Homeಮುಖಪುಟಅಪ್ರಾಪ್ತರ ಎದುರು ಪ್ಯಾಂಟ್ ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

ಅಪ್ರಾಪ್ತರ ಎದುರು ಪ್ಯಾಂಟ್ ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

‘ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ’ ಅಪ್ರಾಪ್ತ ವಯಸ್ಕನನ್ನು ಸ್ಪರ್ಶಿಸುವುದು ಲೈಂಗಿಕ ದೌರ್ಜನ್ಯವಲ್ಲ ಎಂದು ಆದೇಶ ನೀಡಿದ್ದ ಅದೇ ನ್ಯಾಯಾಧೀಶರು ಈ ತೀರ್ಪನ್ನು ಅಂಗೀಕರಿಸಿದ್ದಾರೆ.

- Advertisement -
- Advertisement -

ಅಪ್ರಾಪ್ತ ವಯಸ್ಕನ (ಬಾಲಕ/ಬಾಲಕಿ) ಕೈಗಳನ್ನು ಹಿಡಿದುಕೊಳ್ಳುವುದು ಮತ್ತು ಪ್ಯಾಂಟ್ ಜಿಪ್ ಅನ್ನು ಅಪ್ರಾಪ್ತ ವಯಸ್ಕನ ಮುಂದೆ ತೆಗೆಯುವುದು ಮಾಡುವುದು ಪೋಕ್ಸೋ ಕಾಯ್ದೆ ಅಡಿ ಲೈಂಗಿಕ ಅಪರಾಧಗಳ ವ್ಯಾಖ್ಯಾನಕ್ಕೆ ಒಳಪಡುವುದಿಲ್ಲ ಎಂದು ಬಾಂಬೇ ಹೈಕೋರ್ಟ್ ಆದೇಶ ನೀಡಿದೆ ಎಂದು ಗುರುವಾರ ಲೈವ್ ಲಾ ವರದಿ ಮಾಡಿದೆ.

ಐದು ವರ್ಷದ ಬಾಲಕಿಯನ್ನು ಕಿರುಕುಳ ಮಾಡಿದ್ದಕ್ಕಾಗಿ 50 ವರ್ಷದ ವ್ಯಕ್ತಿಗೆ ನೀಡಲಾದ ಶಿಕ್ಷೆಯ ವಿರುದ್ಧ ಸಲ್ಲಿಸಲಾದ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರ ನ್ಯಾಯಪೀಠ ವಿಚಾರಣೆ ನಡೆಸಿತು.

ಪ್ರಕರಣದ ಹಿನ್ನೆಲೆ

ನಾಗಪುರದ ಸೆಷನ್ ಕೋರ್ಟು ಪ್ರಸ್ತುತ ಪ್ರಕರಣದಲ್ಲಿ ಅಪರಾಧವು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವಿನ ವಿರುದ್ಧವಾಗಿರುವುದರಿಂದ, ಪೋಕ್ಸೋ ಸೆಕ್ಷನ್ 10 ರ ಅಡಿಯಲ್ಲಿ ಶಿಕ್ಷಾರ್ಹವಾಗಿದೆ ಎಂದು ವಿವರಿಸಿ, ಅರೋಪಿಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿತ್ತು.

ಆರೋಪಿ ತನ್ನ ಪ್ಯಾಂಟ್ ಜಿಪ್ ತೆಗೆದು, ಮಗಳ ಕೈಗಳನ್ನು ಹಿಡಿದಿರುವುದನ್ನು ತಾನು ನೋಡಿದ್ದಾಗಿ ಮಗುವಿನ ತಾಯಿ ದೂರು ದಾಖಲಿಸಿದ್ದರು. ಆ ವ್ಯಕ್ತಿ ತನ್ನ ಜೊತೆಗೆ ಮಲಗಲು ಹೇಳಿದ್ದಾಗಿ ಮಗು ತಿಳಿಸಿದೆ ಎಂದು ತಾಯಿ ದೂರಿನಲ್ಲಿ ತಿಳಿಸಿದ್ದರು.

ಬಾಂಬೆ ಹೈಕೋರ್ಟು ಹೇಳಿದ್ದೇನು?

ಈ ಪ್ರಕರಣವು ಪೋಕ್ಸೋ ಕಾಯ್ದೆ ಅಡಿ ಲೈಂಗಿಕ ಅಪರಾಧಗಳ ವ್ಯಾಖ್ಯಾನಕ್ಕೆ ಒಳಪಡುವುದಿಲ್ಲ ಎಂದು ಬಾಂಬೇ ಹೈಕೋರ್ಟ್ ಆದೇಶ ನೀಡಿದೆ.

“ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ” ಸ್ಪರ್ಶಿಸುವುದು ಲೈಂಗಿಕ ದೌರ್ಜನ್ಯವಲ್ಲ ಎಂಬ ಕಾರಣಕ್ಕೆ ಪೋಕ್ಸೋ ಅಡಿಯಲ್ಲಿ ವ್ಯಕ್ತಿಯನ್ನು ಖುಲಾಸೆಗೊಳಿಸಿದ್ದ ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರೇ ಈ ಆದೇಶವನ್ನೂ ನೀಡಿದ್ದಾರೆ.

ಮೊದಲ ಪ್ರಕರಣದಲ್ಲಿ, ಪೇರಲ ಹಣ್ಣನ್ನು ನೀಡುವ ಆಮಿಷವೊಡ್ಡಿ 12 ವರ್ಷ ವಯಸ್ಸಿನ ಮಗುವನ್ನು ಆರೋಪಿ ತನ್ನ ಮನೆಗೆ ಕರೆದೊಯ್ದಿದ್ದಾನೆ. ಆಕೆಯ ಸ್ತನವನ್ನು ಒತ್ತಿ ಮತ್ತು ಅವಳ ಬಟ್ಟೆಗಳನ್ನು ತೆಗೆಯಲು ಪ್ರಯತ್ನಿಸಿದ್ದ. ಆತನಿಗೆ ಕೆಳ ಕೋರ್ಟಿನಲ್ಲಿ ಶಿಕ್ಷೆ ಆಗಿತ್ತು. ಆದರೆ ಬಾಂಬೇ ಹೈಕೋರ್ಟಿನ ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರು, “ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ” ಅದು ಲೈಂಗಿಕ ಅಪರಾಧ ಆಗುವುದಿಲ್ಲ ಎಂದು ಆರೋಪಿಯನ್ನು ಖುಲಾಸೆಗೊಳಿಸಿದ್ದರು.

ಸದ್ಯದ ಪ್ರಕರಣ

ನ್ಯಾಯಮೂರ್ತಿ ಗಣದೇವಾಲಾ ಹಿಂದಿನ ಆದೇಶದಂತೆ ಈ ಆದೇಶದಲ್ಲೂ ಪೋಕ್ಸೋ ಕಾಯ್ದೆಯ ಸೆಕ್ಷನ್ 7 ಅನ್ನು ಉಲ್ಲೇಖಿಸಿದ್ದಾರೆ. ಆದರೆ ಸೆಕ್ಷನ್ 7 ಪ್ರಕಾರ, “ಯಾರು, ಲೈಂಗಿಕ ಉದ್ದೇಶದಿಂದ ಮಗುವಿನ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸುತ್ತಾರೆ ಅಥವಾ ಮಗು ತಮ್ಮ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸುವಂತೆ ಒತ್ತಾಯಿಸುತ್ತಾರೋ ಅಂಥವರು ಅಲ್ಲಿ ಲೈಂಗಿಕ ಕ್ರಿಯೆ ನಡೆಸದೇ ಇದ್ದರೂ ಕೂಡ ಅದನ್ನು ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಬೆಕು…..’

ಸೆಕ್ಷನ್ 7 ಉಲ್ಲೇಖಿಸಿದ ನ್ಯಾಯಾಧೀಶೆ, “ಲೈಂಗಿಕ ಉದ್ದೇಶದೊಂದಿಗೆ ದೈಹಿಕ ಸಂಪರ್ಕ, ಸ್ಪರ್ಶ ಮಾಡುವುದು (ಲೈಂಗಿಕ ಕ್ರಿಯೆ ನಡೆಸದೇ ಇದ್ದರೂ) ಅಪರಾಧಕ್ಕೆ ಅತ್ಯಗತ್ಯ ಅಂಶವಾಗಿದೆ’ ಎಂದು ಹೇಳಿದರಾದರೂ, ಆರೋಪಿ ಬಾಲಕಿಯ ಖಾಸಗಿ ಭಾಗಗಳನ್ನು ಮುಟ್ಟದ ಕಾರಣ ಈ ಪ್ರಕರಣ ಲೈಂಗಿಕ ದೌರ್ಜನ್ಯದ ಅಡಿ ಬರುವುದಿಲ್ಲ ಎಂದು ಆದೇಶ ನೀಡಿದ್ದಾರೆ.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ಸುಪ್ರಿಂ ಕೋರ್ಟಿನಲ್ಲಿ ಗಣದೇವಾಲಾ ಅವರ ಜನೆವರಿ 19ರ ತೀರ್ಪನ್ನು ವಿಶೇಷವಾಗಿ ಪ್ರಸ್ತಾಪ ಮಾಡಿದ ನಂತರ ಆ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ.

ಬಾಂಬೆ ಹೈಕೋರ್ಟ್‌ನ ವ್ಯಾಖ್ಯಾನದ ವಿರುದ್ಧ ತುರ್ತು ಮೇಲ್ಮನವಿ ಸಲ್ಲಿಸುವಂತೆ ಜನವರಿ 25 ರಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ ಮಹಾರಾಷ್ಟ್ರ ಸರ್ಕಾರವನ್ನು ಕೋರಿತ್ತು. ಹಲವಾರು ಮಕ್ಕಳ ಹಕ್ಕುಗಳ ಸಂಸ್ಥೆಗಳು ಈ ತೀರ್ಪನ್ನು “ಸಂಪೂರ್ಣ ಸ್ವೀಕಾರಾರ್ಹವಲ್ಲದ ತೀರ್ಪಿದು. ಅತಿರೇಕದ ಮತ್ತು ಅಸಹ್ಯಕರ ತೀರ್ಪು” ಎಂದು ಟೀಕಿಸಿವೆ.


ಇದನ್ನೂ ಓದಿ: 10 ಲಕ್ಷ ರೂ. ‘ಶಾಂತಿ ಉಲ್ಲಂಘನೆ’ ಬಾಂಡ್ ನೀಡಲು ರೈತರಿಗೆ ನೋಟಿಸ್! ಯುಪಿ ಸರ್ಕಾರಕ್ಕೆ ವಿವರಣೆ ಕೇಳಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...