Homeಅಂಕಣಗಳುಬಹುಜನ ಭಾರತ; ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ

ಬಹುಜನ ಭಾರತ; ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ

- Advertisement -
- Advertisement -

ಬ್ರಿಟಿಷರ ನೇಣುಗಂಬಕ್ಕೆ ನಗುನಗುತ್ತಲೇ ಕೊರಳೊಡ್ಡಿದ್ದ ಆ ಸ್ವಾತಂತ್ರ್ಯ ಕ್ರಾಂತಿಯ ಕಿಡಿ ಉಸಿರಾಡಿದ್ದು ಇಪ್ಪತ್ಮೂರೇ ವರ್ಷ. ಉಕ್ಕು ಹರೆಯದ ಈ ಬಿಸಿ ಗುಂಡಿಗೆ ದಾಸ್ಯದ ವಿರುದ್ಧ ಮಾತ್ರವೇ ಅಲ್ಲ, ಸಮ ಸಮಾಜ, ಸಹಬಾಳುವೆಗಾಗಿ ಮಿಡಿದ ಪರಿ ಅಭೂತಪೂರ್ವ.

ಭಗತ್ ಸಿಂಗ್ ದೇಹ ಬಹು ಹಿಂದೆಯೇ ಮಣ್ಣು ಸೇರಿರಬಹುದು. ಆದರೆ ಕೋಮುವಾದ, ಅಮಾನವೀಯ ಅಸ್ಪೃಶ್ಯತೆ, ಧರ್ಮ-ಜಾತಿಗಳ, ಮೇಲು- ಕೀಳುಗಳ ನೆವದಲಿ ನಡೆವ ಕ್ರೌರ್ಯ-ಶೋಷಣೆ ವಿರುದ್ಧ ಆತ ಎತ್ತಿದ ದನಿ ಇಂದಿಗೂ ಪ್ರಸ್ತುತ.

ಬ್ರಿಟಿಷರು ಗಲ್ಲಿಗೇರಿಸಿದ್ದು ಕೇವಲ ಆತನ ದೇಹವನ್ನು. ಆದರೆ ಆತನ ಅಜರಾಮರ ಆತ್ಮವನ್ನು, ಸ್ವಸ್ಥ ಸಮಾಜ ಕುರಿತು ಆತ ಕಂಡ ಕನಸುಗಳನ್ನು, ಆತನ ವಿಚಾರಗಳನ್ನು ಅನುದಿನವೂ ಉರಿಕಂಬಕ್ಕೆ ಏರಿಸುತ್ತಿದ್ದೇವೆ.

’ಸಾಂಪ್ರದಾಯಿಕ ದಂಗೆಗಳು ಮತ್ತು ಅವುಗಳ ಇಲಾಜು’ ಎಂಬುದಾಗಿ 1927ರಲ್ಲಿ ಭಗತ್ ಬರೆದ ಲೇಖನ ಇಂದಿನ ಭಾರತದ ಸ್ಥಿತಿಗತಿಗೂ ಹಿಡಿದ ಕೈಗನ್ನಡಿ.

“…ಇಂಡಿಯಾದ ಇಂದಿನ ಪರಿಸ್ಥಿತಿ ಅತೀವವಾಗಿ ಉಲ್ಬಣಿಸಿದೆ. ಒಂದು ಧರ್ಮದ ಅನುಯಾಯಿಗಳು ಹಠಾತ್ತನೆ ಇತರೆ ಧರ್ಮಗಳ ವಿರುದ್ಧ ಕಡು ಹಗೆತನದ ಕತ್ತಿ ಹಿಡಿದಿದ್ದಾರೆ. ಹಿಂದು ಸಿಖ್ಖರೆಂಬ ಏಕೈಕ ಕಾರಣಕ್ಕೆ ಮುಸ್ಲಿಮರು ಹಿಂದು ಮತ್ತು ಸಿಖ್ಖರನ್ನೂ, ಮುಸಲ್ಮಾನರೆಂಬ ಕಾರಣಕ್ಕಾಗಿ ಹಿಂದು ಮತ್ತು ಸಿಖ್ಖರು ಮುಸಲ್ಮಾನರನ್ನೂ ಕ್ರೂರವಾಗಿ ಕೊಲ್ಲಲಾಗುತ್ತಿದೆ… ರಾಜಕೀಯ ನಾಯಕರು ನಿರ್ಲಜ್ಜರಾಗಿ ವರ್ತಿಸುತ್ತಿದ್ದಾರೆ. ದೇಶವನ್ನು ದಾಸ್ಯದಿಂದ ವಿಮೋಚನೆಗೊಳಿಸುವ ಶಪಥ ತೊಟ್ಟಿರುವ ಮತ್ತು ಸಮಾನ ರಾಷ್ಟ್ರೀಯತೆ ಕುರಿತು ಹಗಲಿರುಳು ಭಾಷಣ ಮಾಡುವ ತಲೆಯಾಳುಗಳು ಒಂದೋ ಲಜ್ಜೆಯಿಂದ ತಲೆತಗ್ಗಿಸಿ ಬಾಯಿ ಹೊಲಿದುಕೊಂಡಿದ್ದಾರೆ ಇಲ್ಲವೇ ಧರ್ಮಾಂಧತೆಯ ದುಷ್ಟ ಗಾಳಿಯ ದಿಕ್ಕಿನತ್ತ ಓಲಾಡುತ್ತಿದ್ದಾರೆ… ತುಟಿ ಬಿಚ್ಚದೆ ಬೇಲಿಯ ಮೇಲೆ ಮುಖ ಮುಚ್ಚಿ
ಕುಳಿತಿರುವವರ ಸಂಖ್ಯೆಯೂ ಸಣ್ಣದೇನಲ್ಲ”.

ಕೋಮುವಾದದ ದಳ್ಳುರಿಗೆ ಎಣ್ಣೆ ಎರೆವ ಪತ್ರಿಕೆಗಳ ಕುರಿತು ಭಗತ್ ಹೇಳಿದ್ದು: “…ಕೋಮು ದಂಗೆಗಳಿಗೆ ಪ್ರಚೋದನೆ ನೀಡುವ ಇತರೆ ಪ್ರಮುಖ ಪಾತ್ರಧಾರಿಗಳ ಸಾಲಿಗೆ ಪತ್ರಕರ್ತರೂ ಸೇರುತ್ತಾರೆ. ಒಂದು ಕಾಲಕ್ಕೆ ಬಹುಗಣ್ಯ ಕಸುಬು ಎಂದು ಪರಿಗಣಿಸಲಾಗಿದ್ದ ಪತ್ರಿಕೋದ್ಯಮ ಈಗ ತಿಪ್ಪೆಯಾಗಿ ಬದಲಾಗಿದೆ. ಒಬ್ಬರ ವಿರುದ್ಧ ಮತ್ತೊಬ್ಬರು ತಲೆಬರೆಹಗಳಲ್ಲಿ ಕೂಗಿ ಕಿರುಚುತ್ತಾರೆ, ಪರಸ್ಪರರನ್ನು ಕೊಲ್ಲುವ ಉನ್ಮಾದಗಳನ್ನು ಜನರಲ್ಲಿ ಪ್ರಚೋದಿಸುತ್ತಿದ್ದಾರೆ… ಪತ್ರಿಕೆಗಳು ತೀವ್ರತರದ ಆಸ್ಫೋಟಕ ಮತ್ತು ಅತೀವ ಪ್ರಚೋದಕ ಲೇಖನಗಳನ್ನು ಪ್ರಕಟಿಸಿ ಕೋಮುವಾದೀ ಜ್ವಾಲೆಯನ್ನು ಹತ್ತು ಹಲವು ಸ್ಥಳಗಳಲ್ಲಿ ಭುಗಿಲೆಬ್ಬಿಸುತ್ತಿವೆ… ತಳಮಳ ತಳ್ಳಂಕಗಳ ಈ ಸ್ಥಿತಿಯಲ್ಲಿ ಸಮಚಿತ್ತವನ್ನು, ಸಮತೂಕವನ್ನು ಪ್ರದರ್ಶಿಸಿದ ಪತ್ರಕರ್ತರು ಕೆಲವೇ ಕೆಲವರು”.

“…ಜನತೆಯಲ್ಲಿ ಅರಿವು ಮೂಡಿಸಿ ಅವರ ಮೆದುಳುಗಳನ್ನು ನಿರ್ಮಲವಾಗಿ ಇರಿಸುವುದು, ಸಂಕುಚಿತವಾದದ ಬಿಲಗಳಿಂದ ಹೊರಗೆಳೆದು ತರುವುದು, ಕೋಮುವಾದೀ ಭಾವನೆಗಳನ್ನು ಕೆರೆದು ತೆಗೆದು ತೊಳೆದು ಪರಸ್ಪರ, ಸಾಮರಸ್ಯ ಮೂಡಿಸುವುದು ಪತ್ರಿಕೆಗಳ ಅಸಲು ಕರ್ತವ್ಯ….. ಬದಲಾಗಿ ಅರಿವುಗೇಡಿತನ, ಸಂಕುಚಿತ ಪಂಥವಾದ- ಕೋಮುವಾದಗಳನ್ನು ಜನರ ಮನಸುಗಳಲ್ಲಿ ಬಿತ್ತಿ ಗಲಭೆಗಳನ್ನು ಎಬ್ಬಿಸುವುದೇ ಅವರ ಮುಖ್ಯ ಗುರಿ ಎನ್ನಿಸುತ್ತಿದೆ. ಈಗಿನ ಇಂಡಿಯಾದ ಪರಿಸ್ಥಿತಿಯನ್ನು ನೋಡಿದರೆ ರಕ್ತಕಣ್ಣೀರು ಕಪಾಳಕ್ಕೆ ಇಳಿವುದಲ್ಲದೆ, ಕಟ್ಟಕಡೆಗೆ ಈ ದೇಶದ ಪರಿಸ್ಥಿತಿ ಏನಾದೀತು ಎಂಬ ಪ್ರಶ್ನೆ ಏಳುತ್ತದೆ”.

“ಜನ ಪರಸ್ಪರ ಕಚ್ಚಾಡುವುದನ್ನು ನಿಲ್ಲಿಸಬೇಕಿದ್ದರೆ, ದೀನ ದರಿದ್ರರು ಮತ್ತು ರೈತರು ಮತ್ತು ದುಡಿಯುವ ವರ್ಗಗಳಿಗೆ ಬಂಡವಾಳಶಾಹಿಯೇ ಅವರ ಅಸಲು ಶತ್ರು ಎಂಬ ವಾಸ್ತವವನ್ನು ತಿಳಿಸಿ ಹೇಳಬೇಕಿದೆ. ಅವರ ಕೈಯಲ್ಲಿನ ದಾಳ ಆಗದಂತೆ, ಅವರ ಮೋಸ ಮರೆಗಳ ಹುನ್ನಾರಗಳಿಗೆ ಬಲಿಯಾಗದಂತೆ ಎಚ್ಚರಗೊಳಿಸಬೇಕಿದೆ. ಎಲ್ಲ ಜಾತಿ, ವರ್ಣ, ಜನಾಂಗ, ರಾಷ್ಟ್ರೀಯತೆಯ ಭೇದ ಭಾವವಿಲ್ಲದೆ ಒಗ್ಗಟ್ಟಿನಿಂದ ತಮ್ಮ ಹಕ್ಕುಗಳಿಗೆ ಹೋರಾಡಬೇಕೆಂಬ ಅರಿವನ್ನು ಎಲ್ಲ ಬಡವರಲ್ಲಿ ಮೂಡಿಸಬೇಕಿದೆ”.

ಬ್ರಿಟಿಷರ ಬಂಧಿಯಾಗಿ ಕಳೆದ ಬದುಕಿನ ಕಟ್ಟಕಡೆಯ ಎರಡು ವರ್ಷಗಳಲ್ಲಿ ಭಗತ್, ಮಾರ್ಕ್ಸ್‌ವಾದದ ಕಡೆ ನಡೆದಿದ್ದ. ಲಾಹೋರ್ ಒಳಸಂಚಿನ ಪ್ರಕರಣದಲ್ಲಿ 1930ರ ಜನವರಿ 21ರಂದು ವಿಚಾರಣೆಗೆಂದು ಕೋರ್ಟಿಗೆ ಹಾಜರಾಗಿದ್ದ ಭಗತ್ ಮತ್ತು ಸಂಗಾತಿಗಳು ಧರಿಸಿದ್ದು ಕೆಂಪು ಕೊರಳವಸ್ತ್ರಗಳನ್ನು. ಕೂಗಿದ್ದು ಸಮಾಜವಾದೀ ಕ್ರಾಂತಿ ಚಿರಾಯು ಆಗಲಿ… ಕಮ್ಯೂನಿಸ್ಟ್ ಇಂಟರನ್ಯಾಷನಲ್ ಚಿರಾಯು ಆಗಲಿ… ಚಿರಾಯುವಾಗಲಿ ಜನ ಜನತೆ… ಲೆನಿನ್ ಹೆಸರಿಗೆ ಅಳಿವಿಲ್ಲ… ಇಂಪೀರಿಯಲಿಸಮ್ಮಿಗೆ ಧಿಕ್ಕಾರ… ಇತರೆ ಇತ್ಯಾದಿ ಘೋಷಣೆಗಳನ್ನು.

ಕಡೆಯ ವರ್ಷಗಳ ಜೈಲುವಾಸದಲ್ಲಿ ಭಗತ್ ಓದಿನ ಬೀಸು, ಆತ ಬರೆದ 146 ಪುಟಗಳ ಜೈಲು ಟಿಪ್ಪಣಿಗಳಲ್ಲಿ ಪ್ರತಿಫಲಿಸಿದೆ. 108 ಲೇಖಕರ ಪುಸ್ತಕಗಳನ್ನು ಅರಗಿಸಿಕೊಂಡು ಬರೆದುಕೊಂಡ ಉಲ್ಲೇಖಗಳು ಮತ್ತು ಟಿಪ್ಪಣಿಗಳಿವು. ಎಂಗೆಲ್ಸ್‌ನ ಸಮಾಜವಾದ, ಯುಟೋಪಿಯನ್ ಅಂಡ್ ಸೈಂಟಿಫಿಕ್, ಕುಟುಂಬ, ಖಾಸಗಿ ಆಸ್ತಿಪಾಸ್ತಿ ಮತ್ತು ಪ್ರಭುತ್ವ, ಮಾರ್ಕ್ಸ್ ಮತ್ತು ಎಂಗೆಲ್ಸ್‌ನ ದಿ ಕಮ್ಯೂನಿಸ್ಟ್ ಮ್ಯಾನಿಫೆಸ್ಟೋ, ಬಟ್ರ್ಯಾಂಡ್ ರಸೆಲ್, ಥಾಮಸ್ ಪೇನ್, ದೊಸ್ತೋವ್‌ಸ್ಕಿ, ಬುಖಾರಿನ್, ವ್ಹಿಟ್ಮ್ಯಾನ್, ಒಮರ್ ಖಯ್ಯಾಮನ ಕೃತಿಗಳಿಂದ ಧಾರಾಳ ಉಲ್ಲೇಖಗಳಿವೆ.

ಗಲ್ಲಿಗೇರುವ ಹಿಂದಿನ ವರ್ಷ ಭಗತ್ ಬರೆದ “ನಾನೇಕೆ ನಾಸ್ತಿಕ” ಮತ್ತು “ಎಳೆಯ ರಾಜಕೀಯ ಕಾರ್ಯಕರ್ತರಿಗೆ” ಕೃತಿಗಳಲ್ಲಿ ಲೆನಿನ್ನನ ಲೆಫ್ಟ್ ವಿಂಗ್ ಕಮ್ಯೂನಿಸಮ್, ಇಂಪೀರಿಯಲಿಸಮ್ ದಿ ಹೈಯೆಸ್ಟ್ ಸ್ಟೇಜ್ ಆಫ್ ಕ್ಯಾಪಿಟಲಿಸಂನ ಸ್ಪಷ್ಟ ಪ್ರಭಾವಗಳನ್ನು ಇತಿಹಾಸಕಾರರು ಕಂಡಿದ್ದಾರೆ.

“ಅಸಲು ಕ್ರಾಂತಿಕಾರಿ ಸೈನ್ಯಗಳಿರುವುದು ಹಳ್ಳಿಗಳಲ್ಲಿ ಮತ್ತು ಫ್ಯಾಕ್ಟರಿಗಳಲ್ಲಿ… ಅವರೆಂದರೆ ರೈತರು ಮತ್ತು ಕಾರ್ಮಿಕರು” – ನೇಣಿಗೇರಿದ ಎರಡು ತಿಂಗಳ ಮುನ್ನ 1931ರ ಫೆಬ್ರವರಿ ಎರಡರಂದು ಬರೆದ ‘To the young political workers’ ಲೇಖನದಲ್ಲಿ ಕಾಣಬರುವ ಈ ಸಾಲುಗಳು ಆತನ ಒಲವು ನಿಲುವುಗಳನ್ನು ನಿಚ್ಚಳಗೊಳಿಸುತ್ತವೆ.


ಇದನ್ನೂ ಓದಿ: ’ಡಿಸ್‌ಮ್ಯಾಂಟ್ಲಿಂಗ್ ಗ್ಲೋಬಲ್ ಹಿಂದುತ್ವ’ ಕೇಸರಿಕೂಟದಲ್ಲಿ ಕಿಚ್ಚು ಹಚ್ಚಿದ್ದು ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...

ಬಿಜೆಪಿ ಕಾರ್ಯಕರ್ತನ ಬಳಿ 3,400ಕ್ಕೂ ಹೆಚ್ಚು SIR ಎನ್ಯುಮರೇಷನ್‌ ಫಾರಂಗಳು ಪತ್ತೆ!-ವರದಿ

ಮತದಾರರ ವಿವರಗಳಿರುವ 3,400ಕ್ಕೂ ಹೆಚ್ಚು ಎಸ್‌ಐಆರ್ ಎನ್ಯುಮರೇಷನ್ ಫಾರಂಗಳು ಸ್ಥಳೀಯ ಬಿಜೆಪಿ ಕಾರ್ಯಕರ್ತನ ಬಳಿ ಪತ್ತೆಯಾದ ಬಳಿಕ, ನವಿ ಮುಂಬೈನಲ್ಲಿ ಐವರು ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಗುರುವಾರ (ಆ.27)...