HomeಮುಖಪುಟNCERT ಪರಿಷ್ಕೃತ ಪಠ್ಯ ಪುಸ್ತಕದಿಂದ ತಮ್ಮ ಹೆಸರು ಕೈ ಬಿಡಲು ಆಗ್ರಹಿಸಿದ ಯೋಗೇಂದ್ರ ಯಾದವ್, ಸುಹಾಸ್...

NCERT ಪರಿಷ್ಕೃತ ಪಠ್ಯ ಪುಸ್ತಕದಿಂದ ತಮ್ಮ ಹೆಸರು ಕೈ ಬಿಡಲು ಆಗ್ರಹಿಸಿದ ಯೋಗೇಂದ್ರ ಯಾದವ್, ಸುಹಾಸ್ ಪಾಲ್ಶಿಕರ್

- Advertisement -
- Advertisement -

ಪರಿಷ್ಕತ ಪಠ್ಯ ಪುಸ್ತಕದಿಂದ ತಮ್ಮ ಹೆಸರು ತೆಗೆಯುವಂತೆ ರಾಜಕೀಯ ಚಿಂತಕರಾದ ಯೋಗೇಂದ್ರ ಯಾದವ್ ಮತ್ತು ಸುಹಾಸ್ ಪಾಲ್ಶಿಕರ್ ಅವರು ಸೋಮವಾರ ಎನ್‌ಸಿಇಆರ್‌ಟಿಗೆ ಪತ್ರ ಬರೆದಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆಯಿಂದ ತಮ್ಮನ್ನು ಹೊರಗಿಟ್ಟ ಬಳಿಕವೂ, ಪರಿಷ್ಕೃತ ಪುಸ್ತಕದ ಲೇಖಕರ ಪಟ್ಟಿಯಲ್ಲಿ ಹೆಸರು ಇರುವುದಕ್ಕೆ ಇಬ್ಬರೂ ಆಕ್ಷೇಪ ವ್ಯಕ್ತಪಡಿಸಿದ್ದು, ಹೆಸರು ಕೈ ಬಿಡದಿದ್ದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.

“ರಾಜಕೀಯವಾಗಿ ಪಕ್ಷಪಾತದ ನಿಲುವು ಹೊಂದಿರುವ, ಶೈಕ್ಷಣಿಕವಾಗಿ ಅಸಮರ್ಥನೀಯ ಹಾಗೂ ಶಿಕ್ಷಣಶಾಸ್ತ್ರೀಯವಾಗಿ ನಿಷ್ಕ್ರಿಯವಾಗಿರುವ ರಾಜಕೀಯ ವಿಜ್ಞಾನದ ಪಠ್ಯಗಳನ್ನು ಸಮರ್ಥಿಸಿಕೊಳ್ಳುವ ಉದ್ದೇಶದಿಂದ ತಮ್ಮ ಹೆಸರನ್ನು ಎನ್‌ಸಿಇಆರ್‌ಟಿ ಬಳಸಿಕೊಳ್ಳುವುದು ಬೇಕಿಲ್ಲ” ಎಂದು ಯೋಗೇಂದ್ರ ಯಾದವ್ ಮತ್ತು ಸುಹಾಸ್ ಪಾಲ್ಶಿಕರ್ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ರಾಜ್ಯಶಾಸ್ತ್ರ ಪಠ್ಯಪುಸ್ತಕಗಳ ಮಾಜಿ ಮುಖ್ಯ ಸಲಹೆಗಾರರಾದ ಪಾಲ್ಶಿಕರ್ ಮತ್ತು ಯಾದವ್ ಅವರು ಕಳೆದ ವರ್ಷ ಪುಸ್ತಕಗಳಿಂದ ತಮ್ಮ ಹೆಸರು ಕಿತ್ತು ಹಾಕುವಂತೆ ಕೋರಿದ್ದರು. ಒಮ್ಮೆ ಹೆಮ್ಮೆಯ ಪ್ರತೀಕವಾಗಿದ್ದ ಪಠ್ಯಪುಸ್ತಕಗಳು ಇಂದು ಮುಜುಗರಕ್ಕೆ ಮೂಲವಾಗುತ್ತಿವೆ. ನಮ್ಮ ಆಕ್ಷೇಪಗಳ ಹೊರತಾಗಿಯೂ, ಪರಿಷ್ಕೃತ ಪಠ್ಯಗಳಲ್ಲಿ ನಮ್ಮ ಹೆಸರನ್ನು ಮುಖ್ಯ ಸಲಹೆಗಾರರು ಎಂದು ಪ್ರಕಟಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಇತ್ತೀಚೆಗೆ ಮಾರುಕಟ್ಟೆಗೆ ಬಂದಿರುವ ಪಠ್ಯಪುಸ್ತಕಗಳ ಪರಿಷ್ಕೃತ ಆವೃತ್ತಿಯಲ್ಲೂ ಯಾದವ್ ಮತ್ತು ಪಾಲ್ಶಿಕರ್ ಅವರನ್ನು ಮುಖ್ಯ ಸಲಹೆಗಾರರನ್ನಾಗಿ ಉಲ್ಲೇಖಿಸಲಾಗಿದೆ.

ಎನ್‌ಸಿಆರ್‌ಟಿಯ 12 ತರಗತಿಯ ರಾಜ್ಯಶಾಸ್ತ್ರ ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಬಾಬ್ರಿ ಮಸೀದಿಯನ್ನು ಬಾಬ್ರಿ ಮಸೀದಿ ಎನ್ನದೆ, ‘ಮೂರು ಗುಮ್ಮಟಗಳ ರಚನೆ’ ಎಂದು ಉಲ್ಲೇಖಿಸಿದೆ. ಇದು ಇತ್ತೀಚೆಗೆ ವಿವಾದಕ್ಕೆ ಕಾರಣವಾಗಿದೆ.

ಪರಿಷ್ಕೃತ ಪುಸ್ತಕದಲ್ಲಿ ಗುಜರಾತ್‌ನ ಸೋಮನಾಥದಿಂದ ಅಯೋಧ್ಯೆಯವರೆಗೆ ಬಿಜೆಪಿ ನಡೆಸಿದ ರಥಯಾತ್ರೆ, ಬಾಬ್ರಿ ಮಸೀದಿ ಧ್ವಂಸ, ಕರ ಸೇವಕರ ಪಾತ್ರ, ಮಸೀದಿ ಧ್ವಂಸದ ನಂತರದ ಕೋಮುಗಲಭೆ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿರುವುದು ಮತ್ತು ಅಯೋಧ್ಯೆಯಲ್ಲಿ ನಡೆದ ಘಟನೆಗಳ ಪಠ್ಯಗಳನ್ನು ಕೈ ಬಿಡಲಾಗಿದೆ.

ಇದನ್ನೂ ಓದಿ : ವಯನಾಡ್‌ನಿಂದ ಪ್ರಿಯಾಂಕಾ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧಾರ: ರಾಯ್‌ಬರೇಲಿ ಕ್ಷೇತ್ರ ಉಳಿಸಿಕೊಳ್ಳಲಿರುವ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...