Homeಅಂಕಣಗಳುಬಹುಜನ ಭಾರತ; ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ

ಬಹುಜನ ಭಾರತ; ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ

- Advertisement -
- Advertisement -

ಬ್ರಿಟಿಷರ ನೇಣುಗಂಬಕ್ಕೆ ನಗುನಗುತ್ತಲೇ ಕೊರಳೊಡ್ಡಿದ್ದ ಆ ಸ್ವಾತಂತ್ರ್ಯ ಕ್ರಾಂತಿಯ ಕಿಡಿ ಉಸಿರಾಡಿದ್ದು ಇಪ್ಪತ್ಮೂರೇ ವರ್ಷ. ಉಕ್ಕು ಹರೆಯದ ಈ ಬಿಸಿ ಗುಂಡಿಗೆ ದಾಸ್ಯದ ವಿರುದ್ಧ ಮಾತ್ರವೇ ಅಲ್ಲ, ಸಮ ಸಮಾಜ, ಸಹಬಾಳುವೆಗಾಗಿ ಮಿಡಿದ ಪರಿ ಅಭೂತಪೂರ್ವ.

ಭಗತ್ ಸಿಂಗ್ ದೇಹ ಬಹು ಹಿಂದೆಯೇ ಮಣ್ಣು ಸೇರಿರಬಹುದು. ಆದರೆ ಕೋಮುವಾದ, ಅಮಾನವೀಯ ಅಸ್ಪೃಶ್ಯತೆ, ಧರ್ಮ-ಜಾತಿಗಳ, ಮೇಲು- ಕೀಳುಗಳ ನೆವದಲಿ ನಡೆವ ಕ್ರೌರ್ಯ-ಶೋಷಣೆ ವಿರುದ್ಧ ಆತ ಎತ್ತಿದ ದನಿ ಇಂದಿಗೂ ಪ್ರಸ್ತುತ.

ಬ್ರಿಟಿಷರು ಗಲ್ಲಿಗೇರಿಸಿದ್ದು ಕೇವಲ ಆತನ ದೇಹವನ್ನು. ಆದರೆ ಆತನ ಅಜರಾಮರ ಆತ್ಮವನ್ನು, ಸ್ವಸ್ಥ ಸಮಾಜ ಕುರಿತು ಆತ ಕಂಡ ಕನಸುಗಳನ್ನು, ಆತನ ವಿಚಾರಗಳನ್ನು ಅನುದಿನವೂ ಉರಿಕಂಬಕ್ಕೆ ಏರಿಸುತ್ತಿದ್ದೇವೆ.

’ಸಾಂಪ್ರದಾಯಿಕ ದಂಗೆಗಳು ಮತ್ತು ಅವುಗಳ ಇಲಾಜು’ ಎಂಬುದಾಗಿ 1927ರಲ್ಲಿ ಭಗತ್ ಬರೆದ ಲೇಖನ ಇಂದಿನ ಭಾರತದ ಸ್ಥಿತಿಗತಿಗೂ ಹಿಡಿದ ಕೈಗನ್ನಡಿ.

“…ಇಂಡಿಯಾದ ಇಂದಿನ ಪರಿಸ್ಥಿತಿ ಅತೀವವಾಗಿ ಉಲ್ಬಣಿಸಿದೆ. ಒಂದು ಧರ್ಮದ ಅನುಯಾಯಿಗಳು ಹಠಾತ್ತನೆ ಇತರೆ ಧರ್ಮಗಳ ವಿರುದ್ಧ ಕಡು ಹಗೆತನದ ಕತ್ತಿ ಹಿಡಿದಿದ್ದಾರೆ. ಹಿಂದು ಸಿಖ್ಖರೆಂಬ ಏಕೈಕ ಕಾರಣಕ್ಕೆ ಮುಸ್ಲಿಮರು ಹಿಂದು ಮತ್ತು ಸಿಖ್ಖರನ್ನೂ, ಮುಸಲ್ಮಾನರೆಂಬ ಕಾರಣಕ್ಕಾಗಿ ಹಿಂದು ಮತ್ತು ಸಿಖ್ಖರು ಮುಸಲ್ಮಾನರನ್ನೂ ಕ್ರೂರವಾಗಿ ಕೊಲ್ಲಲಾಗುತ್ತಿದೆ… ರಾಜಕೀಯ ನಾಯಕರು ನಿರ್ಲಜ್ಜರಾಗಿ ವರ್ತಿಸುತ್ತಿದ್ದಾರೆ. ದೇಶವನ್ನು ದಾಸ್ಯದಿಂದ ವಿಮೋಚನೆಗೊಳಿಸುವ ಶಪಥ ತೊಟ್ಟಿರುವ ಮತ್ತು ಸಮಾನ ರಾಷ್ಟ್ರೀಯತೆ ಕುರಿತು ಹಗಲಿರುಳು ಭಾಷಣ ಮಾಡುವ ತಲೆಯಾಳುಗಳು ಒಂದೋ ಲಜ್ಜೆಯಿಂದ ತಲೆತಗ್ಗಿಸಿ ಬಾಯಿ ಹೊಲಿದುಕೊಂಡಿದ್ದಾರೆ ಇಲ್ಲವೇ ಧರ್ಮಾಂಧತೆಯ ದುಷ್ಟ ಗಾಳಿಯ ದಿಕ್ಕಿನತ್ತ ಓಲಾಡುತ್ತಿದ್ದಾರೆ… ತುಟಿ ಬಿಚ್ಚದೆ ಬೇಲಿಯ ಮೇಲೆ ಮುಖ ಮುಚ್ಚಿ
ಕುಳಿತಿರುವವರ ಸಂಖ್ಯೆಯೂ ಸಣ್ಣದೇನಲ್ಲ”.

ಕೋಮುವಾದದ ದಳ್ಳುರಿಗೆ ಎಣ್ಣೆ ಎರೆವ ಪತ್ರಿಕೆಗಳ ಕುರಿತು ಭಗತ್ ಹೇಳಿದ್ದು: “…ಕೋಮು ದಂಗೆಗಳಿಗೆ ಪ್ರಚೋದನೆ ನೀಡುವ ಇತರೆ ಪ್ರಮುಖ ಪಾತ್ರಧಾರಿಗಳ ಸಾಲಿಗೆ ಪತ್ರಕರ್ತರೂ ಸೇರುತ್ತಾರೆ. ಒಂದು ಕಾಲಕ್ಕೆ ಬಹುಗಣ್ಯ ಕಸುಬು ಎಂದು ಪರಿಗಣಿಸಲಾಗಿದ್ದ ಪತ್ರಿಕೋದ್ಯಮ ಈಗ ತಿಪ್ಪೆಯಾಗಿ ಬದಲಾಗಿದೆ. ಒಬ್ಬರ ವಿರುದ್ಧ ಮತ್ತೊಬ್ಬರು ತಲೆಬರೆಹಗಳಲ್ಲಿ ಕೂಗಿ ಕಿರುಚುತ್ತಾರೆ, ಪರಸ್ಪರರನ್ನು ಕೊಲ್ಲುವ ಉನ್ಮಾದಗಳನ್ನು ಜನರಲ್ಲಿ ಪ್ರಚೋದಿಸುತ್ತಿದ್ದಾರೆ… ಪತ್ರಿಕೆಗಳು ತೀವ್ರತರದ ಆಸ್ಫೋಟಕ ಮತ್ತು ಅತೀವ ಪ್ರಚೋದಕ ಲೇಖನಗಳನ್ನು ಪ್ರಕಟಿಸಿ ಕೋಮುವಾದೀ ಜ್ವಾಲೆಯನ್ನು ಹತ್ತು ಹಲವು ಸ್ಥಳಗಳಲ್ಲಿ ಭುಗಿಲೆಬ್ಬಿಸುತ್ತಿವೆ… ತಳಮಳ ತಳ್ಳಂಕಗಳ ಈ ಸ್ಥಿತಿಯಲ್ಲಿ ಸಮಚಿತ್ತವನ್ನು, ಸಮತೂಕವನ್ನು ಪ್ರದರ್ಶಿಸಿದ ಪತ್ರಕರ್ತರು ಕೆಲವೇ ಕೆಲವರು”.

“…ಜನತೆಯಲ್ಲಿ ಅರಿವು ಮೂಡಿಸಿ ಅವರ ಮೆದುಳುಗಳನ್ನು ನಿರ್ಮಲವಾಗಿ ಇರಿಸುವುದು, ಸಂಕುಚಿತವಾದದ ಬಿಲಗಳಿಂದ ಹೊರಗೆಳೆದು ತರುವುದು, ಕೋಮುವಾದೀ ಭಾವನೆಗಳನ್ನು ಕೆರೆದು ತೆಗೆದು ತೊಳೆದು ಪರಸ್ಪರ, ಸಾಮರಸ್ಯ ಮೂಡಿಸುವುದು ಪತ್ರಿಕೆಗಳ ಅಸಲು ಕರ್ತವ್ಯ….. ಬದಲಾಗಿ ಅರಿವುಗೇಡಿತನ, ಸಂಕುಚಿತ ಪಂಥವಾದ- ಕೋಮುವಾದಗಳನ್ನು ಜನರ ಮನಸುಗಳಲ್ಲಿ ಬಿತ್ತಿ ಗಲಭೆಗಳನ್ನು ಎಬ್ಬಿಸುವುದೇ ಅವರ ಮುಖ್ಯ ಗುರಿ ಎನ್ನಿಸುತ್ತಿದೆ. ಈಗಿನ ಇಂಡಿಯಾದ ಪರಿಸ್ಥಿತಿಯನ್ನು ನೋಡಿದರೆ ರಕ್ತಕಣ್ಣೀರು ಕಪಾಳಕ್ಕೆ ಇಳಿವುದಲ್ಲದೆ, ಕಟ್ಟಕಡೆಗೆ ಈ ದೇಶದ ಪರಿಸ್ಥಿತಿ ಏನಾದೀತು ಎಂಬ ಪ್ರಶ್ನೆ ಏಳುತ್ತದೆ”.

“ಜನ ಪರಸ್ಪರ ಕಚ್ಚಾಡುವುದನ್ನು ನಿಲ್ಲಿಸಬೇಕಿದ್ದರೆ, ದೀನ ದರಿದ್ರರು ಮತ್ತು ರೈತರು ಮತ್ತು ದುಡಿಯುವ ವರ್ಗಗಳಿಗೆ ಬಂಡವಾಳಶಾಹಿಯೇ ಅವರ ಅಸಲು ಶತ್ರು ಎಂಬ ವಾಸ್ತವವನ್ನು ತಿಳಿಸಿ ಹೇಳಬೇಕಿದೆ. ಅವರ ಕೈಯಲ್ಲಿನ ದಾಳ ಆಗದಂತೆ, ಅವರ ಮೋಸ ಮರೆಗಳ ಹುನ್ನಾರಗಳಿಗೆ ಬಲಿಯಾಗದಂತೆ ಎಚ್ಚರಗೊಳಿಸಬೇಕಿದೆ. ಎಲ್ಲ ಜಾತಿ, ವರ್ಣ, ಜನಾಂಗ, ರಾಷ್ಟ್ರೀಯತೆಯ ಭೇದ ಭಾವವಿಲ್ಲದೆ ಒಗ್ಗಟ್ಟಿನಿಂದ ತಮ್ಮ ಹಕ್ಕುಗಳಿಗೆ ಹೋರಾಡಬೇಕೆಂಬ ಅರಿವನ್ನು ಎಲ್ಲ ಬಡವರಲ್ಲಿ ಮೂಡಿಸಬೇಕಿದೆ”.

ಬ್ರಿಟಿಷರ ಬಂಧಿಯಾಗಿ ಕಳೆದ ಬದುಕಿನ ಕಟ್ಟಕಡೆಯ ಎರಡು ವರ್ಷಗಳಲ್ಲಿ ಭಗತ್, ಮಾರ್ಕ್ಸ್‌ವಾದದ ಕಡೆ ನಡೆದಿದ್ದ. ಲಾಹೋರ್ ಒಳಸಂಚಿನ ಪ್ರಕರಣದಲ್ಲಿ 1930ರ ಜನವರಿ 21ರಂದು ವಿಚಾರಣೆಗೆಂದು ಕೋರ್ಟಿಗೆ ಹಾಜರಾಗಿದ್ದ ಭಗತ್ ಮತ್ತು ಸಂಗಾತಿಗಳು ಧರಿಸಿದ್ದು ಕೆಂಪು ಕೊರಳವಸ್ತ್ರಗಳನ್ನು. ಕೂಗಿದ್ದು ಸಮಾಜವಾದೀ ಕ್ರಾಂತಿ ಚಿರಾಯು ಆಗಲಿ… ಕಮ್ಯೂನಿಸ್ಟ್ ಇಂಟರನ್ಯಾಷನಲ್ ಚಿರಾಯು ಆಗಲಿ… ಚಿರಾಯುವಾಗಲಿ ಜನ ಜನತೆ… ಲೆನಿನ್ ಹೆಸರಿಗೆ ಅಳಿವಿಲ್ಲ… ಇಂಪೀರಿಯಲಿಸಮ್ಮಿಗೆ ಧಿಕ್ಕಾರ… ಇತರೆ ಇತ್ಯಾದಿ ಘೋಷಣೆಗಳನ್ನು.

ಕಡೆಯ ವರ್ಷಗಳ ಜೈಲುವಾಸದಲ್ಲಿ ಭಗತ್ ಓದಿನ ಬೀಸು, ಆತ ಬರೆದ 146 ಪುಟಗಳ ಜೈಲು ಟಿಪ್ಪಣಿಗಳಲ್ಲಿ ಪ್ರತಿಫಲಿಸಿದೆ. 108 ಲೇಖಕರ ಪುಸ್ತಕಗಳನ್ನು ಅರಗಿಸಿಕೊಂಡು ಬರೆದುಕೊಂಡ ಉಲ್ಲೇಖಗಳು ಮತ್ತು ಟಿಪ್ಪಣಿಗಳಿವು. ಎಂಗೆಲ್ಸ್‌ನ ಸಮಾಜವಾದ, ಯುಟೋಪಿಯನ್ ಅಂಡ್ ಸೈಂಟಿಫಿಕ್, ಕುಟುಂಬ, ಖಾಸಗಿ ಆಸ್ತಿಪಾಸ್ತಿ ಮತ್ತು ಪ್ರಭುತ್ವ, ಮಾರ್ಕ್ಸ್ ಮತ್ತು ಎಂಗೆಲ್ಸ್‌ನ ದಿ ಕಮ್ಯೂನಿಸ್ಟ್ ಮ್ಯಾನಿಫೆಸ್ಟೋ, ಬಟ್ರ್ಯಾಂಡ್ ರಸೆಲ್, ಥಾಮಸ್ ಪೇನ್, ದೊಸ್ತೋವ್‌ಸ್ಕಿ, ಬುಖಾರಿನ್, ವ್ಹಿಟ್ಮ್ಯಾನ್, ಒಮರ್ ಖಯ್ಯಾಮನ ಕೃತಿಗಳಿಂದ ಧಾರಾಳ ಉಲ್ಲೇಖಗಳಿವೆ.

ಗಲ್ಲಿಗೇರುವ ಹಿಂದಿನ ವರ್ಷ ಭಗತ್ ಬರೆದ “ನಾನೇಕೆ ನಾಸ್ತಿಕ” ಮತ್ತು “ಎಳೆಯ ರಾಜಕೀಯ ಕಾರ್ಯಕರ್ತರಿಗೆ” ಕೃತಿಗಳಲ್ಲಿ ಲೆನಿನ್ನನ ಲೆಫ್ಟ್ ವಿಂಗ್ ಕಮ್ಯೂನಿಸಮ್, ಇಂಪೀರಿಯಲಿಸಮ್ ದಿ ಹೈಯೆಸ್ಟ್ ಸ್ಟೇಜ್ ಆಫ್ ಕ್ಯಾಪಿಟಲಿಸಂನ ಸ್ಪಷ್ಟ ಪ್ರಭಾವಗಳನ್ನು ಇತಿಹಾಸಕಾರರು ಕಂಡಿದ್ದಾರೆ.

“ಅಸಲು ಕ್ರಾಂತಿಕಾರಿ ಸೈನ್ಯಗಳಿರುವುದು ಹಳ್ಳಿಗಳಲ್ಲಿ ಮತ್ತು ಫ್ಯಾಕ್ಟರಿಗಳಲ್ಲಿ… ಅವರೆಂದರೆ ರೈತರು ಮತ್ತು ಕಾರ್ಮಿಕರು” – ನೇಣಿಗೇರಿದ ಎರಡು ತಿಂಗಳ ಮುನ್ನ 1931ರ ಫೆಬ್ರವರಿ ಎರಡರಂದು ಬರೆದ ‘To the young political workers’ ಲೇಖನದಲ್ಲಿ ಕಾಣಬರುವ ಈ ಸಾಲುಗಳು ಆತನ ಒಲವು ನಿಲುವುಗಳನ್ನು ನಿಚ್ಚಳಗೊಳಿಸುತ್ತವೆ.


ಇದನ್ನೂ ಓದಿ: ’ಡಿಸ್‌ಮ್ಯಾಂಟ್ಲಿಂಗ್ ಗ್ಲೋಬಲ್ ಹಿಂದುತ್ವ’ ಕೇಸರಿಕೂಟದಲ್ಲಿ ಕಿಚ್ಚು ಹಚ್ಚಿದ್ದು ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...