Homeಸಿನಿಮಾಕ್ರೀಡೆಶೇನ್ ವಾರ್ನ್: ಮೂರು ಹೆಜ್ಜೆ ಗುರುತುಗಳು ನೂರಾರು ಕವಲು ದಾರಿಗಳು ಸಾವಿರದೊಂದು ರಹದಾರಿಗಳು!

ಶೇನ್ ವಾರ್ನ್: ಮೂರು ಹೆಜ್ಜೆ ಗುರುತುಗಳು ನೂರಾರು ಕವಲು ದಾರಿಗಳು ಸಾವಿರದೊಂದು ರಹದಾರಿಗಳು!

- Advertisement -
- Advertisement -

ಅದು ಸೀದಾಸಾದಾ ಮೂರೇಮೂರು ಹೆಜ್ಜೆ.. ತೋಳ್ಬಲದ ಜೊತೆಗೆ ಮಣಿಕಟ್ಟು ಮೂಲಕ ಕೈಬೆರಳಿನಲ್ಲಿ ಚೆಂಡನ್ನು ತಿರುಗಿಸುವ ಜಾದುಗಾರ! ಬುಗರಿಯಂತೆ ಗಾಳಿಯಲ್ಲಿ ತೇಲಿ ಬರುವ ಎಸೆತ. ಬ್ಯಾಟ್ಸ್‌ಮೆನ್‌ನನ್ನು ಒಂದುಕ್ಷಣ ತಬ್ಬಿಬ್ಬುಗೊಳಿಸುವ ಮಾಂತ್ರಿಕ!

ಕ್ರಿಕೆಟ್ ಜಗತ್ತಿನಲ್ಲಿ ಹತ್ತಾರು ಸ್ಪಿನ್ ಮಾಂತ್ರಿಕರು ಬಂದು ಹೋಗಿದ್ದಾರೆ. ಆದರೆ, ಶೇನ್ ವಾರ್ನ್ ಎಂಬ ಆ ಒಂದು ಹೆಸರು ಮಾತ್ರ ಎಂದೂ ಅಚ್ಚಳಿಯದ ಅಚ್ಚರಿಯೇ ಸರಿ. ಪುಟ್ಟಪುಟ್ಟ ಮೂರು ಹೆಜ್ಜೆಗಳನ್ನಿಟ್ಟು ಬಲಗೈನ ಮೂರು ಬೆರಳನ್ನು ಉಪಯೋಗಿಸಿ ಲೆಗ್‌ಸ್ಪಿನ್ ಮಾಡುವ ಮೂಲಕ ವಿಕೆಟ್‌ಅನ್ನು ಯ:ಕಶ್ಚಿತ್ ಮ್ಯಾಜಿಕ್ ರೀತಿಯಲ್ಲಿ ಉಡಾಯಿಸುತ್ತಿದ್ದ ಪರಿಗೆ ಇಡೀ ಜಗತ್ತೇ ತಲೆದೂಗಿತ್ತು.

ತನ್ನ ಪ್ರತಿಭೆ, ಸಾಮರ್ಥ್ಯದ ಮೇಲೆ ಅತಿಯಾದ ಆತ್ಮವಿಶ್ವಾಸವನ್ನು ಹೊಂದಿರುವ ಹುಂಬ ಮನುಷ್ಯ ಎಷ್ಟೆಲ್ಲಾ ಸಾಧನೆಗಳನ್ನು ಮಾಡಬಹುದು, ದಾಖಲೆಗಳ ಶಿಖರದ ಮೂಲಕ ಮುಂದಿನ ಪೀಳಿಗೆಗೂ ತಾನು ಹೇಗೆ ಸವಾಲು ಎಸೆಯಬಹುದು ಎಂಬುದಕ್ಕೆ ಉದಾಹರಣೆಯಂತೆ ಬದುಕಿದ್ದ ಸಾಧಕ ವಾರ್ನ್. ಮುಂದುವರಿದು ಹೇಳಬೇಕೆಂದರೆ ಆತ ಬ್ಯಾಟ್ಸ್‌ಮೆನ್‌ನ ಮನಸ್ಥಿತಿಯನ್ನು ಅರಿತುಕೊಳ್ಳುವ ಸಾಮರ್ಥ್ಯ ಹೊಂದಿದ್ದ ಮನಃಶಾಸ್ತ್ರಜ್ಞ. ಶಸ್ತ್ರಚಿಕಿತ್ಸೆ ಮಾಡುವ ಡಾಕ್ಟರ್‌ನಂತೆ ಏಕಾಗ್ರತೆಯಿಂದ ತನ್ನ ಬೌಲಿಂಗ್ ಲಯ ಮತ್ತು ನಿಖರತೆಯನ್ನು ಕಾಯ್ಡುಕೊಳ್ಳುವ ಸ್ಪಿನ್ ಡಾಕ್ಟರ್ ಆತ!

ಶೋಕಿ, ದುಶ್ಚಟಗಳ ದಾಸ, ವಿವಾದಗಳು, ವಾಕ್ಸಮರಗಳು ಆತನ ಯಶಸ್ಸಿನ ಸುತ್ತ
ಅಂಟಿಕೊಂಡಿರುವ ಕಪ್ಪುಚುಕ್ಕೆಗಳೇನೋ ಹೌದು. ಆದರೂ, ಆತನ ಸಾಧನೆಯ ಮುಂದೆ ಆ ತಪ್ಪುಗಳೆಲ್ಲವೂ ಮರೆಯಾಗುತ್ತಿದ್ದವು. ಇಡೀ ಕ್ರಿಕೆಟ್ ಜಗತ್ತು ಆತನ ಯಶಸ್ಸನ್ನು ಪಕ್ಕಕ್ಕಿಟ್ಟು ಕರೆಯುತ್ತಿದ್ದದ್ದು ಕ್ರಿಕೆಟ್‌ನ ಬ್ಯಾಡ್ ಬಾಯ್ ಎಂದು.

ಆತನ ಬೌಲಿಂಗ್ ಬತ್ತಳಿಕೆಯಲ್ಲಿದ್ದ ಅಸ್ತ್ರಗಳೇ ವಿಭಿನ್ನ. ಅದನ್ನು ಅರ್ಥಮಾಡಿಕೊಳ್ಳುವುದು ಸಹ ಅಷ್ಟೇ ಕಷ್ಟ. ಎದುರಾಳಿ ಬ್ಯಾಟ್ಸ್‌ಮೆನ್‌ಗಳ ಆತ್ಮವಿಶ್ವಾಸವನ್ನು ಕುಗ್ಗಿಸುವಂತಹ ಸಾಮರ್ಥ್ಯ
ಆತನ ಬೌಲಿಂಗ್‌ನಲ್ಲಿತ್ತು. ಅದಕ್ಕಾಗಿ ಏನು ಬೇಕಾದ್ರೂ ಮಾಡುವ ಕಲೆಯೂ ಚೆನ್ನಾಗಿಯೇ ಗೊತ್ತಿತ್ತು. ಹಾಗಾಗಿಯೇ ಶೇನ್ ವಾರ್ನ್ ಜಂಟಲ್‌ಮ್ಯಾನ್ ಆಟದ ಜಂಟಲ್‌ಮ್ಯಾನ್ ಆಟಗಾರನಲ್ಲದಿದ್ದರೂ, ಆತನನ್ನು ವಿಶ್ವದ ಸರ್ವಶ್ರೇಷ್ಠ ಸ್ಪಿನ್ನರ್ ಅಂತ ಕರೆಯಲಾಗುತ್ತದೆ. ವಿಶ್ವದ ಶ್ರೇಷ್ಠ ಬ್ಯಾಟ್ಸ್‌ಮೆನ್‌ಗಳನ್ನು ದಿಗ್ಭ್ರಮೆಗೊಳಿಸಿದ್ದ ಮಾಂತ್ರಿಕ ಬೌಲರ್ ಆತ.

ಆತನ ಸ್ವಭಾವ, ವ್ಯಕ್ತಿತ್ವಗಳನ್ನು ಬದಿಗಿಟ್ಟು ಕ್ರಿಕೆಟ್ ಮೈದಾನದಲ್ಲಿ ಆತ ಮಾಡಿರುವ ಕರಾಮತ್ತಿನಿಂದ ಯುವಪೀಳಿಗೆಗೆ ಸ್ಫೂರ್ತಿಯ ಚಿಲುಮೆ ಎಂಬುದರಲ್ಲಿ ಎರಡು ಮಾತಿಲ್ಲ. ಆತನ ಬೌಲಿಂಗ್ ಶೈಲಿಯನ್ನು ಅನುಕರಣೆ ಮಾಡಿಕೊಂಡವರು ಅನೇಕರಿದ್ದಾರೆ. ಈ ಸಾಲಿನಲ್ಲಿ ಶೇನ್ ವಾರ್ನ್‌ನನ್ನು ಬಹುವಾಗಿ ಕಾಡಿದ್ದ ಭಾರತದ ಸಚಿನ್ ತೆಂಡೂಲ್ಕರ್ ಸಹ ಇದ್ದಾರೆ. ಈ ಎಲ್ಲವನ್ನೂ ಮೀರಿ ಶೇನ್ ವಾರ್ನ್‌ಗೆ ಯುವ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಗುಣಗಳಿದ್ದವು. ಹಾಗಾಗಿಯೇ ಆತ ವಿಶ್ವ ಕ್ರಿಕೆಟ್‌ನ ಎವರ್‌ಗ್ರೀನ್ ಹೀರೋ ಆಗಿಬಿಟ್ಟ!

ಇದನ್ನೂ ಓದಿ: ಉದ್ಯಮವಾಗಿ ರೂಪುಗೊಳ್ಳುತ್ತಿರುವ ಕ್ರಿಕೆಟ್ ಮೈದಾನಗಳು

ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎನಿಸಿಕೊಂಡ ಐಪಿಎಲ್‌ನಲ್ಲಿ ಯುವ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಉತ್ತಮ ವೇದಿಕೆ ನೀಡುವ ಮೂಲಕ ಭವಿಷ್ಯವನ್ನು ಕಟ್ಟಿಕೊಟ್ಟದ್ದು ಇದೇ ವಾರ್ನ್. ಮೊದಲ ಋತುವಿನಲ್ಲೇ ರಾಜಸ್ತಾನ ರಾಯಲ್ಸ್ ತಂಡದ ನಾಯಕ ಮತ್ತು ಕೋಚ್ ಆಗಿ ಕಣ ಪ್ರವೇಶಿಸಿದ್ದ ವಾರ್ನ್ ಅಂದು ತಮ್ಮ ತಂಡದಲ್ಲಿ ರವೀಂದ್ರ ಜಡೇಜಾ ಸೇರಿದಂತೆ ಅನೇಕ ಯುವಕರಿಗೆ ಅವಕಾಶ ನೀಡಿದ್ದರು. ತಮ್ಮ ಅನುಭವದ ಮೂಲಕ ಮಾರ್ಗದರ್ಶನವನ್ನೂ ಧಾರೆ ಎರೆದಿದ್ದರು. ಪರಿಣಾಮ ಮೊದಲ ಆವೃತ್ತಿಯಲ್ಲೇ ರಾಜಸ್ಥಾನ ಚಾಂಪಿಯನ್ ಪಟ್ಟ ಧರಿಸಿತು, ಭಾರತದ ಆಲ್‌ರೌಂಡರ್ ಜಡೇಜಾ ಏರಿರುವ ಉತ್ತುಂಗ ಎಲ್ಲರಿಗೂ ತಿಳಿದೇ ಇದೆ.

ಆತ ಚೆಂಡನ್ನು ಕೈ ಬೆರಳಿನಲ್ಲೇ ಆಡಿಸುವ ಮೋಡಿಗಾರ. ಏರಿಳಿತಗಳ ನಡುವೆಯೇ ಯಶಸ್ಸಿನ ಉತ್ತುಂಗಕ್ಕೇರಿದ್ದ ಅತ್ಯದ್ಭುತ ಬೌಲರ್. ಕವಲು ದಾರಿಯ ಕಲ್ಲು ಮುಳ್ಳಿನ ಹಾದಿಯಲ್ಲಿ ನಡೆದು ಬಂದ ಚಾಣಕ್ಯ. ಮೂರು ಹೆಜ್ಜೆಗಳನ್ನು ಹಾಕಿ 22 ಯಾರ್ಡ್‌ನ ಪಿಚ್‌ನಲ್ಲಿ ಆತ ಮಾಡಿರುವ ಮೋಡಿಯನ್ನು ಕ್ರಿಕೆಟ್ ಜಗತ್ತು ಎಂದೆಂದೂ ಮರೆಯಲು ಸಾಧ್ಯವಿಲ್ಲ.

ಕವಲುದಾರಿಯನ್ನು ರಹದಾರಿಯನ್ನಾಗಿಸಿಕೊಂಡು ಪ್ರತಿ ವಿಕೆಟ್‌ಅನ್ನೂ ಒಂದೊಂದು ಮೈಲುಗಲ್ಲಾಗಿಸಿಕೊಂಡಿದ್ದ. ಒಟ್ಟಾರೆ ಕ್ರಿಕೆಟ್ ವೃತ್ತಿಜೀವನದಲ್ಲಿ 1001 ಅಂತಾರಾಷ್ಟ್ರೀಯ ವಿಕೆಟ್‌ಗಳನ್ನು ಉರುಳಿಸಿದ. ಟೆಸ್ಟ್ ಕ್ರಿಕೆಟ್‌ನಲ್ಲಿ 700 ವಿಕೆಟ್‌ಗಳಿಸಿದ ಮೊದಲ ಬೌಲರ್ ಎಂಬ ಶ್ರೇಯಕ್ಕೂ ಪಾತ್ರನಾದ. ಆದರೆ, ತನ್ನ ವಿಕೆಟ್ ಗಳಿಕೆ ಸಾವಿರದೊಂದು ತಲುಪುವಷ್ಟರಲ್ಲಿ ಕ್ರಿಕೆಟ್ ಸಾಕು ಎಂದು ಆತನಿಗೆ ಅನ್ನಿಸಿಬಿಟ್ಟಿತ್ತು. ಅದಕ್ಕೊಂದು ಸಲಾಂ ಹೊಡೆದು ತನ್ನ ಎರಡನೇ ಇನಿಂಗ್ಸ್‌ನ ಬದುಕನ್ನು ಚೆನ್ನಾಗಿಯೇ ಎಂಜಾಯ್ ಮಾಡುತ್ತಿದ್ದ.

ಮೈದಾನದಲ್ಲಿ ವಿಕೆಟ್ ಪಡೆದ ಹಾಗೇ ವಿದಾಯದ ನಂತರ ಒಂದೊಂದು ದುಶ್ಚಟಗಳನ್ನು ಹವ್ಯಾಸವನ್ನಾಗಿಸಿಕೊಂಡ. ಆರೋಗ್ಯದ ಕಡೆ ಗಮನ ಹರಿಸಲಿಲ್ಲ. ಅಷ್ಟರಲ್ಲೇ ವಿಧಿಯ ಆಟಕ್ಕೆ ಈ ಲೋಕವನ್ನೇ ಬಿಟ್ಟು ಹೋದ ಈ ಮಹಾನ್ ಕ್ರಿಕೆಟಿಗ.

ಹೌದು, ಶೇನ್ ವಾರ್ನ್, ಮೂರು ಹೆಜ್ಜೆ ಗುರುತುಗಳು.. ನೂರಾರು ಕವಲು ದಾರಿಗಳು… ಸಾವಿರದೊಂದು ರಹದಾರಿಗಳು! ಇನ್ನು ನೆನಪು ಮಾತ್ರ.


ಇದನ್ನೂ ಓದಿ: ನಾಗರಾಜ್‌ ಮಂಜುಳೆಯ ‘ಝುಂಡ್‌’: ಕ್ರೀಡಾ ಜಗತ್ತಿನ ‘ಅಸ್ಪೃಶ್ಯ ಭಾರತ ದರ್ಶನ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...