Homeಮುಖಪುಟಆ ಮಹಿಳೆಗೆ ಭಗತ್ ಸಿಂಗ್‌ರಂತ ಬ್ರಿಟಿಷರಿಗೆ ಕ್ಷಮೆ ಕೇಳದ ಹುತಾತ್ಮರ ಬಗ್ಗೆ ನೆನಪಿಸಿ; ಸಂಗೀತ ನಿರ್ದೇಶಕ...

ಆ ಮಹಿಳೆಗೆ ಭಗತ್ ಸಿಂಗ್‌ರಂತ ಬ್ರಿಟಿಷರಿಗೆ ಕ್ಷಮೆ ಕೇಳದ ಹುತಾತ್ಮರ ಬಗ್ಗೆ ನೆನಪಿಸಿ; ಸಂಗೀತ ನಿರ್ದೇಶಕ ವಿಶಾಲ್ ದದ್ಲಾನಿ

ವಿನಯದಿಂದ ಆದರೆ ಗಟ್ಟಿ ದನಿಯಲ್ಲಿ ಆ ಮಹಿಳೆಗೆ ನೆನಪಿಸಿ. ಆದ್ದರಿಂದ ಆಕೆ ಇನ್ನೆಂದಿಗೂ ಇವರನ್ನು ಮರೆಯಲು ಧೈರ್ಯ ಮಾಡುವುದಿಲ್ಲ...

- Advertisement -
- Advertisement -

ಭಾರತಕ್ಕೆ ಸ್ವಾತಂತ್ರ್ಯ ಬಂದ ಕುರಿತು ವಿವಾದಿತ ಹೇಳಿಕೆ ನೀಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಬಾಲಿವುಡ್‌ನ ಖ್ಯಾತ ಸಂಗೀತ ನಿರ್ದೇಶದ ವಿಶಾಲ್ ದದ್ಲಾನಿ ಕಿಡಿಕಾರಿದ್ದಾರೆ. ಕಂಗನಾ ಹೆಸರು ಪ್ರಸ್ತಾಪಿಸಿದೇ ಅವರಿಗೆ ಭಾರತದ ಸ್ವಾತಂತ್ರ್ಯ ವೀರರ ಕುರಿತು ಇನ್ಸ್ಟಾಗ್ರಾಮ್ ಮತ್ತು ಟ್ವಿಟರ್‌ನಲ್ಲಿ ಪಾಠ ಮಾಡಿದ್ದಾರೆ.

ಭಗತ್ ಸಿಂಗ್ ಫೋಟೊ ಇರುವ ಮತ್ತು ಜಿಂದಾಬಾದ್ ಎಂದು ಬರೆದಿರುವ ಟೀ ಶರ್ಟ್ ತೊಟ್ಟಿರುವ ಫೋಟೊವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ವಿಶಾಲ್ ದದ್ಲಾನಿ, ನಮ್ಮ ಸ್ವಾತಂತ್ರ್ಯ ಹೋರಾಟವನ್ನು ಭಿಕ್ಷೆ ಎಂದು ಕರೆದ ಮಹಿಳೆಗೆ ಭಗತ್ ಸಿಂಗ್, ಸುಖ್‌ದೇವ್‌ರಂತ ಬ್ರಿಟಿಷರಿಗೆ ಕ್ಷಮೆ ಕೇಳದ ಹುತಾತ್ಮರ ಬಗ್ಗೆ ನೆನಪಿಸಿ ಎಂದು ಕರೆ ನೀಡಿದ್ದಾರೆ.

 

View this post on Instagram

 

A post shared by VISHAL (@vishaldadlani)

ನನ್ನ ಟೀ ಶರ್ಟ್‌ನಲ್ಲಿರುವ ಈ ವ್ಯಕ್ತಿ ಶಹೀದ್ ಸರ್ದಾರ್ ಭಗತ್ ಸಿಂಗ್. ನಾಸ್ತಿಕ, ಕವಿ ತತ್ವಜ್ಞಾನಿ, ಸ್ವಾತಂತ್ರ್ಯ ಹೋರಾಟಗಾರ, ಭಾರತದ ಮತ್ತು ರೈತನ ಮಗ. ಅವರು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಕೇವಲ 23 ನೇ ವಯಸ್ಸಿನಲ್ಲಿಯೇ ಹೋರಾಡಿ ನಗುತ್ತಾ ಘೋಷಣೆಗಳೊಂದಿಗೆ ನೇಣುಗಂಬಕ್ಕೆ ಕೊರಳೊಡ್ಡಿದ ಹುತಾತ್ಮ. ಆ ಮಹಿಳೆಗೆ ಭಗತ್ ಸಿಂಗ್, ಸುಖದೇವ್, ರಾಜಗುರು, ಅಶ್ಫಕುಲ್ಲಾರಂತಹ ಬ್ರಿಟಿಷರಿಗೆ ಶರಣಾಗಲು ಮತ್ತು ಕ್ಷಮೆ ಭಿಕ್ಷೆ ಕೇಳಲು ನಿರಾಕರಿಸಿದ ಸಾವಿರಾರು ಹುತಾತ್ಮರ ಬಗ್ಗೆ ನೆನಪಿಸಿ ಎಂದು ವಿಶಾಲ್ ಬರೆದುಕೊಂಡಿದ್ದಾರೆ.

ವಿನಯದಿಂದ ಆದರೆ ಗಟ್ಟಿ ದನಿಯಲ್ಲಿ ಆ ಮಹಿಳೆಗೆ ನೆನಪಿಸಿ. ಆದ್ದರಿಂದ ಆಕೆ ಇನ್ನೆಂದಿಗೂ ಇವರನ್ನು ಮರೆಯಲು ಧೈರ್ಯ ಮಾಡುವುದಿಲ್ಲ ಎಂದು ಅವರು ಬರೆದಿದ್ದಾರೆ.

ತಮ್ಮ ಇಡೀ ಪೋಸ್ಟ್‌ನಲ್ಲಿ ಕಂಗನಾ ಹೆಸರು ಪ್ರಸ್ತಾಪಿಸದ ವಿಶಾಲ್ ಪರೋಕ್ಷವಾಗಿ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ ಮತ್ತು ಭಾರತದ ಸ್ವಾತಂತ್ರ್ಯ ವೀರರ ಧೈರ್ಯ, ಹೋರಾಟದ ಕುರಿತು ಪ್ರಸ್ತಾಪಿಸಿದ್ದಾರೆ.

ಬುಧವಾರ (ನ.10) ಖಾಸಗಿ ಟೆಲಿವಿಷನ್ ಚಾನೆಲ್ ಟೈಮ್ಸ್ ನೌ ಆಯೋಜಿಸಿದ್ದ ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದ್ದ ನಟಿ ಕಂಗನಾ ರಣಾವತ್ ಹಿಂದಿಯಲ್ಲಿ ಮಾತನಾಡುತ್ತಾ, “1947 ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ. ದೇಶಕ್ಕೆ ನಿಜವಾದ ಸ್ವಾತಂತ್ರ್ಯ 2014 ರಲ್ಲಿ ಬಂದಿದೆ” ಎಂದಿದ್ದರು. ಆ ಮೂಲಕ 2014 ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ಸ್ವತಂತ್ರಗೊಂಡಿದೆ ಎಂಬರ್ಥದಲ್ಲಿ ಕಂಗನಾ ಮಾತನಾಡಿದ್ದರು. ಬಿಜೆಪಿ ಸಂಸದ ವರುಣ್ ಗಾಂಧಿ ಸೇರಿದಂತೆ ಲಕ್ಷಾಂತರ ಜನ ಕಂಗನಾ ಹೇಳಿಕೆಯನ್ನು ಖಂಡಿಸಿದ್ದರು.

ಆದರೆ ಕಂಗನಾ ರಣಾವತ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಅದನ್ನು ಯಾರಾದರೂ ತಪ್ಪೆಂದು ಸಾಬೀತುಪಡಿಸಿದರೆ ತನಗೆ ಸಿಕ್ಕಿರುವ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಮಾಡುತ್ತೇನೆ ಎಂದು ಸವಾಲು ಹಾಕಿದ್ದಾರೆ.


ಇದನ್ನೂ ಓದಿ: ನನ್ನ ಹೇಳಿಕೆ ತಪ್ಪೆಂದು ಸಾಬೀತುಪಡಿಸಿದರೆ ಪದ್ಮಶ್ರೀ ವಾಪಸ್ ಮಾಡುತ್ತೇನೆ: ಕಂಗನಾ ರಣಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಷ್ಟು ದಿನ ಗುಲಾಮರಿಗೆ ಮಾತ್ರವೇ ಸ್ವಾತಂತ್ರ ಬಂದಿತ್ತು,ನಕಲಿ ಗಾಂಧಿ ಪರಿವಾರ ಮಾತ್ರವೇ ಸ್ವಾತಂತ್ರ ಅನುಭವಿಸುತ್ತಿದ್ದಿತು,2014 ರಿಂದ ಮಾತ್ರವೇ ದೇಶದ ಎಲ್ಲಾ ಪರಿವಾರದ ಜನ ಸಾಮಾನ್ಯನಾಗೂ ಸ್ವಾತಂತ್ರ ಸಿಕ್ಕಿದೆ.ತಮಗೆ ತಾವೇ ಭಾರತರತ್ನ ಪಡೆದ ನಕಲಿ ಗಾಂಧಿ ಕುಟುಂಬ ದಿಂದ ದೇಶ ಮುಕ್ತಿ ಪಡೆದ ದಿನದಿಂದಲೇ ಕಟ್ಟಕಡೆಯ ಸಾಮಾನ್ಯ ಕುಟುಂಬದ ಪ್ರಜೆಗೂ ದೇಶದ ಉನ್ನತ ಪ್ರಶಸ್ತಿಗಳು ದೊರೆಯುತ್ತಿರುವುದು .

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....