Homeಅಂಕಣಗಳುಬಹುಜನ ಭಾರತ; ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ

ಬಹುಜನ ಭಾರತ; ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ

- Advertisement -
- Advertisement -

ಬ್ರಿಟಿಷರ ನೇಣುಗಂಬಕ್ಕೆ ನಗುನಗುತ್ತಲೇ ಕೊರಳೊಡ್ಡಿದ್ದ ಆ ಸ್ವಾತಂತ್ರ್ಯ ಕ್ರಾಂತಿಯ ಕಿಡಿ ಉಸಿರಾಡಿದ್ದು ಇಪ್ಪತ್ಮೂರೇ ವರ್ಷ. ಉಕ್ಕು ಹರೆಯದ ಈ ಬಿಸಿ ಗುಂಡಿಗೆ ದಾಸ್ಯದ ವಿರುದ್ಧ ಮಾತ್ರವೇ ಅಲ್ಲ, ಸಮ ಸಮಾಜ, ಸಹಬಾಳುವೆಗಾಗಿ ಮಿಡಿದ ಪರಿ ಅಭೂತಪೂರ್ವ.

ಭಗತ್ ಸಿಂಗ್ ದೇಹ ಬಹು ಹಿಂದೆಯೇ ಮಣ್ಣು ಸೇರಿರಬಹುದು. ಆದರೆ ಕೋಮುವಾದ, ಅಮಾನವೀಯ ಅಸ್ಪೃಶ್ಯತೆ, ಧರ್ಮ-ಜಾತಿಗಳ, ಮೇಲು- ಕೀಳುಗಳ ನೆವದಲಿ ನಡೆವ ಕ್ರೌರ್ಯ-ಶೋಷಣೆ ವಿರುದ್ಧ ಆತ ಎತ್ತಿದ ದನಿ ಇಂದಿಗೂ ಪ್ರಸ್ತುತ.

ಬ್ರಿಟಿಷರು ಗಲ್ಲಿಗೇರಿಸಿದ್ದು ಕೇವಲ ಆತನ ದೇಹವನ್ನು. ಆದರೆ ಆತನ ಅಜರಾಮರ ಆತ್ಮವನ್ನು, ಸ್ವಸ್ಥ ಸಮಾಜ ಕುರಿತು ಆತ ಕಂಡ ಕನಸುಗಳನ್ನು, ಆತನ ವಿಚಾರಗಳನ್ನು ಅನುದಿನವೂ ಉರಿಕಂಬಕ್ಕೆ ಏರಿಸುತ್ತಿದ್ದೇವೆ.

’ಸಾಂಪ್ರದಾಯಿಕ ದಂಗೆಗಳು ಮತ್ತು ಅವುಗಳ ಇಲಾಜು’ ಎಂಬುದಾಗಿ 1927ರಲ್ಲಿ ಭಗತ್ ಬರೆದ ಲೇಖನ ಇಂದಿನ ಭಾರತದ ಸ್ಥಿತಿಗತಿಗೂ ಹಿಡಿದ ಕೈಗನ್ನಡಿ.

“…ಇಂಡಿಯಾದ ಇಂದಿನ ಪರಿಸ್ಥಿತಿ ಅತೀವವಾಗಿ ಉಲ್ಬಣಿಸಿದೆ. ಒಂದು ಧರ್ಮದ ಅನುಯಾಯಿಗಳು ಹಠಾತ್ತನೆ ಇತರೆ ಧರ್ಮಗಳ ವಿರುದ್ಧ ಕಡು ಹಗೆತನದ ಕತ್ತಿ ಹಿಡಿದಿದ್ದಾರೆ. ಹಿಂದು ಸಿಖ್ಖರೆಂಬ ಏಕೈಕ ಕಾರಣಕ್ಕೆ ಮುಸ್ಲಿಮರು ಹಿಂದು ಮತ್ತು ಸಿಖ್ಖರನ್ನೂ, ಮುಸಲ್ಮಾನರೆಂಬ ಕಾರಣಕ್ಕಾಗಿ ಹಿಂದು ಮತ್ತು ಸಿಖ್ಖರು ಮುಸಲ್ಮಾನರನ್ನೂ ಕ್ರೂರವಾಗಿ ಕೊಲ್ಲಲಾಗುತ್ತಿದೆ… ರಾಜಕೀಯ ನಾಯಕರು ನಿರ್ಲಜ್ಜರಾಗಿ ವರ್ತಿಸುತ್ತಿದ್ದಾರೆ. ದೇಶವನ್ನು ದಾಸ್ಯದಿಂದ ವಿಮೋಚನೆಗೊಳಿಸುವ ಶಪಥ ತೊಟ್ಟಿರುವ ಮತ್ತು ಸಮಾನ ರಾಷ್ಟ್ರೀಯತೆ ಕುರಿತು ಹಗಲಿರುಳು ಭಾಷಣ ಮಾಡುವ ತಲೆಯಾಳುಗಳು ಒಂದೋ ಲಜ್ಜೆಯಿಂದ ತಲೆತಗ್ಗಿಸಿ ಬಾಯಿ ಹೊಲಿದುಕೊಂಡಿದ್ದಾರೆ ಇಲ್ಲವೇ ಧರ್ಮಾಂಧತೆಯ ದುಷ್ಟ ಗಾಳಿಯ ದಿಕ್ಕಿನತ್ತ ಓಲಾಡುತ್ತಿದ್ದಾರೆ… ತುಟಿ ಬಿಚ್ಚದೆ ಬೇಲಿಯ ಮೇಲೆ ಮುಖ ಮುಚ್ಚಿ
ಕುಳಿತಿರುವವರ ಸಂಖ್ಯೆಯೂ ಸಣ್ಣದೇನಲ್ಲ”.

ಕೋಮುವಾದದ ದಳ್ಳುರಿಗೆ ಎಣ್ಣೆ ಎರೆವ ಪತ್ರಿಕೆಗಳ ಕುರಿತು ಭಗತ್ ಹೇಳಿದ್ದು: “…ಕೋಮು ದಂಗೆಗಳಿಗೆ ಪ್ರಚೋದನೆ ನೀಡುವ ಇತರೆ ಪ್ರಮುಖ ಪಾತ್ರಧಾರಿಗಳ ಸಾಲಿಗೆ ಪತ್ರಕರ್ತರೂ ಸೇರುತ್ತಾರೆ. ಒಂದು ಕಾಲಕ್ಕೆ ಬಹುಗಣ್ಯ ಕಸುಬು ಎಂದು ಪರಿಗಣಿಸಲಾಗಿದ್ದ ಪತ್ರಿಕೋದ್ಯಮ ಈಗ ತಿಪ್ಪೆಯಾಗಿ ಬದಲಾಗಿದೆ. ಒಬ್ಬರ ವಿರುದ್ಧ ಮತ್ತೊಬ್ಬರು ತಲೆಬರೆಹಗಳಲ್ಲಿ ಕೂಗಿ ಕಿರುಚುತ್ತಾರೆ, ಪರಸ್ಪರರನ್ನು ಕೊಲ್ಲುವ ಉನ್ಮಾದಗಳನ್ನು ಜನರಲ್ಲಿ ಪ್ರಚೋದಿಸುತ್ತಿದ್ದಾರೆ… ಪತ್ರಿಕೆಗಳು ತೀವ್ರತರದ ಆಸ್ಫೋಟಕ ಮತ್ತು ಅತೀವ ಪ್ರಚೋದಕ ಲೇಖನಗಳನ್ನು ಪ್ರಕಟಿಸಿ ಕೋಮುವಾದೀ ಜ್ವಾಲೆಯನ್ನು ಹತ್ತು ಹಲವು ಸ್ಥಳಗಳಲ್ಲಿ ಭುಗಿಲೆಬ್ಬಿಸುತ್ತಿವೆ… ತಳಮಳ ತಳ್ಳಂಕಗಳ ಈ ಸ್ಥಿತಿಯಲ್ಲಿ ಸಮಚಿತ್ತವನ್ನು, ಸಮತೂಕವನ್ನು ಪ್ರದರ್ಶಿಸಿದ ಪತ್ರಕರ್ತರು ಕೆಲವೇ ಕೆಲವರು”.

“…ಜನತೆಯಲ್ಲಿ ಅರಿವು ಮೂಡಿಸಿ ಅವರ ಮೆದುಳುಗಳನ್ನು ನಿರ್ಮಲವಾಗಿ ಇರಿಸುವುದು, ಸಂಕುಚಿತವಾದದ ಬಿಲಗಳಿಂದ ಹೊರಗೆಳೆದು ತರುವುದು, ಕೋಮುವಾದೀ ಭಾವನೆಗಳನ್ನು ಕೆರೆದು ತೆಗೆದು ತೊಳೆದು ಪರಸ್ಪರ, ಸಾಮರಸ್ಯ ಮೂಡಿಸುವುದು ಪತ್ರಿಕೆಗಳ ಅಸಲು ಕರ್ತವ್ಯ….. ಬದಲಾಗಿ ಅರಿವುಗೇಡಿತನ, ಸಂಕುಚಿತ ಪಂಥವಾದ- ಕೋಮುವಾದಗಳನ್ನು ಜನರ ಮನಸುಗಳಲ್ಲಿ ಬಿತ್ತಿ ಗಲಭೆಗಳನ್ನು ಎಬ್ಬಿಸುವುದೇ ಅವರ ಮುಖ್ಯ ಗುರಿ ಎನ್ನಿಸುತ್ತಿದೆ. ಈಗಿನ ಇಂಡಿಯಾದ ಪರಿಸ್ಥಿತಿಯನ್ನು ನೋಡಿದರೆ ರಕ್ತಕಣ್ಣೀರು ಕಪಾಳಕ್ಕೆ ಇಳಿವುದಲ್ಲದೆ, ಕಟ್ಟಕಡೆಗೆ ಈ ದೇಶದ ಪರಿಸ್ಥಿತಿ ಏನಾದೀತು ಎಂಬ ಪ್ರಶ್ನೆ ಏಳುತ್ತದೆ”.

“ಜನ ಪರಸ್ಪರ ಕಚ್ಚಾಡುವುದನ್ನು ನಿಲ್ಲಿಸಬೇಕಿದ್ದರೆ, ದೀನ ದರಿದ್ರರು ಮತ್ತು ರೈತರು ಮತ್ತು ದುಡಿಯುವ ವರ್ಗಗಳಿಗೆ ಬಂಡವಾಳಶಾಹಿಯೇ ಅವರ ಅಸಲು ಶತ್ರು ಎಂಬ ವಾಸ್ತವವನ್ನು ತಿಳಿಸಿ ಹೇಳಬೇಕಿದೆ. ಅವರ ಕೈಯಲ್ಲಿನ ದಾಳ ಆಗದಂತೆ, ಅವರ ಮೋಸ ಮರೆಗಳ ಹುನ್ನಾರಗಳಿಗೆ ಬಲಿಯಾಗದಂತೆ ಎಚ್ಚರಗೊಳಿಸಬೇಕಿದೆ. ಎಲ್ಲ ಜಾತಿ, ವರ್ಣ, ಜನಾಂಗ, ರಾಷ್ಟ್ರೀಯತೆಯ ಭೇದ ಭಾವವಿಲ್ಲದೆ ಒಗ್ಗಟ್ಟಿನಿಂದ ತಮ್ಮ ಹಕ್ಕುಗಳಿಗೆ ಹೋರಾಡಬೇಕೆಂಬ ಅರಿವನ್ನು ಎಲ್ಲ ಬಡವರಲ್ಲಿ ಮೂಡಿಸಬೇಕಿದೆ”.

ಬ್ರಿಟಿಷರ ಬಂಧಿಯಾಗಿ ಕಳೆದ ಬದುಕಿನ ಕಟ್ಟಕಡೆಯ ಎರಡು ವರ್ಷಗಳಲ್ಲಿ ಭಗತ್, ಮಾರ್ಕ್ಸ್‌ವಾದದ ಕಡೆ ನಡೆದಿದ್ದ. ಲಾಹೋರ್ ಒಳಸಂಚಿನ ಪ್ರಕರಣದಲ್ಲಿ 1930ರ ಜನವರಿ 21ರಂದು ವಿಚಾರಣೆಗೆಂದು ಕೋರ್ಟಿಗೆ ಹಾಜರಾಗಿದ್ದ ಭಗತ್ ಮತ್ತು ಸಂಗಾತಿಗಳು ಧರಿಸಿದ್ದು ಕೆಂಪು ಕೊರಳವಸ್ತ್ರಗಳನ್ನು. ಕೂಗಿದ್ದು ಸಮಾಜವಾದೀ ಕ್ರಾಂತಿ ಚಿರಾಯು ಆಗಲಿ… ಕಮ್ಯೂನಿಸ್ಟ್ ಇಂಟರನ್ಯಾಷನಲ್ ಚಿರಾಯು ಆಗಲಿ… ಚಿರಾಯುವಾಗಲಿ ಜನ ಜನತೆ… ಲೆನಿನ್ ಹೆಸರಿಗೆ ಅಳಿವಿಲ್ಲ… ಇಂಪೀರಿಯಲಿಸಮ್ಮಿಗೆ ಧಿಕ್ಕಾರ… ಇತರೆ ಇತ್ಯಾದಿ ಘೋಷಣೆಗಳನ್ನು.

ಕಡೆಯ ವರ್ಷಗಳ ಜೈಲುವಾಸದಲ್ಲಿ ಭಗತ್ ಓದಿನ ಬೀಸು, ಆತ ಬರೆದ 146 ಪುಟಗಳ ಜೈಲು ಟಿಪ್ಪಣಿಗಳಲ್ಲಿ ಪ್ರತಿಫಲಿಸಿದೆ. 108 ಲೇಖಕರ ಪುಸ್ತಕಗಳನ್ನು ಅರಗಿಸಿಕೊಂಡು ಬರೆದುಕೊಂಡ ಉಲ್ಲೇಖಗಳು ಮತ್ತು ಟಿಪ್ಪಣಿಗಳಿವು. ಎಂಗೆಲ್ಸ್‌ನ ಸಮಾಜವಾದ, ಯುಟೋಪಿಯನ್ ಅಂಡ್ ಸೈಂಟಿಫಿಕ್, ಕುಟುಂಬ, ಖಾಸಗಿ ಆಸ್ತಿಪಾಸ್ತಿ ಮತ್ತು ಪ್ರಭುತ್ವ, ಮಾರ್ಕ್ಸ್ ಮತ್ತು ಎಂಗೆಲ್ಸ್‌ನ ದಿ ಕಮ್ಯೂನಿಸ್ಟ್ ಮ್ಯಾನಿಫೆಸ್ಟೋ, ಬಟ್ರ್ಯಾಂಡ್ ರಸೆಲ್, ಥಾಮಸ್ ಪೇನ್, ದೊಸ್ತೋವ್‌ಸ್ಕಿ, ಬುಖಾರಿನ್, ವ್ಹಿಟ್ಮ್ಯಾನ್, ಒಮರ್ ಖಯ್ಯಾಮನ ಕೃತಿಗಳಿಂದ ಧಾರಾಳ ಉಲ್ಲೇಖಗಳಿವೆ.

ಗಲ್ಲಿಗೇರುವ ಹಿಂದಿನ ವರ್ಷ ಭಗತ್ ಬರೆದ “ನಾನೇಕೆ ನಾಸ್ತಿಕ” ಮತ್ತು “ಎಳೆಯ ರಾಜಕೀಯ ಕಾರ್ಯಕರ್ತರಿಗೆ” ಕೃತಿಗಳಲ್ಲಿ ಲೆನಿನ್ನನ ಲೆಫ್ಟ್ ವಿಂಗ್ ಕಮ್ಯೂನಿಸಮ್, ಇಂಪೀರಿಯಲಿಸಮ್ ದಿ ಹೈಯೆಸ್ಟ್ ಸ್ಟೇಜ್ ಆಫ್ ಕ್ಯಾಪಿಟಲಿಸಂನ ಸ್ಪಷ್ಟ ಪ್ರಭಾವಗಳನ್ನು ಇತಿಹಾಸಕಾರರು ಕಂಡಿದ್ದಾರೆ.

“ಅಸಲು ಕ್ರಾಂತಿಕಾರಿ ಸೈನ್ಯಗಳಿರುವುದು ಹಳ್ಳಿಗಳಲ್ಲಿ ಮತ್ತು ಫ್ಯಾಕ್ಟರಿಗಳಲ್ಲಿ… ಅವರೆಂದರೆ ರೈತರು ಮತ್ತು ಕಾರ್ಮಿಕರು” – ನೇಣಿಗೇರಿದ ಎರಡು ತಿಂಗಳ ಮುನ್ನ 1931ರ ಫೆಬ್ರವರಿ ಎರಡರಂದು ಬರೆದ ‘To the young political workers’ ಲೇಖನದಲ್ಲಿ ಕಾಣಬರುವ ಈ ಸಾಲುಗಳು ಆತನ ಒಲವು ನಿಲುವುಗಳನ್ನು ನಿಚ್ಚಳಗೊಳಿಸುತ್ತವೆ.


ಇದನ್ನೂ ಓದಿ: ’ಡಿಸ್‌ಮ್ಯಾಂಟ್ಲಿಂಗ್ ಗ್ಲೋಬಲ್ ಹಿಂದುತ್ವ’ ಕೇಸರಿಕೂಟದಲ್ಲಿ ಕಿಚ್ಚು ಹಚ್ಚಿದ್ದು ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...