HomeಮುಖಪುಟNCERT ಪರಿಷ್ಕೃತ ಪಠ್ಯ ಪುಸ್ತಕದಿಂದ ತಮ್ಮ ಹೆಸರು ಕೈ ಬಿಡಲು ಆಗ್ರಹಿಸಿದ ಯೋಗೇಂದ್ರ ಯಾದವ್, ಸುಹಾಸ್...

NCERT ಪರಿಷ್ಕೃತ ಪಠ್ಯ ಪುಸ್ತಕದಿಂದ ತಮ್ಮ ಹೆಸರು ಕೈ ಬಿಡಲು ಆಗ್ರಹಿಸಿದ ಯೋಗೇಂದ್ರ ಯಾದವ್, ಸುಹಾಸ್ ಪಾಲ್ಶಿಕರ್

- Advertisement -
- Advertisement -

ಪರಿಷ್ಕತ ಪಠ್ಯ ಪುಸ್ತಕದಿಂದ ತಮ್ಮ ಹೆಸರು ತೆಗೆಯುವಂತೆ ರಾಜಕೀಯ ಚಿಂತಕರಾದ ಯೋಗೇಂದ್ರ ಯಾದವ್ ಮತ್ತು ಸುಹಾಸ್ ಪಾಲ್ಶಿಕರ್ ಅವರು ಸೋಮವಾರ ಎನ್‌ಸಿಇಆರ್‌ಟಿಗೆ ಪತ್ರ ಬರೆದಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆಯಿಂದ ತಮ್ಮನ್ನು ಹೊರಗಿಟ್ಟ ಬಳಿಕವೂ, ಪರಿಷ್ಕೃತ ಪುಸ್ತಕದ ಲೇಖಕರ ಪಟ್ಟಿಯಲ್ಲಿ ಹೆಸರು ಇರುವುದಕ್ಕೆ ಇಬ್ಬರೂ ಆಕ್ಷೇಪ ವ್ಯಕ್ತಪಡಿಸಿದ್ದು, ಹೆಸರು ಕೈ ಬಿಡದಿದ್ದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.

“ರಾಜಕೀಯವಾಗಿ ಪಕ್ಷಪಾತದ ನಿಲುವು ಹೊಂದಿರುವ, ಶೈಕ್ಷಣಿಕವಾಗಿ ಅಸಮರ್ಥನೀಯ ಹಾಗೂ ಶಿಕ್ಷಣಶಾಸ್ತ್ರೀಯವಾಗಿ ನಿಷ್ಕ್ರಿಯವಾಗಿರುವ ರಾಜಕೀಯ ವಿಜ್ಞಾನದ ಪಠ್ಯಗಳನ್ನು ಸಮರ್ಥಿಸಿಕೊಳ್ಳುವ ಉದ್ದೇಶದಿಂದ ತಮ್ಮ ಹೆಸರನ್ನು ಎನ್‌ಸಿಇಆರ್‌ಟಿ ಬಳಸಿಕೊಳ್ಳುವುದು ಬೇಕಿಲ್ಲ” ಎಂದು ಯೋಗೇಂದ್ರ ಯಾದವ್ ಮತ್ತು ಸುಹಾಸ್ ಪಾಲ್ಶಿಕರ್ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ರಾಜ್ಯಶಾಸ್ತ್ರ ಪಠ್ಯಪುಸ್ತಕಗಳ ಮಾಜಿ ಮುಖ್ಯ ಸಲಹೆಗಾರರಾದ ಪಾಲ್ಶಿಕರ್ ಮತ್ತು ಯಾದವ್ ಅವರು ಕಳೆದ ವರ್ಷ ಪುಸ್ತಕಗಳಿಂದ ತಮ್ಮ ಹೆಸರು ಕಿತ್ತು ಹಾಕುವಂತೆ ಕೋರಿದ್ದರು. ಒಮ್ಮೆ ಹೆಮ್ಮೆಯ ಪ್ರತೀಕವಾಗಿದ್ದ ಪಠ್ಯಪುಸ್ತಕಗಳು ಇಂದು ಮುಜುಗರಕ್ಕೆ ಮೂಲವಾಗುತ್ತಿವೆ. ನಮ್ಮ ಆಕ್ಷೇಪಗಳ ಹೊರತಾಗಿಯೂ, ಪರಿಷ್ಕೃತ ಪಠ್ಯಗಳಲ್ಲಿ ನಮ್ಮ ಹೆಸರನ್ನು ಮುಖ್ಯ ಸಲಹೆಗಾರರು ಎಂದು ಪ್ರಕಟಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಇತ್ತೀಚೆಗೆ ಮಾರುಕಟ್ಟೆಗೆ ಬಂದಿರುವ ಪಠ್ಯಪುಸ್ತಕಗಳ ಪರಿಷ್ಕೃತ ಆವೃತ್ತಿಯಲ್ಲೂ ಯಾದವ್ ಮತ್ತು ಪಾಲ್ಶಿಕರ್ ಅವರನ್ನು ಮುಖ್ಯ ಸಲಹೆಗಾರರನ್ನಾಗಿ ಉಲ್ಲೇಖಿಸಲಾಗಿದೆ.

ಎನ್‌ಸಿಆರ್‌ಟಿಯ 12 ತರಗತಿಯ ರಾಜ್ಯಶಾಸ್ತ್ರ ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಬಾಬ್ರಿ ಮಸೀದಿಯನ್ನು ಬಾಬ್ರಿ ಮಸೀದಿ ಎನ್ನದೆ, ‘ಮೂರು ಗುಮ್ಮಟಗಳ ರಚನೆ’ ಎಂದು ಉಲ್ಲೇಖಿಸಿದೆ. ಇದು ಇತ್ತೀಚೆಗೆ ವಿವಾದಕ್ಕೆ ಕಾರಣವಾಗಿದೆ.

ಪರಿಷ್ಕೃತ ಪುಸ್ತಕದಲ್ಲಿ ಗುಜರಾತ್‌ನ ಸೋಮನಾಥದಿಂದ ಅಯೋಧ್ಯೆಯವರೆಗೆ ಬಿಜೆಪಿ ನಡೆಸಿದ ರಥಯಾತ್ರೆ, ಬಾಬ್ರಿ ಮಸೀದಿ ಧ್ವಂಸ, ಕರ ಸೇವಕರ ಪಾತ್ರ, ಮಸೀದಿ ಧ್ವಂಸದ ನಂತರದ ಕೋಮುಗಲಭೆ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿರುವುದು ಮತ್ತು ಅಯೋಧ್ಯೆಯಲ್ಲಿ ನಡೆದ ಘಟನೆಗಳ ಪಠ್ಯಗಳನ್ನು ಕೈ ಬಿಡಲಾಗಿದೆ.

ಇದನ್ನೂ ಓದಿ : ವಯನಾಡ್‌ನಿಂದ ಪ್ರಿಯಾಂಕಾ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧಾರ: ರಾಯ್‌ಬರೇಲಿ ಕ್ಷೇತ್ರ ಉಳಿಸಿಕೊಳ್ಳಲಿರುವ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...