Homeಮುಖಪುಟ‘ಗರಂ ಹವಾ’: ಒಂದು ನೆನಪು

‘ಗರಂ ಹವಾ’: ಒಂದು ನೆನಪು

- Advertisement -
- Advertisement -

ಎಂ.ಎಸ್. ಸತ್ಯು ಅವರಿಗೆ ಈಚೆಗೆ 80 ತುಂಬಿತು. ಈ ಹೊತ್ತಲ್ಲಿ ಅವರ ‘ಗರಂ ಹವಾ’ (1974) ನೆನಪಾಗುತ್ತಿದೆ. ನಾನು ನೋಡಿದ ಅತ್ಯಂತ ಶ್ರೇಷ್ಠ ಸಿನಿಮಾಗಳಲ್ಲಿ ಇದೊಂದು. ಇಸ್ಮತ್ ಚುಗ್ತಾಯಿಯವರ ಕಥೆಯನ್ನಾಧರಿಸಿ ರಚನೆಯಾದ ಇದಕ್ಕೆ ಚಿತ್ರಕಥೆ ಬರೆದವರು ಕೈಫಿ ಆಜ್ಮಿ ಮತ್ತು ಸತ್ಯು ಅವರ ಜೀವನಸಂಗಾತಿ ಶಮಾ ಝೈದಿ. ಸಂಗೀತ ಕಲ್ಕತ್ತೆಯ ಉಸ್ತಾದ್ ಬಹಾದೂರಖಾನರದು. ಮುಖ್ಯ ಭೂಮಿಕೆಯಲ್ಲಿ ಬಲರಾಜ್ ಸಹಾನಿಯಿದ್ದಾರೆ. ಕೈಫಿ ಆಜ್ಮಿಯವರ ರಚನೆಗೆ ಪ್ರಸಿದ್ಧ ವಾರಸಿ ಸೋದರರು ಖವಾಲಿ ಹಾಡಿದ್ದಾರೆ. ಹಲವಾರು ದೊಡ್ಡ ಪ್ರತಿಭೆಗಳು ಸೇರಿ ನಿರ್ಮಿಸಿದ ಕಲಾಕೃತಿಯಿದು.

ಸಿನಿಮಾದ ವಸ್ತು, ದೇಶವಿಭಜನೆಯ ಬಳಿಕ, ಉತ್ತರ ಭಾರತದಲ್ಲಿರುವ ಚಪ್ಪಲಿ ತಯಾರಿಕೆ
ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಸ್ಥ ಕುಟುಂಬವೊಂದು ಪಡುವ ಪಾಡಿನ ಕಥೆ. ಮೂರು ತಲೆಮಾರಿಗೆ ಸೇರಿದ, ನಗರದಲ್ಲಿ ಗೌರವದ ಸ್ಥಾನ ಹೊಂದಿದ್ದ ಈ ಕುಟುಂಬದಲ್ಲಿನ ಒಬ್ಬ ವ್ಯಕ್ತಿ, ಮನೆಮಾರಿ ಪಾಕಿಸ್ತಾನಕ್ಕೆ ವಲಸೆ ಹೋಗುತ್ತಾನೆ. ಅಲ್ಲಿಂದ ಕುಟುಂಬದ ಕಷ್ಟಗಳು ಶುರುವಾಗುತ್ತವೆ. ಸಾಲ ಪಡೆದವರೆಲ್ಲ ದೇಶ ಬಿಟ್ಟುಹೋಗಿದ್ದರಿಂದ ಈ ಕುಟುಂಬಕ್ಕೆ ಬ್ಯಾಂಕು ಸಾಲ ಕೊಡುವುದಿಲ್ಲ. ಮನೆ ಹರಾಜಾದ ಬಳಿಕ ಬಾಡಿಗೆಗೆ ಮನೆ ಸಿಗುವುದಿಲ್ಲ. ಕುಟುಂಬದ ಹುಡುಗರಿಗೆ ಯಾರೂ ಉದ್ಯೋಗ ಕೊಡುವುದಿಲ್ಲ. ದೇಶದ ರಹಸ್ಯಗಳನ್ನು ಪಾಕಿಸ್ತಾನಕ್ಕೆ ಕಳಿಸಿದ ಸುಳ್ಳು ಆಪಾದನೆಯನ್ನೂ ಹೊರಬೇಕಾಗುತ್ತದೆ. ದೇಶವಿಭಜನೆಯಂತಹ ರಾಜಕೀಯ ವಿದ್ಯಮಾನವೊಂದು, ಕುಟುಂಬದಲ್ಲಿ ಎಬ್ಬಿಸುವ ಸಂಕಟಗಳನ್ನು ತೆರೆತೆರೆಯಾಗಿ ಚಿತ್ರ ಹಿಡಿಯುತ್ತ ಹೋಗುತ್ತದೆ. ವಿಭಜನೆಯ ಬಳಿಕ ಭಾರತದಲ್ಲೇ ಉಳಿಯಲು ನಿರ್ಧರಿಸಿದ ಮುಸ್ಲಿಮರು, ಹಳೆಯ ಮಾನವ ಸಂಬಂಧಗಳೆಲ್ಲ ಭಗ್ನವಾಗಿ ಹುಟ್ಟಿರುವ ಘೋರವಾದ ಅವಿಶ್ವಾಸದ ವಾತಾವರಣದಲ್ಲಿ ಅನುಭವಿಸಿದ ಕಷ್ಟಗಳನ್ನು ಕಾಣಿಸುತ್ತದೆ. ಈ ಅಪನಂಬಿಕೆಯ ವಾತಾವರಣದಲ್ಲಿ ಬದುಕಲಾಗದೆ ಕುಟುಂಬದ ಒಬ್ಬೊಬ್ಬರೇ ಭಾರತ ಬಿಟ್ಟು ಹೋಗುತ್ತಾರೆ. ಆದರೆ ಕುಟುಂಬದ ಅಜ್ಜಿ, ಅಪ್ಪ ಮತ್ತು ಮಗ ಮಾತ್ರ ಭಾರತದಲ್ಲೇ ಉಳಿಯಲು ಛಲತೊಡುತ್ತಾರೆ.

ಅಪ್ಪ ಮಕ್ಕಳಿಗೆ ಈ ನಿರ್ಧಾರವು ಅವರ ಸಾರ್ವಜನಿಕ ಬದುಕಿನ ಅನುಭವ ಮತ್ತು ರಾಜಕೀಯ ಪ್ರಜ್ಞೆಯ ಫಲ. ಆದರೆ ಈ ಕುಟುಂಬದ ಸದಸ್ಯರಾದ ಒಬ್ಬ ಮುದುಕಿ ಮತ್ತು ತರುಣಿ ಕೂಡ ವಲಸೆಹೋಗಲು ತಮ್ಮದೇ ಕಾರಣಕ್ಕೆ ನಿರಾಕರಿಸುವವರು. ಮುದುಕಿಗೆ ತನ್ನ ದೇಶ ಪರದೇಶ ಎಂದರೇನು ಗೊತ್ತಿಲ್ಲ. ತಾನು ಮದುವೆಯಾಗಿ ಬಂದಾಗ ಮನೆದುಂಬಿಸಿಕೊಂಡ ಮನೆಯನ್ನು ಬಿಟ್ಟು ಅವಳಿಗೆ ಬೇರೆ ದೇಶದ ಕಲ್ಪನೆಯೇ ಗೊತ್ತಿಲ್ಲ. ಖಯಾಮತ್ ದಿನ ತೀರಿಹೋಗಿರುವ ತನ್ನ ಗಂಡ ‘ನಮ್ಮ ಮನೆಯನ್ನು ಬಿಟ್ಟು ಬೇರೆ ಮನೆಯಲ್ಲಿ ಸತ್ತೆಯಾ?’ ಎಂದರೆ ನಾನೇನೆಂದು ಉತ್ತರಿಸಲಿ ಎನ್ನುವುದು ಅವಳ ಪ್ರಶ್ನೆ. ಕಡೆಗೂ ಅವಳು ತಾನು ಲಗ್ನವಾದ ಹವೇಲಿಯಲ್ಲಿಯೇ ಸಂತೋಷದಿಂದ ಸಾಯುತ್ತಾಳೆ. ಇನ್ನು ತರುಣಿ, ತನ್ನನ್ನು ಪ್ರೇಮಿಸಿದ ತರುಣರು ಭಾರತದಲ್ಲಿ ತಮಗೆ ನೌಕರಿ ಸಿಗುತ್ತಿಲ್ಲವೆಂದು ಹೇಳಿ ಪಾಕಿಸ್ತಾನಕ್ಕೆ ವಲಸೆ ಹೋದವರು, ಮರಳಿ ಬರುವುದನ್ನೇ ಕಾಯುತ್ತಾಳೆ. ಆದರೆ ಅವರು ಅಲ್ಲೇ ಮದುವೆಯಾಗಿ ನೆಲೆಸಲು ನಿಶ್ಚಯಿಸಿದ್ದಾರೆಂದು ತಿಳಿದು ಅತ್ಮಹತ್ಯೆ ಮಾಡಿಕೊಳ್ಳುತ್ತಾಳೆ-ತಾಯಿ ತನಗಾಗಿ ಹೆಣೆದ ಮದುಮಗಳ ತಲೆವಸ್ತ್ರವನ್ನು ಧರಿಸಿ ಬ್ಲೇಡಿನಲ್ಲಿ ಕೈಯ ನರವನ್ನು ಕೊಯ್ದುಕೊಂಡು.

ಎಂ.ಎಸ್. ಸತ್ಯು

ದೇಶವಿಭಜನೆ ಮತ್ತು ಹೊಸರಾಷ್ಟ್ರದ ಉದಯದಂತಹ ಬೃಹತ್ ರಾಜಕೀಯ ಘಟನೆಗಳಿಗೆ ಬಹುತೇಕವಾಗಿ ಸಾಮಾನ್ಯ ಜನ ಕಾರಣರಲ್ಲ. ಆದರೆ ಈ ಘಟನೆಗಳ ದುರಂತ ಫಲವನ್ನು ಅವರು ಉಣ್ಣಬೇಕಾಗುತ್ತದೆ. ಈ ಕಷ್ಟಗಳಲ್ಲೂ ಕುಟುಂಬದೊಳಗಿನ ಪ್ರೇಮ ವಾತ್ಸಲ್ಯ ಜಗಳದಂತಹ ಮಾನವ ಸಂಬಂಧದ ಮುಖಗಳನ್ನು ಚಿತ್ರ ಹಿಡಿದುಕೊಡುತ್ತದೆ. ಮುನಿಸಿಕೊಳ್ಳುವ ಅಪ್ಪನಿಗೆ ಮಗಳು ಕದ್ದು ತಂದು ರೊಟ್ಟಿ ತಿನಿಸುವ ದೃಶ್ಯ, ತಾನು ಹುಟ್ಟಿಬೆಳೆದ ಮನೆಯನ್ನು ಬಿಟ್ಟುಬರಲು ನಿರಾಕರಿಸಿ ಸೌದೆಗೂಡಿನಲ್ಲಿ ಅಡಗಿಕೊಳ್ಳುವ ಮುದುಕಿಯನ್ನು ಬಲಾತ್ಕಾರವಾಗಿ ಎತ್ತಿಕೊಂಡು ಹೋಗುವ ದೃಶ್ಯವಾಗಲಿ ಇಂತಹವು. ಇಂತಹುದೇ ಕಷ್ಟ-ಸುಖಗಳನ್ನು ಪಾಕಿಸ್ತಾನದಲ್ಲಿ ತಮ್ಮ ಊರುಮನೆಗಳಲ್ಲೇ ಉಳಿದ ಮುಸ್ಲಿಮೇತರ ಕುಟುಂಬಗಳೂ ಅನುಭವಿಸುತ್ತಿರಬಹುದು ಎಂಬ ಧ್ವನಿಯನ್ನು ಚಿತ್ರ ಚಿಮ್ಮಿಸುತ್ತದೆ. ರಾಜಕೀಯ ಸಂದರ್ಭದ ಒತ್ತಡದಿಂದ ಕೆಲವರು ಎಷ್ಟೇ ಸಮುದಾಯ ಶಂಕೆ, ದ್ವೇಷ ಮಾಡಲಿ, ಜನರ ನೋವಿಗೆ ಧರ್ಮಾತೀತವಾಗಿ ಮಿಡಿವ ಜೀವಗಳು ಅದೇ ಸಮಾಜದಲ್ಲಿ ಇರುತ್ತವೆ ಎಂಬ ಸತ್ಯವನ್ನು ಚಿತ್ರ ಕಾಣಿಸುತ್ತದೆ. ‘ಸಂಬಂಜ ಎಂಬುದು ದೊಡ್ಡದು ಕನಾ’ ಎಂದು ಬಿಂಬಿಸುತ್ತದೆ.

ಅಂತಃಕರಣ ಮಿಡಿವ ಈ ಚಿತ್ರವು ಒಂದು ಶ್ರೇಷ್ಠ ಕಲಾಕೃತಿಯೂ ಆಗಿದೆ. ಇಲ್ಲಿ ಉತ್ತರ ಪ್ರದೇಶದ ಉಚ್ಚವರ್ಗದ ಮುಸ್ಲಿಮರ ಬದುಕಿನ ಊಟ ಉಡುಪು ಭಾಷೆಯನ್ನು ಒಳಗೊಂಡ ರಿವಾಜುಗಳನ್ನು ಸಮರ್ಥವಾಗಿ ಹಿಡಿಯಲಾಗಿದೆ. ಕಥೆ ಜರುಗುವ ಗಲ್ಲಿ ಮತ್ತು ಹವೇಲಿಗಳು, ತನ್ನ ಸ್ಥಳೀಯ ವಾಸ್ತುಶಿಲ್ಪದ ಜತೆಯಲ್ಲಿ ತಾವೂ ಪಾತ್ರಗಳಾಗಿವೆ. ಚಿತ್ರದ ಪ್ರತಿಯೊಂದು ಫ್ರೇಮ್ ಕೂಡ ಅರ್ಥಪೂರ್ಣ ಕಾವ್ಯದ ಒಂದೊಂದು ಸಾಲಿನಂತಿದೆ. ನೆಳಲು ಬೆಳಕಿನ ಸಂಯೋಜನೆಯು ದೇಶವಿಭಜನೆಯ ಒಳಿತುಕೇಡುಗಳ ಸಂಕೇತದಂತೆ ಇಡೀ ಚಿತ್ರದಲ್ಲಿ ಆವರಿಸಿಕೊಂಡಿದೆ. ಧನಿಪೂರ್ಣವೂ ಸಂಕ್ಷಿಪ್ತವೂ ಆದ ಸಂಭಾಷಣೆಯಿರುವ ಚಿತ್ರದಲ್ಲಿ ವಾಚಾಳಿತನವಿಲ್ಲ. ಮುಖಭಾವದಲ್ಲೇ ತಮ್ಮ ಒಳಗನ್ನು ಪ್ರಕಟಿಸುವ ಪ್ರಬುದ್ಧ ನಟನೆಯಿಂದ ಕೂಡಿದೆ. ಬಲರಾಜರ ಅಭಿನಯವಂತೂ ಮನೋಜ್ಞ. ದುರಂತವೆಂದರೆ, ಈ ಚಿತ್ರ ಬಿಡುಗಡೆಯಾಗುವ ಹೊತ್ತಿಗೆ ಬಲರಾಜ್ ತೀರಿಕೊಂಡಿದ್ದರು.

1983ರಲ್ಲಿ ನಾನು ಕನ್ನಡ ಎಂ.ಎ.ಯಲ್ಲಿ ರ್‍ಯಾಂಕ್ ಪಡೆದಾಗ, ಆ ಹುಡುಗನನ್ನು ನೋಡಬೇಕಲ್ಲ ಎಂದು ಆಸೆಪಟ್ಟು ನನ್ನನ್ನು ತಮ್ಮ ಸಹಾಯಕರಾಗಿದ್ದ ಶಿರಾಳಕೊಪ್ಪದ ರಾಮಸ್ವಾಮಿಯವರ ಮೂಲಕ ಕರೆಸಿಕೊಂಡಿದ್ದರು. ಔತಣಕೊಟ್ಟು ಪ್ರೀತಿವಿಶ್ವಾಸ ತೋರಿದ್ದರು. ಕಾಲುಶತಮಾನದ ಬಳಿಕ, ನನ್ನ ‘ಅಮೀರಬಾಯಿ ಕರ್ನಾಟಕಿ’ ಓದಿ, ಬೆಂಗಳೂರಿನಲ್ಲಿ ಒಂದು ಚರ್ಚೆ ಇಟ್ಟುಕೊಂಡಿದ್ದರು. ಅವರೂ ಚಿರಂಜೀವಿಸಿಂಗರೂ ಮಾತಾಡಿದರು. ಮುಂಬೈ ಸಿನಿಮಾ ಜಗತ್ತಿಗೆ ಉತ್ತರ ಕರ್ನಾಟಕದ ಕೊಡುಗೆಯನ್ನು ಬಿಂಬಿಸುವ ಮ್ಯೂಸಿಯಮ್ಮನ್ನು ಬಿಜಾಪುರದ ಅಮೀರಬಾಯಿ ಅವರ ಹಳೆಯ ಮನೆಯಲ್ಲಿ ಮಾಡುವ ಕನಸನ್ನು ಸತ್ಯು ತಮ್ಮ ಪತ್ರದ ಮೂಲಕ ಹಂಚಿಕೊಂಡಿದ್ದರು. ಎಂ.ಎಸ್. ಸತ್ಯು ಹಾಗೂ ರಾಜೀವ ತಾರಾನಾಥ್ ಕರ್ನಾಟಕದಲ್ಲಿ ಹುಟ್ಟಿ ಭಾರತದಲ್ಲಿ ಹರಡಿದ ಪರಂಪರೆಯೊಂದರ ಎರಡು ಕೊಂಡಿಗಳಂತೆ ತೋರುತ್ತಾರೆ.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ.


ಇದನ್ನೂ ಓದಿ: ವಿಧಾನ ಪರಿಷತ್ ಖಂಡಿತಾ ಉಳಿಸಿಕೊಳ್ಳಬೇಕಿದೆ; ಉತ್ತಮ ಪ್ರತಿನಿಧಿತ್ವಕ್ಕಾಗಿ ಸುಧಾರಣೆಗಳ ಜೊತೆಗೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...