Homeಮುಖಪುಟಆ ಮಹಿಳೆಗೆ ಭಗತ್ ಸಿಂಗ್‌ರಂತ ಬ್ರಿಟಿಷರಿಗೆ ಕ್ಷಮೆ ಕೇಳದ ಹುತಾತ್ಮರ ಬಗ್ಗೆ ನೆನಪಿಸಿ; ಸಂಗೀತ ನಿರ್ದೇಶಕ...

ಆ ಮಹಿಳೆಗೆ ಭಗತ್ ಸಿಂಗ್‌ರಂತ ಬ್ರಿಟಿಷರಿಗೆ ಕ್ಷಮೆ ಕೇಳದ ಹುತಾತ್ಮರ ಬಗ್ಗೆ ನೆನಪಿಸಿ; ಸಂಗೀತ ನಿರ್ದೇಶಕ ವಿಶಾಲ್ ದದ್ಲಾನಿ

ವಿನಯದಿಂದ ಆದರೆ ಗಟ್ಟಿ ದನಿಯಲ್ಲಿ ಆ ಮಹಿಳೆಗೆ ನೆನಪಿಸಿ. ಆದ್ದರಿಂದ ಆಕೆ ಇನ್ನೆಂದಿಗೂ ಇವರನ್ನು ಮರೆಯಲು ಧೈರ್ಯ ಮಾಡುವುದಿಲ್ಲ...

- Advertisement -
- Advertisement -

ಭಾರತಕ್ಕೆ ಸ್ವಾತಂತ್ರ್ಯ ಬಂದ ಕುರಿತು ವಿವಾದಿತ ಹೇಳಿಕೆ ನೀಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಬಾಲಿವುಡ್‌ನ ಖ್ಯಾತ ಸಂಗೀತ ನಿರ್ದೇಶದ ವಿಶಾಲ್ ದದ್ಲಾನಿ ಕಿಡಿಕಾರಿದ್ದಾರೆ. ಕಂಗನಾ ಹೆಸರು ಪ್ರಸ್ತಾಪಿಸಿದೇ ಅವರಿಗೆ ಭಾರತದ ಸ್ವಾತಂತ್ರ್ಯ ವೀರರ ಕುರಿತು ಇನ್ಸ್ಟಾಗ್ರಾಮ್ ಮತ್ತು ಟ್ವಿಟರ್‌ನಲ್ಲಿ ಪಾಠ ಮಾಡಿದ್ದಾರೆ.

ಭಗತ್ ಸಿಂಗ್ ಫೋಟೊ ಇರುವ ಮತ್ತು ಜಿಂದಾಬಾದ್ ಎಂದು ಬರೆದಿರುವ ಟೀ ಶರ್ಟ್ ತೊಟ್ಟಿರುವ ಫೋಟೊವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ವಿಶಾಲ್ ದದ್ಲಾನಿ, ನಮ್ಮ ಸ್ವಾತಂತ್ರ್ಯ ಹೋರಾಟವನ್ನು ಭಿಕ್ಷೆ ಎಂದು ಕರೆದ ಮಹಿಳೆಗೆ ಭಗತ್ ಸಿಂಗ್, ಸುಖ್‌ದೇವ್‌ರಂತ ಬ್ರಿಟಿಷರಿಗೆ ಕ್ಷಮೆ ಕೇಳದ ಹುತಾತ್ಮರ ಬಗ್ಗೆ ನೆನಪಿಸಿ ಎಂದು ಕರೆ ನೀಡಿದ್ದಾರೆ.

 

View this post on Instagram

 

A post shared by VISHAL (@vishaldadlani)

ನನ್ನ ಟೀ ಶರ್ಟ್‌ನಲ್ಲಿರುವ ಈ ವ್ಯಕ್ತಿ ಶಹೀದ್ ಸರ್ದಾರ್ ಭಗತ್ ಸಿಂಗ್. ನಾಸ್ತಿಕ, ಕವಿ ತತ್ವಜ್ಞಾನಿ, ಸ್ವಾತಂತ್ರ್ಯ ಹೋರಾಟಗಾರ, ಭಾರತದ ಮತ್ತು ರೈತನ ಮಗ. ಅವರು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಕೇವಲ 23 ನೇ ವಯಸ್ಸಿನಲ್ಲಿಯೇ ಹೋರಾಡಿ ನಗುತ್ತಾ ಘೋಷಣೆಗಳೊಂದಿಗೆ ನೇಣುಗಂಬಕ್ಕೆ ಕೊರಳೊಡ್ಡಿದ ಹುತಾತ್ಮ. ಆ ಮಹಿಳೆಗೆ ಭಗತ್ ಸಿಂಗ್, ಸುಖದೇವ್, ರಾಜಗುರು, ಅಶ್ಫಕುಲ್ಲಾರಂತಹ ಬ್ರಿಟಿಷರಿಗೆ ಶರಣಾಗಲು ಮತ್ತು ಕ್ಷಮೆ ಭಿಕ್ಷೆ ಕೇಳಲು ನಿರಾಕರಿಸಿದ ಸಾವಿರಾರು ಹುತಾತ್ಮರ ಬಗ್ಗೆ ನೆನಪಿಸಿ ಎಂದು ವಿಶಾಲ್ ಬರೆದುಕೊಂಡಿದ್ದಾರೆ.

ವಿನಯದಿಂದ ಆದರೆ ಗಟ್ಟಿ ದನಿಯಲ್ಲಿ ಆ ಮಹಿಳೆಗೆ ನೆನಪಿಸಿ. ಆದ್ದರಿಂದ ಆಕೆ ಇನ್ನೆಂದಿಗೂ ಇವರನ್ನು ಮರೆಯಲು ಧೈರ್ಯ ಮಾಡುವುದಿಲ್ಲ ಎಂದು ಅವರು ಬರೆದಿದ್ದಾರೆ.

ತಮ್ಮ ಇಡೀ ಪೋಸ್ಟ್‌ನಲ್ಲಿ ಕಂಗನಾ ಹೆಸರು ಪ್ರಸ್ತಾಪಿಸದ ವಿಶಾಲ್ ಪರೋಕ್ಷವಾಗಿ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ ಮತ್ತು ಭಾರತದ ಸ್ವಾತಂತ್ರ್ಯ ವೀರರ ಧೈರ್ಯ, ಹೋರಾಟದ ಕುರಿತು ಪ್ರಸ್ತಾಪಿಸಿದ್ದಾರೆ.

ಬುಧವಾರ (ನ.10) ಖಾಸಗಿ ಟೆಲಿವಿಷನ್ ಚಾನೆಲ್ ಟೈಮ್ಸ್ ನೌ ಆಯೋಜಿಸಿದ್ದ ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದ್ದ ನಟಿ ಕಂಗನಾ ರಣಾವತ್ ಹಿಂದಿಯಲ್ಲಿ ಮಾತನಾಡುತ್ತಾ, “1947 ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ. ದೇಶಕ್ಕೆ ನಿಜವಾದ ಸ್ವಾತಂತ್ರ್ಯ 2014 ರಲ್ಲಿ ಬಂದಿದೆ” ಎಂದಿದ್ದರು. ಆ ಮೂಲಕ 2014 ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ಸ್ವತಂತ್ರಗೊಂಡಿದೆ ಎಂಬರ್ಥದಲ್ಲಿ ಕಂಗನಾ ಮಾತನಾಡಿದ್ದರು. ಬಿಜೆಪಿ ಸಂಸದ ವರುಣ್ ಗಾಂಧಿ ಸೇರಿದಂತೆ ಲಕ್ಷಾಂತರ ಜನ ಕಂಗನಾ ಹೇಳಿಕೆಯನ್ನು ಖಂಡಿಸಿದ್ದರು.

ಆದರೆ ಕಂಗನಾ ರಣಾವತ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಅದನ್ನು ಯಾರಾದರೂ ತಪ್ಪೆಂದು ಸಾಬೀತುಪಡಿಸಿದರೆ ತನಗೆ ಸಿಕ್ಕಿರುವ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಮಾಡುತ್ತೇನೆ ಎಂದು ಸವಾಲು ಹಾಕಿದ್ದಾರೆ.


ಇದನ್ನೂ ಓದಿ: ನನ್ನ ಹೇಳಿಕೆ ತಪ್ಪೆಂದು ಸಾಬೀತುಪಡಿಸಿದರೆ ಪದ್ಮಶ್ರೀ ವಾಪಸ್ ಮಾಡುತ್ತೇನೆ: ಕಂಗನಾ ರಣಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಷ್ಟು ದಿನ ಗುಲಾಮರಿಗೆ ಮಾತ್ರವೇ ಸ್ವಾತಂತ್ರ ಬಂದಿತ್ತು,ನಕಲಿ ಗಾಂಧಿ ಪರಿವಾರ ಮಾತ್ರವೇ ಸ್ವಾತಂತ್ರ ಅನುಭವಿಸುತ್ತಿದ್ದಿತು,2014 ರಿಂದ ಮಾತ್ರವೇ ದೇಶದ ಎಲ್ಲಾ ಪರಿವಾರದ ಜನ ಸಾಮಾನ್ಯನಾಗೂ ಸ್ವಾತಂತ್ರ ಸಿಕ್ಕಿದೆ.ತಮಗೆ ತಾವೇ ಭಾರತರತ್ನ ಪಡೆದ ನಕಲಿ ಗಾಂಧಿ ಕುಟುಂಬ ದಿಂದ ದೇಶ ಮುಕ್ತಿ ಪಡೆದ ದಿನದಿಂದಲೇ ಕಟ್ಟಕಡೆಯ ಸಾಮಾನ್ಯ ಕುಟುಂಬದ ಪ್ರಜೆಗೂ ದೇಶದ ಉನ್ನತ ಪ್ರಶಸ್ತಿಗಳು ದೊರೆಯುತ್ತಿರುವುದು .

LEAVE A REPLY

Please enter your comment!
Please enter your name here

- Advertisment -

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...

ಮಳೆಯೇ ಇಲ್ಲದೆ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಕಾರಣವೇನು?

ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು...

ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ಗೆ ಹೇಳಿಕೆಗಳ ಫ್ಯಾಕ್ಟ್-ಚೆಕ್: ಬಿಜೆಪಿಯಿಂದ ‘ಜೂಠ್ ಕೀ ಗೂಂಜ್’ ವೆಬ್‌ಸೈಟ್ ಆರಂಭ

ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಅವರ 'ಛಾತ್ರೋನ್ ಕೀ ಗೂಂಜ್' ಅಭಿಯಾನದ ವೇಳೆ ನೀಡಲಾದ ಹೇಳಿಕೆಗಳನ್ನು ಫ್ಯಾಕ್ಟ್-ಚೆಕ್ (ಸತ್ಯಾಸತ್ಯತೆ ಪರಿಶೀಲನೆ) ಮಾಡುವ ವೆಬ್‌ಸೈಟ್‌ ಒಂದನ್ನು ಉಲ್ಲೇಖಿಸಿರುವ ಬಿಜೆಪಿ, "ರಾಹುಲ್...

101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಮಳೆ ಕೊರತೆಯಿಂದ ತತ್ತರಿಸಿರುವ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು ₹350...

ಕೊಟ್ಟ ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5ರಂದು ಸಿಜೆಪಿಯಿಂದ ದೆಹಲಿಯಲ್ಲಿ ಶಾಂತಿಯುತ ಮೆರವಣಿಗೆ

ಜುಲೈ 25ರಂದು ದೇಶದ ಯುವಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಸೆಪ್ಟೆಂಬರ್ 5ರಂದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ...

Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ...

ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ!

ಬೆಂಗಳೂರು: ದೇಶದ ಪ್ರತಿಷ್ಠಿತ ಕಾನೂನು ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU), ತನ್ನ 34ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ದಿಢೀರ್ ರದ್ದುಗೊಳಿಸಿದೆ. ಸೆಪ್ಟೆಂಬರ್ 12 ರಂದು...

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...

Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಮತದಾರರ ಪಟ್ಟಿಯಿಂದ ಈಗಾಗಲೇ ಹೊರಗಿಟ್ಟಿರುವ 1.08 ಕೋಟಿ (1,07,96,415) ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ...

ನೇಪಾಳದಲ್ಲಿ ಜಲಪ್ರಳಯ: 300 ಭಾರತೀಯರು ಸೇರಿ 1,500 ಮಂದಿ ನಾಪತ್ತೆ, ಸಾವಿನ ಸಂಖ್ಯೆ 165ಕ್ಕೆ ಏರಿಕೆ

ನೇಪಾಳ ಮತ್ತು ಟಿಬೆಟ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ನಂತರ ಸುಮಾರು 1,500 ಜನರು ಕಾಣೆಯಾಗಿದ್ದಾರೆ. ಈ ಪ್ರವಾಹದಲ್ಲಿ 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್...