Homeಸಿನಿಮಾಕ್ರೀಡೆಶೇನ್ ವಾರ್ನ್: ಮೂರು ಹೆಜ್ಜೆ ಗುರುತುಗಳು ನೂರಾರು ಕವಲು ದಾರಿಗಳು ಸಾವಿರದೊಂದು ರಹದಾರಿಗಳು!

ಶೇನ್ ವಾರ್ನ್: ಮೂರು ಹೆಜ್ಜೆ ಗುರುತುಗಳು ನೂರಾರು ಕವಲು ದಾರಿಗಳು ಸಾವಿರದೊಂದು ರಹದಾರಿಗಳು!

- Advertisement -
- Advertisement -

ಅದು ಸೀದಾಸಾದಾ ಮೂರೇಮೂರು ಹೆಜ್ಜೆ.. ತೋಳ್ಬಲದ ಜೊತೆಗೆ ಮಣಿಕಟ್ಟು ಮೂಲಕ ಕೈಬೆರಳಿನಲ್ಲಿ ಚೆಂಡನ್ನು ತಿರುಗಿಸುವ ಜಾದುಗಾರ! ಬುಗರಿಯಂತೆ ಗಾಳಿಯಲ್ಲಿ ತೇಲಿ ಬರುವ ಎಸೆತ. ಬ್ಯಾಟ್ಸ್‌ಮೆನ್‌ನನ್ನು ಒಂದುಕ್ಷಣ ತಬ್ಬಿಬ್ಬುಗೊಳಿಸುವ ಮಾಂತ್ರಿಕ!

ಕ್ರಿಕೆಟ್ ಜಗತ್ತಿನಲ್ಲಿ ಹತ್ತಾರು ಸ್ಪಿನ್ ಮಾಂತ್ರಿಕರು ಬಂದು ಹೋಗಿದ್ದಾರೆ. ಆದರೆ, ಶೇನ್ ವಾರ್ನ್ ಎಂಬ ಆ ಒಂದು ಹೆಸರು ಮಾತ್ರ ಎಂದೂ ಅಚ್ಚಳಿಯದ ಅಚ್ಚರಿಯೇ ಸರಿ. ಪುಟ್ಟಪುಟ್ಟ ಮೂರು ಹೆಜ್ಜೆಗಳನ್ನಿಟ್ಟು ಬಲಗೈನ ಮೂರು ಬೆರಳನ್ನು ಉಪಯೋಗಿಸಿ ಲೆಗ್‌ಸ್ಪಿನ್ ಮಾಡುವ ಮೂಲಕ ವಿಕೆಟ್‌ಅನ್ನು ಯ:ಕಶ್ಚಿತ್ ಮ್ಯಾಜಿಕ್ ರೀತಿಯಲ್ಲಿ ಉಡಾಯಿಸುತ್ತಿದ್ದ ಪರಿಗೆ ಇಡೀ ಜಗತ್ತೇ ತಲೆದೂಗಿತ್ತು.

ತನ್ನ ಪ್ರತಿಭೆ, ಸಾಮರ್ಥ್ಯದ ಮೇಲೆ ಅತಿಯಾದ ಆತ್ಮವಿಶ್ವಾಸವನ್ನು ಹೊಂದಿರುವ ಹುಂಬ ಮನುಷ್ಯ ಎಷ್ಟೆಲ್ಲಾ ಸಾಧನೆಗಳನ್ನು ಮಾಡಬಹುದು, ದಾಖಲೆಗಳ ಶಿಖರದ ಮೂಲಕ ಮುಂದಿನ ಪೀಳಿಗೆಗೂ ತಾನು ಹೇಗೆ ಸವಾಲು ಎಸೆಯಬಹುದು ಎಂಬುದಕ್ಕೆ ಉದಾಹರಣೆಯಂತೆ ಬದುಕಿದ್ದ ಸಾಧಕ ವಾರ್ನ್. ಮುಂದುವರಿದು ಹೇಳಬೇಕೆಂದರೆ ಆತ ಬ್ಯಾಟ್ಸ್‌ಮೆನ್‌ನ ಮನಸ್ಥಿತಿಯನ್ನು ಅರಿತುಕೊಳ್ಳುವ ಸಾಮರ್ಥ್ಯ ಹೊಂದಿದ್ದ ಮನಃಶಾಸ್ತ್ರಜ್ಞ. ಶಸ್ತ್ರಚಿಕಿತ್ಸೆ ಮಾಡುವ ಡಾಕ್ಟರ್‌ನಂತೆ ಏಕಾಗ್ರತೆಯಿಂದ ತನ್ನ ಬೌಲಿಂಗ್ ಲಯ ಮತ್ತು ನಿಖರತೆಯನ್ನು ಕಾಯ್ಡುಕೊಳ್ಳುವ ಸ್ಪಿನ್ ಡಾಕ್ಟರ್ ಆತ!

ಶೋಕಿ, ದುಶ್ಚಟಗಳ ದಾಸ, ವಿವಾದಗಳು, ವಾಕ್ಸಮರಗಳು ಆತನ ಯಶಸ್ಸಿನ ಸುತ್ತ
ಅಂಟಿಕೊಂಡಿರುವ ಕಪ್ಪುಚುಕ್ಕೆಗಳೇನೋ ಹೌದು. ಆದರೂ, ಆತನ ಸಾಧನೆಯ ಮುಂದೆ ಆ ತಪ್ಪುಗಳೆಲ್ಲವೂ ಮರೆಯಾಗುತ್ತಿದ್ದವು. ಇಡೀ ಕ್ರಿಕೆಟ್ ಜಗತ್ತು ಆತನ ಯಶಸ್ಸನ್ನು ಪಕ್ಕಕ್ಕಿಟ್ಟು ಕರೆಯುತ್ತಿದ್ದದ್ದು ಕ್ರಿಕೆಟ್‌ನ ಬ್ಯಾಡ್ ಬಾಯ್ ಎಂದು.

ಆತನ ಬೌಲಿಂಗ್ ಬತ್ತಳಿಕೆಯಲ್ಲಿದ್ದ ಅಸ್ತ್ರಗಳೇ ವಿಭಿನ್ನ. ಅದನ್ನು ಅರ್ಥಮಾಡಿಕೊಳ್ಳುವುದು ಸಹ ಅಷ್ಟೇ ಕಷ್ಟ. ಎದುರಾಳಿ ಬ್ಯಾಟ್ಸ್‌ಮೆನ್‌ಗಳ ಆತ್ಮವಿಶ್ವಾಸವನ್ನು ಕುಗ್ಗಿಸುವಂತಹ ಸಾಮರ್ಥ್ಯ
ಆತನ ಬೌಲಿಂಗ್‌ನಲ್ಲಿತ್ತು. ಅದಕ್ಕಾಗಿ ಏನು ಬೇಕಾದ್ರೂ ಮಾಡುವ ಕಲೆಯೂ ಚೆನ್ನಾಗಿಯೇ ಗೊತ್ತಿತ್ತು. ಹಾಗಾಗಿಯೇ ಶೇನ್ ವಾರ್ನ್ ಜಂಟಲ್‌ಮ್ಯಾನ್ ಆಟದ ಜಂಟಲ್‌ಮ್ಯಾನ್ ಆಟಗಾರನಲ್ಲದಿದ್ದರೂ, ಆತನನ್ನು ವಿಶ್ವದ ಸರ್ವಶ್ರೇಷ್ಠ ಸ್ಪಿನ್ನರ್ ಅಂತ ಕರೆಯಲಾಗುತ್ತದೆ. ವಿಶ್ವದ ಶ್ರೇಷ್ಠ ಬ್ಯಾಟ್ಸ್‌ಮೆನ್‌ಗಳನ್ನು ದಿಗ್ಭ್ರಮೆಗೊಳಿಸಿದ್ದ ಮಾಂತ್ರಿಕ ಬೌಲರ್ ಆತ.

ಆತನ ಸ್ವಭಾವ, ವ್ಯಕ್ತಿತ್ವಗಳನ್ನು ಬದಿಗಿಟ್ಟು ಕ್ರಿಕೆಟ್ ಮೈದಾನದಲ್ಲಿ ಆತ ಮಾಡಿರುವ ಕರಾಮತ್ತಿನಿಂದ ಯುವಪೀಳಿಗೆಗೆ ಸ್ಫೂರ್ತಿಯ ಚಿಲುಮೆ ಎಂಬುದರಲ್ಲಿ ಎರಡು ಮಾತಿಲ್ಲ. ಆತನ ಬೌಲಿಂಗ್ ಶೈಲಿಯನ್ನು ಅನುಕರಣೆ ಮಾಡಿಕೊಂಡವರು ಅನೇಕರಿದ್ದಾರೆ. ಈ ಸಾಲಿನಲ್ಲಿ ಶೇನ್ ವಾರ್ನ್‌ನನ್ನು ಬಹುವಾಗಿ ಕಾಡಿದ್ದ ಭಾರತದ ಸಚಿನ್ ತೆಂಡೂಲ್ಕರ್ ಸಹ ಇದ್ದಾರೆ. ಈ ಎಲ್ಲವನ್ನೂ ಮೀರಿ ಶೇನ್ ವಾರ್ನ್‌ಗೆ ಯುವ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಗುಣಗಳಿದ್ದವು. ಹಾಗಾಗಿಯೇ ಆತ ವಿಶ್ವ ಕ್ರಿಕೆಟ್‌ನ ಎವರ್‌ಗ್ರೀನ್ ಹೀರೋ ಆಗಿಬಿಟ್ಟ!

ಇದನ್ನೂ ಓದಿ: ಉದ್ಯಮವಾಗಿ ರೂಪುಗೊಳ್ಳುತ್ತಿರುವ ಕ್ರಿಕೆಟ್ ಮೈದಾನಗಳು

ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎನಿಸಿಕೊಂಡ ಐಪಿಎಲ್‌ನಲ್ಲಿ ಯುವ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಉತ್ತಮ ವೇದಿಕೆ ನೀಡುವ ಮೂಲಕ ಭವಿಷ್ಯವನ್ನು ಕಟ್ಟಿಕೊಟ್ಟದ್ದು ಇದೇ ವಾರ್ನ್. ಮೊದಲ ಋತುವಿನಲ್ಲೇ ರಾಜಸ್ತಾನ ರಾಯಲ್ಸ್ ತಂಡದ ನಾಯಕ ಮತ್ತು ಕೋಚ್ ಆಗಿ ಕಣ ಪ್ರವೇಶಿಸಿದ್ದ ವಾರ್ನ್ ಅಂದು ತಮ್ಮ ತಂಡದಲ್ಲಿ ರವೀಂದ್ರ ಜಡೇಜಾ ಸೇರಿದಂತೆ ಅನೇಕ ಯುವಕರಿಗೆ ಅವಕಾಶ ನೀಡಿದ್ದರು. ತಮ್ಮ ಅನುಭವದ ಮೂಲಕ ಮಾರ್ಗದರ್ಶನವನ್ನೂ ಧಾರೆ ಎರೆದಿದ್ದರು. ಪರಿಣಾಮ ಮೊದಲ ಆವೃತ್ತಿಯಲ್ಲೇ ರಾಜಸ್ಥಾನ ಚಾಂಪಿಯನ್ ಪಟ್ಟ ಧರಿಸಿತು, ಭಾರತದ ಆಲ್‌ರೌಂಡರ್ ಜಡೇಜಾ ಏರಿರುವ ಉತ್ತುಂಗ ಎಲ್ಲರಿಗೂ ತಿಳಿದೇ ಇದೆ.

ಆತ ಚೆಂಡನ್ನು ಕೈ ಬೆರಳಿನಲ್ಲೇ ಆಡಿಸುವ ಮೋಡಿಗಾರ. ಏರಿಳಿತಗಳ ನಡುವೆಯೇ ಯಶಸ್ಸಿನ ಉತ್ತುಂಗಕ್ಕೇರಿದ್ದ ಅತ್ಯದ್ಭುತ ಬೌಲರ್. ಕವಲು ದಾರಿಯ ಕಲ್ಲು ಮುಳ್ಳಿನ ಹಾದಿಯಲ್ಲಿ ನಡೆದು ಬಂದ ಚಾಣಕ್ಯ. ಮೂರು ಹೆಜ್ಜೆಗಳನ್ನು ಹಾಕಿ 22 ಯಾರ್ಡ್‌ನ ಪಿಚ್‌ನಲ್ಲಿ ಆತ ಮಾಡಿರುವ ಮೋಡಿಯನ್ನು ಕ್ರಿಕೆಟ್ ಜಗತ್ತು ಎಂದೆಂದೂ ಮರೆಯಲು ಸಾಧ್ಯವಿಲ್ಲ.

ಕವಲುದಾರಿಯನ್ನು ರಹದಾರಿಯನ್ನಾಗಿಸಿಕೊಂಡು ಪ್ರತಿ ವಿಕೆಟ್‌ಅನ್ನೂ ಒಂದೊಂದು ಮೈಲುಗಲ್ಲಾಗಿಸಿಕೊಂಡಿದ್ದ. ಒಟ್ಟಾರೆ ಕ್ರಿಕೆಟ್ ವೃತ್ತಿಜೀವನದಲ್ಲಿ 1001 ಅಂತಾರಾಷ್ಟ್ರೀಯ ವಿಕೆಟ್‌ಗಳನ್ನು ಉರುಳಿಸಿದ. ಟೆಸ್ಟ್ ಕ್ರಿಕೆಟ್‌ನಲ್ಲಿ 700 ವಿಕೆಟ್‌ಗಳಿಸಿದ ಮೊದಲ ಬೌಲರ್ ಎಂಬ ಶ್ರೇಯಕ್ಕೂ ಪಾತ್ರನಾದ. ಆದರೆ, ತನ್ನ ವಿಕೆಟ್ ಗಳಿಕೆ ಸಾವಿರದೊಂದು ತಲುಪುವಷ್ಟರಲ್ಲಿ ಕ್ರಿಕೆಟ್ ಸಾಕು ಎಂದು ಆತನಿಗೆ ಅನ್ನಿಸಿಬಿಟ್ಟಿತ್ತು. ಅದಕ್ಕೊಂದು ಸಲಾಂ ಹೊಡೆದು ತನ್ನ ಎರಡನೇ ಇನಿಂಗ್ಸ್‌ನ ಬದುಕನ್ನು ಚೆನ್ನಾಗಿಯೇ ಎಂಜಾಯ್ ಮಾಡುತ್ತಿದ್ದ.

ಮೈದಾನದಲ್ಲಿ ವಿಕೆಟ್ ಪಡೆದ ಹಾಗೇ ವಿದಾಯದ ನಂತರ ಒಂದೊಂದು ದುಶ್ಚಟಗಳನ್ನು ಹವ್ಯಾಸವನ್ನಾಗಿಸಿಕೊಂಡ. ಆರೋಗ್ಯದ ಕಡೆ ಗಮನ ಹರಿಸಲಿಲ್ಲ. ಅಷ್ಟರಲ್ಲೇ ವಿಧಿಯ ಆಟಕ್ಕೆ ಈ ಲೋಕವನ್ನೇ ಬಿಟ್ಟು ಹೋದ ಈ ಮಹಾನ್ ಕ್ರಿಕೆಟಿಗ.

ಹೌದು, ಶೇನ್ ವಾರ್ನ್, ಮೂರು ಹೆಜ್ಜೆ ಗುರುತುಗಳು.. ನೂರಾರು ಕವಲು ದಾರಿಗಳು… ಸಾವಿರದೊಂದು ರಹದಾರಿಗಳು! ಇನ್ನು ನೆನಪು ಮಾತ್ರ.


ಇದನ್ನೂ ಓದಿ: ನಾಗರಾಜ್‌ ಮಂಜುಳೆಯ ‘ಝುಂಡ್‌’: ಕ್ರೀಡಾ ಜಗತ್ತಿನ ‘ಅಸ್ಪೃಶ್ಯ ಭಾರತ ದರ್ಶನ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....