Homeಅಂಕಣಗಳುಬಹುಜನ ಭಾರತ; ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ

ಬಹುಜನ ಭಾರತ; ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ

- Advertisement -
- Advertisement -

ಬ್ರಿಟಿಷರ ನೇಣುಗಂಬಕ್ಕೆ ನಗುನಗುತ್ತಲೇ ಕೊರಳೊಡ್ಡಿದ್ದ ಆ ಸ್ವಾತಂತ್ರ್ಯ ಕ್ರಾಂತಿಯ ಕಿಡಿ ಉಸಿರಾಡಿದ್ದು ಇಪ್ಪತ್ಮೂರೇ ವರ್ಷ. ಉಕ್ಕು ಹರೆಯದ ಈ ಬಿಸಿ ಗುಂಡಿಗೆ ದಾಸ್ಯದ ವಿರುದ್ಧ ಮಾತ್ರವೇ ಅಲ್ಲ, ಸಮ ಸಮಾಜ, ಸಹಬಾಳುವೆಗಾಗಿ ಮಿಡಿದ ಪರಿ ಅಭೂತಪೂರ್ವ.

ಭಗತ್ ಸಿಂಗ್ ದೇಹ ಬಹು ಹಿಂದೆಯೇ ಮಣ್ಣು ಸೇರಿರಬಹುದು. ಆದರೆ ಕೋಮುವಾದ, ಅಮಾನವೀಯ ಅಸ್ಪೃಶ್ಯತೆ, ಧರ್ಮ-ಜಾತಿಗಳ, ಮೇಲು- ಕೀಳುಗಳ ನೆವದಲಿ ನಡೆವ ಕ್ರೌರ್ಯ-ಶೋಷಣೆ ವಿರುದ್ಧ ಆತ ಎತ್ತಿದ ದನಿ ಇಂದಿಗೂ ಪ್ರಸ್ತುತ.

ಬ್ರಿಟಿಷರು ಗಲ್ಲಿಗೇರಿಸಿದ್ದು ಕೇವಲ ಆತನ ದೇಹವನ್ನು. ಆದರೆ ಆತನ ಅಜರಾಮರ ಆತ್ಮವನ್ನು, ಸ್ವಸ್ಥ ಸಮಾಜ ಕುರಿತು ಆತ ಕಂಡ ಕನಸುಗಳನ್ನು, ಆತನ ವಿಚಾರಗಳನ್ನು ಅನುದಿನವೂ ಉರಿಕಂಬಕ್ಕೆ ಏರಿಸುತ್ತಿದ್ದೇವೆ.

’ಸಾಂಪ್ರದಾಯಿಕ ದಂಗೆಗಳು ಮತ್ತು ಅವುಗಳ ಇಲಾಜು’ ಎಂಬುದಾಗಿ 1927ರಲ್ಲಿ ಭಗತ್ ಬರೆದ ಲೇಖನ ಇಂದಿನ ಭಾರತದ ಸ್ಥಿತಿಗತಿಗೂ ಹಿಡಿದ ಕೈಗನ್ನಡಿ.

“…ಇಂಡಿಯಾದ ಇಂದಿನ ಪರಿಸ್ಥಿತಿ ಅತೀವವಾಗಿ ಉಲ್ಬಣಿಸಿದೆ. ಒಂದು ಧರ್ಮದ ಅನುಯಾಯಿಗಳು ಹಠಾತ್ತನೆ ಇತರೆ ಧರ್ಮಗಳ ವಿರುದ್ಧ ಕಡು ಹಗೆತನದ ಕತ್ತಿ ಹಿಡಿದಿದ್ದಾರೆ. ಹಿಂದು ಸಿಖ್ಖರೆಂಬ ಏಕೈಕ ಕಾರಣಕ್ಕೆ ಮುಸ್ಲಿಮರು ಹಿಂದು ಮತ್ತು ಸಿಖ್ಖರನ್ನೂ, ಮುಸಲ್ಮಾನರೆಂಬ ಕಾರಣಕ್ಕಾಗಿ ಹಿಂದು ಮತ್ತು ಸಿಖ್ಖರು ಮುಸಲ್ಮಾನರನ್ನೂ ಕ್ರೂರವಾಗಿ ಕೊಲ್ಲಲಾಗುತ್ತಿದೆ… ರಾಜಕೀಯ ನಾಯಕರು ನಿರ್ಲಜ್ಜರಾಗಿ ವರ್ತಿಸುತ್ತಿದ್ದಾರೆ. ದೇಶವನ್ನು ದಾಸ್ಯದಿಂದ ವಿಮೋಚನೆಗೊಳಿಸುವ ಶಪಥ ತೊಟ್ಟಿರುವ ಮತ್ತು ಸಮಾನ ರಾಷ್ಟ್ರೀಯತೆ ಕುರಿತು ಹಗಲಿರುಳು ಭಾಷಣ ಮಾಡುವ ತಲೆಯಾಳುಗಳು ಒಂದೋ ಲಜ್ಜೆಯಿಂದ ತಲೆತಗ್ಗಿಸಿ ಬಾಯಿ ಹೊಲಿದುಕೊಂಡಿದ್ದಾರೆ ಇಲ್ಲವೇ ಧರ್ಮಾಂಧತೆಯ ದುಷ್ಟ ಗಾಳಿಯ ದಿಕ್ಕಿನತ್ತ ಓಲಾಡುತ್ತಿದ್ದಾರೆ… ತುಟಿ ಬಿಚ್ಚದೆ ಬೇಲಿಯ ಮೇಲೆ ಮುಖ ಮುಚ್ಚಿ
ಕುಳಿತಿರುವವರ ಸಂಖ್ಯೆಯೂ ಸಣ್ಣದೇನಲ್ಲ”.

ಕೋಮುವಾದದ ದಳ್ಳುರಿಗೆ ಎಣ್ಣೆ ಎರೆವ ಪತ್ರಿಕೆಗಳ ಕುರಿತು ಭಗತ್ ಹೇಳಿದ್ದು: “…ಕೋಮು ದಂಗೆಗಳಿಗೆ ಪ್ರಚೋದನೆ ನೀಡುವ ಇತರೆ ಪ್ರಮುಖ ಪಾತ್ರಧಾರಿಗಳ ಸಾಲಿಗೆ ಪತ್ರಕರ್ತರೂ ಸೇರುತ್ತಾರೆ. ಒಂದು ಕಾಲಕ್ಕೆ ಬಹುಗಣ್ಯ ಕಸುಬು ಎಂದು ಪರಿಗಣಿಸಲಾಗಿದ್ದ ಪತ್ರಿಕೋದ್ಯಮ ಈಗ ತಿಪ್ಪೆಯಾಗಿ ಬದಲಾಗಿದೆ. ಒಬ್ಬರ ವಿರುದ್ಧ ಮತ್ತೊಬ್ಬರು ತಲೆಬರೆಹಗಳಲ್ಲಿ ಕೂಗಿ ಕಿರುಚುತ್ತಾರೆ, ಪರಸ್ಪರರನ್ನು ಕೊಲ್ಲುವ ಉನ್ಮಾದಗಳನ್ನು ಜನರಲ್ಲಿ ಪ್ರಚೋದಿಸುತ್ತಿದ್ದಾರೆ… ಪತ್ರಿಕೆಗಳು ತೀವ್ರತರದ ಆಸ್ಫೋಟಕ ಮತ್ತು ಅತೀವ ಪ್ರಚೋದಕ ಲೇಖನಗಳನ್ನು ಪ್ರಕಟಿಸಿ ಕೋಮುವಾದೀ ಜ್ವಾಲೆಯನ್ನು ಹತ್ತು ಹಲವು ಸ್ಥಳಗಳಲ್ಲಿ ಭುಗಿಲೆಬ್ಬಿಸುತ್ತಿವೆ… ತಳಮಳ ತಳ್ಳಂಕಗಳ ಈ ಸ್ಥಿತಿಯಲ್ಲಿ ಸಮಚಿತ್ತವನ್ನು, ಸಮತೂಕವನ್ನು ಪ್ರದರ್ಶಿಸಿದ ಪತ್ರಕರ್ತರು ಕೆಲವೇ ಕೆಲವರು”.

“…ಜನತೆಯಲ್ಲಿ ಅರಿವು ಮೂಡಿಸಿ ಅವರ ಮೆದುಳುಗಳನ್ನು ನಿರ್ಮಲವಾಗಿ ಇರಿಸುವುದು, ಸಂಕುಚಿತವಾದದ ಬಿಲಗಳಿಂದ ಹೊರಗೆಳೆದು ತರುವುದು, ಕೋಮುವಾದೀ ಭಾವನೆಗಳನ್ನು ಕೆರೆದು ತೆಗೆದು ತೊಳೆದು ಪರಸ್ಪರ, ಸಾಮರಸ್ಯ ಮೂಡಿಸುವುದು ಪತ್ರಿಕೆಗಳ ಅಸಲು ಕರ್ತವ್ಯ….. ಬದಲಾಗಿ ಅರಿವುಗೇಡಿತನ, ಸಂಕುಚಿತ ಪಂಥವಾದ- ಕೋಮುವಾದಗಳನ್ನು ಜನರ ಮನಸುಗಳಲ್ಲಿ ಬಿತ್ತಿ ಗಲಭೆಗಳನ್ನು ಎಬ್ಬಿಸುವುದೇ ಅವರ ಮುಖ್ಯ ಗುರಿ ಎನ್ನಿಸುತ್ತಿದೆ. ಈಗಿನ ಇಂಡಿಯಾದ ಪರಿಸ್ಥಿತಿಯನ್ನು ನೋಡಿದರೆ ರಕ್ತಕಣ್ಣೀರು ಕಪಾಳಕ್ಕೆ ಇಳಿವುದಲ್ಲದೆ, ಕಟ್ಟಕಡೆಗೆ ಈ ದೇಶದ ಪರಿಸ್ಥಿತಿ ಏನಾದೀತು ಎಂಬ ಪ್ರಶ್ನೆ ಏಳುತ್ತದೆ”.

“ಜನ ಪರಸ್ಪರ ಕಚ್ಚಾಡುವುದನ್ನು ನಿಲ್ಲಿಸಬೇಕಿದ್ದರೆ, ದೀನ ದರಿದ್ರರು ಮತ್ತು ರೈತರು ಮತ್ತು ದುಡಿಯುವ ವರ್ಗಗಳಿಗೆ ಬಂಡವಾಳಶಾಹಿಯೇ ಅವರ ಅಸಲು ಶತ್ರು ಎಂಬ ವಾಸ್ತವವನ್ನು ತಿಳಿಸಿ ಹೇಳಬೇಕಿದೆ. ಅವರ ಕೈಯಲ್ಲಿನ ದಾಳ ಆಗದಂತೆ, ಅವರ ಮೋಸ ಮರೆಗಳ ಹುನ್ನಾರಗಳಿಗೆ ಬಲಿಯಾಗದಂತೆ ಎಚ್ಚರಗೊಳಿಸಬೇಕಿದೆ. ಎಲ್ಲ ಜಾತಿ, ವರ್ಣ, ಜನಾಂಗ, ರಾಷ್ಟ್ರೀಯತೆಯ ಭೇದ ಭಾವವಿಲ್ಲದೆ ಒಗ್ಗಟ್ಟಿನಿಂದ ತಮ್ಮ ಹಕ್ಕುಗಳಿಗೆ ಹೋರಾಡಬೇಕೆಂಬ ಅರಿವನ್ನು ಎಲ್ಲ ಬಡವರಲ್ಲಿ ಮೂಡಿಸಬೇಕಿದೆ”.

ಬ್ರಿಟಿಷರ ಬಂಧಿಯಾಗಿ ಕಳೆದ ಬದುಕಿನ ಕಟ್ಟಕಡೆಯ ಎರಡು ವರ್ಷಗಳಲ್ಲಿ ಭಗತ್, ಮಾರ್ಕ್ಸ್‌ವಾದದ ಕಡೆ ನಡೆದಿದ್ದ. ಲಾಹೋರ್ ಒಳಸಂಚಿನ ಪ್ರಕರಣದಲ್ಲಿ 1930ರ ಜನವರಿ 21ರಂದು ವಿಚಾರಣೆಗೆಂದು ಕೋರ್ಟಿಗೆ ಹಾಜರಾಗಿದ್ದ ಭಗತ್ ಮತ್ತು ಸಂಗಾತಿಗಳು ಧರಿಸಿದ್ದು ಕೆಂಪು ಕೊರಳವಸ್ತ್ರಗಳನ್ನು. ಕೂಗಿದ್ದು ಸಮಾಜವಾದೀ ಕ್ರಾಂತಿ ಚಿರಾಯು ಆಗಲಿ… ಕಮ್ಯೂನಿಸ್ಟ್ ಇಂಟರನ್ಯಾಷನಲ್ ಚಿರಾಯು ಆಗಲಿ… ಚಿರಾಯುವಾಗಲಿ ಜನ ಜನತೆ… ಲೆನಿನ್ ಹೆಸರಿಗೆ ಅಳಿವಿಲ್ಲ… ಇಂಪೀರಿಯಲಿಸಮ್ಮಿಗೆ ಧಿಕ್ಕಾರ… ಇತರೆ ಇತ್ಯಾದಿ ಘೋಷಣೆಗಳನ್ನು.

ಕಡೆಯ ವರ್ಷಗಳ ಜೈಲುವಾಸದಲ್ಲಿ ಭಗತ್ ಓದಿನ ಬೀಸು, ಆತ ಬರೆದ 146 ಪುಟಗಳ ಜೈಲು ಟಿಪ್ಪಣಿಗಳಲ್ಲಿ ಪ್ರತಿಫಲಿಸಿದೆ. 108 ಲೇಖಕರ ಪುಸ್ತಕಗಳನ್ನು ಅರಗಿಸಿಕೊಂಡು ಬರೆದುಕೊಂಡ ಉಲ್ಲೇಖಗಳು ಮತ್ತು ಟಿಪ್ಪಣಿಗಳಿವು. ಎಂಗೆಲ್ಸ್‌ನ ಸಮಾಜವಾದ, ಯುಟೋಪಿಯನ್ ಅಂಡ್ ಸೈಂಟಿಫಿಕ್, ಕುಟುಂಬ, ಖಾಸಗಿ ಆಸ್ತಿಪಾಸ್ತಿ ಮತ್ತು ಪ್ರಭುತ್ವ, ಮಾರ್ಕ್ಸ್ ಮತ್ತು ಎಂಗೆಲ್ಸ್‌ನ ದಿ ಕಮ್ಯೂನಿಸ್ಟ್ ಮ್ಯಾನಿಫೆಸ್ಟೋ, ಬಟ್ರ್ಯಾಂಡ್ ರಸೆಲ್, ಥಾಮಸ್ ಪೇನ್, ದೊಸ್ತೋವ್‌ಸ್ಕಿ, ಬುಖಾರಿನ್, ವ್ಹಿಟ್ಮ್ಯಾನ್, ಒಮರ್ ಖಯ್ಯಾಮನ ಕೃತಿಗಳಿಂದ ಧಾರಾಳ ಉಲ್ಲೇಖಗಳಿವೆ.

ಗಲ್ಲಿಗೇರುವ ಹಿಂದಿನ ವರ್ಷ ಭಗತ್ ಬರೆದ “ನಾನೇಕೆ ನಾಸ್ತಿಕ” ಮತ್ತು “ಎಳೆಯ ರಾಜಕೀಯ ಕಾರ್ಯಕರ್ತರಿಗೆ” ಕೃತಿಗಳಲ್ಲಿ ಲೆನಿನ್ನನ ಲೆಫ್ಟ್ ವಿಂಗ್ ಕಮ್ಯೂನಿಸಮ್, ಇಂಪೀರಿಯಲಿಸಮ್ ದಿ ಹೈಯೆಸ್ಟ್ ಸ್ಟೇಜ್ ಆಫ್ ಕ್ಯಾಪಿಟಲಿಸಂನ ಸ್ಪಷ್ಟ ಪ್ರಭಾವಗಳನ್ನು ಇತಿಹಾಸಕಾರರು ಕಂಡಿದ್ದಾರೆ.

“ಅಸಲು ಕ್ರಾಂತಿಕಾರಿ ಸೈನ್ಯಗಳಿರುವುದು ಹಳ್ಳಿಗಳಲ್ಲಿ ಮತ್ತು ಫ್ಯಾಕ್ಟರಿಗಳಲ್ಲಿ… ಅವರೆಂದರೆ ರೈತರು ಮತ್ತು ಕಾರ್ಮಿಕರು” – ನೇಣಿಗೇರಿದ ಎರಡು ತಿಂಗಳ ಮುನ್ನ 1931ರ ಫೆಬ್ರವರಿ ಎರಡರಂದು ಬರೆದ ‘To the young political workers’ ಲೇಖನದಲ್ಲಿ ಕಾಣಬರುವ ಈ ಸಾಲುಗಳು ಆತನ ಒಲವು ನಿಲುವುಗಳನ್ನು ನಿಚ್ಚಳಗೊಳಿಸುತ್ತವೆ.


ಇದನ್ನೂ ಓದಿ: ’ಡಿಸ್‌ಮ್ಯಾಂಟ್ಲಿಂಗ್ ಗ್ಲೋಬಲ್ ಹಿಂದುತ್ವ’ ಕೇಸರಿಕೂಟದಲ್ಲಿ ಕಿಚ್ಚು ಹಚ್ಚಿದ್ದು ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...