Homeಮುಖಪುಟಅಪ್ರಾಪ್ತರ ಎದುರು ಪ್ಯಾಂಟ್ ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

ಅಪ್ರಾಪ್ತರ ಎದುರು ಪ್ಯಾಂಟ್ ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

‘ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ’ ಅಪ್ರಾಪ್ತ ವಯಸ್ಕನನ್ನು ಸ್ಪರ್ಶಿಸುವುದು ಲೈಂಗಿಕ ದೌರ್ಜನ್ಯವಲ್ಲ ಎಂದು ಆದೇಶ ನೀಡಿದ್ದ ಅದೇ ನ್ಯಾಯಾಧೀಶರು ಈ ತೀರ್ಪನ್ನು ಅಂಗೀಕರಿಸಿದ್ದಾರೆ.

- Advertisement -
- Advertisement -

ಅಪ್ರಾಪ್ತ ವಯಸ್ಕನ (ಬಾಲಕ/ಬಾಲಕಿ) ಕೈಗಳನ್ನು ಹಿಡಿದುಕೊಳ್ಳುವುದು ಮತ್ತು ಪ್ಯಾಂಟ್ ಜಿಪ್ ಅನ್ನು ಅಪ್ರಾಪ್ತ ವಯಸ್ಕನ ಮುಂದೆ ತೆಗೆಯುವುದು ಮಾಡುವುದು ಪೋಕ್ಸೋ ಕಾಯ್ದೆ ಅಡಿ ಲೈಂಗಿಕ ಅಪರಾಧಗಳ ವ್ಯಾಖ್ಯಾನಕ್ಕೆ ಒಳಪಡುವುದಿಲ್ಲ ಎಂದು ಬಾಂಬೇ ಹೈಕೋರ್ಟ್ ಆದೇಶ ನೀಡಿದೆ ಎಂದು ಗುರುವಾರ ಲೈವ್ ಲಾ ವರದಿ ಮಾಡಿದೆ.

ಐದು ವರ್ಷದ ಬಾಲಕಿಯನ್ನು ಕಿರುಕುಳ ಮಾಡಿದ್ದಕ್ಕಾಗಿ 50 ವರ್ಷದ ವ್ಯಕ್ತಿಗೆ ನೀಡಲಾದ ಶಿಕ್ಷೆಯ ವಿರುದ್ಧ ಸಲ್ಲಿಸಲಾದ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರ ನ್ಯಾಯಪೀಠ ವಿಚಾರಣೆ ನಡೆಸಿತು.

ಪ್ರಕರಣದ ಹಿನ್ನೆಲೆ

ನಾಗಪುರದ ಸೆಷನ್ ಕೋರ್ಟು ಪ್ರಸ್ತುತ ಪ್ರಕರಣದಲ್ಲಿ ಅಪರಾಧವು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವಿನ ವಿರುದ್ಧವಾಗಿರುವುದರಿಂದ, ಪೋಕ್ಸೋ ಸೆಕ್ಷನ್ 10 ರ ಅಡಿಯಲ್ಲಿ ಶಿಕ್ಷಾರ್ಹವಾಗಿದೆ ಎಂದು ವಿವರಿಸಿ, ಅರೋಪಿಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿತ್ತು.

ಆರೋಪಿ ತನ್ನ ಪ್ಯಾಂಟ್ ಜಿಪ್ ತೆಗೆದು, ಮಗಳ ಕೈಗಳನ್ನು ಹಿಡಿದಿರುವುದನ್ನು ತಾನು ನೋಡಿದ್ದಾಗಿ ಮಗುವಿನ ತಾಯಿ ದೂರು ದಾಖಲಿಸಿದ್ದರು. ಆ ವ್ಯಕ್ತಿ ತನ್ನ ಜೊತೆಗೆ ಮಲಗಲು ಹೇಳಿದ್ದಾಗಿ ಮಗು ತಿಳಿಸಿದೆ ಎಂದು ತಾಯಿ ದೂರಿನಲ್ಲಿ ತಿಳಿಸಿದ್ದರು.

ಬಾಂಬೆ ಹೈಕೋರ್ಟು ಹೇಳಿದ್ದೇನು?

ಈ ಪ್ರಕರಣವು ಪೋಕ್ಸೋ ಕಾಯ್ದೆ ಅಡಿ ಲೈಂಗಿಕ ಅಪರಾಧಗಳ ವ್ಯಾಖ್ಯಾನಕ್ಕೆ ಒಳಪಡುವುದಿಲ್ಲ ಎಂದು ಬಾಂಬೇ ಹೈಕೋರ್ಟ್ ಆದೇಶ ನೀಡಿದೆ.

“ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ” ಸ್ಪರ್ಶಿಸುವುದು ಲೈಂಗಿಕ ದೌರ್ಜನ್ಯವಲ್ಲ ಎಂಬ ಕಾರಣಕ್ಕೆ ಪೋಕ್ಸೋ ಅಡಿಯಲ್ಲಿ ವ್ಯಕ್ತಿಯನ್ನು ಖುಲಾಸೆಗೊಳಿಸಿದ್ದ ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರೇ ಈ ಆದೇಶವನ್ನೂ ನೀಡಿದ್ದಾರೆ.

ಮೊದಲ ಪ್ರಕರಣದಲ್ಲಿ, ಪೇರಲ ಹಣ್ಣನ್ನು ನೀಡುವ ಆಮಿಷವೊಡ್ಡಿ 12 ವರ್ಷ ವಯಸ್ಸಿನ ಮಗುವನ್ನು ಆರೋಪಿ ತನ್ನ ಮನೆಗೆ ಕರೆದೊಯ್ದಿದ್ದಾನೆ. ಆಕೆಯ ಸ್ತನವನ್ನು ಒತ್ತಿ ಮತ್ತು ಅವಳ ಬಟ್ಟೆಗಳನ್ನು ತೆಗೆಯಲು ಪ್ರಯತ್ನಿಸಿದ್ದ. ಆತನಿಗೆ ಕೆಳ ಕೋರ್ಟಿನಲ್ಲಿ ಶಿಕ್ಷೆ ಆಗಿತ್ತು. ಆದರೆ ಬಾಂಬೇ ಹೈಕೋರ್ಟಿನ ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರು, “ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ” ಅದು ಲೈಂಗಿಕ ಅಪರಾಧ ಆಗುವುದಿಲ್ಲ ಎಂದು ಆರೋಪಿಯನ್ನು ಖುಲಾಸೆಗೊಳಿಸಿದ್ದರು.

ಸದ್ಯದ ಪ್ರಕರಣ

ನ್ಯಾಯಮೂರ್ತಿ ಗಣದೇವಾಲಾ ಹಿಂದಿನ ಆದೇಶದಂತೆ ಈ ಆದೇಶದಲ್ಲೂ ಪೋಕ್ಸೋ ಕಾಯ್ದೆಯ ಸೆಕ್ಷನ್ 7 ಅನ್ನು ಉಲ್ಲೇಖಿಸಿದ್ದಾರೆ. ಆದರೆ ಸೆಕ್ಷನ್ 7 ಪ್ರಕಾರ, “ಯಾರು, ಲೈಂಗಿಕ ಉದ್ದೇಶದಿಂದ ಮಗುವಿನ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸುತ್ತಾರೆ ಅಥವಾ ಮಗು ತಮ್ಮ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸುವಂತೆ ಒತ್ತಾಯಿಸುತ್ತಾರೋ ಅಂಥವರು ಅಲ್ಲಿ ಲೈಂಗಿಕ ಕ್ರಿಯೆ ನಡೆಸದೇ ಇದ್ದರೂ ಕೂಡ ಅದನ್ನು ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಬೆಕು…..’

ಸೆಕ್ಷನ್ 7 ಉಲ್ಲೇಖಿಸಿದ ನ್ಯಾಯಾಧೀಶೆ, “ಲೈಂಗಿಕ ಉದ್ದೇಶದೊಂದಿಗೆ ದೈಹಿಕ ಸಂಪರ್ಕ, ಸ್ಪರ್ಶ ಮಾಡುವುದು (ಲೈಂಗಿಕ ಕ್ರಿಯೆ ನಡೆಸದೇ ಇದ್ದರೂ) ಅಪರಾಧಕ್ಕೆ ಅತ್ಯಗತ್ಯ ಅಂಶವಾಗಿದೆ’ ಎಂದು ಹೇಳಿದರಾದರೂ, ಆರೋಪಿ ಬಾಲಕಿಯ ಖಾಸಗಿ ಭಾಗಗಳನ್ನು ಮುಟ್ಟದ ಕಾರಣ ಈ ಪ್ರಕರಣ ಲೈಂಗಿಕ ದೌರ್ಜನ್ಯದ ಅಡಿ ಬರುವುದಿಲ್ಲ ಎಂದು ಆದೇಶ ನೀಡಿದ್ದಾರೆ.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ಸುಪ್ರಿಂ ಕೋರ್ಟಿನಲ್ಲಿ ಗಣದೇವಾಲಾ ಅವರ ಜನೆವರಿ 19ರ ತೀರ್ಪನ್ನು ವಿಶೇಷವಾಗಿ ಪ್ರಸ್ತಾಪ ಮಾಡಿದ ನಂತರ ಆ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ.

ಬಾಂಬೆ ಹೈಕೋರ್ಟ್‌ನ ವ್ಯಾಖ್ಯಾನದ ವಿರುದ್ಧ ತುರ್ತು ಮೇಲ್ಮನವಿ ಸಲ್ಲಿಸುವಂತೆ ಜನವರಿ 25 ರಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ ಮಹಾರಾಷ್ಟ್ರ ಸರ್ಕಾರವನ್ನು ಕೋರಿತ್ತು. ಹಲವಾರು ಮಕ್ಕಳ ಹಕ್ಕುಗಳ ಸಂಸ್ಥೆಗಳು ಈ ತೀರ್ಪನ್ನು “ಸಂಪೂರ್ಣ ಸ್ವೀಕಾರಾರ್ಹವಲ್ಲದ ತೀರ್ಪಿದು. ಅತಿರೇಕದ ಮತ್ತು ಅಸಹ್ಯಕರ ತೀರ್ಪು” ಎಂದು ಟೀಕಿಸಿವೆ.


ಇದನ್ನೂ ಓದಿ: 10 ಲಕ್ಷ ರೂ. ‘ಶಾಂತಿ ಉಲ್ಲಂಘನೆ’ ಬಾಂಡ್ ನೀಡಲು ರೈತರಿಗೆ ನೋಟಿಸ್! ಯುಪಿ ಸರ್ಕಾರಕ್ಕೆ ವಿವರಣೆ ಕೇಳಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...