Homeಮುಖಪುಟಅಪ್ರಾಪ್ತರ ಎದುರು ಪ್ಯಾಂಟ್ ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

ಅಪ್ರಾಪ್ತರ ಎದುರು ಪ್ಯಾಂಟ್ ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

‘ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ’ ಅಪ್ರಾಪ್ತ ವಯಸ್ಕನನ್ನು ಸ್ಪರ್ಶಿಸುವುದು ಲೈಂಗಿಕ ದೌರ್ಜನ್ಯವಲ್ಲ ಎಂದು ಆದೇಶ ನೀಡಿದ್ದ ಅದೇ ನ್ಯಾಯಾಧೀಶರು ಈ ತೀರ್ಪನ್ನು ಅಂಗೀಕರಿಸಿದ್ದಾರೆ.

- Advertisement -
- Advertisement -

ಅಪ್ರಾಪ್ತ ವಯಸ್ಕನ (ಬಾಲಕ/ಬಾಲಕಿ) ಕೈಗಳನ್ನು ಹಿಡಿದುಕೊಳ್ಳುವುದು ಮತ್ತು ಪ್ಯಾಂಟ್ ಜಿಪ್ ಅನ್ನು ಅಪ್ರಾಪ್ತ ವಯಸ್ಕನ ಮುಂದೆ ತೆಗೆಯುವುದು ಮಾಡುವುದು ಪೋಕ್ಸೋ ಕಾಯ್ದೆ ಅಡಿ ಲೈಂಗಿಕ ಅಪರಾಧಗಳ ವ್ಯಾಖ್ಯಾನಕ್ಕೆ ಒಳಪಡುವುದಿಲ್ಲ ಎಂದು ಬಾಂಬೇ ಹೈಕೋರ್ಟ್ ಆದೇಶ ನೀಡಿದೆ ಎಂದು ಗುರುವಾರ ಲೈವ್ ಲಾ ವರದಿ ಮಾಡಿದೆ.

ಐದು ವರ್ಷದ ಬಾಲಕಿಯನ್ನು ಕಿರುಕುಳ ಮಾಡಿದ್ದಕ್ಕಾಗಿ 50 ವರ್ಷದ ವ್ಯಕ್ತಿಗೆ ನೀಡಲಾದ ಶಿಕ್ಷೆಯ ವಿರುದ್ಧ ಸಲ್ಲಿಸಲಾದ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರ ನ್ಯಾಯಪೀಠ ವಿಚಾರಣೆ ನಡೆಸಿತು.

ಪ್ರಕರಣದ ಹಿನ್ನೆಲೆ

ನಾಗಪುರದ ಸೆಷನ್ ಕೋರ್ಟು ಪ್ರಸ್ತುತ ಪ್ರಕರಣದಲ್ಲಿ ಅಪರಾಧವು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವಿನ ವಿರುದ್ಧವಾಗಿರುವುದರಿಂದ, ಪೋಕ್ಸೋ ಸೆಕ್ಷನ್ 10 ರ ಅಡಿಯಲ್ಲಿ ಶಿಕ್ಷಾರ್ಹವಾಗಿದೆ ಎಂದು ವಿವರಿಸಿ, ಅರೋಪಿಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿತ್ತು.

ಆರೋಪಿ ತನ್ನ ಪ್ಯಾಂಟ್ ಜಿಪ್ ತೆಗೆದು, ಮಗಳ ಕೈಗಳನ್ನು ಹಿಡಿದಿರುವುದನ್ನು ತಾನು ನೋಡಿದ್ದಾಗಿ ಮಗುವಿನ ತಾಯಿ ದೂರು ದಾಖಲಿಸಿದ್ದರು. ಆ ವ್ಯಕ್ತಿ ತನ್ನ ಜೊತೆಗೆ ಮಲಗಲು ಹೇಳಿದ್ದಾಗಿ ಮಗು ತಿಳಿಸಿದೆ ಎಂದು ತಾಯಿ ದೂರಿನಲ್ಲಿ ತಿಳಿಸಿದ್ದರು.

ಬಾಂಬೆ ಹೈಕೋರ್ಟು ಹೇಳಿದ್ದೇನು?

ಈ ಪ್ರಕರಣವು ಪೋಕ್ಸೋ ಕಾಯ್ದೆ ಅಡಿ ಲೈಂಗಿಕ ಅಪರಾಧಗಳ ವ್ಯಾಖ್ಯಾನಕ್ಕೆ ಒಳಪಡುವುದಿಲ್ಲ ಎಂದು ಬಾಂಬೇ ಹೈಕೋರ್ಟ್ ಆದೇಶ ನೀಡಿದೆ.

“ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ” ಸ್ಪರ್ಶಿಸುವುದು ಲೈಂಗಿಕ ದೌರ್ಜನ್ಯವಲ್ಲ ಎಂಬ ಕಾರಣಕ್ಕೆ ಪೋಕ್ಸೋ ಅಡಿಯಲ್ಲಿ ವ್ಯಕ್ತಿಯನ್ನು ಖುಲಾಸೆಗೊಳಿಸಿದ್ದ ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರೇ ಈ ಆದೇಶವನ್ನೂ ನೀಡಿದ್ದಾರೆ.

ಮೊದಲ ಪ್ರಕರಣದಲ್ಲಿ, ಪೇರಲ ಹಣ್ಣನ್ನು ನೀಡುವ ಆಮಿಷವೊಡ್ಡಿ 12 ವರ್ಷ ವಯಸ್ಸಿನ ಮಗುವನ್ನು ಆರೋಪಿ ತನ್ನ ಮನೆಗೆ ಕರೆದೊಯ್ದಿದ್ದಾನೆ. ಆಕೆಯ ಸ್ತನವನ್ನು ಒತ್ತಿ ಮತ್ತು ಅವಳ ಬಟ್ಟೆಗಳನ್ನು ತೆಗೆಯಲು ಪ್ರಯತ್ನಿಸಿದ್ದ. ಆತನಿಗೆ ಕೆಳ ಕೋರ್ಟಿನಲ್ಲಿ ಶಿಕ್ಷೆ ಆಗಿತ್ತು. ಆದರೆ ಬಾಂಬೇ ಹೈಕೋರ್ಟಿನ ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರು, “ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ” ಅದು ಲೈಂಗಿಕ ಅಪರಾಧ ಆಗುವುದಿಲ್ಲ ಎಂದು ಆರೋಪಿಯನ್ನು ಖುಲಾಸೆಗೊಳಿಸಿದ್ದರು.

ಸದ್ಯದ ಪ್ರಕರಣ

ನ್ಯಾಯಮೂರ್ತಿ ಗಣದೇವಾಲಾ ಹಿಂದಿನ ಆದೇಶದಂತೆ ಈ ಆದೇಶದಲ್ಲೂ ಪೋಕ್ಸೋ ಕಾಯ್ದೆಯ ಸೆಕ್ಷನ್ 7 ಅನ್ನು ಉಲ್ಲೇಖಿಸಿದ್ದಾರೆ. ಆದರೆ ಸೆಕ್ಷನ್ 7 ಪ್ರಕಾರ, “ಯಾರು, ಲೈಂಗಿಕ ಉದ್ದೇಶದಿಂದ ಮಗುವಿನ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸುತ್ತಾರೆ ಅಥವಾ ಮಗು ತಮ್ಮ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸುವಂತೆ ಒತ್ತಾಯಿಸುತ್ತಾರೋ ಅಂಥವರು ಅಲ್ಲಿ ಲೈಂಗಿಕ ಕ್ರಿಯೆ ನಡೆಸದೇ ಇದ್ದರೂ ಕೂಡ ಅದನ್ನು ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಬೆಕು…..’

ಸೆಕ್ಷನ್ 7 ಉಲ್ಲೇಖಿಸಿದ ನ್ಯಾಯಾಧೀಶೆ, “ಲೈಂಗಿಕ ಉದ್ದೇಶದೊಂದಿಗೆ ದೈಹಿಕ ಸಂಪರ್ಕ, ಸ್ಪರ್ಶ ಮಾಡುವುದು (ಲೈಂಗಿಕ ಕ್ರಿಯೆ ನಡೆಸದೇ ಇದ್ದರೂ) ಅಪರಾಧಕ್ಕೆ ಅತ್ಯಗತ್ಯ ಅಂಶವಾಗಿದೆ’ ಎಂದು ಹೇಳಿದರಾದರೂ, ಆರೋಪಿ ಬಾಲಕಿಯ ಖಾಸಗಿ ಭಾಗಗಳನ್ನು ಮುಟ್ಟದ ಕಾರಣ ಈ ಪ್ರಕರಣ ಲೈಂಗಿಕ ದೌರ್ಜನ್ಯದ ಅಡಿ ಬರುವುದಿಲ್ಲ ಎಂದು ಆದೇಶ ನೀಡಿದ್ದಾರೆ.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ಸುಪ್ರಿಂ ಕೋರ್ಟಿನಲ್ಲಿ ಗಣದೇವಾಲಾ ಅವರ ಜನೆವರಿ 19ರ ತೀರ್ಪನ್ನು ವಿಶೇಷವಾಗಿ ಪ್ರಸ್ತಾಪ ಮಾಡಿದ ನಂತರ ಆ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ.

ಬಾಂಬೆ ಹೈಕೋರ್ಟ್‌ನ ವ್ಯಾಖ್ಯಾನದ ವಿರುದ್ಧ ತುರ್ತು ಮೇಲ್ಮನವಿ ಸಲ್ಲಿಸುವಂತೆ ಜನವರಿ 25 ರಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ ಮಹಾರಾಷ್ಟ್ರ ಸರ್ಕಾರವನ್ನು ಕೋರಿತ್ತು. ಹಲವಾರು ಮಕ್ಕಳ ಹಕ್ಕುಗಳ ಸಂಸ್ಥೆಗಳು ಈ ತೀರ್ಪನ್ನು “ಸಂಪೂರ್ಣ ಸ್ವೀಕಾರಾರ್ಹವಲ್ಲದ ತೀರ್ಪಿದು. ಅತಿರೇಕದ ಮತ್ತು ಅಸಹ್ಯಕರ ತೀರ್ಪು” ಎಂದು ಟೀಕಿಸಿವೆ.


ಇದನ್ನೂ ಓದಿ: 10 ಲಕ್ಷ ರೂ. ‘ಶಾಂತಿ ಉಲ್ಲಂಘನೆ’ ಬಾಂಡ್ ನೀಡಲು ರೈತರಿಗೆ ನೋಟಿಸ್! ಯುಪಿ ಸರ್ಕಾರಕ್ಕೆ ವಿವರಣೆ ಕೇಳಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...