Homeಸಿನಿಮಾಕ್ರೀಡೆಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಬಿಶನ್‌ ಸಿಂಗ್‌ ಬೇಡಿ ನಿಧನ: ಲೆಜೆಂಡರಿ ಸ್ಪಿನ್ನರ್‌ ಅಗಲಿಕೆಗೆ...

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಬಿಶನ್‌ ಸಿಂಗ್‌ ಬೇಡಿ ನಿಧನ: ಲೆಜೆಂಡರಿ ಸ್ಪಿನ್ನರ್‌ ಅಗಲಿಕೆಗೆ ಬಿಸಿಸಿಐ ಸಂತಾಪ

- Advertisement -
- Advertisement -

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಹಾಗೂ ಲೆಜೆಂಡರಿ ಸ್ಪಿನ್ನರ್‌ ಬಿಶನ್‌ ಸಿಂಗ್‌ ಬೇಡಿ ನಿಧನರಾಗಿದ್ದಾರೆ.

77 ವರ್ಷದ ಬಿಶನ್‌ ಸಿಂಗ್‌ ಬೇಡಿ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇವರು ಪತ್ನಿ ಅಂಜು, ಪುತ್ರ ಅಂಗದ್ ಮತ್ತು ಪುತ್ರಿ ನೇಹಾ ಅವರನ್ನು ಅಗಲಿದ್ದಾರೆ.

 

ಅಮೃತಸರ ಮೂಲದವರಾದ ಇವರು ಭಾರತದ ಮೊದಲ ಏಕದಿನ ಅಂತರಾಷ್ಟ್ರೀಯ ಕ್ರಿಕೆಟ್‌ ಪಂದ್ಯದ  ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 1975ರಲ್ಲಿ ನಡೆದ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಈಸ್ಟ್‌ ಆಫ್ರಿಕಾ ಎದುರು ಅದ್ಭುತ ಬೌಲಿಂಗ್‌ ಮೂಲಕ ಒಡಿಐನಲ್ಲಿ ಭಾರತಕ್ಕೆ ಮೊತ್ತ ಮೊದಲ ಜಯ ತರುವಲ್ಲಿ ನೆರವಾಗಿದ್ದರು.

1977-78ರಲ್ಲಿ ಆಸ್ಟ್ರೇಲಿಯಾದಲ್ಲಿ ಬಿಷನ್‌ ಸಿಂಗ್‌ ಬೇಡಿ ಸಾರಥ್ಯದ ಭಾರತ ತಂಡ ಅದ್ಭುತ ಪ್ರದರ್ಶನ ನೀಡಿ ಕಾಂಗರೂ ಪಡೆಯ ಎದುರು 5 ಪಂದ್ಯಗಳ ಟೆಸ್ಟ್‌ ಕ್ರಿಕೆಟ್‌ ಸರಣಿಯಲ್ಲಿ ಭಾರಿ ಸದ್ದು ಮಾಡಿತ್ತು. ಆ ಸರಣಿಯಲ್ಲಿ ಬಾಬ್ ಸಿಂಪ್ಸನ್ ಸಾರಥ್ಯದ ಆಸ್ಟ್ರೇಲಿಯಾ ತಂಡ 3-2 ಅಂತರದ ಜಯ ದಾಖಲಿಸಿದರೂ, ಬೇಡಿ ಸಾರಥ್ಯದ ಭಾರತ ತಂಡ ನೀಡಿದ ಕೆಚ್ಚೆದೆಯ ಹೋರಾಟವನ್ನು ಈಗಲೂ ಸ್ಮರಿಸಲಾಗುತ್ತದೆ. ಮೆಲ್ಬೋರ್ನ್‌ ಮತ್ತು ಸಿಡ್ನಿಯಲ್ಲಿ ನಡೆದ ಸರಣಿಯ 3ನೇ ಮತ್ತು 4ನೇ ಟೆಸ್ಟ್‌ ಪಂದ್ಯಗಳಲ್ಲಿ ಭಾರತ ತಂಡ ಅವಿಸ್ಮರಣೀಯ ಜಯ ದಾಖಲಿಸಿತ್ತು.

ಕ್ರಿಕೆಟ್‌ನಲ್ಲಿ ಯಶಸ್ಸು ಕಂಡ ಭಾರತೀಯ ಬೌಲರ್‌ಗಳ ಪೈಕಿ ಬಿಷನ್‌ ಸಿಂಗ್‌ ಬೇಡಿ ಕೂಡ ಒಬ್ಬರು. ನಾರ್ತ್‌ಹ್ಯಾಂಪ್ಟನ್‌ಶೈರ್‌ ತಂಡದ ಪರ 1972ರಿಂದ 1977ರವರೆಗೆ ಒಟ್ಟಾರೆ 102 ಪಂದ್ಯಗಳನ್ನು ಆಡಿ ಬರೊಬ್ಬರಿ 434 ವಿಕೆಟ್‌ಗಳನ್ನು ಪಡೆದಿದ್ದಾರೆ.

1990ರಲ್ಲಿ ಭಾರತ ತಂಡಕ್ಕೆ ಮೊತ್ತ ಮೊದಲ ವೃತ್ತಿಪರ ಕೋಚ್‌ ಆಗಿಯೂ ಬಿಷನ್‌ ಸಿಂಗ್‌ ಬೇಡಿ ಆಯ್ಕೆಯಾಗಿದ್ದರು. ತಮ್ಮ ಕೋಚಿಂಗ್‌ ಅವಧಿಯಲ್ಲಿ ಟೀಮ್ ಇಂಡಿಯಾ ಆಟಗಾರರ ಫಿಟ್ನೆಸ್‌ ಕಡೆಗೆ ಹೆಚ್ಚು ಒತ್ತು ನೀಡಿದ್ದರು.

ಬಿಶನ್‌ ಸಿಂಗ್‌ ನಿಧನಕ್ಕೆ ಬಿಸಿಸಿಐ ಸಂತಾಪ ಸೂಚಿಸಿದ್ದು, ಭಾರತದ ಮಾಜಿ ಟೆಸ್ಟ್ ನಾಯಕ ಮತ್ತು ಲೆಜೆಂಡರಿ ಸ್ಪಿನ್ನರ್ ಬಿಶನ್ ಸಿಂಗ್ ಬೇಡಿ ಅವರ ನಿಧನಕ್ಕೆ ಬಿಸಿಸಿಐ ಸಂತಾಪ ವ್ಯಕ್ತಪಡಿಸಿದೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಚುನಾವಣೆ | ಭವಾನಿಪುರದಲ್ಲಿ ನನ್ನ ನಾಮಪತ್ರ ರದ್ದತಿಗೆ ಪಿತೂರಿ ನಡೆದಿತ್ತು : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. "ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ; ವ್ಯವಸ್ಥೆಯಲ್ಲಿರುವ ದೋಷಗಳ ವಿರುದ್ಧ. ನನ್ನ ಸ್ವಂತ...

ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ. ನೆತನ್ಯಾಹು ಆಡಳಿತದ...

Islamabad Talks | ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್‌ : ಯಾವುದೇ ಒಪ್ಪಂದವಿಲ್ಲದೆ ವಾಪಸ್ ಹೋದ ಜೆಡಿ ವ್ಯಾನ್ಸ್ ನಿಯೋಗ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿರುವ ಅಮೆರಿಕ-ಇರಾನ್‌ ನಡುವಿನ ಮಹತ್ವದ ಶಾಂತಿ ಮಾತುಕತೆ ವಿಫಲವಾದಂತೆ ಗೋಚರಿಸುತ್ತಿದೆ. ಅಮೆರಿಕದ ಪರವಾಗಿ ಮಾತುಕತೆಗೆ ಆಗಮಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗ, ಇರಾನ್‌ ಜೊತೆ ಯಾವುದೇ ಒಪ್ಪಂದ ಸಾಧ್ಯವಾಗದೆ...

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...