Homeಸಿನಿಮಾಕ್ರೀಡೆಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಬಿಶನ್‌ ಸಿಂಗ್‌ ಬೇಡಿ ನಿಧನ: ಲೆಜೆಂಡರಿ ಸ್ಪಿನ್ನರ್‌ ಅಗಲಿಕೆಗೆ...

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಬಿಶನ್‌ ಸಿಂಗ್‌ ಬೇಡಿ ನಿಧನ: ಲೆಜೆಂಡರಿ ಸ್ಪಿನ್ನರ್‌ ಅಗಲಿಕೆಗೆ ಬಿಸಿಸಿಐ ಸಂತಾಪ

- Advertisement -
- Advertisement -

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಹಾಗೂ ಲೆಜೆಂಡರಿ ಸ್ಪಿನ್ನರ್‌ ಬಿಶನ್‌ ಸಿಂಗ್‌ ಬೇಡಿ ನಿಧನರಾಗಿದ್ದಾರೆ.

77 ವರ್ಷದ ಬಿಶನ್‌ ಸಿಂಗ್‌ ಬೇಡಿ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇವರು ಪತ್ನಿ ಅಂಜು, ಪುತ್ರ ಅಂಗದ್ ಮತ್ತು ಪುತ್ರಿ ನೇಹಾ ಅವರನ್ನು ಅಗಲಿದ್ದಾರೆ.

 

ಅಮೃತಸರ ಮೂಲದವರಾದ ಇವರು ಭಾರತದ ಮೊದಲ ಏಕದಿನ ಅಂತರಾಷ್ಟ್ರೀಯ ಕ್ರಿಕೆಟ್‌ ಪಂದ್ಯದ  ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 1975ರಲ್ಲಿ ನಡೆದ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಈಸ್ಟ್‌ ಆಫ್ರಿಕಾ ಎದುರು ಅದ್ಭುತ ಬೌಲಿಂಗ್‌ ಮೂಲಕ ಒಡಿಐನಲ್ಲಿ ಭಾರತಕ್ಕೆ ಮೊತ್ತ ಮೊದಲ ಜಯ ತರುವಲ್ಲಿ ನೆರವಾಗಿದ್ದರು.

1977-78ರಲ್ಲಿ ಆಸ್ಟ್ರೇಲಿಯಾದಲ್ಲಿ ಬಿಷನ್‌ ಸಿಂಗ್‌ ಬೇಡಿ ಸಾರಥ್ಯದ ಭಾರತ ತಂಡ ಅದ್ಭುತ ಪ್ರದರ್ಶನ ನೀಡಿ ಕಾಂಗರೂ ಪಡೆಯ ಎದುರು 5 ಪಂದ್ಯಗಳ ಟೆಸ್ಟ್‌ ಕ್ರಿಕೆಟ್‌ ಸರಣಿಯಲ್ಲಿ ಭಾರಿ ಸದ್ದು ಮಾಡಿತ್ತು. ಆ ಸರಣಿಯಲ್ಲಿ ಬಾಬ್ ಸಿಂಪ್ಸನ್ ಸಾರಥ್ಯದ ಆಸ್ಟ್ರೇಲಿಯಾ ತಂಡ 3-2 ಅಂತರದ ಜಯ ದಾಖಲಿಸಿದರೂ, ಬೇಡಿ ಸಾರಥ್ಯದ ಭಾರತ ತಂಡ ನೀಡಿದ ಕೆಚ್ಚೆದೆಯ ಹೋರಾಟವನ್ನು ಈಗಲೂ ಸ್ಮರಿಸಲಾಗುತ್ತದೆ. ಮೆಲ್ಬೋರ್ನ್‌ ಮತ್ತು ಸಿಡ್ನಿಯಲ್ಲಿ ನಡೆದ ಸರಣಿಯ 3ನೇ ಮತ್ತು 4ನೇ ಟೆಸ್ಟ್‌ ಪಂದ್ಯಗಳಲ್ಲಿ ಭಾರತ ತಂಡ ಅವಿಸ್ಮರಣೀಯ ಜಯ ದಾಖಲಿಸಿತ್ತು.

ಕ್ರಿಕೆಟ್‌ನಲ್ಲಿ ಯಶಸ್ಸು ಕಂಡ ಭಾರತೀಯ ಬೌಲರ್‌ಗಳ ಪೈಕಿ ಬಿಷನ್‌ ಸಿಂಗ್‌ ಬೇಡಿ ಕೂಡ ಒಬ್ಬರು. ನಾರ್ತ್‌ಹ್ಯಾಂಪ್ಟನ್‌ಶೈರ್‌ ತಂಡದ ಪರ 1972ರಿಂದ 1977ರವರೆಗೆ ಒಟ್ಟಾರೆ 102 ಪಂದ್ಯಗಳನ್ನು ಆಡಿ ಬರೊಬ್ಬರಿ 434 ವಿಕೆಟ್‌ಗಳನ್ನು ಪಡೆದಿದ್ದಾರೆ.

1990ರಲ್ಲಿ ಭಾರತ ತಂಡಕ್ಕೆ ಮೊತ್ತ ಮೊದಲ ವೃತ್ತಿಪರ ಕೋಚ್‌ ಆಗಿಯೂ ಬಿಷನ್‌ ಸಿಂಗ್‌ ಬೇಡಿ ಆಯ್ಕೆಯಾಗಿದ್ದರು. ತಮ್ಮ ಕೋಚಿಂಗ್‌ ಅವಧಿಯಲ್ಲಿ ಟೀಮ್ ಇಂಡಿಯಾ ಆಟಗಾರರ ಫಿಟ್ನೆಸ್‌ ಕಡೆಗೆ ಹೆಚ್ಚು ಒತ್ತು ನೀಡಿದ್ದರು.

ಬಿಶನ್‌ ಸಿಂಗ್‌ ನಿಧನಕ್ಕೆ ಬಿಸಿಸಿಐ ಸಂತಾಪ ಸೂಚಿಸಿದ್ದು, ಭಾರತದ ಮಾಜಿ ಟೆಸ್ಟ್ ನಾಯಕ ಮತ್ತು ಲೆಜೆಂಡರಿ ಸ್ಪಿನ್ನರ್ ಬಿಶನ್ ಸಿಂಗ್ ಬೇಡಿ ಅವರ ನಿಧನಕ್ಕೆ ಬಿಸಿಸಿಐ ಸಂತಾಪ ವ್ಯಕ್ತಪಡಿಸಿದೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...