Homeಅಂಕಣಗಳುಬಹುಜನ ಭಾರತ; ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ

ಬಹುಜನ ಭಾರತ; ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ

- Advertisement -
- Advertisement -

ಬ್ರಿಟಿಷರ ನೇಣುಗಂಬಕ್ಕೆ ನಗುನಗುತ್ತಲೇ ಕೊರಳೊಡ್ಡಿದ್ದ ಆ ಸ್ವಾತಂತ್ರ್ಯ ಕ್ರಾಂತಿಯ ಕಿಡಿ ಉಸಿರಾಡಿದ್ದು ಇಪ್ಪತ್ಮೂರೇ ವರ್ಷ. ಉಕ್ಕು ಹರೆಯದ ಈ ಬಿಸಿ ಗುಂಡಿಗೆ ದಾಸ್ಯದ ವಿರುದ್ಧ ಮಾತ್ರವೇ ಅಲ್ಲ, ಸಮ ಸಮಾಜ, ಸಹಬಾಳುವೆಗಾಗಿ ಮಿಡಿದ ಪರಿ ಅಭೂತಪೂರ್ವ.

ಭಗತ್ ಸಿಂಗ್ ದೇಹ ಬಹು ಹಿಂದೆಯೇ ಮಣ್ಣು ಸೇರಿರಬಹುದು. ಆದರೆ ಕೋಮುವಾದ, ಅಮಾನವೀಯ ಅಸ್ಪೃಶ್ಯತೆ, ಧರ್ಮ-ಜಾತಿಗಳ, ಮೇಲು- ಕೀಳುಗಳ ನೆವದಲಿ ನಡೆವ ಕ್ರೌರ್ಯ-ಶೋಷಣೆ ವಿರುದ್ಧ ಆತ ಎತ್ತಿದ ದನಿ ಇಂದಿಗೂ ಪ್ರಸ್ತುತ.

ಬ್ರಿಟಿಷರು ಗಲ್ಲಿಗೇರಿಸಿದ್ದು ಕೇವಲ ಆತನ ದೇಹವನ್ನು. ಆದರೆ ಆತನ ಅಜರಾಮರ ಆತ್ಮವನ್ನು, ಸ್ವಸ್ಥ ಸಮಾಜ ಕುರಿತು ಆತ ಕಂಡ ಕನಸುಗಳನ್ನು, ಆತನ ವಿಚಾರಗಳನ್ನು ಅನುದಿನವೂ ಉರಿಕಂಬಕ್ಕೆ ಏರಿಸುತ್ತಿದ್ದೇವೆ.

’ಸಾಂಪ್ರದಾಯಿಕ ದಂಗೆಗಳು ಮತ್ತು ಅವುಗಳ ಇಲಾಜು’ ಎಂಬುದಾಗಿ 1927ರಲ್ಲಿ ಭಗತ್ ಬರೆದ ಲೇಖನ ಇಂದಿನ ಭಾರತದ ಸ್ಥಿತಿಗತಿಗೂ ಹಿಡಿದ ಕೈಗನ್ನಡಿ.

“…ಇಂಡಿಯಾದ ಇಂದಿನ ಪರಿಸ್ಥಿತಿ ಅತೀವವಾಗಿ ಉಲ್ಬಣಿಸಿದೆ. ಒಂದು ಧರ್ಮದ ಅನುಯಾಯಿಗಳು ಹಠಾತ್ತನೆ ಇತರೆ ಧರ್ಮಗಳ ವಿರುದ್ಧ ಕಡು ಹಗೆತನದ ಕತ್ತಿ ಹಿಡಿದಿದ್ದಾರೆ. ಹಿಂದು ಸಿಖ್ಖರೆಂಬ ಏಕೈಕ ಕಾರಣಕ್ಕೆ ಮುಸ್ಲಿಮರು ಹಿಂದು ಮತ್ತು ಸಿಖ್ಖರನ್ನೂ, ಮುಸಲ್ಮಾನರೆಂಬ ಕಾರಣಕ್ಕಾಗಿ ಹಿಂದು ಮತ್ತು ಸಿಖ್ಖರು ಮುಸಲ್ಮಾನರನ್ನೂ ಕ್ರೂರವಾಗಿ ಕೊಲ್ಲಲಾಗುತ್ತಿದೆ… ರಾಜಕೀಯ ನಾಯಕರು ನಿರ್ಲಜ್ಜರಾಗಿ ವರ್ತಿಸುತ್ತಿದ್ದಾರೆ. ದೇಶವನ್ನು ದಾಸ್ಯದಿಂದ ವಿಮೋಚನೆಗೊಳಿಸುವ ಶಪಥ ತೊಟ್ಟಿರುವ ಮತ್ತು ಸಮಾನ ರಾಷ್ಟ್ರೀಯತೆ ಕುರಿತು ಹಗಲಿರುಳು ಭಾಷಣ ಮಾಡುವ ತಲೆಯಾಳುಗಳು ಒಂದೋ ಲಜ್ಜೆಯಿಂದ ತಲೆತಗ್ಗಿಸಿ ಬಾಯಿ ಹೊಲಿದುಕೊಂಡಿದ್ದಾರೆ ಇಲ್ಲವೇ ಧರ್ಮಾಂಧತೆಯ ದುಷ್ಟ ಗಾಳಿಯ ದಿಕ್ಕಿನತ್ತ ಓಲಾಡುತ್ತಿದ್ದಾರೆ… ತುಟಿ ಬಿಚ್ಚದೆ ಬೇಲಿಯ ಮೇಲೆ ಮುಖ ಮುಚ್ಚಿ
ಕುಳಿತಿರುವವರ ಸಂಖ್ಯೆಯೂ ಸಣ್ಣದೇನಲ್ಲ”.

ಕೋಮುವಾದದ ದಳ್ಳುರಿಗೆ ಎಣ್ಣೆ ಎರೆವ ಪತ್ರಿಕೆಗಳ ಕುರಿತು ಭಗತ್ ಹೇಳಿದ್ದು: “…ಕೋಮು ದಂಗೆಗಳಿಗೆ ಪ್ರಚೋದನೆ ನೀಡುವ ಇತರೆ ಪ್ರಮುಖ ಪಾತ್ರಧಾರಿಗಳ ಸಾಲಿಗೆ ಪತ್ರಕರ್ತರೂ ಸೇರುತ್ತಾರೆ. ಒಂದು ಕಾಲಕ್ಕೆ ಬಹುಗಣ್ಯ ಕಸುಬು ಎಂದು ಪರಿಗಣಿಸಲಾಗಿದ್ದ ಪತ್ರಿಕೋದ್ಯಮ ಈಗ ತಿಪ್ಪೆಯಾಗಿ ಬದಲಾಗಿದೆ. ಒಬ್ಬರ ವಿರುದ್ಧ ಮತ್ತೊಬ್ಬರು ತಲೆಬರೆಹಗಳಲ್ಲಿ ಕೂಗಿ ಕಿರುಚುತ್ತಾರೆ, ಪರಸ್ಪರರನ್ನು ಕೊಲ್ಲುವ ಉನ್ಮಾದಗಳನ್ನು ಜನರಲ್ಲಿ ಪ್ರಚೋದಿಸುತ್ತಿದ್ದಾರೆ… ಪತ್ರಿಕೆಗಳು ತೀವ್ರತರದ ಆಸ್ಫೋಟಕ ಮತ್ತು ಅತೀವ ಪ್ರಚೋದಕ ಲೇಖನಗಳನ್ನು ಪ್ರಕಟಿಸಿ ಕೋಮುವಾದೀ ಜ್ವಾಲೆಯನ್ನು ಹತ್ತು ಹಲವು ಸ್ಥಳಗಳಲ್ಲಿ ಭುಗಿಲೆಬ್ಬಿಸುತ್ತಿವೆ… ತಳಮಳ ತಳ್ಳಂಕಗಳ ಈ ಸ್ಥಿತಿಯಲ್ಲಿ ಸಮಚಿತ್ತವನ್ನು, ಸಮತೂಕವನ್ನು ಪ್ರದರ್ಶಿಸಿದ ಪತ್ರಕರ್ತರು ಕೆಲವೇ ಕೆಲವರು”.

“…ಜನತೆಯಲ್ಲಿ ಅರಿವು ಮೂಡಿಸಿ ಅವರ ಮೆದುಳುಗಳನ್ನು ನಿರ್ಮಲವಾಗಿ ಇರಿಸುವುದು, ಸಂಕುಚಿತವಾದದ ಬಿಲಗಳಿಂದ ಹೊರಗೆಳೆದು ತರುವುದು, ಕೋಮುವಾದೀ ಭಾವನೆಗಳನ್ನು ಕೆರೆದು ತೆಗೆದು ತೊಳೆದು ಪರಸ್ಪರ, ಸಾಮರಸ್ಯ ಮೂಡಿಸುವುದು ಪತ್ರಿಕೆಗಳ ಅಸಲು ಕರ್ತವ್ಯ….. ಬದಲಾಗಿ ಅರಿವುಗೇಡಿತನ, ಸಂಕುಚಿತ ಪಂಥವಾದ- ಕೋಮುವಾದಗಳನ್ನು ಜನರ ಮನಸುಗಳಲ್ಲಿ ಬಿತ್ತಿ ಗಲಭೆಗಳನ್ನು ಎಬ್ಬಿಸುವುದೇ ಅವರ ಮುಖ್ಯ ಗುರಿ ಎನ್ನಿಸುತ್ತಿದೆ. ಈಗಿನ ಇಂಡಿಯಾದ ಪರಿಸ್ಥಿತಿಯನ್ನು ನೋಡಿದರೆ ರಕ್ತಕಣ್ಣೀರು ಕಪಾಳಕ್ಕೆ ಇಳಿವುದಲ್ಲದೆ, ಕಟ್ಟಕಡೆಗೆ ಈ ದೇಶದ ಪರಿಸ್ಥಿತಿ ಏನಾದೀತು ಎಂಬ ಪ್ರಶ್ನೆ ಏಳುತ್ತದೆ”.

“ಜನ ಪರಸ್ಪರ ಕಚ್ಚಾಡುವುದನ್ನು ನಿಲ್ಲಿಸಬೇಕಿದ್ದರೆ, ದೀನ ದರಿದ್ರರು ಮತ್ತು ರೈತರು ಮತ್ತು ದುಡಿಯುವ ವರ್ಗಗಳಿಗೆ ಬಂಡವಾಳಶಾಹಿಯೇ ಅವರ ಅಸಲು ಶತ್ರು ಎಂಬ ವಾಸ್ತವವನ್ನು ತಿಳಿಸಿ ಹೇಳಬೇಕಿದೆ. ಅವರ ಕೈಯಲ್ಲಿನ ದಾಳ ಆಗದಂತೆ, ಅವರ ಮೋಸ ಮರೆಗಳ ಹುನ್ನಾರಗಳಿಗೆ ಬಲಿಯಾಗದಂತೆ ಎಚ್ಚರಗೊಳಿಸಬೇಕಿದೆ. ಎಲ್ಲ ಜಾತಿ, ವರ್ಣ, ಜನಾಂಗ, ರಾಷ್ಟ್ರೀಯತೆಯ ಭೇದ ಭಾವವಿಲ್ಲದೆ ಒಗ್ಗಟ್ಟಿನಿಂದ ತಮ್ಮ ಹಕ್ಕುಗಳಿಗೆ ಹೋರಾಡಬೇಕೆಂಬ ಅರಿವನ್ನು ಎಲ್ಲ ಬಡವರಲ್ಲಿ ಮೂಡಿಸಬೇಕಿದೆ”.

ಬ್ರಿಟಿಷರ ಬಂಧಿಯಾಗಿ ಕಳೆದ ಬದುಕಿನ ಕಟ್ಟಕಡೆಯ ಎರಡು ವರ್ಷಗಳಲ್ಲಿ ಭಗತ್, ಮಾರ್ಕ್ಸ್‌ವಾದದ ಕಡೆ ನಡೆದಿದ್ದ. ಲಾಹೋರ್ ಒಳಸಂಚಿನ ಪ್ರಕರಣದಲ್ಲಿ 1930ರ ಜನವರಿ 21ರಂದು ವಿಚಾರಣೆಗೆಂದು ಕೋರ್ಟಿಗೆ ಹಾಜರಾಗಿದ್ದ ಭಗತ್ ಮತ್ತು ಸಂಗಾತಿಗಳು ಧರಿಸಿದ್ದು ಕೆಂಪು ಕೊರಳವಸ್ತ್ರಗಳನ್ನು. ಕೂಗಿದ್ದು ಸಮಾಜವಾದೀ ಕ್ರಾಂತಿ ಚಿರಾಯು ಆಗಲಿ… ಕಮ್ಯೂನಿಸ್ಟ್ ಇಂಟರನ್ಯಾಷನಲ್ ಚಿರಾಯು ಆಗಲಿ… ಚಿರಾಯುವಾಗಲಿ ಜನ ಜನತೆ… ಲೆನಿನ್ ಹೆಸರಿಗೆ ಅಳಿವಿಲ್ಲ… ಇಂಪೀರಿಯಲಿಸಮ್ಮಿಗೆ ಧಿಕ್ಕಾರ… ಇತರೆ ಇತ್ಯಾದಿ ಘೋಷಣೆಗಳನ್ನು.

ಕಡೆಯ ವರ್ಷಗಳ ಜೈಲುವಾಸದಲ್ಲಿ ಭಗತ್ ಓದಿನ ಬೀಸು, ಆತ ಬರೆದ 146 ಪುಟಗಳ ಜೈಲು ಟಿಪ್ಪಣಿಗಳಲ್ಲಿ ಪ್ರತಿಫಲಿಸಿದೆ. 108 ಲೇಖಕರ ಪುಸ್ತಕಗಳನ್ನು ಅರಗಿಸಿಕೊಂಡು ಬರೆದುಕೊಂಡ ಉಲ್ಲೇಖಗಳು ಮತ್ತು ಟಿಪ್ಪಣಿಗಳಿವು. ಎಂಗೆಲ್ಸ್‌ನ ಸಮಾಜವಾದ, ಯುಟೋಪಿಯನ್ ಅಂಡ್ ಸೈಂಟಿಫಿಕ್, ಕುಟುಂಬ, ಖಾಸಗಿ ಆಸ್ತಿಪಾಸ್ತಿ ಮತ್ತು ಪ್ರಭುತ್ವ, ಮಾರ್ಕ್ಸ್ ಮತ್ತು ಎಂಗೆಲ್ಸ್‌ನ ದಿ ಕಮ್ಯೂನಿಸ್ಟ್ ಮ್ಯಾನಿಫೆಸ್ಟೋ, ಬಟ್ರ್ಯಾಂಡ್ ರಸೆಲ್, ಥಾಮಸ್ ಪೇನ್, ದೊಸ್ತೋವ್‌ಸ್ಕಿ, ಬುಖಾರಿನ್, ವ್ಹಿಟ್ಮ್ಯಾನ್, ಒಮರ್ ಖಯ್ಯಾಮನ ಕೃತಿಗಳಿಂದ ಧಾರಾಳ ಉಲ್ಲೇಖಗಳಿವೆ.

ಗಲ್ಲಿಗೇರುವ ಹಿಂದಿನ ವರ್ಷ ಭಗತ್ ಬರೆದ “ನಾನೇಕೆ ನಾಸ್ತಿಕ” ಮತ್ತು “ಎಳೆಯ ರಾಜಕೀಯ ಕಾರ್ಯಕರ್ತರಿಗೆ” ಕೃತಿಗಳಲ್ಲಿ ಲೆನಿನ್ನನ ಲೆಫ್ಟ್ ವಿಂಗ್ ಕಮ್ಯೂನಿಸಮ್, ಇಂಪೀರಿಯಲಿಸಮ್ ದಿ ಹೈಯೆಸ್ಟ್ ಸ್ಟೇಜ್ ಆಫ್ ಕ್ಯಾಪಿಟಲಿಸಂನ ಸ್ಪಷ್ಟ ಪ್ರಭಾವಗಳನ್ನು ಇತಿಹಾಸಕಾರರು ಕಂಡಿದ್ದಾರೆ.

“ಅಸಲು ಕ್ರಾಂತಿಕಾರಿ ಸೈನ್ಯಗಳಿರುವುದು ಹಳ್ಳಿಗಳಲ್ಲಿ ಮತ್ತು ಫ್ಯಾಕ್ಟರಿಗಳಲ್ಲಿ… ಅವರೆಂದರೆ ರೈತರು ಮತ್ತು ಕಾರ್ಮಿಕರು” – ನೇಣಿಗೇರಿದ ಎರಡು ತಿಂಗಳ ಮುನ್ನ 1931ರ ಫೆಬ್ರವರಿ ಎರಡರಂದು ಬರೆದ ‘To the young political workers’ ಲೇಖನದಲ್ಲಿ ಕಾಣಬರುವ ಈ ಸಾಲುಗಳು ಆತನ ಒಲವು ನಿಲುವುಗಳನ್ನು ನಿಚ್ಚಳಗೊಳಿಸುತ್ತವೆ.


ಇದನ್ನೂ ಓದಿ: ’ಡಿಸ್‌ಮ್ಯಾಂಟ್ಲಿಂಗ್ ಗ್ಲೋಬಲ್ ಹಿಂದುತ್ವ’ ಕೇಸರಿಕೂಟದಲ್ಲಿ ಕಿಚ್ಚು ಹಚ್ಚಿದ್ದು ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...