ-ಜಾತಿಗಳ, ಮೇಲು- ಕೀಳುಗಳ ನೆವದಲಿ ನಡೆವ ಕ್ರೌರ್ಯ-ಶೋಷಣೆ ವಿರುದ್ಧ ಆತ ಎತ್ತಿದ ದನಿ ಇಂದಿಗೂ ಪ್ರಸ್ತುತ.

ಬ್ರಿಟಿಷರು ಗಲ್ಲಿಗೇರಿಸಿದ್ದು ಕೇವಲ ಆತನ ದೇಹವನ್ನು. ಆದರೆ ಆತನ ಅಜರಾಮರ ಆತ್ಮವನ್ನು, ಸ್ವಸ್ಥ ಸಮಾಜ ಕುರಿತು ಆತ ಕಂಡ ಕನಸುಗಳನ್ನು, ಆತನ ವಿಚಾರಗಳನ್ನು ಅನುದಿನವೂ ಉರಿಕಂಬಕ್ಕೆ ಏರಿಸುತ್ತಿದ್ದೇವೆ.

’ಸಾಂಪ್ರದಾಯಿಕ ದಂಗೆಗಳು ಮತ್ತು ಅವುಗಳ ಇಲಾಜು’ ಎಂಬುದಾಗಿ 1927ರಲ್ಲಿ ಭಗತ್ ಬರೆದ ಲೇಖನ ಇಂದಿನ ಭಾರತದ ಸ್ಥಿತಿಗತಿಗೂ ಹಿಡಿದ ಕೈಗನ್ನಡಿ.

“…ಇಂಡಿಯಾದ ಇಂದಿನ ಪರಿಸ್ಥಿತಿ ಅತೀವವಾಗಿ ಉಲ್ಬಣಿಸಿದೆ. ಒಂದು ಧರ್ಮದ ಅನುಯಾಯಿಗಳು ಹಠಾತ್ತನೆ ಇತರೆ ಧರ್ಮಗಳ ವಿರುದ್ಧ ಕಡು ಹಗೆತನದ ಕತ್ತಿ ಹಿಡಿದಿದ್ದಾರೆ. ಹಿಂದು ಸಿಖ್ಖರೆಂಬ ಏಕೈಕ ಕಾರಣಕ್ಕೆ ಮುಸ್ಲಿಮರು ಹಿಂದು ಮತ್ತು ಸಿಖ್ಖರನ್ನೂ, ಮುಸಲ್ಮಾನರೆಂಬ ಕಾರಣಕ್ಕಾಗಿ ಹಿಂದು ಮತ್ತು ಸಿಖ್ಖರು ಮುಸಲ್ಮಾನರನ್ನೂ ಕ್ರೂರವಾಗಿ ಕೊಲ್ಲಲಾಗುತ್ತಿದೆ… ರಾಜಕೀಯ ನಾಯಕರು ನಿರ್ಲಜ್ಜರಾಗಿ ವರ್ತಿಸುತ್ತಿದ್ದಾರೆ. ದೇಶವನ್ನು ದಾಸ್ಯದಿಂದ ವಿಮೋಚನೆಗೊಳಿಸುವ ಶಪಥ ತೊಟ್ಟಿರುವ ಮತ್ತು ಸಮಾನ ರಾಷ್ಟ್ರೀಯತೆ ಕುರಿತು ಹಗಲಿರುಳು ಭಾಷಣ ಮಾಡುವ ತಲೆಯಾಳುಗಳು ಒಂದೋ ಲಜ್ಜೆಯಿಂದ ತಲೆತಗ್ಗಿಸಿ ಬಾಯಿ ಹೊಲಿದುಕೊಂಡಿದ್ದಾರೆ ಇಲ್ಲವೇ ಧರ್ಮಾಂಧತೆಯ ದುಷ್ಟ ಗಾಳಿಯ ದಿಕ್ಕಿನತ್ತ ಓಲಾಡುತ್ತಿದ್ದಾರೆ… ತುಟಿ ಬಿಚ್ಚದೆ ಬೇಲಿಯ ಮೇಲೆ ಮುಖ ಮುಚ್ಚಿ
ಕುಳಿತಿರುವವರ ಸಂಖ್ಯೆಯೂ ಸಣ್ಣದೇನಲ್ಲ”.

ಕೋಮುವಾದದ ದಳ್ಳುರಿಗೆ ಎಣ್ಣೆ ಎರೆವ ಪತ್ರಿಕೆಗಳ ಕುರಿತು ಭಗತ್ ಹೇಳಿದ್ದು: “…ಕೋಮು ದಂಗೆಗಳಿಗೆ ಪ್ರಚೋದನೆ ನೀಡುವ ಇತರೆ ಪ್ರಮುಖ ಪಾತ್ರಧಾರಿಗಳ ಸಾಲಿಗೆ ಪತ್ರಕರ್ತರೂ ಸೇರುತ್ತಾರೆ. ಒಂದು ಕಾಲಕ್ಕೆ ಬಹುಗಣ್ಯ ಕಸುಬು ಎಂದು ಪರಿಗಣಿಸಲಾಗಿದ್ದ ಪತ್ರಿಕೋದ್ಯಮ ಈಗ ತಿಪ್ಪೆಯಾಗಿ ಬದಲಾಗಿದೆ. ಒಬ್ಬರ ವಿರುದ್ಧ ಮತ್ತೊಬ್ಬರು ತಲೆಬರೆಹಗಳಲ್ಲಿ ಕೂಗಿ ಕಿರುಚುತ್ತಾರೆ, ಪರಸ್ಪರರನ್ನು ಕೊಲ್ಲುವ ಉನ್ಮಾದಗಳನ್ನು ಜನರಲ್ಲಿ ಪ್ರಚೋದಿಸುತ್ತಿದ್ದಾರೆ… ಪತ್ರಿಕೆಗಳು ತೀವ್ರತರದ ಆಸ್ಫೋಟಕ ಮತ್ತು ಅತೀವ ಪ್ರಚೋದಕ ಲೇಖನಗಳನ್ನು ಪ್ರಕಟಿಸಿ ಕೋಮುವಾದೀ ಜ್ವಾಲೆಯನ್ನು ಹತ್ತು ಹಲವು ಸ್ಥಳಗಳಲ್ಲಿ ಭುಗಿಲೆಬ್ಬಿಸುತ್ತಿವೆ… ತಳಮಳ ತಳ್ಳಂಕಗಳ ಈ ಸ್ಥಿತಿಯಲ್ಲಿ ಸಮಚಿತ್ತವನ್ನು, ಸಮತೂಕವನ್ನು ಪ್ರದರ್ಶಿಸಿದ ಪತ್ರಕರ್ತರು ಕೆಲವೇ ಕೆಲವರು”.

“…ಜನತೆಯಲ್ಲಿ ಅರಿವು ಮೂಡಿಸಿ ಅವರ ಮೆದುಳುಗಳನ್ನು ನಿರ್ಮಲವಾಗಿ ಇರಿಸುವುದು, ಸಂಕುಚಿತವಾದದ ಬಿಲಗಳಿಂದ ಹೊರಗೆಳೆದು ತರುವುದು, ಕೋಮುವಾದೀ ಭಾವನೆಗಳನ್ನು ಕೆರೆದು ತೆಗೆದು ತೊಳೆದು ಪರಸ್ಪರ, ಸಾಮರಸ್ಯ ಮೂಡಿಸುವುದು ಪತ್ರಿಕೆಗಳ ಅಸಲು ಕರ್ತವ್ಯ….. ಬದಲಾಗಿ ಅರಿವುಗೇಡಿತನ, ಸಂಕುಚಿತ ಪಂಥವಾದ- ಕೋಮುವಾದಗಳನ್ನು ಜನರ ಮನಸುಗಳಲ್ಲಿ ಬಿತ್ತಿ ಗಲಭೆಗಳನ್ನು ಎಬ್ಬಿಸುವುದೇ ಅವರ ಮುಖ್ಯ ಗುರಿ ಎನ್ನಿಸುತ್ತಿದೆ. ಈಗಿನ ಇಂಡಿಯಾದ ಪರಿಸ್ಥಿತಿಯನ್ನು ನೋಡಿದರೆ ರಕ್ತಕಣ್ಣೀರು ಕಪಾಳಕ್ಕೆ ಇಳಿವುದಲ್ಲದೆ, ಕಟ್ಟಕಡೆಗೆ ಈ ದೇಶದ ಪರಿಸ್ಥಿತಿ ಏನಾದೀತು ಎಂಬ ಪ್ರಶ್ನೆ ಏಳುತ್ತದೆ”.

“ಜನ ಪರಸ್ಪರ ಕಚ್ಚಾಡುವುದನ್ನು ನಿಲ್ಲಿಸಬೇಕಿದ್ದರೆ, ದೀನ ದರಿದ್ರರು ಮತ್ತು ರೈತರು ಮತ್ತು ದುಡಿಯುವ ವರ್ಗಗಳಿಗೆ ಬಂಡವಾಳಶಾಹಿಯೇ ಅವರ ಅಸಲು ಶತ್ರು ಎಂಬ ವಾಸ್ತವವನ್ನು ತಿಳಿಸಿ ಹೇಳಬೇಕಿದೆ. ಅವರ ಕೈಯಲ್ಲಿನ ದಾಳ ಆಗದಂತೆ, ಅವರ ಮೋಸ ಮರೆಗಳ ಹುನ್ನಾರಗಳಿಗೆ ಬಲಿಯಾಗದಂತೆ ಎಚ್ಚರಗೊಳಿಸಬೇಕಿದೆ. ಎಲ್ಲ ಜಾತಿ, ವರ್ಣ, ಜನಾಂಗ, ರಾಷ್ಟ್ರೀಯತೆಯ ಭೇದ ಭಾವವಿಲ್ಲದೆ ಒಗ್ಗಟ್ಟಿನಿಂದ ತಮ್ಮ ಹಕ್ಕುಗಳಿಗೆ ಹೋರಾಡಬೇಕೆಂಬ ಅರಿವನ್ನು ಎಲ್ಲ ಬಡವರಲ್ಲಿ ಮೂಡಿಸಬೇಕಿದೆ”.

ಬ್ರಿಟಿಷರ ಬಂಧಿಯಾಗಿ ಕಳೆದ ಬದುಕಿನ ಕಟ್ಟಕಡೆಯ ಎರಡು ವರ್ಷಗಳಲ್ಲಿ ಭಗತ್, ಮಾರ್ಕ್ಸ್‌ವಾದದ ಕಡೆ ನಡೆದಿದ್ದ. ಲಾಹೋರ್ ಒಳಸಂಚಿನ ಪ್ರಕರಣದಲ್ಲಿ 1930ರ ಜನವರಿ 21ರಂದು ವಿಚಾರಣೆಗೆಂದು ಕೋರ್ಟಿಗೆ ಹಾಜರಾಗಿದ್ದ ಭಗತ್ ಮತ್ತು ಸಂಗಾತಿಗಳು ಧರಿಸಿದ್ದು ಕೆಂಪು ಕೊರಳವಸ್ತ್ರಗಳನ್ನು. ಕೂಗಿದ್ದು ಸಮಾಜವಾದೀ ಕ್ರಾಂತಿ ಚಿರಾಯು ಆಗಲಿ… ಕಮ್ಯೂನಿಸ್ಟ್ ಇಂಟರನ್ಯಾಷನಲ್ ಚಿರಾಯು ಆಗಲಿ… ಚಿರಾಯುವಾಗಲಿ ಜನ ಜನತೆ… ಲೆನಿನ್ ಹೆಸರಿಗೆ ಅಳಿವಿಲ್ಲ… ಇಂಪೀರಿಯಲಿಸಮ್ಮಿಗೆ ಧಿಕ್ಕಾರ… ಇತರೆ ಇತ್ಯಾದಿ ಘೋಷಣೆಗಳನ್ನು.

ಕಡೆಯ ವರ್ಷಗಳ ಜೈಲುವಾಸದಲ್ಲಿ ಭಗತ್ ಓದಿನ ಬೀಸು, ಆತ ಬರೆದ 146 ಪುಟಗಳ ಜೈಲು ಟಿಪ್ಪಣಿಗಳಲ್ಲಿ ಪ್ರತಿಫಲಿಸಿದೆ. 108 ಲೇಖಕರ ಪುಸ್ತಕಗಳನ್ನು ಅರಗಿಸಿಕೊಂಡು ಬರೆದುಕೊಂಡ ಉಲ್ಲೇಖಗಳು ಮತ್ತು ಟಿಪ್ಪಣಿಗಳಿವು. ಎಂಗೆಲ್ಸ್‌ನ ಸಮಾಜವಾದ, ಯುಟೋಪಿಯನ್ ಅಂಡ್ ಸೈಂಟಿಫಿಕ್, ಕುಟುಂಬ, ಖಾಸಗಿ ಆಸ್ತಿಪಾಸ್ತಿ ಮತ್ತು ಪ್ರಭುತ್ವ, ಮಾರ್ಕ್ಸ್ ಮತ್ತು ಎಂಗೆಲ್ಸ್‌ನ ದಿ ಕಮ್ಯೂನಿಸ್ಟ್ ಮ್ಯಾನಿಫೆಸ್ಟೋ, ಬಟ್ರ್ಯಾಂಡ್ ರಸೆಲ್, ಥಾಮಸ್ ಪೇನ್, ದೊಸ್ತೋವ್‌ಸ್ಕಿ, ಬುಖಾರಿನ್, ವ್ಹಿಟ್ಮ್ಯಾನ್, ಒಮರ್ ಖಯ್ಯಾಮನ ಕೃತಿಗಳಿಂದ ಧಾರಾಳ ಉಲ್ಲೇಖಗಳಿವೆ.

ಗಲ್ಲಿಗೇರುವ ಹಿಂದಿನ ವರ್ಷ ಭಗತ್ ಬರೆದ “ನಾನೇಕೆ ನಾಸ್ತಿಕ” ಮತ್ತು “ಎಳೆಯ ರಾಜಕೀಯ ಕಾರ್ಯಕರ್ತರಿಗೆ” ಕೃತಿಗಳಲ್ಲಿ ಲೆನಿನ್ನನ ಲೆಫ್ಟ್ ವಿಂಗ್ ಕಮ್ಯೂನಿಸಮ್, ಇಂಪೀರಿಯಲಿಸಮ್ ದಿ ಹೈಯೆಸ್ಟ್ ಸ್ಟೇಜ್ ಆಫ್ ಕ್ಯಾಪಿಟಲಿಸಂನ ಸ್ಪಷ್ಟ ಪ್ರಭಾವಗಳನ್ನು ಇತಿಹಾಸಕಾರರು ಕಂಡಿದ್ದಾರೆ.

“ಅಸಲು ಕ್ರಾಂತಿಕಾರಿ ಸೈನ್ಯಗಳಿರುವುದು ಹಳ್ಳಿಗಳಲ್ಲಿ ಮತ್ತು ಫ್ಯಾಕ್ಟರಿಗಳಲ್ಲಿ… ಅವರೆಂದರೆ ರೈತರು ಮತ್ತು ಕಾರ್ಮಿಕರು” – ನೇಣಿಗೇರಿದ ಎರಡು ತಿಂಗಳ ಮುನ್ನ 1931ರ ಫೆಬ್ರವರಿ ಎರಡರಂದು ಬರೆದ ‘To the young political workers’ ಲೇಖನದಲ್ಲಿ ಕಾಣಬರುವ ಈ ಸಾಲುಗಳು ಆತನ ಒಲವು ನಿಲುವುಗಳನ್ನು ನಿಚ್ಚಳಗೊಳಿಸುತ್ತವೆ.


ಇದನ್ನೂ ಓದಿ: ’ಡಿಸ್‌ಮ್ಯಾಂಟ್ಲಿಂಗ್ ಗ್ಲೋಬಲ್ ಹಿಂದುತ್ವ’ ಕೇಸರಿಕೂಟದಲ್ಲಿ ಕಿಚ್ಚು ಹಚ್ಚಿದ್ದು ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...