Homeಸಿನಿಮಾಕ್ರೀಡೆಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಬಿಶನ್‌ ಸಿಂಗ್‌ ಬೇಡಿ ನಿಧನ: ಲೆಜೆಂಡರಿ ಸ್ಪಿನ್ನರ್‌ ಅಗಲಿಕೆಗೆ...

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಬಿಶನ್‌ ಸಿಂಗ್‌ ಬೇಡಿ ನಿಧನ: ಲೆಜೆಂಡರಿ ಸ್ಪಿನ್ನರ್‌ ಅಗಲಿಕೆಗೆ ಬಿಸಿಸಿಐ ಸಂತಾಪ

- Advertisement -
- Advertisement -

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಹಾಗೂ ಲೆಜೆಂಡರಿ ಸ್ಪಿನ್ನರ್‌ ಬಿಶನ್‌ ಸಿಂಗ್‌ ಬೇಡಿ ನಿಧನರಾಗಿದ್ದಾರೆ.

77 ವರ್ಷದ ಬಿಶನ್‌ ಸಿಂಗ್‌ ಬೇಡಿ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇವರು ಪತ್ನಿ ಅಂಜು, ಪುತ್ರ ಅಂಗದ್ ಮತ್ತು ಪುತ್ರಿ ನೇಹಾ ಅವರನ್ನು ಅಗಲಿದ್ದಾರೆ.

 

ಅಮೃತಸರ ಮೂಲದವರಾದ ಇವರು ಭಾರತದ ಮೊದಲ ಏಕದಿನ ಅಂತರಾಷ್ಟ್ರೀಯ ಕ್ರಿಕೆಟ್‌ ಪಂದ್ಯದ  ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 1975ರಲ್ಲಿ ನಡೆದ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಈಸ್ಟ್‌ ಆಫ್ರಿಕಾ ಎದುರು ಅದ್ಭುತ ಬೌಲಿಂಗ್‌ ಮೂಲಕ ಒಡಿಐನಲ್ಲಿ ಭಾರತಕ್ಕೆ ಮೊತ್ತ ಮೊದಲ ಜಯ ತರುವಲ್ಲಿ ನೆರವಾಗಿದ್ದರು.

1977-78ರಲ್ಲಿ ಆಸ್ಟ್ರೇಲಿಯಾದಲ್ಲಿ ಬಿಷನ್‌ ಸಿಂಗ್‌ ಬೇಡಿ ಸಾರಥ್ಯದ ಭಾರತ ತಂಡ ಅದ್ಭುತ ಪ್ರದರ್ಶನ ನೀಡಿ ಕಾಂಗರೂ ಪಡೆಯ ಎದುರು 5 ಪಂದ್ಯಗಳ ಟೆಸ್ಟ್‌ ಕ್ರಿಕೆಟ್‌ ಸರಣಿಯಲ್ಲಿ ಭಾರಿ ಸದ್ದು ಮಾಡಿತ್ತು. ಆ ಸರಣಿಯಲ್ಲಿ ಬಾಬ್ ಸಿಂಪ್ಸನ್ ಸಾರಥ್ಯದ ಆಸ್ಟ್ರೇಲಿಯಾ ತಂಡ 3-2 ಅಂತರದ ಜಯ ದಾಖಲಿಸಿದರೂ, ಬೇಡಿ ಸಾರಥ್ಯದ ಭಾರತ ತಂಡ ನೀಡಿದ ಕೆಚ್ಚೆದೆಯ ಹೋರಾಟವನ್ನು ಈಗಲೂ ಸ್ಮರಿಸಲಾಗುತ್ತದೆ. ಮೆಲ್ಬೋರ್ನ್‌ ಮತ್ತು ಸಿಡ್ನಿಯಲ್ಲಿ ನಡೆದ ಸರಣಿಯ 3ನೇ ಮತ್ತು 4ನೇ ಟೆಸ್ಟ್‌ ಪಂದ್ಯಗಳಲ್ಲಿ ಭಾರತ ತಂಡ ಅವಿಸ್ಮರಣೀಯ ಜಯ ದಾಖಲಿಸಿತ್ತು.

ಕ್ರಿಕೆಟ್‌ನಲ್ಲಿ ಯಶಸ್ಸು ಕಂಡ ಭಾರತೀಯ ಬೌಲರ್‌ಗಳ ಪೈಕಿ ಬಿಷನ್‌ ಸಿಂಗ್‌ ಬೇಡಿ ಕೂಡ ಒಬ್ಬರು. ನಾರ್ತ್‌ಹ್ಯಾಂಪ್ಟನ್‌ಶೈರ್‌ ತಂಡದ ಪರ 1972ರಿಂದ 1977ರವರೆಗೆ ಒಟ್ಟಾರೆ 102 ಪಂದ್ಯಗಳನ್ನು ಆಡಿ ಬರೊಬ್ಬರಿ 434 ವಿಕೆಟ್‌ಗಳನ್ನು ಪಡೆದಿದ್ದಾರೆ.

1990ರಲ್ಲಿ ಭಾರತ ತಂಡಕ್ಕೆ ಮೊತ್ತ ಮೊದಲ ವೃತ್ತಿಪರ ಕೋಚ್‌ ಆಗಿಯೂ ಬಿಷನ್‌ ಸಿಂಗ್‌ ಬೇಡಿ ಆಯ್ಕೆಯಾಗಿದ್ದರು. ತಮ್ಮ ಕೋಚಿಂಗ್‌ ಅವಧಿಯಲ್ಲಿ ಟೀಮ್ ಇಂಡಿಯಾ ಆಟಗಾರರ ಫಿಟ್ನೆಸ್‌ ಕಡೆಗೆ ಹೆಚ್ಚು ಒತ್ತು ನೀಡಿದ್ದರು.

ಬಿಶನ್‌ ಸಿಂಗ್‌ ನಿಧನಕ್ಕೆ ಬಿಸಿಸಿಐ ಸಂತಾಪ ಸೂಚಿಸಿದ್ದು, ಭಾರತದ ಮಾಜಿ ಟೆಸ್ಟ್ ನಾಯಕ ಮತ್ತು ಲೆಜೆಂಡರಿ ಸ್ಪಿನ್ನರ್ ಬಿಶನ್ ಸಿಂಗ್ ಬೇಡಿ ಅವರ ನಿಧನಕ್ಕೆ ಬಿಸಿಸಿಐ ಸಂತಾಪ ವ್ಯಕ್ತಪಡಿಸಿದೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್‌| ‘ಲವ್ ಜಿಹಾದ್’ ಆರೋಪದ ಮೇಲೆ ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು; ಪ್ರಕರಣ ದಾಖಲು

ಪ್ರೇಮಿಗಳ ದಿನದಂದು ರೆಸ್ಟೋರೆಂಟ್‌ನಲ್ಲಿ ಹಿಂದೂ ಮಹಿಳೆಯನ್ನು ಭೇಟಿಯಾಗುವಾಗ ತನ್ನ ಧಾರ್ಮಿಕ ಗುರುತನ್ನು ಮರೆಮಾಡಿದ್ದಾರೆ ಎಂದು ಆರೋಪಿಸಿದ ಬಜರಂಗದಳ ಸದಸ್ಯರು, ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿರುವ ಘಟನೆ ಮೀರತ್‌ನಲ್ಲಿ ನಡೆದಿದೆ. ದಾಳಿಕೋರರ ವಿರುದ್ಧ ಪ್ರಕರಣ...

ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ : ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌

ತೆಲಂಗಾಣದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಶುಕ್ರವಾರ (ಫೆ.13) ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರಾಬಲ್ಯ ಮೆರೆದಿದೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 2,996 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 1,537 ವಾರ್ಡ್‌ಗಳನ್ನು ಗೆದ್ದುಕೊಂಡಿದೆ. ಈ...

ಗಾಜಾ ಕುರಿತು ತೀರ್ಪುಗಾರರ ಹೇಳಿಕೆಗೆ ವಿರೋಧ; ಬರ್ಲಿನ್ ಚಲನಚಿತ್ರೋತ್ಸವದಿಂದ ಹಿಂದೆ ಸರಿದ ಅರುಂಧತಿ ರಾಯ್

ಬರ್ಲಿನ್ ಚಲನಚಿತ್ರೋತ್ಸವದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ ಎಂದು ಬರಹಗಾರ್ತಿ ಅರುಂಧತಿ ರಾಯ್ ಹೇಳಿದ್ದಾರೆ. ತೀರ್ಪುಗಾರರ ಅಧ್ಯಕ್ಷೆ ವಿಮ್ ವೆಂಡರ್ಸ್ ಅವರು, ಗಾಜಾ ಕುರಿತು ಪ್ರಶ್ನಿಸಿದಾಗ 'ರಾಜಕೀಯ ವಿಷಯಗಳಲ್ಲಿ ತೊಡಗಿಸಿಕೊಳ್ಳಲು ಇಷ್ಟಪಡುವುದಿಲ್ಲ' ಎಂದು ಹೇಳಿದ್ದರು. ಈ...

‘ಮಾನವೀಯತೆಯೇ ಏಕೈಕ ಧರ್ಮ..’; ಹಳ್ಳಿಯನ್ನು ಜಾತಿ ಮುಕ್ತ ಎಂದು ಘೋಷಿಸಿದ ಮಹಾರಾಷ್ಟ್ರದ ಸೌಂದಲ ಗ್ರಾಮ

ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಸೌಂದಲ ಗ್ರಾಮವು ತನ್ನನ್ನು ತಾನು 'ಜಾತಿ ಮುಕ್ತ' ಎಂದು ಘೋಷಿಸಿಕೊಂಡಿದ್ದು, ಸಂವಿಧಾನದ ಪೀಠಿಕೆ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಮಾರ್ಗದರ್ಶಿ ತತ್ವವಾಗಿ ಅಳವಡಿಸಿಕೊಂಡಿದೆ. ಫೆಬ್ರವರಿ 5 ರಂದು ನಡೆದ...

ಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ವರ್ಗಾವಣೆ ಪತ್ರ ಹಂಚಿಕೆ: ದೂರು ದಾಖಲು

ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ ಮೋಹನ್ ಅವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ನಿಯೋಜಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ನಕಲಿ...

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...