Homeಅಂಕಣಗಳುಹಿಂದು-ಮುಸ್ಲಿಂ ರೈತ ಮೈತ್ರಿಯ ಚಹರೆ ಗುಲಾಮ್ ಮಹಮ್ಮದ್ ಜೌಲಾ ಇನ್ನಿಲ್ಲ

ಹಿಂದು-ಮುಸ್ಲಿಂ ರೈತ ಮೈತ್ರಿಯ ಚಹರೆ ಗುಲಾಮ್ ಮಹಮ್ಮದ್ ಜೌಲಾ ಇನ್ನಿಲ್ಲ

- Advertisement -
- Advertisement -

ಭಾರತೀಯ ಕಿಸಾನ್ ಯೂನಿಯನ್‌ನ ಸಂಸ್ಥಾಪಕ ಸದಸ್ಯ ಮತ್ತು ಹಿಂದೂ-ಮುಸ್ಲಿಂ ಏಕತೆಯ ಪ್ರತೀಕವಾಗಿದ್ದ ಗುಲಾಮ್ ಮಹಮ್ಮದ್ ಜೌಲಾ ಇನ್ನಿಲ್ಲವಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.

ಜೌಲಾ ನಿಧನದಿಂದಾಗಿ ಮಹೇಂದ್ರಸಿಂಗ್ ಟಿಕೇತ್ ಸ್ಥಾಪಿಸಿದ್ದ ಭಾರತೀಯ ಕಿಸಾನ್ ಯೂನಿಯನ್ ಕೆಲವೇ ದಿನಗಳ ಅಂತರದಲ್ಲಿ ಎರಡನೆಯ ದೊಡ್ಡ ಹಿನ್ನಡೆ ಎದುರಿಸಿದೆ. ಅವರ ಸ್ಥಾನವನ್ನು ತುಂಬುವುದು ಸದ್ಯಕ್ಕೆ ಅಸಾಧ್ಯ ಎಂಬ ಮಾತುಗಳು ಸವಕಲಾಗಿ ಧ್ವನಿಸಿದರೂ ಸತ್ಯವಚನಗಳು.

ರೈತ ನಾಯಕ ಮಹೇಂದ್ರಸಿಂಗ್ ಟಿಕೇತ್ ಅವರ ಅತಿ ಸಮೀಪವರ್ತಿಯಾಗಿದ್ದ ಜೌಲಾ ನಾಡು ಕಂಡ ಅಪ್ರತಿಮ ರೈತ ಹೋರಾಟಗಾರ ಹಾಗೂ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ ಸಮಕಾಲೀನರೂ ಆಗಿದ್ದರು.

ಪಶ್ಚಿಮೀ ಉತ್ತರಪ್ರದೇಶದ ಮುಝಫರ್‌ನಗರ ಜಿಲ್ಲೆಯ ಜೌಲಾ ಗ್ರಾಮದ ನಿವಾಸಿ. ಭಾರತೀಯ ಕಿಸಾನ್ ಯೂನಿಯನ್ ಚಿಂತನ ಚಾವಡಿಯ ಸಕ್ರಿಯ ಸದಸ್ಯರು. ಟಿಕೇತ್ ಹೂಡಿದ ಹಲವು ರೈತ ಆಂದೋಲನಗಳಲ್ಲಿ ಜೌಲಾ ವಹಿಸಿದ್ದ ಪಾತ್ರ ಮಹತ್ತರ.

ಮಹೇಂದ್ರಸಿಂಗ್ ಟಿಕೇತ್

ರೈತ ಆಂದೋಲನಗಳ ವೇದಿಕೆಯಲ್ಲಿ ಹರಹರ ಮಹಾದೇವ್- ಅಲ್ಲಾಹ್ ಹೂ ಅಕ್ಬರ್ ಘೋಷಣೆ ಕೂಗಿಸಿದ ಸಮರಸ ಭಾವದ ನಾಯಕ. 2011ರಲ್ಲಿ ಮಹೇಂದ್ರಸಿಂಗ್ ಟಿಕೇತ್ ನಿಧನದ ನಂತರವೂ ಭಾರತೀಯ ಕಿಸಾನ್ ಯೂನಿಯನ್ ಜತೆ ಅವರ ಸಂಬಂಧ ಮುಂದುವರೆದಿತ್ತು. ಆದರೆ 2013ರಲ್ಲಿ ಜರುಗಿದ ಮುಝಫರ್‌ನಗರ ಕೋಮುಗಲಭೆಗಳಿಂದ ಅವರ ದಾರಿ ಬೇರೆಯಾಯಿತು. ಮುಸಲ್ಮಾನರೇ ಬಹುಸಂಖ್ಯೆಯಲ್ಲಿದ್ದ ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಂಘಟನೆ ಕಟ್ಟಿದರು.

ಮೋದಿಯವರು ಜಾರಿ ಮಾಡಿದ್ದ ಮೂರು ಕೃಷಿ ಕಾನೂನುಗಳ ವಿರುದ್ಧ ಸಿಡಿದ ರೈತ ಹೋರಾಟ ಜೌಲಾ ಮತ್ತು ಜಾಟ ರೈತರನ್ನು ಪುನಃ ಒಂದು ವೇದಿಕೆಗೆ ತಂದಿತ್ತು. ಭಾರತೀಯ ಕಿಸಾನ್ ಯೂನಿಯನ್‌ನ ಹಾಲಿ ಅಧ್ಯಕ್ಷ ಚೌಧರಿ ನರೇಶ್ ಟಿಕೇತ್ ಮತ್ತು ರಾಷ್ಟ್ರೀಯ ಲೋಕದಳದ ಉಪಾಧ್ಯಕ್ಷ ಜಯಂತ್ ಚೌಧರಿ ಅವರನ್ನು ಎಡಬಲಕ್ಕೆ ನಿಲ್ಲಿಸಿಕೊಂಡು ಅವರ ಹೆಗಲ ಮೇಲೆ ಕೈ ಹಾಕಿ ಜಾತಿ ಧರ್ಮಗಳಿಂದ ಮೇಲೆದ್ದು ತನ್ನ ಹಕ್ಕುಗಳಿಗಾಗಿ ಹೋರಾಟ ಮಾಡಬೇಕೆಂದು ರೈತರಿಗೆ ಶಪಥ ಬೋಧನೆ ಮಾಡಿದ್ದ ಜೀವ.

ಒಕ್ಕಲುತನ ಮತ್ತು ಹೈನುಗಾರಿಕೆಯನ್ನು ನೆಚ್ಚಿರುವ ಜಾಟ ಸಮುದಾಯ ಉತ್ತರ ಭಾರತಕ್ಕೆ ಸೀಮಿತ. ಹರಿಯಾಣ, ಪಂಜಾಬ್, ಉತ್ತರಪ್ರದೇಶ ಹಾಗೂ ರಾಜಸ್ತಾನದಲ್ಲಿ ಜಾಟ ಜನಾಂಗ ಪಸರಿಸಿದೆ. ಪಕ್ಕಾ ಪಿತೃಪ್ರಧಾನ ಸಮಾಜ. ಊಳಿಗಮಾನ್ಯ ಗುಣ ಇನ್ನೂ ಅಳಿದಿಲ್ಲ. ಹಸಿರು ಕ್ರಾಂತಿಯ ಕಸುವಿನಿಂದಾಗಿ ಧನಾಢ್ಯ ಮತ್ತು ಬಲಾಢ್ಯ. ಚೌಧರಿ ಚರಣಸಿಂಗರು ಜಾಟ ಸೀಮೆಯ ನಿರ್ವಿವಾದಿತ ನಾಯಕರಾಗಿದ್ದರು. ಮುಸಲ್ಮಾನರೂ ಅವರ ನಾಯಕತ್ವ ಒಪ್ಪಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚೌಧರಿ ಚರಣಸಿಂಗ್ ಅವರು ಮಧ್ಯಮವರ್ಗದ ರೈತಾಪಿಗಳನ್ನು ಸಂಘಟಿಸಿ ಬೆಳೆಸಿದ್ದ MAJGAR (ಮುಸ್ಲಿಮ್-ಆಹಿರ್ (ಯಾದವ್)- ಜಾಟ್- ಗುಜ್ಜರ್-ರಜಪೂತ) ಎಂಬ ಸಾಮಾಜಿಕ ಮೈತ್ರಿಕೂಟ ಚೆದುರಿಹೋಗಿತ್ತು. ಒಮ್ಮೆ ಬಿಜೆಪಿ, ಮತ್ತೊಮ್ಮೆ ಸಮಾಜವಾದಿ ಪಾರ್ಟಿ, ಕಾಂಗ್ರೆಸ್ಸಿನ ಜೊತೆಗೆ ಚರಣಸಿಂಗ್ ಮಗ ಅಜಿತ್ ಸಿಂಗ್ ಮಾಡಿಕೊಂಡ ಅವಕಾಶವಾದಿ ಚುನಾವಣಾ ಮೈತ್ರಿಗಳು MAJGAR ಮೈತ್ರಿಕೂಟದ ಅಡಿಗಲ್ಲುಗಳನ್ನು ಕದಲಿಸಿಬಿಟ್ಟಿತ್ತು. 2013ರ ಕೋಮು ಗಲಭೆಗಳ ಹಾದಿ ಸಲೀಸಾಗಿತ್ತು. 2009ರಲ್ಲಿ ಅಜಿತ್ ಸಿಂಗ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಐದು ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದರು. ಆದರೆ ಮುಸಲ್ಮಾನರು ಅವರಿಂದ ದೂರವಾಗಿದ್ದರು. ಚರಣಸಿಂಗ್ ನಿಧನದ ನಂತರ ಮೊದಲ ಬಾರಿಗೆ ಅವರ ಸೀಮೆಯ ಜಾಟರು ಮತ್ತು ಮುಸಲ್ಮಾನರು ಪರಸ್ಪರ ವಿರುದ್ಧ ದಿಕ್ಕುಗಳಲ್ಲಿ ಮತ ಚಲಾಯಿಸಿದ್ದರು.

1988ರ ಅಕ್ಟೋಬರ್ 25. ರಾಜೀವಗಾಂಧೀ ಅಂದಿನ ಪ್ರಧಾನಿ. ಬೊಫೋರ್ಸ್ ಹಗರಣ ಭುಗಿಲೆದ್ದು ವಿ.ಪಿ.ಸಿಂಗ್ ಅವರು ಕೇಂದ್ರ ಮಂತ್ರಿಮಂಡಲದಿಂದ ಹೊರಬಿದ್ದಿದ್ದರು. ಸರ್ಕಾರದ ಹೆಸರು ಕೆಟ್ಟಿತ್ತು. 35 ಬೇಡಿಕೆಗಳನ್ನು ಮುಂದಿಟ್ಟು ಲಕ್ಷಾಂತರ ರೈತರು ಟಿಕೇತ್ ನೇತೃತ್ವದಲ್ಲಿ ಸಂಸದ್ ಭವನಕ್ಕೆ ಕೂಗಳತೆ ದೂರದ ಬೋಟ್ ಕ್ಲಬ್‌ನಲ್ಲಿ ಮುತ್ತಿಗೆ ಹಾಕಿದ್ದರು.

ಚೌಧರಿ ಚರಣಸಿಂಗ್

ರೈತರ ಆಂದೋಲನ ದೆಹಲಿಯ ಸಾರ್ವಜನಿಕರ ಸಹಾನುಭೂತಿ ಗಳಿಸಿತ್ತು. ಏಳನೆಯ ದಿನ ಸರ್ಕಾರ ರೈತರ ಬೇಡಿಕೆಗಳನ್ನು ಒಪ್ಪಿತ್ತು. ರೈತರು ಬೋಟ್ ಕ್ಲಬ್ ಖಾಲಿ ಮಾಡಿದರು. ಉತ್ತರಪ್ರದೇಶದ ಮುಖ್ಯಮಂತ್ರಿ ಎನ್.ಡಿ.ತಿವಾರಿ ರೈತರ ಬೇಡಿಕೆಗಳ ಈಡೇರಿಕೆ ಆದೇಶಕ್ಕೆ ಸಹಿ ಹಾಕಿದರು.

ಭಾರತೀಯ ಕಿಸಾನ್ ಯೂನಿಯನ್ ಮತ್ತು ಮಹೇಂದ್ರಸಿಂಗ್ ಟಿಕೇತ್ ಪಶ್ಚಿಮ ಯುಪಿಯಲ್ಲಿ ಚರಣಸಿಂಗ್ ಮತ್ತು ಅವರ ಪಕ್ಷ ಲೋಕದಳ ತೆರವು ಮಾಡಿದ್ದ ಸ್ಥಾನವನ್ನು ತುಂಬಿದ್ದರು. ಲಾಗಾಯ್ತಿನಿಂದ ಅವರ ಜೊತೆಗಿದ್ದವರು ಗುಲಾಮ್ ಮಹಮ್ಮದ್ ಜೌಲಾ.

ಮಹೇಂದ್ರಸಿಂಗ್ ಟಿಕೇತ್ ಅವರ ಕಾಲದಲ್ಲೇ ಜಾಟ್-ಮುಸ್ಲಿಮ್ ಏಕತೆಯ ಬಹುದೊಡ್ಡ ಚಹರೆಯಾಗಿದ್ದವರು. ಇತ್ತೀಚಿನ ರೈತ ಚಳವಳಿಯ ಕಾಲದಲ್ಲಿ ಜಾಟ್-ಮುಸ್ಲಿಮ್ ರೈತರ ಏಕತೆಯ ವಿಶೇಷ ಮಹತ್ವವನ್ನು ಗೆರೆ ಎಳೆದು ಪ್ರತಿಪಾದಿಸಿದ್ದರು.

ಮಹೇಂದ್ರಸಿಂಗ್ ಟಿಕೇತ್ ಅವರ ವೇದಿಕೆಗಳಲ್ಲಿ ಸಂಚಾಲನೆಯ ಪಾರುಪತ್ತೆ ಸಂಪೂರ್ಣವಾಗಿ ಜೌಲಾ ಅವರದೇ ಆಗಿತ್ತು. ಸಾವಿರಾರು ರ್‍ಯಾಲಿಗಳ ವೇದಿಕೆಗಳು ಜೌಲಾ ಅವರ ಸಂಚಾಲನಾ ಕೌಶಲ್ಯಕ್ಕೆ ಸಾಕ್ಷಿಯಾದವು.

2013ರಲ್ಲಿ ಹಠಾತ್ತನೆ ಸಿಡಿದ ಕೋಮು ಗಲಭೆಗಳು ಹಿಂದು-ಮುಸ್ಲಿಂ ಮತಗಳ ಧ್ರುವೀಕರಣಕ್ಕೆ
ಕಾರಣವಾದವು. ಮಾಯಾವತಿ ಅವರೊಂದಿಗೆ ಬಂಡೆಯಂತೆ ನಿಂತಿದ್ದ ದಲಿತ ಮತಗಳನ್ನು ಕೂಡ ಚೆದುರಿಸಿದ್ದವು. ಸಾವಿರಾರು ವರ್ಷಗಳ ಇತಿಹಾಸ ಉಳ್ಳ ಪ್ರಬಲ ಖಾಪ್ ಪಂಚಾಯಿತಿಗಳು ಖುಲ್ಲಂಖುಲ್ಲಾ ಮೋದಿ ಮಂತ್ರ ಪಠಿಸಿದ್ದವು. ಆರುನೂರು ಕಿ.ಮೀ. ಉದ್ದಗಲಕ್ಕೆ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ’ಜನಿವಾರ ಕ್ರಾಂತಿ ಸಂದೇಶ’ದ ಬೃಹತ್ತಾದ ಕೇಸರಿ ಭಿತ್ತಿಪತ್ರಗಳು ರಾರಾಜಿಸಿದ್ದವು. ಗಂಗಾ ಬಯಲಿನ ಫಲವತ್ತು ನೆಲದಲ್ಲಿ ಕೋಮುದ್ವೇಷದ ಹಾಲಾಹಲದ ಹೊಲಗಳು ಹುಲುಸಾದವು.

ನರೇಶ್ ಟಿಕೇತ್

2021ರ ಜನವರಿ 28ರಂದು ಮುಝಫರ್‌ನಗರದಲ್ಲಿ ಜರುಗಿದ ಮೊದಲನೆಯ ಕಿಸಾನ್ ಮಹಾ ಪಂಚಾಯತ್ ಐತಿಹಾಸಿಕ ಎನಿಸಿತು. ಮುಝಫರ್‌ನಗರ ಕೋಮು ಗಲಭೆಗಳ ನಂತರ ಜಾಟರು ಮತ್ತು ಮುಸಲ್ಮಾನರು ಮೊದಲ ಸಲ ಒಂದೇ ವೇದಿಕೆಯ ಮೇಲೆ ಒಟ್ಟು ಸೇರಿದ್ದರು. ಕನಿಷ್ಠ ಪಕ್ಷ ಒಂದು ಲಕ್ಷ ರೈತರು ನೆರೆದಿದ್ದ ಈ ಸಭೆಯಲ್ಲಿ 30 ಸಾವಿರಕ್ಕೂ ಹೆಚ್ಚು ಮಂದಿ ಮುಸ್ಲಿಮ್ ರೈತರು ಪಾಲ್ಗೊಂಡಿದ್ದರು. ಈ ಸೀಮೆಯಲ್ಲಿ ಹುಟ್ಟಿ ಹಾಕಲಾಗಿದ್ದ ಕೋಮುವಾದದ ಸಂಚನ್ನು ಮುರಿಯುವ ಪಣ ತೊಡಲಾಗಿತ್ತು. ಖುದ್ದು ನರೇಶ್ ಟಿಕೇತ್ ಈ ಸಮಾವೇಶದಲ್ಲಿ ಕ್ಷಮೆ ಕೋರಿದರು. ಚರಣ್ ಸಿಂಗ್ ಅವರ ಮಗ ಅಜಿತ್ ಸಿಂಗ್ ಅವರ ರಾಷ್ಟ್ರೀಯ ಲೋಕದಳದ ವಿರುದ್ಧ 2019ರ ಲೋಕಸಭಾ ಚುನಾವಣೆಗಳಲ್ಲಿ ಕೆಲಸ ಮಾಡಿದ್ದಕ್ಕೆ ಮತ್ತು 2013ರ ಕೋಮುಗಲಭೆಗಳಲ್ಲಿ ಮುಸಲ್ಮಾನ ಸೋದರರ ಕೈಬಿಟ್ಟಿದ್ದಕ್ಕೆ ತಮ್ಮನ್ನು ಕ್ಷಮಿಸಬೇಕೆಂದು ವಿನಂತಿಸಿದರು. ನಾಯಕರು ರೈತರಲ್ಲಿ ಹಿಂದು-ಮುಸ್ಲಿಮ್ ಏಕತೆಯನ್ನು ಸಾರಿದರು. ಮಹೇಂದ್ರ ಸಿಂಗ್ ಟಿಕೇತ್ ಅವರ ಬಲಗೈಯಂತೆ ಕೆಲಸ ಮಾಡಿದ್ದ ರೈತ ನಾಯಕ ಗುಲಾಮ್ ಮಹಮ್ಮದ್ ಜೋಲಾಗೆ ಈಗ 85ರ ವಯಸ್ಸು. ಅವರೂ ಈ ಮಹಾಪಂಚಾಯತಿನಲ್ಲಿ ಭಾಗವಹಿಸಿ ವೇದಿಕೆ ಮೇಲಿದ್ದರು. 2013ರ ಕೋಮು ಗಲಭೆಗಳ ನಂತರ ಅವರು ಭಾರತೀಯ ಕಿಸಾನ್ ಯೂನಿಯನ್‌ನಿಂದ ದೂರವಾಗಿ ಭಾರತೀಯ ಕಿಸಾನ್ ಮಜ್ದೂರ್ ಮಂಚ್ ಕಟ್ಟಿಕೊಂಡಿದ್ದರು. ನರೇಶ್ ಕ್ಷಮೆ ಕೋರಿದ
ನಂತರ ಅಜಿತ್ ಸಿಂಗ್ ಅವರ ಮಗ ಜಯಂತ್ ಚೌಧರಿ ಮಹಮ್ಮದ್ ಜೌಲಾ ಅವರ ಕಾಲುಮುಟ್ಟಿ ನಮಸ್ಕರಿಸಿದರು. 60 ಮಂದಿಯನ್ನು ಬಲಿತೆಗೆದುಕೊಂಡು 65 ಸಾವಿರ ಮಂದಿ ಮುಸಲ್ಮಾನರನ್ನು ನಿರಾಶ್ರಿತರನ್ನಾಗಿ ಮಾಡಿದ ಕೋಮುಗಲಭೆಗಳ ಗಾಯಗಳು ಇನ್ನು ಮಾಯುತ್ತವೆ ಎಂಬ ವಿಶ್ವಾಸವನ್ನು ಜೌಲಾ ವ್ಯಕ್ತಪಡಿಸಿದರು. ಮುಸಲ್ಮಾನರಿಗೆ ಘನತೆಯ ಪ್ರಾತಿನಿಧ್ಯ ನೀಡಿದರೆ ತಮ್ಮ ಸಂಘಟನೆಯನ್ನು ಭಾರತೀಯ ಕಿಸಾನ್ ಯೂನಿಯನ್‌ನಲ್ಲಿ ವಿಲೀನಗೊಳಿಸಲೂ ಸಿದ್ಧವೆಂದು ಸಾರಿದ್ದರು.

ತಮ್ಮ ಮಾತಿನ ಸರದಿ ಬಂದಾಗ ಮುಲಾಜಿಲ್ಲದೆ ನೆರೆದಿದ್ದವರ ಮುಖಕ್ಕೆ ಹೊಡೆದಂತೆ ಜೌಲಾ ಹೇಳಿದ್ದರು- ’ಈವರೆಗೆ ನೀವು ಎರಡು ಬಹುದೊಡ್ಡ ತಪ್ಪುಗಳ ಮಾಡಿದ್ದೀರಿ. ಒಂದನೆಯದು ನೀವು ಅಜಿತ್ ಸಿಂಗ್ ಅವರನ್ನು ಸೋಲಿಸಿದಿರಿ. ಎರಡನೆಯದಾಗಿ 2013ರ ಕೋಮುಗಲಭೆಗಳಲ್ಲಿ ಮುಸಲ್ಮಾನರನ್ನು ಕೊಂದಿರಿ’. ಜೋಲಾ ಮಾತನ್ನು ಸಭೆ ತಿರಸ್ಕರಿಸಲಿಲ್ಲ, ಅಣಕಿಸಲಿಲ್ಲ. ಬದಲಾಗಿ ಆತ್ಮನಿರೀಕ್ಷೆ ಮಾಡಿಕೊಳ್ಳುತ್ತಿದೆ ಎಂಬಂತೆ ಸದ್ದಿಲ್ಲದೆ ಆಲಿಸಿತು.

2013ರಲ್ಲಿ ಹುಟ್ಟಿಹಾಕಲಾಗಿದ್ದ ಸಾಮಾಜಿಕ ಬಿಗುವು ಇದೀಗ ಸಡಿಲಾಗತೊಡಗಿದೆ. ನಾವು ಅವರನ್ನು ಕ್ಷಮಿಸಿದ್ದೇವೆ. ರಾಕೇಶ್ ಭಾವುಕರಾಗಿ ಕಣ್ಣೀರು ಹಾಕಿದ ನಂತರ ಮೇಲ್ವರ್ಗದ ಮುಸಲ್ಮಾನರು ಮಾತ್ರವೇ ಅಲ್ಲ, ಕೆಳಸ್ತರದ ಮುಸ್ಲಿಮರು ಕೂಡ ತಾವು ಮೊದಲು ರೈತರು, ಆನಂತರವೇ ಮುಸ್ಲಿಮರು ಎಂಬ ಭಾವನೆಯನ್ನು ವ್ಯಕ್ತಪಡಿಸಿದ್ದಾರೆಂದು ಜೌಲಾ ಘೋಷಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...