Homeಅಂಕಣಗಳುಬಹುಜನ ಭಾರತ; ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ

ಬಹುಜನ ಭಾರತ; ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ

- Advertisement -
- Advertisement -

ಬ್ರಿಟಿಷರ ನೇಣುಗಂಬಕ್ಕೆ ನಗುನಗುತ್ತಲೇ ಕೊರಳೊಡ್ಡಿದ್ದ ಆ ಸ್ವಾತಂತ್ರ್ಯ ಕ್ರಾಂತಿಯ ಕಿಡಿ ಉಸಿರಾಡಿದ್ದು ಇಪ್ಪತ್ಮೂರೇ ವರ್ಷ. ಉಕ್ಕು ಹರೆಯದ ಈ ಬಿಸಿ ಗುಂಡಿಗೆ ದಾಸ್ಯದ ವಿರುದ್ಧ ಮಾತ್ರವೇ ಅಲ್ಲ, ಸಮ ಸಮಾಜ, ಸಹಬಾಳುವೆಗಾಗಿ ಮಿಡಿದ ಪರಿ ಅಭೂತಪೂರ್ವ.

ಭಗತ್ ಸಿಂಗ್ ದೇಹ ಬಹು ಹಿಂದೆಯೇ ಮಣ್ಣು ಸೇರಿರಬಹುದು. ಆದರೆ ಕೋಮುವಾದ, ಅಮಾನವೀಯ ಅಸ್ಪೃಶ್ಯತೆ, ಧರ್ಮ-ಜಾತಿಗಳ, ಮೇಲು- ಕೀಳುಗಳ ನೆವದಲಿ ನಡೆವ ಕ್ರೌರ್ಯ-ಶೋಷಣೆ ವಿರುದ್ಧ ಆತ ಎತ್ತಿದ ದನಿ ಇಂದಿಗೂ ಪ್ರಸ್ತುತ.

ಬ್ರಿಟಿಷರು ಗಲ್ಲಿಗೇರಿಸಿದ್ದು ಕೇವಲ ಆತನ ದೇಹವನ್ನು. ಆದರೆ ಆತನ ಅಜರಾಮರ ಆತ್ಮವನ್ನು, ಸ್ವಸ್ಥ ಸಮಾಜ ಕುರಿತು ಆತ ಕಂಡ ಕನಸುಗಳನ್ನು, ಆತನ ವಿಚಾರಗಳನ್ನು ಅನುದಿನವೂ ಉರಿಕಂಬಕ್ಕೆ ಏರಿಸುತ್ತಿದ್ದೇವೆ.

’ಸಾಂಪ್ರದಾಯಿಕ ದಂಗೆಗಳು ಮತ್ತು ಅವುಗಳ ಇಲಾಜು’ ಎಂಬುದಾಗಿ 1927ರಲ್ಲಿ ಭಗತ್ ಬರೆದ ಲೇಖನ ಇಂದಿನ ಭಾರತದ ಸ್ಥಿತಿಗತಿಗೂ ಹಿಡಿದ ಕೈಗನ್ನಡಿ.

“…ಇಂಡಿಯಾದ ಇಂದಿನ ಪರಿಸ್ಥಿತಿ ಅತೀವವಾಗಿ ಉಲ್ಬಣಿಸಿದೆ. ಒಂದು ಧರ್ಮದ ಅನುಯಾಯಿಗಳು ಹಠಾತ್ತನೆ ಇತರೆ ಧರ್ಮಗಳ ವಿರುದ್ಧ ಕಡು ಹಗೆತನದ ಕತ್ತಿ ಹಿಡಿದಿದ್ದಾರೆ. ಹಿಂದು ಸಿಖ್ಖರೆಂಬ ಏಕೈಕ ಕಾರಣಕ್ಕೆ ಮುಸ್ಲಿಮರು ಹಿಂದು ಮತ್ತು ಸಿಖ್ಖರನ್ನೂ, ಮುಸಲ್ಮಾನರೆಂಬ ಕಾರಣಕ್ಕಾಗಿ ಹಿಂದು ಮತ್ತು ಸಿಖ್ಖರು ಮುಸಲ್ಮಾನರನ್ನೂ ಕ್ರೂರವಾಗಿ ಕೊಲ್ಲಲಾಗುತ್ತಿದೆ… ರಾಜಕೀಯ ನಾಯಕರು ನಿರ್ಲಜ್ಜರಾಗಿ ವರ್ತಿಸುತ್ತಿದ್ದಾರೆ. ದೇಶವನ್ನು ದಾಸ್ಯದಿಂದ ವಿಮೋಚನೆಗೊಳಿಸುವ ಶಪಥ ತೊಟ್ಟಿರುವ ಮತ್ತು ಸಮಾನ ರಾಷ್ಟ್ರೀಯತೆ ಕುರಿತು ಹಗಲಿರುಳು ಭಾಷಣ ಮಾಡುವ ತಲೆಯಾಳುಗಳು ಒಂದೋ ಲಜ್ಜೆಯಿಂದ ತಲೆತಗ್ಗಿಸಿ ಬಾಯಿ ಹೊಲಿದುಕೊಂಡಿದ್ದಾರೆ ಇಲ್ಲವೇ ಧರ್ಮಾಂಧತೆಯ ದುಷ್ಟ ಗಾಳಿಯ ದಿಕ್ಕಿನತ್ತ ಓಲಾಡುತ್ತಿದ್ದಾರೆ… ತುಟಿ ಬಿಚ್ಚದೆ ಬೇಲಿಯ ಮೇಲೆ ಮುಖ ಮುಚ್ಚಿ
ಕುಳಿತಿರುವವರ ಸಂಖ್ಯೆಯೂ ಸಣ್ಣದೇನಲ್ಲ”.

ಕೋಮುವಾದದ ದಳ್ಳುರಿಗೆ ಎಣ್ಣೆ ಎರೆವ ಪತ್ರಿಕೆಗಳ ಕುರಿತು ಭಗತ್ ಹೇಳಿದ್ದು: “…ಕೋಮು ದಂಗೆಗಳಿಗೆ ಪ್ರಚೋದನೆ ನೀಡುವ ಇತರೆ ಪ್ರಮುಖ ಪಾತ್ರಧಾರಿಗಳ ಸಾಲಿಗೆ ಪತ್ರಕರ್ತರೂ ಸೇರುತ್ತಾರೆ. ಒಂದು ಕಾಲಕ್ಕೆ ಬಹುಗಣ್ಯ ಕಸುಬು ಎಂದು ಪರಿಗಣಿಸಲಾಗಿದ್ದ ಪತ್ರಿಕೋದ್ಯಮ ಈಗ ತಿಪ್ಪೆಯಾಗಿ ಬದಲಾಗಿದೆ. ಒಬ್ಬರ ವಿರುದ್ಧ ಮತ್ತೊಬ್ಬರು ತಲೆಬರೆಹಗಳಲ್ಲಿ ಕೂಗಿ ಕಿರುಚುತ್ತಾರೆ, ಪರಸ್ಪರರನ್ನು ಕೊಲ್ಲುವ ಉನ್ಮಾದಗಳನ್ನು ಜನರಲ್ಲಿ ಪ್ರಚೋದಿಸುತ್ತಿದ್ದಾರೆ… ಪತ್ರಿಕೆಗಳು ತೀವ್ರತರದ ಆಸ್ಫೋಟಕ ಮತ್ತು ಅತೀವ ಪ್ರಚೋದಕ ಲೇಖನಗಳನ್ನು ಪ್ರಕಟಿಸಿ ಕೋಮುವಾದೀ ಜ್ವಾಲೆಯನ್ನು ಹತ್ತು ಹಲವು ಸ್ಥಳಗಳಲ್ಲಿ ಭುಗಿಲೆಬ್ಬಿಸುತ್ತಿವೆ… ತಳಮಳ ತಳ್ಳಂಕಗಳ ಈ ಸ್ಥಿತಿಯಲ್ಲಿ ಸಮಚಿತ್ತವನ್ನು, ಸಮತೂಕವನ್ನು ಪ್ರದರ್ಶಿಸಿದ ಪತ್ರಕರ್ತರು ಕೆಲವೇ ಕೆಲವರು”.

“…ಜನತೆಯಲ್ಲಿ ಅರಿವು ಮೂಡಿಸಿ ಅವರ ಮೆದುಳುಗಳನ್ನು ನಿರ್ಮಲವಾಗಿ ಇರಿಸುವುದು, ಸಂಕುಚಿತವಾದದ ಬಿಲಗಳಿಂದ ಹೊರಗೆಳೆದು ತರುವುದು, ಕೋಮುವಾದೀ ಭಾವನೆಗಳನ್ನು ಕೆರೆದು ತೆಗೆದು ತೊಳೆದು ಪರಸ್ಪರ, ಸಾಮರಸ್ಯ ಮೂಡಿಸುವುದು ಪತ್ರಿಕೆಗಳ ಅಸಲು ಕರ್ತವ್ಯ….. ಬದಲಾಗಿ ಅರಿವುಗೇಡಿತನ, ಸಂಕುಚಿತ ಪಂಥವಾದ- ಕೋಮುವಾದಗಳನ್ನು ಜನರ ಮನಸುಗಳಲ್ಲಿ ಬಿತ್ತಿ ಗಲಭೆಗಳನ್ನು ಎಬ್ಬಿಸುವುದೇ ಅವರ ಮುಖ್ಯ ಗುರಿ ಎನ್ನಿಸುತ್ತಿದೆ. ಈಗಿನ ಇಂಡಿಯಾದ ಪರಿಸ್ಥಿತಿಯನ್ನು ನೋಡಿದರೆ ರಕ್ತಕಣ್ಣೀರು ಕಪಾಳಕ್ಕೆ ಇಳಿವುದಲ್ಲದೆ, ಕಟ್ಟಕಡೆಗೆ ಈ ದೇಶದ ಪರಿಸ್ಥಿತಿ ಏನಾದೀತು ಎಂಬ ಪ್ರಶ್ನೆ ಏಳುತ್ತದೆ”.

“ಜನ ಪರಸ್ಪರ ಕಚ್ಚಾಡುವುದನ್ನು ನಿಲ್ಲಿಸಬೇಕಿದ್ದರೆ, ದೀನ ದರಿದ್ರರು ಮತ್ತು ರೈತರು ಮತ್ತು ದುಡಿಯುವ ವರ್ಗಗಳಿಗೆ ಬಂಡವಾಳಶಾಹಿಯೇ ಅವರ ಅಸಲು ಶತ್ರು ಎಂಬ ವಾಸ್ತವವನ್ನು ತಿಳಿಸಿ ಹೇಳಬೇಕಿದೆ. ಅವರ ಕೈಯಲ್ಲಿನ ದಾಳ ಆಗದಂತೆ, ಅವರ ಮೋಸ ಮರೆಗಳ ಹುನ್ನಾರಗಳಿಗೆ ಬಲಿಯಾಗದಂತೆ ಎಚ್ಚರಗೊಳಿಸಬೇಕಿದೆ. ಎಲ್ಲ ಜಾತಿ, ವರ್ಣ, ಜನಾಂಗ, ರಾಷ್ಟ್ರೀಯತೆಯ ಭೇದ ಭಾವವಿಲ್ಲದೆ ಒಗ್ಗಟ್ಟಿನಿಂದ ತಮ್ಮ ಹಕ್ಕುಗಳಿಗೆ ಹೋರಾಡಬೇಕೆಂಬ ಅರಿವನ್ನು ಎಲ್ಲ ಬಡವರಲ್ಲಿ ಮೂಡಿಸಬೇಕಿದೆ”.

ಬ್ರಿಟಿಷರ ಬಂಧಿಯಾಗಿ ಕಳೆದ ಬದುಕಿನ ಕಟ್ಟಕಡೆಯ ಎರಡು ವರ್ಷಗಳಲ್ಲಿ ಭಗತ್, ಮಾರ್ಕ್ಸ್‌ವಾದದ ಕಡೆ ನಡೆದಿದ್ದ. ಲಾಹೋರ್ ಒಳಸಂಚಿನ ಪ್ರಕರಣದಲ್ಲಿ 1930ರ ಜನವರಿ 21ರಂದು ವಿಚಾರಣೆಗೆಂದು ಕೋರ್ಟಿಗೆ ಹಾಜರಾಗಿದ್ದ ಭಗತ್ ಮತ್ತು ಸಂಗಾತಿಗಳು ಧರಿಸಿದ್ದು ಕೆಂಪು ಕೊರಳವಸ್ತ್ರಗಳನ್ನು. ಕೂಗಿದ್ದು ಸಮಾಜವಾದೀ ಕ್ರಾಂತಿ ಚಿರಾಯು ಆಗಲಿ… ಕಮ್ಯೂನಿಸ್ಟ್ ಇಂಟರನ್ಯಾಷನಲ್ ಚಿರಾಯು ಆಗಲಿ… ಚಿರಾಯುವಾಗಲಿ ಜನ ಜನತೆ… ಲೆನಿನ್ ಹೆಸರಿಗೆ ಅಳಿವಿಲ್ಲ… ಇಂಪೀರಿಯಲಿಸಮ್ಮಿಗೆ ಧಿಕ್ಕಾರ… ಇತರೆ ಇತ್ಯಾದಿ ಘೋಷಣೆಗಳನ್ನು.

ಕಡೆಯ ವರ್ಷಗಳ ಜೈಲುವಾಸದಲ್ಲಿ ಭಗತ್ ಓದಿನ ಬೀಸು, ಆತ ಬರೆದ 146 ಪುಟಗಳ ಜೈಲು ಟಿಪ್ಪಣಿಗಳಲ್ಲಿ ಪ್ರತಿಫಲಿಸಿದೆ. 108 ಲೇಖಕರ ಪುಸ್ತಕಗಳನ್ನು ಅರಗಿಸಿಕೊಂಡು ಬರೆದುಕೊಂಡ ಉಲ್ಲೇಖಗಳು ಮತ್ತು ಟಿಪ್ಪಣಿಗಳಿವು. ಎಂಗೆಲ್ಸ್‌ನ ಸಮಾಜವಾದ, ಯುಟೋಪಿಯನ್ ಅಂಡ್ ಸೈಂಟಿಫಿಕ್, ಕುಟುಂಬ, ಖಾಸಗಿ ಆಸ್ತಿಪಾಸ್ತಿ ಮತ್ತು ಪ್ರಭುತ್ವ, ಮಾರ್ಕ್ಸ್ ಮತ್ತು ಎಂಗೆಲ್ಸ್‌ನ ದಿ ಕಮ್ಯೂನಿಸ್ಟ್ ಮ್ಯಾನಿಫೆಸ್ಟೋ, ಬಟ್ರ್ಯಾಂಡ್ ರಸೆಲ್, ಥಾಮಸ್ ಪೇನ್, ದೊಸ್ತೋವ್‌ಸ್ಕಿ, ಬುಖಾರಿನ್, ವ್ಹಿಟ್ಮ್ಯಾನ್, ಒಮರ್ ಖಯ್ಯಾಮನ ಕೃತಿಗಳಿಂದ ಧಾರಾಳ ಉಲ್ಲೇಖಗಳಿವೆ.

ಗಲ್ಲಿಗೇರುವ ಹಿಂದಿನ ವರ್ಷ ಭಗತ್ ಬರೆದ “ನಾನೇಕೆ ನಾಸ್ತಿಕ” ಮತ್ತು “ಎಳೆಯ ರಾಜಕೀಯ ಕಾರ್ಯಕರ್ತರಿಗೆ” ಕೃತಿಗಳಲ್ಲಿ ಲೆನಿನ್ನನ ಲೆಫ್ಟ್ ವಿಂಗ್ ಕಮ್ಯೂನಿಸಮ್, ಇಂಪೀರಿಯಲಿಸಮ್ ದಿ ಹೈಯೆಸ್ಟ್ ಸ್ಟೇಜ್ ಆಫ್ ಕ್ಯಾಪಿಟಲಿಸಂನ ಸ್ಪಷ್ಟ ಪ್ರಭಾವಗಳನ್ನು ಇತಿಹಾಸಕಾರರು ಕಂಡಿದ್ದಾರೆ.

“ಅಸಲು ಕ್ರಾಂತಿಕಾರಿ ಸೈನ್ಯಗಳಿರುವುದು ಹಳ್ಳಿಗಳಲ್ಲಿ ಮತ್ತು ಫ್ಯಾಕ್ಟರಿಗಳಲ್ಲಿ… ಅವರೆಂದರೆ ರೈತರು ಮತ್ತು ಕಾರ್ಮಿಕರು” – ನೇಣಿಗೇರಿದ ಎರಡು ತಿಂಗಳ ಮುನ್ನ 1931ರ ಫೆಬ್ರವರಿ ಎರಡರಂದು ಬರೆದ ‘To the young political workers’ ಲೇಖನದಲ್ಲಿ ಕಾಣಬರುವ ಈ ಸಾಲುಗಳು ಆತನ ಒಲವು ನಿಲುವುಗಳನ್ನು ನಿಚ್ಚಳಗೊಳಿಸುತ್ತವೆ.


ಇದನ್ನೂ ಓದಿ: ’ಡಿಸ್‌ಮ್ಯಾಂಟ್ಲಿಂಗ್ ಗ್ಲೋಬಲ್ ಹಿಂದುತ್ವ’ ಕೇಸರಿಕೂಟದಲ್ಲಿ ಕಿಚ್ಚು ಹಚ್ಚಿದ್ದು ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...