Homeಮುಖಪುಟ‘ಗರಂ ಹವಾ’: ಒಂದು ನೆನಪು

‘ಗರಂ ಹವಾ’: ಒಂದು ನೆನಪು

- Advertisement -
- Advertisement -

ಎಂ.ಎಸ್. ಸತ್ಯು ಅವರಿಗೆ ಈಚೆಗೆ 80 ತುಂಬಿತು. ಈ ಹೊತ್ತಲ್ಲಿ ಅವರ ‘ಗರಂ ಹವಾ’ (1974) ನೆನಪಾಗುತ್ತಿದೆ. ನಾನು ನೋಡಿದ ಅತ್ಯಂತ ಶ್ರೇಷ್ಠ ಸಿನಿಮಾಗಳಲ್ಲಿ ಇದೊಂದು. ಇಸ್ಮತ್ ಚುಗ್ತಾಯಿಯವರ ಕಥೆಯನ್ನಾಧರಿಸಿ ರಚನೆಯಾದ ಇದಕ್ಕೆ ಚಿತ್ರಕಥೆ ಬರೆದವರು ಕೈಫಿ ಆಜ್ಮಿ ಮತ್ತು ಸತ್ಯು ಅವರ ಜೀವನಸಂಗಾತಿ ಶಮಾ ಝೈದಿ. ಸಂಗೀತ ಕಲ್ಕತ್ತೆಯ ಉಸ್ತಾದ್ ಬಹಾದೂರಖಾನರದು. ಮುಖ್ಯ ಭೂಮಿಕೆಯಲ್ಲಿ ಬಲರಾಜ್ ಸಹಾನಿಯಿದ್ದಾರೆ. ಕೈಫಿ ಆಜ್ಮಿಯವರ ರಚನೆಗೆ ಪ್ರಸಿದ್ಧ ವಾರಸಿ ಸೋದರರು ಖವಾಲಿ ಹಾಡಿದ್ದಾರೆ. ಹಲವಾರು ದೊಡ್ಡ ಪ್ರತಿಭೆಗಳು ಸೇರಿ ನಿರ್ಮಿಸಿದ ಕಲಾಕೃತಿಯಿದು.

ಸಿನಿಮಾದ ವಸ್ತು, ದೇಶವಿಭಜನೆಯ ಬಳಿಕ, ಉತ್ತರ ಭಾರತದಲ್ಲಿರುವ ಚಪ್ಪಲಿ ತಯಾರಿಕೆ
ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಸ್ಥ ಕುಟುಂಬವೊಂದು ಪಡುವ ಪಾಡಿನ ಕಥೆ. ಮೂರು ತಲೆಮಾರಿಗೆ ಸೇರಿದ, ನಗರದಲ್ಲಿ ಗೌರವದ ಸ್ಥಾನ ಹೊಂದಿದ್ದ ಈ ಕುಟುಂಬದಲ್ಲಿನ ಒಬ್ಬ ವ್ಯಕ್ತಿ, ಮನೆಮಾರಿ ಪಾಕಿಸ್ತಾನಕ್ಕೆ ವಲಸೆ ಹೋಗುತ್ತಾನೆ. ಅಲ್ಲಿಂದ ಕುಟುಂಬದ ಕಷ್ಟಗಳು ಶುರುವಾಗುತ್ತವೆ. ಸಾಲ ಪಡೆದವರೆಲ್ಲ ದೇಶ ಬಿಟ್ಟುಹೋಗಿದ್ದರಿಂದ ಈ ಕುಟುಂಬಕ್ಕೆ ಬ್ಯಾಂಕು ಸಾಲ ಕೊಡುವುದಿಲ್ಲ. ಮನೆ ಹರಾಜಾದ ಬಳಿಕ ಬಾಡಿಗೆಗೆ ಮನೆ ಸಿಗುವುದಿಲ್ಲ. ಕುಟುಂಬದ ಹುಡುಗರಿಗೆ ಯಾರೂ ಉದ್ಯೋಗ ಕೊಡುವುದಿಲ್ಲ. ದೇಶದ ರಹಸ್ಯಗಳನ್ನು ಪಾಕಿಸ್ತಾನಕ್ಕೆ ಕಳಿಸಿದ ಸುಳ್ಳು ಆಪಾದನೆಯನ್ನೂ ಹೊರಬೇಕಾಗುತ್ತದೆ. ದೇಶವಿಭಜನೆಯಂತಹ ರಾಜಕೀಯ ವಿದ್ಯಮಾನವೊಂದು, ಕುಟುಂಬದಲ್ಲಿ ಎಬ್ಬಿಸುವ ಸಂಕಟಗಳನ್ನು ತೆರೆತೆರೆಯಾಗಿ ಚಿತ್ರ ಹಿಡಿಯುತ್ತ ಹೋಗುತ್ತದೆ. ವಿಭಜನೆಯ ಬಳಿಕ ಭಾರತದಲ್ಲೇ ಉಳಿಯಲು ನಿರ್ಧರಿಸಿದ ಮುಸ್ಲಿಮರು, ಹಳೆಯ ಮಾನವ ಸಂಬಂಧಗಳೆಲ್ಲ ಭಗ್ನವಾಗಿ ಹುಟ್ಟಿರುವ ಘೋರವಾದ ಅವಿಶ್ವಾಸದ ವಾತಾವರಣದಲ್ಲಿ ಅನುಭವಿಸಿದ ಕಷ್ಟಗಳನ್ನು ಕಾಣಿಸುತ್ತದೆ. ಈ ಅಪನಂಬಿಕೆಯ ವಾತಾವರಣದಲ್ಲಿ ಬದುಕಲಾಗದೆ ಕುಟುಂಬದ ಒಬ್ಬೊಬ್ಬರೇ ಭಾರತ ಬಿಟ್ಟು ಹೋಗುತ್ತಾರೆ. ಆದರೆ ಕುಟುಂಬದ ಅಜ್ಜಿ, ಅಪ್ಪ ಮತ್ತು ಮಗ ಮಾತ್ರ ಭಾರತದಲ್ಲೇ ಉಳಿಯಲು ಛಲತೊಡುತ್ತಾರೆ.

ಅಪ್ಪ ಮಕ್ಕಳಿಗೆ ಈ ನಿರ್ಧಾರವು ಅವರ ಸಾರ್ವಜನಿಕ ಬದುಕಿನ ಅನುಭವ ಮತ್ತು ರಾಜಕೀಯ ಪ್ರಜ್ಞೆಯ ಫಲ. ಆದರೆ ಈ ಕುಟುಂಬದ ಸದಸ್ಯರಾದ ಒಬ್ಬ ಮುದುಕಿ ಮತ್ತು ತರುಣಿ ಕೂಡ ವಲಸೆಹೋಗಲು ತಮ್ಮದೇ ಕಾರಣಕ್ಕೆ ನಿರಾಕರಿಸುವವರು. ಮುದುಕಿಗೆ ತನ್ನ ದೇಶ ಪರದೇಶ ಎಂದರೇನು ಗೊತ್ತಿಲ್ಲ. ತಾನು ಮದುವೆಯಾಗಿ ಬಂದಾಗ ಮನೆದುಂಬಿಸಿಕೊಂಡ ಮನೆಯನ್ನು ಬಿಟ್ಟು ಅವಳಿಗೆ ಬೇರೆ ದೇಶದ ಕಲ್ಪನೆಯೇ ಗೊತ್ತಿಲ್ಲ. ಖಯಾಮತ್ ದಿನ ತೀರಿಹೋಗಿರುವ ತನ್ನ ಗಂಡ ‘ನಮ್ಮ ಮನೆಯನ್ನು ಬಿಟ್ಟು ಬೇರೆ ಮನೆಯಲ್ಲಿ ಸತ್ತೆಯಾ?’ ಎಂದರೆ ನಾನೇನೆಂದು ಉತ್ತರಿಸಲಿ ಎನ್ನುವುದು ಅವಳ ಪ್ರಶ್ನೆ. ಕಡೆಗೂ ಅವಳು ತಾನು ಲಗ್ನವಾದ ಹವೇಲಿಯಲ್ಲಿಯೇ ಸಂತೋಷದಿಂದ ಸಾಯುತ್ತಾಳೆ. ಇನ್ನು ತರುಣಿ, ತನ್ನನ್ನು ಪ್ರೇಮಿಸಿದ ತರುಣರು ಭಾರತದಲ್ಲಿ ತಮಗೆ ನೌಕರಿ ಸಿಗುತ್ತಿಲ್ಲವೆಂದು ಹೇಳಿ ಪಾಕಿಸ್ತಾನಕ್ಕೆ ವಲಸೆ ಹೋದವರು, ಮರಳಿ ಬರುವುದನ್ನೇ ಕಾಯುತ್ತಾಳೆ. ಆದರೆ ಅವರು ಅಲ್ಲೇ ಮದುವೆಯಾಗಿ ನೆಲೆಸಲು ನಿಶ್ಚಯಿಸಿದ್ದಾರೆಂದು ತಿಳಿದು ಅತ್ಮಹತ್ಯೆ ಮಾಡಿಕೊಳ್ಳುತ್ತಾಳೆ-ತಾಯಿ ತನಗಾಗಿ ಹೆಣೆದ ಮದುಮಗಳ ತಲೆವಸ್ತ್ರವನ್ನು ಧರಿಸಿ ಬ್ಲೇಡಿನಲ್ಲಿ ಕೈಯ ನರವನ್ನು ಕೊಯ್ದುಕೊಂಡು.

ಎಂ.ಎಸ್. ಸತ್ಯು

ದೇಶವಿಭಜನೆ ಮತ್ತು ಹೊಸರಾಷ್ಟ್ರದ ಉದಯದಂತಹ ಬೃಹತ್ ರಾಜಕೀಯ ಘಟನೆಗಳಿಗೆ ಬಹುತೇಕವಾಗಿ ಸಾಮಾನ್ಯ ಜನ ಕಾರಣರಲ್ಲ. ಆದರೆ ಈ ಘಟನೆಗಳ ದುರಂತ ಫಲವನ್ನು ಅವರು ಉಣ್ಣಬೇಕಾಗುತ್ತದೆ. ಈ ಕಷ್ಟಗಳಲ್ಲೂ ಕುಟುಂಬದೊಳಗಿನ ಪ್ರೇಮ ವಾತ್ಸಲ್ಯ ಜಗಳದಂತಹ ಮಾನವ ಸಂಬಂಧದ ಮುಖಗಳನ್ನು ಚಿತ್ರ ಹಿಡಿದುಕೊಡುತ್ತದೆ. ಮುನಿಸಿಕೊಳ್ಳುವ ಅಪ್ಪನಿಗೆ ಮಗಳು ಕದ್ದು ತಂದು ರೊಟ್ಟಿ ತಿನಿಸುವ ದೃಶ್ಯ, ತಾನು ಹುಟ್ಟಿಬೆಳೆದ ಮನೆಯನ್ನು ಬಿಟ್ಟುಬರಲು ನಿರಾಕರಿಸಿ ಸೌದೆಗೂಡಿನಲ್ಲಿ ಅಡಗಿಕೊಳ್ಳುವ ಮುದುಕಿಯನ್ನು ಬಲಾತ್ಕಾರವಾಗಿ ಎತ್ತಿಕೊಂಡು ಹೋಗುವ ದೃಶ್ಯವಾಗಲಿ ಇಂತಹವು. ಇಂತಹುದೇ ಕಷ್ಟ-ಸುಖಗಳನ್ನು ಪಾಕಿಸ್ತಾನದಲ್ಲಿ ತಮ್ಮ ಊರುಮನೆಗಳಲ್ಲೇ ಉಳಿದ ಮುಸ್ಲಿಮೇತರ ಕುಟುಂಬಗಳೂ ಅನುಭವಿಸುತ್ತಿರಬಹುದು ಎಂಬ ಧ್ವನಿಯನ್ನು ಚಿತ್ರ ಚಿಮ್ಮಿಸುತ್ತದೆ. ರಾಜಕೀಯ ಸಂದರ್ಭದ ಒತ್ತಡದಿಂದ ಕೆಲವರು ಎಷ್ಟೇ ಸಮುದಾಯ ಶಂಕೆ, ದ್ವೇಷ ಮಾಡಲಿ, ಜನರ ನೋವಿಗೆ ಧರ್ಮಾತೀತವಾಗಿ ಮಿಡಿವ ಜೀವಗಳು ಅದೇ ಸಮಾಜದಲ್ಲಿ ಇರುತ್ತವೆ ಎಂಬ ಸತ್ಯವನ್ನು ಚಿತ್ರ ಕಾಣಿಸುತ್ತದೆ. ‘ಸಂಬಂಜ ಎಂಬುದು ದೊಡ್ಡದು ಕನಾ’ ಎಂದು ಬಿಂಬಿಸುತ್ತದೆ.

ಅಂತಃಕರಣ ಮಿಡಿವ ಈ ಚಿತ್ರವು ಒಂದು ಶ್ರೇಷ್ಠ ಕಲಾಕೃತಿಯೂ ಆಗಿದೆ. ಇಲ್ಲಿ ಉತ್ತರ ಪ್ರದೇಶದ ಉಚ್ಚವರ್ಗದ ಮುಸ್ಲಿಮರ ಬದುಕಿನ ಊಟ ಉಡುಪು ಭಾಷೆಯನ್ನು ಒಳಗೊಂಡ ರಿವಾಜುಗಳನ್ನು ಸಮರ್ಥವಾಗಿ ಹಿಡಿಯಲಾಗಿದೆ. ಕಥೆ ಜರುಗುವ ಗಲ್ಲಿ ಮತ್ತು ಹವೇಲಿಗಳು, ತನ್ನ ಸ್ಥಳೀಯ ವಾಸ್ತುಶಿಲ್ಪದ ಜತೆಯಲ್ಲಿ ತಾವೂ ಪಾತ್ರಗಳಾಗಿವೆ. ಚಿತ್ರದ ಪ್ರತಿಯೊಂದು ಫ್ರೇಮ್ ಕೂಡ ಅರ್ಥಪೂರ್ಣ ಕಾವ್ಯದ ಒಂದೊಂದು ಸಾಲಿನಂತಿದೆ. ನೆಳಲು ಬೆಳಕಿನ ಸಂಯೋಜನೆಯು ದೇಶವಿಭಜನೆಯ ಒಳಿತುಕೇಡುಗಳ ಸಂಕೇತದಂತೆ ಇಡೀ ಚಿತ್ರದಲ್ಲಿ ಆವರಿಸಿಕೊಂಡಿದೆ. ಧನಿಪೂರ್ಣವೂ ಸಂಕ್ಷಿಪ್ತವೂ ಆದ ಸಂಭಾಷಣೆಯಿರುವ ಚಿತ್ರದಲ್ಲಿ ವಾಚಾಳಿತನವಿಲ್ಲ. ಮುಖಭಾವದಲ್ಲೇ ತಮ್ಮ ಒಳಗನ್ನು ಪ್ರಕಟಿಸುವ ಪ್ರಬುದ್ಧ ನಟನೆಯಿಂದ ಕೂಡಿದೆ. ಬಲರಾಜರ ಅಭಿನಯವಂತೂ ಮನೋಜ್ಞ. ದುರಂತವೆಂದರೆ, ಈ ಚಿತ್ರ ಬಿಡುಗಡೆಯಾಗುವ ಹೊತ್ತಿಗೆ ಬಲರಾಜ್ ತೀರಿಕೊಂಡಿದ್ದರು.

1983ರಲ್ಲಿ ನಾನು ಕನ್ನಡ ಎಂ.ಎ.ಯಲ್ಲಿ ರ್‍ಯಾಂಕ್ ಪಡೆದಾಗ, ಆ ಹುಡುಗನನ್ನು ನೋಡಬೇಕಲ್ಲ ಎಂದು ಆಸೆಪಟ್ಟು ನನ್ನನ್ನು ತಮ್ಮ ಸಹಾಯಕರಾಗಿದ್ದ ಶಿರಾಳಕೊಪ್ಪದ ರಾಮಸ್ವಾಮಿಯವರ ಮೂಲಕ ಕರೆಸಿಕೊಂಡಿದ್ದರು. ಔತಣಕೊಟ್ಟು ಪ್ರೀತಿವಿಶ್ವಾಸ ತೋರಿದ್ದರು. ಕಾಲುಶತಮಾನದ ಬಳಿಕ, ನನ್ನ ‘ಅಮೀರಬಾಯಿ ಕರ್ನಾಟಕಿ’ ಓದಿ, ಬೆಂಗಳೂರಿನಲ್ಲಿ ಒಂದು ಚರ್ಚೆ ಇಟ್ಟುಕೊಂಡಿದ್ದರು. ಅವರೂ ಚಿರಂಜೀವಿಸಿಂಗರೂ ಮಾತಾಡಿದರು. ಮುಂಬೈ ಸಿನಿಮಾ ಜಗತ್ತಿಗೆ ಉತ್ತರ ಕರ್ನಾಟಕದ ಕೊಡುಗೆಯನ್ನು ಬಿಂಬಿಸುವ ಮ್ಯೂಸಿಯಮ್ಮನ್ನು ಬಿಜಾಪುರದ ಅಮೀರಬಾಯಿ ಅವರ ಹಳೆಯ ಮನೆಯಲ್ಲಿ ಮಾಡುವ ಕನಸನ್ನು ಸತ್ಯು ತಮ್ಮ ಪತ್ರದ ಮೂಲಕ ಹಂಚಿಕೊಂಡಿದ್ದರು. ಎಂ.ಎಸ್. ಸತ್ಯು ಹಾಗೂ ರಾಜೀವ ತಾರಾನಾಥ್ ಕರ್ನಾಟಕದಲ್ಲಿ ಹುಟ್ಟಿ ಭಾರತದಲ್ಲಿ ಹರಡಿದ ಪರಂಪರೆಯೊಂದರ ಎರಡು ಕೊಂಡಿಗಳಂತೆ ತೋರುತ್ತಾರೆ.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ.


ಇದನ್ನೂ ಓದಿ: ವಿಧಾನ ಪರಿಷತ್ ಖಂಡಿತಾ ಉಳಿಸಿಕೊಳ್ಳಬೇಕಿದೆ; ಉತ್ತಮ ಪ್ರತಿನಿಧಿತ್ವಕ್ಕಾಗಿ ಸುಧಾರಣೆಗಳ ಜೊತೆಗೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...