Homeಕರ್ನಾಟಕಮಾನವತಾವಾದಿ ಕವಿಯ ಕಣ್ಮರೆ

ಮಾನವತಾವಾದಿ ಕವಿಯ ಕಣ್ಮರೆ

- Advertisement -
- Advertisement -

ನಾನು ಎಂ.ಎ. ಕಲಿಯುವಾಗ ಗುರುಗಳಾದ ಜಿ.ಎಚ್. ನಾಯಕರು ತರಗತಿಗಳಲ್ಲಿ ಬೇಂದ್ರೆ ಮತ್ತು ಅಡಿಗರನ್ನು ವಿಶೇಷವಾಗಿ ಚರ್ಚಿಸುತ್ತಿದ್ದರು. ಕಣವಿ-ನರಸಿಂಹಸ್ವಾಮಿ ಮುಂತಾದವರನ್ನು ಪ್ರಸ್ತಾಪಿಸಿದರೂ ಅವರನ್ನು ಮೈನರ್ ಕವಿಗಳೆಂದು ಕರೆಯುತ್ತಿದ್ದರು. ಅದೊಂದು ಬಗೆಯಲ್ಲಿ ಗಂಭೀರ ಚರ್ಚೆಗೆ ಅರ್ಹರಲ್ಲ ಎಂಬ ಉಪೇಕ್ಷಿತ ದನಿಯನ್ನು ಒಳಗೊಂಡಿತ್ತು. ಅಡಿಗರು ರೂಪಿಸಿದ ಈ ಕ್ಲಾಸಿಕಲ್ ಕಾವ್ಯಧೋರಣೆಯು ನವ್ಯವಿಮರ್ಶೆಯ ಬಹುತೇಕ ನಿಲುವಾಗಿತ್ತು. ಇದು ತರುಣರಾದ ನಮಗ ಗಾಢವಾಗಿ ಆವರಿಸಿಕೊಂಡಿತ್ತು. ಹೀಗಿರುತ್ತ ಕಣವಿಯವರ ‘ಜೀವಧ್ವನಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಹುಮಾನ ಬಂದಿತು. ಶಿವಮೊಗ್ಗೆಯಲ್ಲಿ ಒಂದು ವಿಚಾರಸಂಕಿರಣ (1988) ಏರ್ಪಟ್ಟಿತು. ಆಗ ಸಾಹಿತ್ಯ ವಿಮರ್ಶೆಯ ಹತ್ಯಾರಗಳನ್ನು ಮಸೆಯುತ್ತ ತಿರುಗುತ್ತಿದ್ದ ಮತ್ತು ಆ ಕ್ಷೇತ್ರಕ್ಕೆ ಹೊಸಬನಾಗಿದ್ದ ನಾನು, ಪ್ರಬಂಧ ಮಂಡನೆ ಮಾಡಲೆಂದು ಕಣವಿಯವರ ಕಾವ್ಯವನ್ನು ಮೊದಲ ಸಲಕ್ಕೆ ಓದಿದೆ. ನವ್ಯವಿಮರ್ಶೆಯು ಹೇಗೆ ನಮ್ಮ ಕಾವ್ಯದ ಬಹುತ್ವವನ್ನು ಕಾಣಲು ಕಣ್ಣಿಗೆ ಪೊರೆಯನ್ನು ಕವಿಸಿದೆ ಎಂದು ಅರಿವಾಯಿತು.

‘ಕುಸುಮಾದಪಿ ಮೃದೂನಿ ವಜ್ರಾದಪಿ ಕಠೋರಾಣಿ’ ಎಂಬ ಮಾತಿದೆ. ವಜ್ರ ಮತ್ತು ಹೂವುಗಳ ಮೃದುತ್ವ ಮತ್ತು ಕಾಠಿಣ್ಯಗಳನ್ನು ಮಾನವ ಸ್ವಭಾವದ ಎರಡು ಅತ್ಯಂತಿಕ ರೂಪಕಗಳಾಗಿ ನೋಡುವ ಮಾತಿದು. ಈ ಅರ್ಥದಲ್ಲಿ ನರಸಿಂಹಸ್ವಾಮಿ, ಚೆನ್ನವೀರ ಕಣವಿ, ಹೂಮನಸ್ಸಿನ ಕವಿಗಳು. ಕಣವಿ ಕಾವ್ಯದಲ್ಲಿರುವ ಸಾರ್ವಜನಿಕರನ್ನು ಕುರಿತ ವ್ಯಕ್ತಿಚಿತ್ರಗಳು, ಸಮಾಜದ ಕೇಡುಗಳಿಗೆ ಮಾಡಿದ ಪ್ರತಿಕ್ರಿಯೆಗಳು, ನಿಸರ್ಗದ ವರ್ಣನೆಗಳು, ಸಾವಿನ ಧ್ಯಾನಗಳು ಎಲ್ಲವೂ ಅವರ ಸೌಮ್ಯತನದ ಗುಣವನ್ನು ಕಾಣಿಸುತ್ತವೆ. ತಾವು ಕೇಡೆಂದು ಪರಿಭಾವಿಸಿದ್ದನ್ನು ಆಕ್ರೋಶದಿಂದ ಮುಖಾಮುಖಿ ಮಾಡುವ ಕುವೆಂಪು-ಅಡಿಗ-ಲಂಕೇಶರಿಗೆ ಹೋಲಿಸಿದರೆ, ಕಣವಿ ಅವರದು ನವಿರಾದ ವಿಡಂಬನೆ. ಉದಾಹರಣೆಗೆ ಶಿಲಾವಿಗ್ರಹಗಳಿಗೆ ಕ್ಷೀರಾಭಿಷೇಕ ಮಾಡುವ ಆಚರಣೆಯನ್ನು ಮೌಢ್ಯವೆಂದು ಆರ್ಭಟಿಸಿ ಖಂಡಿಸುವುದಿಲ್ಲ. ಬದಲಿಗೆ “ಒಂದು ಹಾನಿಯೂ ಚೆಲ್ಲದಂತೆ ಬಯಲ ಬೊಗಸೆಯಲ್ಲಿ ಹಿಡಿದು ದೂರದೂರದ ಕಪ್ಪುಮಕ್ಕಳನೆಲ್ಲ ಕರೆದು ಬೆಳ್ಳಗೆ ಕುಡಿಸಿದಂತೆ ನಾನೊಂದು ಕನಸುಕಂಡೆ” ಎಂದು ಬರೆದು, ಅದನ್ನು ನೋಡುವ ಇನ್ನೊಂದು ನೋಟವನ್ನು ಕೊಟ್ಟುಬಿಡುತ್ತಾರೆ. ಇಲ್ಲಿ ‘ನಾನೊಂದು’ ಎನ್ನುವಲ್ಲಿ ನೊಂದ ಭಾವವೂ ಇರುವುದು ಗಮನಾರ್ಹ. ಈ ಸೌಮ್ಯತನ ಅವರ ಕಾವ್ಯವನ್ನು ಮತ್ತೊಂದು ಎತ್ತರಕ್ಕೆ ಹೋಗದಂತೆ ತಡೆದ ತೊಡಕೂ ಆಯಿತು. ಬಾಳನ್ನು ಲೋಕವನ್ನು ಒಂದು ಕೇಡಿನ ಭಾವವಿಲ್ಲದೆ, ಅದರೊಳಗಿನ ಸಮೃದ್ಧಿಯ ಮೂಲಕ ಬದುಕಬೇಕೆಂದು ಸದಾ ಹಂಬಲಿಸಿದವರು ಅವರು. ಹೀಗಾಗಿಯೇ ಅವರಲ್ಲಿ ನಿಸರ್ಗ ಕವಿತೆಗಳು ಪ್ರಕೃತಿವರ್ಣನೆಗೆ ಸೀಮಿತವಾಗುವುದಿಲ್ಲ. ಅವು ಬದುಕಿನ ರಹಸ್ಯವನ್ನು ಹೇಳುವ ಪ್ರತೀಕಗಳಾಗುತ್ತವೆ:

ನೆಲಕುದುರಿ ಬಿದ್ದ ಹಣ್ಣೆಲೆಯ ಮಣ್ಣುಗೊಬ್ಬರ ಮಾಡಿ
ತನ್ನೊಳಗೆ ರುಬ್ಬುವುದು
ಹೂವು-ಹಣ್ಣು ಗಿಡದ ಎಡೆಬಿಡದ ಕಾಣಿಕೆ
ಸಾವು-ನೋವು ನಮ್ಮ ದಿನದ ಹೊಂದಾಣಿಕೆ

ಇಲ್ಲಿ ಅಡಗಿರುವ ಜೀವನ ದರ್ಶನ ಗಮನಿಸಬೇಕು. ಈ ಲೋಕದ ಯಾವ ವಸ್ತುವೂ, ಕ್ರಿಯೆಯೂ ವ್ಯರ್ಥವಲ್ಲ. ಅವುಗಳಲ್ಲಿ ಬದುಕು ಚಲಿಸುವ ಯಾವುದೊ ಅರ್ಥಪೂರ್ಣವಾದ ಒಂದು ಸತ್ಯವಿರುತ್ತದೆ. ಹೀಗಾಗಿ ಎಲ್ಲವನ್ನು ಸೂಕ್ಷ್ಮವಾಗಿ ನಿರುಕಿಸುವ ಸಂವೇದನೆಯನ್ನು ಅವರ ಕಾವ್ಯ ಓದುಗರಿಗೆ ದಾಟಿಸುತ್ತದೆ. ಮರವು ಮಾಗಿದ ಫಲವನ್ನು ಬಿಡಲು ಕಾಯುವಂತೆ, ಹೆಪ್ಪುಂಡ ಹಾಲು ತುಪ್ಪವಾಗಲು ಕಾಯುವಂತೆ, ಕಾಯುವಿಕೆಯಲ್ಲಿ ಜೀವನದ ಅರ್ಥವಿದೆ ಎಂದು ಕಾಣಿಸುತ್ತದೆ. ಕಣವಿಯವರಷ್ಟು ನೆಲಮುಗಿಲುಗಳ ಸಂಬಂಧವನ್ನು ಶೋಧಿಸಿದವರು ಬೇರೆಯಿಲ್ಲ. ಮಗು ದುಂಬಿಯಂತೆ ಗುಂಜನ ಮಾಡುವಂತೆ ಆಡುವುದನ್ನು ಸಂಭ್ರಮದಿಂದಲೂ, ನಿರ್ದಯವಾದ ಮೃತ್ಯು ಜೀವವನ್ನು ಸೆಳೆದುಕೊಂಡು ಹೋಗಬಲ್ಲ ಕಟುತ್ವವನ್ನು ಅಸಹಾಯಕ ವಿಷಾದದಿಂದಲೂ ಏಕಕಾಲಕ್ಕೆ ಅವರ ಕಾವ್ಯ ಹೇಳಬಲ್ಲದಾಗಿತ್ತು.

ಚನ್ನವೀರ ಕಣವಿ

ಕನ್ನಡದಲ್ಲಿ ಉತ್ತರ ಕರ್ನಾಟಕದ ಕೃಷಿಕ ಜನಪದ ಪರಂಪರೆಯ ಸತ್ವವನ್ನು ಚೆನ್ನಾಗಿ ದುಡಿಸಿಕೊಂಡ ಕವಿಗಳಲ್ಲಿ ಬೇಂದ್ರೆಯವರಂತೆ ಕಣವಿಯವರೂ ಬರುತ್ತಾರೆ. ತಮ್ಮದೇ ಪರಿಸರದಲ್ಲಿ ತಮ್ಮದೇ ಪ್ರಕಾರದಲ್ಲಿ ಪ್ರಭಾವಶಾಲಿಯಾಗಿದ್ದ ಬೇಂದ್ರೆಯವರ ಅನುಕರಣೆ ಆಗದಂತೆ, ತಮ್ಮದೇ ಹಾದಿಯನ್ನು ರೂಪಿಸಿಕೊಳ್ಳಲು ಮಾಡಿದ ಸೆಣಸಾಟವು ಅವರ ಕಾವ್ಯದ ಚಹರೆಯನ್ನು ರೂಪಿಸಿತು. ಇದಕ್ಕಾಗಿ ಅವರು ಭೌತಿಕವಾಗಿ ದೂರದ ಮೈಸೂರಲ್ಲಿದ್ದ ಕುವೆಂಪು ಅವರ ವಿಶ್ವಮಾನವ ಪ್ರಜ್ಞೆಯನ್ನು ಸ್ವೀಕರಿಸಿದರು. ಕಾಲದ ದೃಷ್ಟಿಯಿಂದ ದೂರದಲ್ಲಿದ್ದ ಶರಣರ ತತ್ವಗಳನ್ನು ತಮ್ಮ ಕಾವ್ಯದಲ್ಲಿ ಮರುಶೋಧ ಮಾಡಿದರು. ಮಹತ್ವಾಕಾಂಕ್ಷೆಯಿಲ್ಲದೆ, ತಾನು ಕಂಡ ಲೋಕವನ್ನು ಉಂಡ ಅನುಭವವನ್ನು ಸೂಕ್ಷ್ಮಸಂವೇದನೆಯ ಕಾವ್ಯವಾಗಿ ರೂಪಿಸಿದ ಕಣವಿಯವರ ಕವನಗಳು, ಸಾಗರದಲೆಗಳಲ್ಲ. ಕಾಡಿನಂಚಿನಲ್ಲಿ ಜುಳುಜುಳು ಹರಿವ ತಣ್ಣನೆಯ ತೊರೆಗಳು. ಕೈಮಗ್ಗದಲ್ಲಿ ನೇದ ಬಣ್ಣಬಣ್ಣದ ಕರವಸ್ತ್ರಗಳು. ಲೋಕವನ್ನು ಬಿಟ್ಟು ತೆರಳುವ ಎಲ್ಲ ದೊಡ್ಡಲೇಖಕರು, ಸಾಧಕರು, ಸಾಂಪ್ರದಾಯಿಕ ಶ್ರದ್ಧಾಂಜಲಿಯನ್ನು ಹೊಸತಲೆಮಾರಿನಿಂದ ಬಯಸುವುದಿಲ್ಲ. ತಮ್ಮ ಕಾವ್ಯವನ್ನು ಅಥವಾ ಕಾರ್ಯವನ್ನು ಹೊಸಗಣ್ಣಲ್ಲಿ ಓದುವ, ಅರ್ಥೈಸುವ, ಅವರ ಜೀವನತತ್ವವನ್ನು ಹೊಸ ಪರಿಭಾಷೆಯಲ್ಲಿ ಗ್ರಹಿಸುವ ಹೊಣೆಯನ್ನು ಹೊಸತಲೆಮಾರಿನ ಮುಂದಿಟ್ಟು ಹೋಗುತ್ತಾರೆ. ಕಣವಿಯವರಂತಹ ಮಾನವತಾವಾದಿ ಕವಿಯೂ ಈ ಸವಾಲನ್ನು ಮುಂದಿಟ್ಟು ನಿರ್ಗಮಿಸಿದ್ದಾರೆ.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ.


ಇದನ್ನೂ ಓದಿ: ಹಳತು-ವಿವೇಕ; ‘ಸಮನ್ವಯ ಮಾಡಿಕೊಳ್ಳದಿದ್ದರೆ ಕಾವ್ಯ ಹೇಗಾಗುತ್ತೆ?’ ಚೆನ್ನವೀರ ಕಣವಿ ಅವರ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....