Homeಮುಖಪುಟಆ ಮಹಿಳೆಗೆ ಭಗತ್ ಸಿಂಗ್‌ರಂತ ಬ್ರಿಟಿಷರಿಗೆ ಕ್ಷಮೆ ಕೇಳದ ಹುತಾತ್ಮರ ಬಗ್ಗೆ ನೆನಪಿಸಿ; ಸಂಗೀತ ನಿರ್ದೇಶಕ...

ಆ ಮಹಿಳೆಗೆ ಭಗತ್ ಸಿಂಗ್‌ರಂತ ಬ್ರಿಟಿಷರಿಗೆ ಕ್ಷಮೆ ಕೇಳದ ಹುತಾತ್ಮರ ಬಗ್ಗೆ ನೆನಪಿಸಿ; ಸಂಗೀತ ನಿರ್ದೇಶಕ ವಿಶಾಲ್ ದದ್ಲಾನಿ

ವಿನಯದಿಂದ ಆದರೆ ಗಟ್ಟಿ ದನಿಯಲ್ಲಿ ಆ ಮಹಿಳೆಗೆ ನೆನಪಿಸಿ. ಆದ್ದರಿಂದ ಆಕೆ ಇನ್ನೆಂದಿಗೂ ಇವರನ್ನು ಮರೆಯಲು ಧೈರ್ಯ ಮಾಡುವುದಿಲ್ಲ...

- Advertisement -
- Advertisement -

ಭಾರತಕ್ಕೆ ಸ್ವಾತಂತ್ರ್ಯ ಬಂದ ಕುರಿತು ವಿವಾದಿತ ಹೇಳಿಕೆ ನೀಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಬಾಲಿವುಡ್‌ನ ಖ್ಯಾತ ಸಂಗೀತ ನಿರ್ದೇಶದ ವಿಶಾಲ್ ದದ್ಲಾನಿ ಕಿಡಿಕಾರಿದ್ದಾರೆ. ಕಂಗನಾ ಹೆಸರು ಪ್ರಸ್ತಾಪಿಸಿದೇ ಅವರಿಗೆ ಭಾರತದ ಸ್ವಾತಂತ್ರ್ಯ ವೀರರ ಕುರಿತು ಇನ್ಸ್ಟಾಗ್ರಾಮ್ ಮತ್ತು ಟ್ವಿಟರ್‌ನಲ್ಲಿ ಪಾಠ ಮಾಡಿದ್ದಾರೆ.

ಭಗತ್ ಸಿಂಗ್ ಫೋಟೊ ಇರುವ ಮತ್ತು ಜಿಂದಾಬಾದ್ ಎಂದು ಬರೆದಿರುವ ಟೀ ಶರ್ಟ್ ತೊಟ್ಟಿರುವ ಫೋಟೊವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ವಿಶಾಲ್ ದದ್ಲಾನಿ, ನಮ್ಮ ಸ್ವಾತಂತ್ರ್ಯ ಹೋರಾಟವನ್ನು ಭಿಕ್ಷೆ ಎಂದು ಕರೆದ ಮಹಿಳೆಗೆ ಭಗತ್ ಸಿಂಗ್, ಸುಖ್‌ದೇವ್‌ರಂತ ಬ್ರಿಟಿಷರಿಗೆ ಕ್ಷಮೆ ಕೇಳದ ಹುತಾತ್ಮರ ಬಗ್ಗೆ ನೆನಪಿಸಿ ಎಂದು ಕರೆ ನೀಡಿದ್ದಾರೆ.

 

View this post on Instagram

 

A post shared by VISHAL (@vishaldadlani)

ನನ್ನ ಟೀ ಶರ್ಟ್‌ನಲ್ಲಿರುವ ಈ ವ್ಯಕ್ತಿ ಶಹೀದ್ ಸರ್ದಾರ್ ಭಗತ್ ಸಿಂಗ್. ನಾಸ್ತಿಕ, ಕವಿ ತತ್ವಜ್ಞಾನಿ, ಸ್ವಾತಂತ್ರ್ಯ ಹೋರಾಟಗಾರ, ಭಾರತದ ಮತ್ತು ರೈತನ ಮಗ. ಅವರು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಕೇವಲ 23 ನೇ ವಯಸ್ಸಿನಲ್ಲಿಯೇ ಹೋರಾಡಿ ನಗುತ್ತಾ ಘೋಷಣೆಗಳೊಂದಿಗೆ ನೇಣುಗಂಬಕ್ಕೆ ಕೊರಳೊಡ್ಡಿದ ಹುತಾತ್ಮ. ಆ ಮಹಿಳೆಗೆ ಭಗತ್ ಸಿಂಗ್, ಸುಖದೇವ್, ರಾಜಗುರು, ಅಶ್ಫಕುಲ್ಲಾರಂತಹ ಬ್ರಿಟಿಷರಿಗೆ ಶರಣಾಗಲು ಮತ್ತು ಕ್ಷಮೆ ಭಿಕ್ಷೆ ಕೇಳಲು ನಿರಾಕರಿಸಿದ ಸಾವಿರಾರು ಹುತಾತ್ಮರ ಬಗ್ಗೆ ನೆನಪಿಸಿ ಎಂದು ವಿಶಾಲ್ ಬರೆದುಕೊಂಡಿದ್ದಾರೆ.

ವಿನಯದಿಂದ ಆದರೆ ಗಟ್ಟಿ ದನಿಯಲ್ಲಿ ಆ ಮಹಿಳೆಗೆ ನೆನಪಿಸಿ. ಆದ್ದರಿಂದ ಆಕೆ ಇನ್ನೆಂದಿಗೂ ಇವರನ್ನು ಮರೆಯಲು ಧೈರ್ಯ ಮಾಡುವುದಿಲ್ಲ ಎಂದು ಅವರು ಬರೆದಿದ್ದಾರೆ.

ತಮ್ಮ ಇಡೀ ಪೋಸ್ಟ್‌ನಲ್ಲಿ ಕಂಗನಾ ಹೆಸರು ಪ್ರಸ್ತಾಪಿಸದ ವಿಶಾಲ್ ಪರೋಕ್ಷವಾಗಿ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ ಮತ್ತು ಭಾರತದ ಸ್ವಾತಂತ್ರ್ಯ ವೀರರ ಧೈರ್ಯ, ಹೋರಾಟದ ಕುರಿತು ಪ್ರಸ್ತಾಪಿಸಿದ್ದಾರೆ.

ಬುಧವಾರ (ನ.10) ಖಾಸಗಿ ಟೆಲಿವಿಷನ್ ಚಾನೆಲ್ ಟೈಮ್ಸ್ ನೌ ಆಯೋಜಿಸಿದ್ದ ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದ್ದ ನಟಿ ಕಂಗನಾ ರಣಾವತ್ ಹಿಂದಿಯಲ್ಲಿ ಮಾತನಾಡುತ್ತಾ, “1947 ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ. ದೇಶಕ್ಕೆ ನಿಜವಾದ ಸ್ವಾತಂತ್ರ್ಯ 2014 ರಲ್ಲಿ ಬಂದಿದೆ” ಎಂದಿದ್ದರು. ಆ ಮೂಲಕ 2014 ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ಸ್ವತಂತ್ರಗೊಂಡಿದೆ ಎಂಬರ್ಥದಲ್ಲಿ ಕಂಗನಾ ಮಾತನಾಡಿದ್ದರು. ಬಿಜೆಪಿ ಸಂಸದ ವರುಣ್ ಗಾಂಧಿ ಸೇರಿದಂತೆ ಲಕ್ಷಾಂತರ ಜನ ಕಂಗನಾ ಹೇಳಿಕೆಯನ್ನು ಖಂಡಿಸಿದ್ದರು.

ಆದರೆ ಕಂಗನಾ ರಣಾವತ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಅದನ್ನು ಯಾರಾದರೂ ತಪ್ಪೆಂದು ಸಾಬೀತುಪಡಿಸಿದರೆ ತನಗೆ ಸಿಕ್ಕಿರುವ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಮಾಡುತ್ತೇನೆ ಎಂದು ಸವಾಲು ಹಾಕಿದ್ದಾರೆ.


ಇದನ್ನೂ ಓದಿ: ನನ್ನ ಹೇಳಿಕೆ ತಪ್ಪೆಂದು ಸಾಬೀತುಪಡಿಸಿದರೆ ಪದ್ಮಶ್ರೀ ವಾಪಸ್ ಮಾಡುತ್ತೇನೆ: ಕಂಗನಾ ರಣಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಷ್ಟು ದಿನ ಗುಲಾಮರಿಗೆ ಮಾತ್ರವೇ ಸ್ವಾತಂತ್ರ ಬಂದಿತ್ತು,ನಕಲಿ ಗಾಂಧಿ ಪರಿವಾರ ಮಾತ್ರವೇ ಸ್ವಾತಂತ್ರ ಅನುಭವಿಸುತ್ತಿದ್ದಿತು,2014 ರಿಂದ ಮಾತ್ರವೇ ದೇಶದ ಎಲ್ಲಾ ಪರಿವಾರದ ಜನ ಸಾಮಾನ್ಯನಾಗೂ ಸ್ವಾತಂತ್ರ ಸಿಕ್ಕಿದೆ.ತಮಗೆ ತಾವೇ ಭಾರತರತ್ನ ಪಡೆದ ನಕಲಿ ಗಾಂಧಿ ಕುಟುಂಬ ದಿಂದ ದೇಶ ಮುಕ್ತಿ ಪಡೆದ ದಿನದಿಂದಲೇ ಕಟ್ಟಕಡೆಯ ಸಾಮಾನ್ಯ ಕುಟುಂಬದ ಪ್ರಜೆಗೂ ದೇಶದ ಉನ್ನತ ಪ್ರಶಸ್ತಿಗಳು ದೊರೆಯುತ್ತಿರುವುದು .

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...