Homeಕರೋನಾ ತಲ್ಲಣಲಸಿಕೆ ನಿರ್ಬಂಧಗಳನ್ನು ತೆಗೆಯಿರಿ, ಪರಿಸ್ಥಿತಿ ಆತಂಕಕಾರಿಯಾಗಿದೆ- ಕೇಂದ್ರಕ್ಕೆ ಕೇಜ್ರಿವಾಲ್ ಮನವಿ

ಲಸಿಕೆ ನಿರ್ಬಂಧಗಳನ್ನು ತೆಗೆಯಿರಿ, ಪರಿಸ್ಥಿತಿ ಆತಂಕಕಾರಿಯಾಗಿದೆ- ಕೇಂದ್ರಕ್ಕೆ ಕೇಜ್ರಿವಾಲ್ ಮನವಿ

ಜನರು ಖಾಸಗಿ ಆಸ್ಪತ್ರೆಗಳ ಬದಲು ಸರ್ಕಾರಿ ಆಸ್ಪತ್ರೆಗಳಿಗೆ ಹೋಗಿ. ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಕಡಿಮೆ. ದಯವಿಟ್ಟು ಸರ್ಕಾರಿ ಆಸ್ಪತ್ರೆಗಳಿಗೆ ಹೋಗಿ ಎಂದು ಕೇಜ್ರಿವಾಲ್ ಮನವಿ ಮಾಡಿದ್ದಾರೆ

- Advertisement -
- Advertisement -

ಕೊರೊನಾ ವ್ಯಾಕ್ಸಿನೇಷನ್ ಮೇಲಿನ ವಯಸ್ಸಿನ ನಿರ್ಬಂಧಗಳನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೋರಿದ್ದಾರೆ. ಇನ್ನು ಕೇವಲ 7 ರಿಂದ 10 ದಿನಗಳವರೆಗೆ ಆಗುವಷ್ಟು ಲಸಿಕೆಗಳು ಮಾತ್ರ ಉಳಿದಿದ್ದು, ದೆಹಲಿಯಲ್ಲಿ ಪರಿಸ್ಥಿತಿ ಆತಂಕಕಾರಿಯಾಗಿದೆ ಎಂದು ಹೇಳಿದ್ದಾರೆ.

ಕೊರೊನಾ ಮೂರನೇ ಅಲೆಯಲ್ಲಿ ದೆಹಲಿ ಕಂಡದ್ದಕ್ಕಿಂತ ಈ ಬಾರಿಯ ನಾಲ್ಕನೇ ಅಲೆಯಲ್ಲಿ ಕೊರೊನಾ ಪ್ರಕರಣಗಳ ಉಲ್ಬಣವು “ಕೆಟ್ಟದಾಗಿದೆ” ಮತ್ತು ಇದು “ಹೆಚ್ಚು ಅಪಾಯಕಾರಿ” ಎಂದು ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ.

ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಪೂರ್ಣ ಲಾಕ್ ಡೌನ್ ಪರಿಹಾರವಲ್ಲ ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿದ್ದರು, ಜೊತೆಗೆ ದೆಹಲಿಯಲ್ಲಿ ಹಲವಾರು ಹೊಸ ನಿರ್ಬಂಧಗಳನ್ನು ಘೋಷಿಸಿದ್ದರು. “ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 10,000 ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗಿವೆ, ಇದು ಆತಂಕಕಾರಿ ಪರಿಸ್ಥಿತಿ” ಎಂದು ಆಮ್ ಆದ್ಮಿ ಪಕ್ಷದ ಮುಖಂಡ ತಿಳಿಸಿದ್ದಾರೆ.

ಇದನ್ನೂ ಓದಿ: ‘ಟಿಕಾ ಉತ್ಸವ’ ಕ್ಕೆ ನಾಲ್ಕು ವಿನಂತಿ ಎಂದ ಪ್ರಧಾನಿ; ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

“ಕೊರೊನಾ ಲಸಿಕೆ ತೆಗೆದುಕೊಳ್ಳುವ ವಯಸ್ಸಿನ ನಿರ್ಬಂಧಗಳನ್ನು ತೆಗೆದುಹಾಕುವ ಬಗ್ಗೆ ನಾನು ಕೇಂದ್ರವನ್ನು ಹಲವು ಬಾರಿ ವಿನಂತಿಸಿದ್ದೇನೆ. ಜನರಿಗೆ ಲಸಿಕೆ ನೀಡಲು ಮನೆ-ಮನೆಗೆ ಅಭಿಯಾನ ನಡೆಸಲು ದೆಹಲಿ ಸರ್ಕಾರ ಸಿದ್ಧವಾಗಿದೆ. ದೆಹಲಿಯಲ್ಲಿ ಶೇಕಡಾ 65 ರಷ್ಟು ರೋಗಿಗಳು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ನಾನು ಲಾಕ್‌ಡೌನ್ ಪರವಾಗಿಲ್ಲ, ಅದು ಪರಿಹಾರ ಎಂದು ನಂಬಬೇಡಿ. ರಾಜ್ಯದ ಆರೋಗ್ಯ ಸೌಲಭ್ಯಗಳು ಕುಸಿದಾಗ ಮಾತ್ರ ಲಾಕ್‌ಡೌನ್ ವಿಧಿಸಬೇಕಾಗುತ್ತದೆ. ನಮ್ಮ ಸರ್ಕಾರವು ಪ್ರಸ್ತುತ ಆಸ್ಪತ್ರೆಗಳ ನಿರ್ವಹಣೆಯತ್ತ ಗಮನ ಹರಿಸುತ್ತಿದೆ. ಜನರು ಖಾಸಗಿ ಆಸ್ಪತ್ರೆಗಳ ಬದಲು ಸರ್ಕಾರಿ ಆಸ್ಪತ್ರೆಗಳಿಗೆ ಹೋಗಿ. ಖಾಸಗಿ ಆಸ್ಪತ್ರೆಗಳ ಕಡೆಗೆ ಓಡಬೇಡಿ. ಅಲ್ಲಿ ಹಾಸಿಗೆಗಳು ಕಡಿಮೆ. ದಯವಿಟ್ಟು ಸರ್ಕಾರಿ ಆಸ್ಪತ್ರೆಗಳಿಗೆ ಹೋಗಿ” ಎಂದು ಮನವಿ ಮಾಡಿದ್ದಾರೆ.

ಆಮ್ ಆದ್ಮಿ ಪಕ್ಷದ ಮುಖಂಡ ರಾಘವ್ ಚಾಡ್ಡಾ ಲಸಿಕೆ ಸಾರ್ವತ್ರಿಕೀಕರಣ ಮತ್ತು ಲಸಿಕೆ ತುರ್ತು ಅವಶ್ಯಕತೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. “ಹಲವಾರು ರಾಜ್ಯಗಳಲ್ಲಿ ಲಸಿಕೆಗಳ ದಾಸ್ತಾನು ಮುಗಿದಿವೆ ಮತ್ತು ಉಳಿದ ರಾಜ್ಯಗಳಲ್ಲಿ ಕೇವಲ ಮೂರರಿಂದ ಐದು ದಿನಗಳವರೆಗೆ ಆಗುವಷ್ಟು ದಾಸ್ತಾನು ಮಾತ್ರ ಉಳಿದಿದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಬಿಜೆಪಿಗೂ, ಪ್ರಧಾನಿ ಮೋದಿಗೂ ಒಂದಷ್ಟು ಮಾನಸಿಕ ಚಿಕಿತ್ಸೆಯ ಅಗತ್ಯವಿದೆ: ಕಾಂಗ್ರೆಸ್ ತೀವ್ರ ವಾಗ್ದಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...