Homeಕರೋನಾ ತಲ್ಲಣಲಸಿಕೆ ನಿರ್ಬಂಧಗಳನ್ನು ತೆಗೆಯಿರಿ, ಪರಿಸ್ಥಿತಿ ಆತಂಕಕಾರಿಯಾಗಿದೆ- ಕೇಂದ್ರಕ್ಕೆ ಕೇಜ್ರಿವಾಲ್ ಮನವಿ

ಲಸಿಕೆ ನಿರ್ಬಂಧಗಳನ್ನು ತೆಗೆಯಿರಿ, ಪರಿಸ್ಥಿತಿ ಆತಂಕಕಾರಿಯಾಗಿದೆ- ಕೇಂದ್ರಕ್ಕೆ ಕೇಜ್ರಿವಾಲ್ ಮನವಿ

ಜನರು ಖಾಸಗಿ ಆಸ್ಪತ್ರೆಗಳ ಬದಲು ಸರ್ಕಾರಿ ಆಸ್ಪತ್ರೆಗಳಿಗೆ ಹೋಗಿ. ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಕಡಿಮೆ. ದಯವಿಟ್ಟು ಸರ್ಕಾರಿ ಆಸ್ಪತ್ರೆಗಳಿಗೆ ಹೋಗಿ ಎಂದು ಕೇಜ್ರಿವಾಲ್ ಮನವಿ ಮಾಡಿದ್ದಾರೆ

- Advertisement -
- Advertisement -

ಕೊರೊನಾ ವ್ಯಾಕ್ಸಿನೇಷನ್ ಮೇಲಿನ ವಯಸ್ಸಿನ ನಿರ್ಬಂಧಗಳನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೋರಿದ್ದಾರೆ. ಇನ್ನು ಕೇವಲ 7 ರಿಂದ 10 ದಿನಗಳವರೆಗೆ ಆಗುವಷ್ಟು ಲಸಿಕೆಗಳು ಮಾತ್ರ ಉಳಿದಿದ್ದು, ದೆಹಲಿಯಲ್ಲಿ ಪರಿಸ್ಥಿತಿ ಆತಂಕಕಾರಿಯಾಗಿದೆ ಎಂದು ಹೇಳಿದ್ದಾರೆ.

ಕೊರೊನಾ ಮೂರನೇ ಅಲೆಯಲ್ಲಿ ದೆಹಲಿ ಕಂಡದ್ದಕ್ಕಿಂತ ಈ ಬಾರಿಯ ನಾಲ್ಕನೇ ಅಲೆಯಲ್ಲಿ ಕೊರೊನಾ ಪ್ರಕರಣಗಳ ಉಲ್ಬಣವು “ಕೆಟ್ಟದಾಗಿದೆ” ಮತ್ತು ಇದು “ಹೆಚ್ಚು ಅಪಾಯಕಾರಿ” ಎಂದು ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ.

ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಪೂರ್ಣ ಲಾಕ್ ಡೌನ್ ಪರಿಹಾರವಲ್ಲ ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿದ್ದರು, ಜೊತೆಗೆ ದೆಹಲಿಯಲ್ಲಿ ಹಲವಾರು ಹೊಸ ನಿರ್ಬಂಧಗಳನ್ನು ಘೋಷಿಸಿದ್ದರು. “ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 10,000 ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗಿವೆ, ಇದು ಆತಂಕಕಾರಿ ಪರಿಸ್ಥಿತಿ” ಎಂದು ಆಮ್ ಆದ್ಮಿ ಪಕ್ಷದ ಮುಖಂಡ ತಿಳಿಸಿದ್ದಾರೆ.

ಇದನ್ನೂ ಓದಿ: ‘ಟಿಕಾ ಉತ್ಸವ’ ಕ್ಕೆ ನಾಲ್ಕು ವಿನಂತಿ ಎಂದ ಪ್ರಧಾನಿ; ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

“ಕೊರೊನಾ ಲಸಿಕೆ ತೆಗೆದುಕೊಳ್ಳುವ ವಯಸ್ಸಿನ ನಿರ್ಬಂಧಗಳನ್ನು ತೆಗೆದುಹಾಕುವ ಬಗ್ಗೆ ನಾನು ಕೇಂದ್ರವನ್ನು ಹಲವು ಬಾರಿ ವಿನಂತಿಸಿದ್ದೇನೆ. ಜನರಿಗೆ ಲಸಿಕೆ ನೀಡಲು ಮನೆ-ಮನೆಗೆ ಅಭಿಯಾನ ನಡೆಸಲು ದೆಹಲಿ ಸರ್ಕಾರ ಸಿದ್ಧವಾಗಿದೆ. ದೆಹಲಿಯಲ್ಲಿ ಶೇಕಡಾ 65 ರಷ್ಟು ರೋಗಿಗಳು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ನಾನು ಲಾಕ್‌ಡೌನ್ ಪರವಾಗಿಲ್ಲ, ಅದು ಪರಿಹಾರ ಎಂದು ನಂಬಬೇಡಿ. ರಾಜ್ಯದ ಆರೋಗ್ಯ ಸೌಲಭ್ಯಗಳು ಕುಸಿದಾಗ ಮಾತ್ರ ಲಾಕ್‌ಡೌನ್ ವಿಧಿಸಬೇಕಾಗುತ್ತದೆ. ನಮ್ಮ ಸರ್ಕಾರವು ಪ್ರಸ್ತುತ ಆಸ್ಪತ್ರೆಗಳ ನಿರ್ವಹಣೆಯತ್ತ ಗಮನ ಹರಿಸುತ್ತಿದೆ. ಜನರು ಖಾಸಗಿ ಆಸ್ಪತ್ರೆಗಳ ಬದಲು ಸರ್ಕಾರಿ ಆಸ್ಪತ್ರೆಗಳಿಗೆ ಹೋಗಿ. ಖಾಸಗಿ ಆಸ್ಪತ್ರೆಗಳ ಕಡೆಗೆ ಓಡಬೇಡಿ. ಅಲ್ಲಿ ಹಾಸಿಗೆಗಳು ಕಡಿಮೆ. ದಯವಿಟ್ಟು ಸರ್ಕಾರಿ ಆಸ್ಪತ್ರೆಗಳಿಗೆ ಹೋಗಿ” ಎಂದು ಮನವಿ ಮಾಡಿದ್ದಾರೆ.

ಆಮ್ ಆದ್ಮಿ ಪಕ್ಷದ ಮುಖಂಡ ರಾಘವ್ ಚಾಡ್ಡಾ ಲಸಿಕೆ ಸಾರ್ವತ್ರಿಕೀಕರಣ ಮತ್ತು ಲಸಿಕೆ ತುರ್ತು ಅವಶ್ಯಕತೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. “ಹಲವಾರು ರಾಜ್ಯಗಳಲ್ಲಿ ಲಸಿಕೆಗಳ ದಾಸ್ತಾನು ಮುಗಿದಿವೆ ಮತ್ತು ಉಳಿದ ರಾಜ್ಯಗಳಲ್ಲಿ ಕೇವಲ ಮೂರರಿಂದ ಐದು ದಿನಗಳವರೆಗೆ ಆಗುವಷ್ಟು ದಾಸ್ತಾನು ಮಾತ್ರ ಉಳಿದಿದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಬಿಜೆಪಿಗೂ, ಪ್ರಧಾನಿ ಮೋದಿಗೂ ಒಂದಷ್ಟು ಮಾನಸಿಕ ಚಿಕಿತ್ಸೆಯ ಅಗತ್ಯವಿದೆ: ಕಾಂಗ್ರೆಸ್ ತೀವ್ರ ವಾಗ್ದಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...