Homeಮುಖಪುಟಅಪ್ರಾಪ್ತರ ಎದುರು ಪ್ಯಾಂಟ್ ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

ಅಪ್ರಾಪ್ತರ ಎದುರು ಪ್ಯಾಂಟ್ ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

‘ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ’ ಅಪ್ರಾಪ್ತ ವಯಸ್ಕನನ್ನು ಸ್ಪರ್ಶಿಸುವುದು ಲೈಂಗಿಕ ದೌರ್ಜನ್ಯವಲ್ಲ ಎಂದು ಆದೇಶ ನೀಡಿದ್ದ ಅದೇ ನ್ಯಾಯಾಧೀಶರು ಈ ತೀರ್ಪನ್ನು ಅಂಗೀಕರಿಸಿದ್ದಾರೆ.

- Advertisement -
- Advertisement -

ಅಪ್ರಾಪ್ತ ವಯಸ್ಕನ (ಬಾಲಕ/ಬಾಲಕಿ) ಕೈಗಳನ್ನು ಹಿಡಿದುಕೊಳ್ಳುವುದು ಮತ್ತು ಪ್ಯಾಂಟ್ ಜಿಪ್ ಅನ್ನು ಅಪ್ರಾಪ್ತ ವಯಸ್ಕನ ಮುಂದೆ ತೆಗೆಯುವುದು ಮಾಡುವುದು ಪೋಕ್ಸೋ ಕಾಯ್ದೆ ಅಡಿ ಲೈಂಗಿಕ ಅಪರಾಧಗಳ ವ್ಯಾಖ್ಯಾನಕ್ಕೆ ಒಳಪಡುವುದಿಲ್ಲ ಎಂದು ಬಾಂಬೇ ಹೈಕೋರ್ಟ್ ಆದೇಶ ನೀಡಿದೆ ಎಂದು ಗುರುವಾರ ಲೈವ್ ಲಾ ವರದಿ ಮಾಡಿದೆ.

ಐದು ವರ್ಷದ ಬಾಲಕಿಯನ್ನು ಕಿರುಕುಳ ಮಾಡಿದ್ದಕ್ಕಾಗಿ 50 ವರ್ಷದ ವ್ಯಕ್ತಿಗೆ ನೀಡಲಾದ ಶಿಕ್ಷೆಯ ವಿರುದ್ಧ ಸಲ್ಲಿಸಲಾದ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರ ನ್ಯಾಯಪೀಠ ವಿಚಾರಣೆ ನಡೆಸಿತು.

ಪ್ರಕರಣದ ಹಿನ್ನೆಲೆ

ನಾಗಪುರದ ಸೆಷನ್ ಕೋರ್ಟು ಪ್ರಸ್ತುತ ಪ್ರಕರಣದಲ್ಲಿ ಅಪರಾಧವು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವಿನ ವಿರುದ್ಧವಾಗಿರುವುದರಿಂದ, ಪೋಕ್ಸೋ ಸೆಕ್ಷನ್ 10 ರ ಅಡಿಯಲ್ಲಿ ಶಿಕ್ಷಾರ್ಹವಾಗಿದೆ ಎಂದು ವಿವರಿಸಿ, ಅರೋಪಿಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿತ್ತು.

ಆರೋಪಿ ತನ್ನ ಪ್ಯಾಂಟ್ ಜಿಪ್ ತೆಗೆದು, ಮಗಳ ಕೈಗಳನ್ನು ಹಿಡಿದಿರುವುದನ್ನು ತಾನು ನೋಡಿದ್ದಾಗಿ ಮಗುವಿನ ತಾಯಿ ದೂರು ದಾಖಲಿಸಿದ್ದರು. ಆ ವ್ಯಕ್ತಿ ತನ್ನ ಜೊತೆಗೆ ಮಲಗಲು ಹೇಳಿದ್ದಾಗಿ ಮಗು ತಿಳಿಸಿದೆ ಎಂದು ತಾಯಿ ದೂರಿನಲ್ಲಿ ತಿಳಿಸಿದ್ದರು.

ಬಾಂಬೆ ಹೈಕೋರ್ಟು ಹೇಳಿದ್ದೇನು?

ಈ ಪ್ರಕರಣವು ಪೋಕ್ಸೋ ಕಾಯ್ದೆ ಅಡಿ ಲೈಂಗಿಕ ಅಪರಾಧಗಳ ವ್ಯಾಖ್ಯಾನಕ್ಕೆ ಒಳಪಡುವುದಿಲ್ಲ ಎಂದು ಬಾಂಬೇ ಹೈಕೋರ್ಟ್ ಆದೇಶ ನೀಡಿದೆ.

“ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ” ಸ್ಪರ್ಶಿಸುವುದು ಲೈಂಗಿಕ ದೌರ್ಜನ್ಯವಲ್ಲ ಎಂಬ ಕಾರಣಕ್ಕೆ ಪೋಕ್ಸೋ ಅಡಿಯಲ್ಲಿ ವ್ಯಕ್ತಿಯನ್ನು ಖುಲಾಸೆಗೊಳಿಸಿದ್ದ ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರೇ ಈ ಆದೇಶವನ್ನೂ ನೀಡಿದ್ದಾರೆ.

ಮೊದಲ ಪ್ರಕರಣದಲ್ಲಿ, ಪೇರಲ ಹಣ್ಣನ್ನು ನೀಡುವ ಆಮಿಷವೊಡ್ಡಿ 12 ವರ್ಷ ವಯಸ್ಸಿನ ಮಗುವನ್ನು ಆರೋಪಿ ತನ್ನ ಮನೆಗೆ ಕರೆದೊಯ್ದಿದ್ದಾನೆ. ಆಕೆಯ ಸ್ತನವನ್ನು ಒತ್ತಿ ಮತ್ತು ಅವಳ ಬಟ್ಟೆಗಳನ್ನು ತೆಗೆಯಲು ಪ್ರಯತ್ನಿಸಿದ್ದ. ಆತನಿಗೆ ಕೆಳ ಕೋರ್ಟಿನಲ್ಲಿ ಶಿಕ್ಷೆ ಆಗಿತ್ತು. ಆದರೆ ಬಾಂಬೇ ಹೈಕೋರ್ಟಿನ ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರು, “ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ” ಅದು ಲೈಂಗಿಕ ಅಪರಾಧ ಆಗುವುದಿಲ್ಲ ಎಂದು ಆರೋಪಿಯನ್ನು ಖುಲಾಸೆಗೊಳಿಸಿದ್ದರು.

ಸದ್ಯದ ಪ್ರಕರಣ

ನ್ಯಾಯಮೂರ್ತಿ ಗಣದೇವಾಲಾ ಹಿಂದಿನ ಆದೇಶದಂತೆ ಈ ಆದೇಶದಲ್ಲೂ ಪೋಕ್ಸೋ ಕಾಯ್ದೆಯ ಸೆಕ್ಷನ್ 7 ಅನ್ನು ಉಲ್ಲೇಖಿಸಿದ್ದಾರೆ. ಆದರೆ ಸೆಕ್ಷನ್ 7 ಪ್ರಕಾರ, “ಯಾರು, ಲೈಂಗಿಕ ಉದ್ದೇಶದಿಂದ ಮಗುವಿನ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸುತ್ತಾರೆ ಅಥವಾ ಮಗು ತಮ್ಮ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸುವಂತೆ ಒತ್ತಾಯಿಸುತ್ತಾರೋ ಅಂಥವರು ಅಲ್ಲಿ ಲೈಂಗಿಕ ಕ್ರಿಯೆ ನಡೆಸದೇ ಇದ್ದರೂ ಕೂಡ ಅದನ್ನು ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಬೆಕು…..’

ಸೆಕ್ಷನ್ 7 ಉಲ್ಲೇಖಿಸಿದ ನ್ಯಾಯಾಧೀಶೆ, “ಲೈಂಗಿಕ ಉದ್ದೇಶದೊಂದಿಗೆ ದೈಹಿಕ ಸಂಪರ್ಕ, ಸ್ಪರ್ಶ ಮಾಡುವುದು (ಲೈಂಗಿಕ ಕ್ರಿಯೆ ನಡೆಸದೇ ಇದ್ದರೂ) ಅಪರಾಧಕ್ಕೆ ಅತ್ಯಗತ್ಯ ಅಂಶವಾಗಿದೆ’ ಎಂದು ಹೇಳಿದರಾದರೂ, ಆರೋಪಿ ಬಾಲಕಿಯ ಖಾಸಗಿ ಭಾಗಗಳನ್ನು ಮುಟ್ಟದ ಕಾರಣ ಈ ಪ್ರಕರಣ ಲೈಂಗಿಕ ದೌರ್ಜನ್ಯದ ಅಡಿ ಬರುವುದಿಲ್ಲ ಎಂದು ಆದೇಶ ನೀಡಿದ್ದಾರೆ.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ಸುಪ್ರಿಂ ಕೋರ್ಟಿನಲ್ಲಿ ಗಣದೇವಾಲಾ ಅವರ ಜನೆವರಿ 19ರ ತೀರ್ಪನ್ನು ವಿಶೇಷವಾಗಿ ಪ್ರಸ್ತಾಪ ಮಾಡಿದ ನಂತರ ಆ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ.

ಬಾಂಬೆ ಹೈಕೋರ್ಟ್‌ನ ವ್ಯಾಖ್ಯಾನದ ವಿರುದ್ಧ ತುರ್ತು ಮೇಲ್ಮನವಿ ಸಲ್ಲಿಸುವಂತೆ ಜನವರಿ 25 ರಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ ಮಹಾರಾಷ್ಟ್ರ ಸರ್ಕಾರವನ್ನು ಕೋರಿತ್ತು. ಹಲವಾರು ಮಕ್ಕಳ ಹಕ್ಕುಗಳ ಸಂಸ್ಥೆಗಳು ಈ ತೀರ್ಪನ್ನು “ಸಂಪೂರ್ಣ ಸ್ವೀಕಾರಾರ್ಹವಲ್ಲದ ತೀರ್ಪಿದು. ಅತಿರೇಕದ ಮತ್ತು ಅಸಹ್ಯಕರ ತೀರ್ಪು” ಎಂದು ಟೀಕಿಸಿವೆ.


ಇದನ್ನೂ ಓದಿ: 10 ಲಕ್ಷ ರೂ. ‘ಶಾಂತಿ ಉಲ್ಲಂಘನೆ’ ಬಾಂಡ್ ನೀಡಲು ರೈತರಿಗೆ ನೋಟಿಸ್! ಯುಪಿ ಸರ್ಕಾರಕ್ಕೆ ವಿವರಣೆ ಕೇಳಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...