Homeಮುಖಪುಟ‘ಗರಂ ಹವಾ’: ಒಂದು ನೆನಪು

‘ಗರಂ ಹವಾ’: ಒಂದು ನೆನಪು

- Advertisement -
- Advertisement -

ಎಂ.ಎಸ್. ಸತ್ಯು ಅವರಿಗೆ ಈಚೆಗೆ 80 ತುಂಬಿತು. ಈ ಹೊತ್ತಲ್ಲಿ ಅವರ ‘ಗರಂ ಹವಾ’ (1974) ನೆನಪಾಗುತ್ತಿದೆ. ನಾನು ನೋಡಿದ ಅತ್ಯಂತ ಶ್ರೇಷ್ಠ ಸಿನಿಮಾಗಳಲ್ಲಿ ಇದೊಂದು. ಇಸ್ಮತ್ ಚುಗ್ತಾಯಿಯವರ ಕಥೆಯನ್ನಾಧರಿಸಿ ರಚನೆಯಾದ ಇದಕ್ಕೆ ಚಿತ್ರಕಥೆ ಬರೆದವರು ಕೈಫಿ ಆಜ್ಮಿ ಮತ್ತು ಸತ್ಯು ಅವರ ಜೀವನಸಂಗಾತಿ ಶಮಾ ಝೈದಿ. ಸಂಗೀತ ಕಲ್ಕತ್ತೆಯ ಉಸ್ತಾದ್ ಬಹಾದೂರಖಾನರದು. ಮುಖ್ಯ ಭೂಮಿಕೆಯಲ್ಲಿ ಬಲರಾಜ್ ಸಹಾನಿಯಿದ್ದಾರೆ. ಕೈಫಿ ಆಜ್ಮಿಯವರ ರಚನೆಗೆ ಪ್ರಸಿದ್ಧ ವಾರಸಿ ಸೋದರರು ಖವಾಲಿ ಹಾಡಿದ್ದಾರೆ. ಹಲವಾರು ದೊಡ್ಡ ಪ್ರತಿಭೆಗಳು ಸೇರಿ ನಿರ್ಮಿಸಿದ ಕಲಾಕೃತಿಯಿದು.

ಸಿನಿಮಾದ ವಸ್ತು, ದೇಶವಿಭಜನೆಯ ಬಳಿಕ, ಉತ್ತರ ಭಾರತದಲ್ಲಿರುವ ಚಪ್ಪಲಿ ತಯಾರಿಕೆ
ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಸ್ಥ ಕುಟುಂಬವೊಂದು ಪಡುವ ಪಾಡಿನ ಕಥೆ. ಮೂರು ತಲೆಮಾರಿಗೆ ಸೇರಿದ, ನಗರದಲ್ಲಿ ಗೌರವದ ಸ್ಥಾನ ಹೊಂದಿದ್ದ ಈ ಕುಟುಂಬದಲ್ಲಿನ ಒಬ್ಬ ವ್ಯಕ್ತಿ, ಮನೆಮಾರಿ ಪಾಕಿಸ್ತಾನಕ್ಕೆ ವಲಸೆ ಹೋಗುತ್ತಾನೆ. ಅಲ್ಲಿಂದ ಕುಟುಂಬದ ಕಷ್ಟಗಳು ಶುರುವಾಗುತ್ತವೆ. ಸಾಲ ಪಡೆದವರೆಲ್ಲ ದೇಶ ಬಿಟ್ಟುಹೋಗಿದ್ದರಿಂದ ಈ ಕುಟುಂಬಕ್ಕೆ ಬ್ಯಾಂಕು ಸಾಲ ಕೊಡುವುದಿಲ್ಲ. ಮನೆ ಹರಾಜಾದ ಬಳಿಕ ಬಾಡಿಗೆಗೆ ಮನೆ ಸಿಗುವುದಿಲ್ಲ. ಕುಟುಂಬದ ಹುಡುಗರಿಗೆ ಯಾರೂ ಉದ್ಯೋಗ ಕೊಡುವುದಿಲ್ಲ. ದೇಶದ ರಹಸ್ಯಗಳನ್ನು ಪಾಕಿಸ್ತಾನಕ್ಕೆ ಕಳಿಸಿದ ಸುಳ್ಳು ಆಪಾದನೆಯನ್ನೂ ಹೊರಬೇಕಾಗುತ್ತದೆ. ದೇಶವಿಭಜನೆಯಂತಹ ರಾಜಕೀಯ ವಿದ್ಯಮಾನವೊಂದು, ಕುಟುಂಬದಲ್ಲಿ ಎಬ್ಬಿಸುವ ಸಂಕಟಗಳನ್ನು ತೆರೆತೆರೆಯಾಗಿ ಚಿತ್ರ ಹಿಡಿಯುತ್ತ ಹೋಗುತ್ತದೆ. ವಿಭಜನೆಯ ಬಳಿಕ ಭಾರತದಲ್ಲೇ ಉಳಿಯಲು ನಿರ್ಧರಿಸಿದ ಮುಸ್ಲಿಮರು, ಹಳೆಯ ಮಾನವ ಸಂಬಂಧಗಳೆಲ್ಲ ಭಗ್ನವಾಗಿ ಹುಟ್ಟಿರುವ ಘೋರವಾದ ಅವಿಶ್ವಾಸದ ವಾತಾವರಣದಲ್ಲಿ ಅನುಭವಿಸಿದ ಕಷ್ಟಗಳನ್ನು ಕಾಣಿಸುತ್ತದೆ. ಈ ಅಪನಂಬಿಕೆಯ ವಾತಾವರಣದಲ್ಲಿ ಬದುಕಲಾಗದೆ ಕುಟುಂಬದ ಒಬ್ಬೊಬ್ಬರೇ ಭಾರತ ಬಿಟ್ಟು ಹೋಗುತ್ತಾರೆ. ಆದರೆ ಕುಟುಂಬದ ಅಜ್ಜಿ, ಅಪ್ಪ ಮತ್ತು ಮಗ ಮಾತ್ರ ಭಾರತದಲ್ಲೇ ಉಳಿಯಲು ಛಲತೊಡುತ್ತಾರೆ.

ಅಪ್ಪ ಮಕ್ಕಳಿಗೆ ಈ ನಿರ್ಧಾರವು ಅವರ ಸಾರ್ವಜನಿಕ ಬದುಕಿನ ಅನುಭವ ಮತ್ತು ರಾಜಕೀಯ ಪ್ರಜ್ಞೆಯ ಫಲ. ಆದರೆ ಈ ಕುಟುಂಬದ ಸದಸ್ಯರಾದ ಒಬ್ಬ ಮುದುಕಿ ಮತ್ತು ತರುಣಿ ಕೂಡ ವಲಸೆಹೋಗಲು ತಮ್ಮದೇ ಕಾರಣಕ್ಕೆ ನಿರಾಕರಿಸುವವರು. ಮುದುಕಿಗೆ ತನ್ನ ದೇಶ ಪರದೇಶ ಎಂದರೇನು ಗೊತ್ತಿಲ್ಲ. ತಾನು ಮದುವೆಯಾಗಿ ಬಂದಾಗ ಮನೆದುಂಬಿಸಿಕೊಂಡ ಮನೆಯನ್ನು ಬಿಟ್ಟು ಅವಳಿಗೆ ಬೇರೆ ದೇಶದ ಕಲ್ಪನೆಯೇ ಗೊತ್ತಿಲ್ಲ. ಖಯಾಮತ್ ದಿನ ತೀರಿಹೋಗಿರುವ ತನ್ನ ಗಂಡ ‘ನಮ್ಮ ಮನೆಯನ್ನು ಬಿಟ್ಟು ಬೇರೆ ಮನೆಯಲ್ಲಿ ಸತ್ತೆಯಾ?’ ಎಂದರೆ ನಾನೇನೆಂದು ಉತ್ತರಿಸಲಿ ಎನ್ನುವುದು ಅವಳ ಪ್ರಶ್ನೆ. ಕಡೆಗೂ ಅವಳು ತಾನು ಲಗ್ನವಾದ ಹವೇಲಿಯಲ್ಲಿಯೇ ಸಂತೋಷದಿಂದ ಸಾಯುತ್ತಾಳೆ. ಇನ್ನು ತರುಣಿ, ತನ್ನನ್ನು ಪ್ರೇಮಿಸಿದ ತರುಣರು ಭಾರತದಲ್ಲಿ ತಮಗೆ ನೌಕರಿ ಸಿಗುತ್ತಿಲ್ಲವೆಂದು ಹೇಳಿ ಪಾಕಿಸ್ತಾನಕ್ಕೆ ವಲಸೆ ಹೋದವರು, ಮರಳಿ ಬರುವುದನ್ನೇ ಕಾಯುತ್ತಾಳೆ. ಆದರೆ ಅವರು ಅಲ್ಲೇ ಮದುವೆಯಾಗಿ ನೆಲೆಸಲು ನಿಶ್ಚಯಿಸಿದ್ದಾರೆಂದು ತಿಳಿದು ಅತ್ಮಹತ್ಯೆ ಮಾಡಿಕೊಳ್ಳುತ್ತಾಳೆ-ತಾಯಿ ತನಗಾಗಿ ಹೆಣೆದ ಮದುಮಗಳ ತಲೆವಸ್ತ್ರವನ್ನು ಧರಿಸಿ ಬ್ಲೇಡಿನಲ್ಲಿ ಕೈಯ ನರವನ್ನು ಕೊಯ್ದುಕೊಂಡು.

ಎಂ.ಎಸ್. ಸತ್ಯು

ದೇಶವಿಭಜನೆ ಮತ್ತು ಹೊಸರಾಷ್ಟ್ರದ ಉದಯದಂತಹ ಬೃಹತ್ ರಾಜಕೀಯ ಘಟನೆಗಳಿಗೆ ಬಹುತೇಕವಾಗಿ ಸಾಮಾನ್ಯ ಜನ ಕಾರಣರಲ್ಲ. ಆದರೆ ಈ ಘಟನೆಗಳ ದುರಂತ ಫಲವನ್ನು ಅವರು ಉಣ್ಣಬೇಕಾಗುತ್ತದೆ. ಈ ಕಷ್ಟಗಳಲ್ಲೂ ಕುಟುಂಬದೊಳಗಿನ ಪ್ರೇಮ ವಾತ್ಸಲ್ಯ ಜಗಳದಂತಹ ಮಾನವ ಸಂಬಂಧದ ಮುಖಗಳನ್ನು ಚಿತ್ರ ಹಿಡಿದುಕೊಡುತ್ತದೆ. ಮುನಿಸಿಕೊಳ್ಳುವ ಅಪ್ಪನಿಗೆ ಮಗಳು ಕದ್ದು ತಂದು ರೊಟ್ಟಿ ತಿನಿಸುವ ದೃಶ್ಯ, ತಾನು ಹುಟ್ಟಿಬೆಳೆದ ಮನೆಯನ್ನು ಬಿಟ್ಟುಬರಲು ನಿರಾಕರಿಸಿ ಸೌದೆಗೂಡಿನಲ್ಲಿ ಅಡಗಿಕೊಳ್ಳುವ ಮುದುಕಿಯನ್ನು ಬಲಾತ್ಕಾರವಾಗಿ ಎತ್ತಿಕೊಂಡು ಹೋಗುವ ದೃಶ್ಯವಾಗಲಿ ಇಂತಹವು. ಇಂತಹುದೇ ಕಷ್ಟ-ಸುಖಗಳನ್ನು ಪಾಕಿಸ್ತಾನದಲ್ಲಿ ತಮ್ಮ ಊರುಮನೆಗಳಲ್ಲೇ ಉಳಿದ ಮುಸ್ಲಿಮೇತರ ಕುಟುಂಬಗಳೂ ಅನುಭವಿಸುತ್ತಿರಬಹುದು ಎಂಬ ಧ್ವನಿಯನ್ನು ಚಿತ್ರ ಚಿಮ್ಮಿಸುತ್ತದೆ. ರಾಜಕೀಯ ಸಂದರ್ಭದ ಒತ್ತಡದಿಂದ ಕೆಲವರು ಎಷ್ಟೇ ಸಮುದಾಯ ಶಂಕೆ, ದ್ವೇಷ ಮಾಡಲಿ, ಜನರ ನೋವಿಗೆ ಧರ್ಮಾತೀತವಾಗಿ ಮಿಡಿವ ಜೀವಗಳು ಅದೇ ಸಮಾಜದಲ್ಲಿ ಇರುತ್ತವೆ ಎಂಬ ಸತ್ಯವನ್ನು ಚಿತ್ರ ಕಾಣಿಸುತ್ತದೆ. ‘ಸಂಬಂಜ ಎಂಬುದು ದೊಡ್ಡದು ಕನಾ’ ಎಂದು ಬಿಂಬಿಸುತ್ತದೆ.

ಅಂತಃಕರಣ ಮಿಡಿವ ಈ ಚಿತ್ರವು ಒಂದು ಶ್ರೇಷ್ಠ ಕಲಾಕೃತಿಯೂ ಆಗಿದೆ. ಇಲ್ಲಿ ಉತ್ತರ ಪ್ರದೇಶದ ಉಚ್ಚವರ್ಗದ ಮುಸ್ಲಿಮರ ಬದುಕಿನ ಊಟ ಉಡುಪು ಭಾಷೆಯನ್ನು ಒಳಗೊಂಡ ರಿವಾಜುಗಳನ್ನು ಸಮರ್ಥವಾಗಿ ಹಿಡಿಯಲಾಗಿದೆ. ಕಥೆ ಜರುಗುವ ಗಲ್ಲಿ ಮತ್ತು ಹವೇಲಿಗಳು, ತನ್ನ ಸ್ಥಳೀಯ ವಾಸ್ತುಶಿಲ್ಪದ ಜತೆಯಲ್ಲಿ ತಾವೂ ಪಾತ್ರಗಳಾಗಿವೆ. ಚಿತ್ರದ ಪ್ರತಿಯೊಂದು ಫ್ರೇಮ್ ಕೂಡ ಅರ್ಥಪೂರ್ಣ ಕಾವ್ಯದ ಒಂದೊಂದು ಸಾಲಿನಂತಿದೆ. ನೆಳಲು ಬೆಳಕಿನ ಸಂಯೋಜನೆಯು ದೇಶವಿಭಜನೆಯ ಒಳಿತುಕೇಡುಗಳ ಸಂಕೇತದಂತೆ ಇಡೀ ಚಿತ್ರದಲ್ಲಿ ಆವರಿಸಿಕೊಂಡಿದೆ. ಧನಿಪೂರ್ಣವೂ ಸಂಕ್ಷಿಪ್ತವೂ ಆದ ಸಂಭಾಷಣೆಯಿರುವ ಚಿತ್ರದಲ್ಲಿ ವಾಚಾಳಿತನವಿಲ್ಲ. ಮುಖಭಾವದಲ್ಲೇ ತಮ್ಮ ಒಳಗನ್ನು ಪ್ರಕಟಿಸುವ ಪ್ರಬುದ್ಧ ನಟನೆಯಿಂದ ಕೂಡಿದೆ. ಬಲರಾಜರ ಅಭಿನಯವಂತೂ ಮನೋಜ್ಞ. ದುರಂತವೆಂದರೆ, ಈ ಚಿತ್ರ ಬಿಡುಗಡೆಯಾಗುವ ಹೊತ್ತಿಗೆ ಬಲರಾಜ್ ತೀರಿಕೊಂಡಿದ್ದರು.

1983ರಲ್ಲಿ ನಾನು ಕನ್ನಡ ಎಂ.ಎ.ಯಲ್ಲಿ ರ್‍ಯಾಂಕ್ ಪಡೆದಾಗ, ಆ ಹುಡುಗನನ್ನು ನೋಡಬೇಕಲ್ಲ ಎಂದು ಆಸೆಪಟ್ಟು ನನ್ನನ್ನು ತಮ್ಮ ಸಹಾಯಕರಾಗಿದ್ದ ಶಿರಾಳಕೊಪ್ಪದ ರಾಮಸ್ವಾಮಿಯವರ ಮೂಲಕ ಕರೆಸಿಕೊಂಡಿದ್ದರು. ಔತಣಕೊಟ್ಟು ಪ್ರೀತಿವಿಶ್ವಾಸ ತೋರಿದ್ದರು. ಕಾಲುಶತಮಾನದ ಬಳಿಕ, ನನ್ನ ‘ಅಮೀರಬಾಯಿ ಕರ್ನಾಟಕಿ’ ಓದಿ, ಬೆಂಗಳೂರಿನಲ್ಲಿ ಒಂದು ಚರ್ಚೆ ಇಟ್ಟುಕೊಂಡಿದ್ದರು. ಅವರೂ ಚಿರಂಜೀವಿಸಿಂಗರೂ ಮಾತಾಡಿದರು. ಮುಂಬೈ ಸಿನಿಮಾ ಜಗತ್ತಿಗೆ ಉತ್ತರ ಕರ್ನಾಟಕದ ಕೊಡುಗೆಯನ್ನು ಬಿಂಬಿಸುವ ಮ್ಯೂಸಿಯಮ್ಮನ್ನು ಬಿಜಾಪುರದ ಅಮೀರಬಾಯಿ ಅವರ ಹಳೆಯ ಮನೆಯಲ್ಲಿ ಮಾಡುವ ಕನಸನ್ನು ಸತ್ಯು ತಮ್ಮ ಪತ್ರದ ಮೂಲಕ ಹಂಚಿಕೊಂಡಿದ್ದರು. ಎಂ.ಎಸ್. ಸತ್ಯು ಹಾಗೂ ರಾಜೀವ ತಾರಾನಾಥ್ ಕರ್ನಾಟಕದಲ್ಲಿ ಹುಟ್ಟಿ ಭಾರತದಲ್ಲಿ ಹರಡಿದ ಪರಂಪರೆಯೊಂದರ ಎರಡು ಕೊಂಡಿಗಳಂತೆ ತೋರುತ್ತಾರೆ.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ.


ಇದನ್ನೂ ಓದಿ: ವಿಧಾನ ಪರಿಷತ್ ಖಂಡಿತಾ ಉಳಿಸಿಕೊಳ್ಳಬೇಕಿದೆ; ಉತ್ತಮ ಪ್ರತಿನಿಧಿತ್ವಕ್ಕಾಗಿ ಸುಧಾರಣೆಗಳ ಜೊತೆಗೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...