HomeಮುಖಪುಟNCERT ಪರಿಷ್ಕೃತ ಪಠ್ಯ ಪುಸ್ತಕದಿಂದ ತಮ್ಮ ಹೆಸರು ಕೈ ಬಿಡಲು ಆಗ್ರಹಿಸಿದ ಯೋಗೇಂದ್ರ ಯಾದವ್, ಸುಹಾಸ್...

NCERT ಪರಿಷ್ಕೃತ ಪಠ್ಯ ಪುಸ್ತಕದಿಂದ ತಮ್ಮ ಹೆಸರು ಕೈ ಬಿಡಲು ಆಗ್ರಹಿಸಿದ ಯೋಗೇಂದ್ರ ಯಾದವ್, ಸುಹಾಸ್ ಪಾಲ್ಶಿಕರ್

- Advertisement -
- Advertisement -

ಪರಿಷ್ಕತ ಪಠ್ಯ ಪುಸ್ತಕದಿಂದ ತಮ್ಮ ಹೆಸರು ತೆಗೆಯುವಂತೆ ರಾಜಕೀಯ ಚಿಂತಕರಾದ ಯೋಗೇಂದ್ರ ಯಾದವ್ ಮತ್ತು ಸುಹಾಸ್ ಪಾಲ್ಶಿಕರ್ ಅವರು ಸೋಮವಾರ ಎನ್‌ಸಿಇಆರ್‌ಟಿಗೆ ಪತ್ರ ಬರೆದಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆಯಿಂದ ತಮ್ಮನ್ನು ಹೊರಗಿಟ್ಟ ಬಳಿಕವೂ, ಪರಿಷ್ಕೃತ ಪುಸ್ತಕದ ಲೇಖಕರ ಪಟ್ಟಿಯಲ್ಲಿ ಹೆಸರು ಇರುವುದಕ್ಕೆ ಇಬ್ಬರೂ ಆಕ್ಷೇಪ ವ್ಯಕ್ತಪಡಿಸಿದ್ದು, ಹೆಸರು ಕೈ ಬಿಡದಿದ್ದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.

“ರಾಜಕೀಯವಾಗಿ ಪಕ್ಷಪಾತದ ನಿಲುವು ಹೊಂದಿರುವ, ಶೈಕ್ಷಣಿಕವಾಗಿ ಅಸಮರ್ಥನೀಯ ಹಾಗೂ ಶಿಕ್ಷಣಶಾಸ್ತ್ರೀಯವಾಗಿ ನಿಷ್ಕ್ರಿಯವಾಗಿರುವ ರಾಜಕೀಯ ವಿಜ್ಞಾನದ ಪಠ್ಯಗಳನ್ನು ಸಮರ್ಥಿಸಿಕೊಳ್ಳುವ ಉದ್ದೇಶದಿಂದ ತಮ್ಮ ಹೆಸರನ್ನು ಎನ್‌ಸಿಇಆರ್‌ಟಿ ಬಳಸಿಕೊಳ್ಳುವುದು ಬೇಕಿಲ್ಲ” ಎಂದು ಯೋಗೇಂದ್ರ ಯಾದವ್ ಮತ್ತು ಸುಹಾಸ್ ಪಾಲ್ಶಿಕರ್ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ರಾಜ್ಯಶಾಸ್ತ್ರ ಪಠ್ಯಪುಸ್ತಕಗಳ ಮಾಜಿ ಮುಖ್ಯ ಸಲಹೆಗಾರರಾದ ಪಾಲ್ಶಿಕರ್ ಮತ್ತು ಯಾದವ್ ಅವರು ಕಳೆದ ವರ್ಷ ಪುಸ್ತಕಗಳಿಂದ ತಮ್ಮ ಹೆಸರು ಕಿತ್ತು ಹಾಕುವಂತೆ ಕೋರಿದ್ದರು. ಒಮ್ಮೆ ಹೆಮ್ಮೆಯ ಪ್ರತೀಕವಾಗಿದ್ದ ಪಠ್ಯಪುಸ್ತಕಗಳು ಇಂದು ಮುಜುಗರಕ್ಕೆ ಮೂಲವಾಗುತ್ತಿವೆ. ನಮ್ಮ ಆಕ್ಷೇಪಗಳ ಹೊರತಾಗಿಯೂ, ಪರಿಷ್ಕೃತ ಪಠ್ಯಗಳಲ್ಲಿ ನಮ್ಮ ಹೆಸರನ್ನು ಮುಖ್ಯ ಸಲಹೆಗಾರರು ಎಂದು ಪ್ರಕಟಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಇತ್ತೀಚೆಗೆ ಮಾರುಕಟ್ಟೆಗೆ ಬಂದಿರುವ ಪಠ್ಯಪುಸ್ತಕಗಳ ಪರಿಷ್ಕೃತ ಆವೃತ್ತಿಯಲ್ಲೂ ಯಾದವ್ ಮತ್ತು ಪಾಲ್ಶಿಕರ್ ಅವರನ್ನು ಮುಖ್ಯ ಸಲಹೆಗಾರರನ್ನಾಗಿ ಉಲ್ಲೇಖಿಸಲಾಗಿದೆ.

ಎನ್‌ಸಿಆರ್‌ಟಿಯ 12 ತರಗತಿಯ ರಾಜ್ಯಶಾಸ್ತ್ರ ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಬಾಬ್ರಿ ಮಸೀದಿಯನ್ನು ಬಾಬ್ರಿ ಮಸೀದಿ ಎನ್ನದೆ, ‘ಮೂರು ಗುಮ್ಮಟಗಳ ರಚನೆ’ ಎಂದು ಉಲ್ಲೇಖಿಸಿದೆ. ಇದು ಇತ್ತೀಚೆಗೆ ವಿವಾದಕ್ಕೆ ಕಾರಣವಾಗಿದೆ.

ಪರಿಷ್ಕೃತ ಪುಸ್ತಕದಲ್ಲಿ ಗುಜರಾತ್‌ನ ಸೋಮನಾಥದಿಂದ ಅಯೋಧ್ಯೆಯವರೆಗೆ ಬಿಜೆಪಿ ನಡೆಸಿದ ರಥಯಾತ್ರೆ, ಬಾಬ್ರಿ ಮಸೀದಿ ಧ್ವಂಸ, ಕರ ಸೇವಕರ ಪಾತ್ರ, ಮಸೀದಿ ಧ್ವಂಸದ ನಂತರದ ಕೋಮುಗಲಭೆ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿರುವುದು ಮತ್ತು ಅಯೋಧ್ಯೆಯಲ್ಲಿ ನಡೆದ ಘಟನೆಗಳ ಪಠ್ಯಗಳನ್ನು ಕೈ ಬಿಡಲಾಗಿದೆ.

ಇದನ್ನೂ ಓದಿ : ವಯನಾಡ್‌ನಿಂದ ಪ್ರಿಯಾಂಕಾ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧಾರ: ರಾಯ್‌ಬರೇಲಿ ಕ್ಷೇತ್ರ ಉಳಿಸಿಕೊಳ್ಳಲಿರುವ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...