Homeಮುಖಪುಟಅಪ್ರಾಪ್ತರ ಎದುರು ಪ್ಯಾಂಟ್ ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

ಅಪ್ರಾಪ್ತರ ಎದುರು ಪ್ಯಾಂಟ್ ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

‘ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ’ ಅಪ್ರಾಪ್ತ ವಯಸ್ಕನನ್ನು ಸ್ಪರ್ಶಿಸುವುದು ಲೈಂಗಿಕ ದೌರ್ಜನ್ಯವಲ್ಲ ಎಂದು ಆದೇಶ ನೀಡಿದ್ದ ಅದೇ ನ್ಯಾಯಾಧೀಶರು ಈ ತೀರ್ಪನ್ನು ಅಂಗೀಕರಿಸಿದ್ದಾರೆ.

- Advertisement -
- Advertisement -

ಅಪ್ರಾಪ್ತ ವಯಸ್ಕನ (ಬಾಲಕ/ಬಾಲಕಿ) ಕೈಗಳನ್ನು ಹಿಡಿದುಕೊಳ್ಳುವುದು ಮತ್ತು ಪ್ಯಾಂಟ್ ಜಿಪ್ ಅನ್ನು ಅಪ್ರಾಪ್ತ ವಯಸ್ಕನ ಮುಂದೆ ತೆಗೆಯುವುದು ಮಾಡುವುದು ಪೋಕ್ಸೋ ಕಾಯ್ದೆ ಅಡಿ ಲೈಂಗಿಕ ಅಪರಾಧಗಳ ವ್ಯಾಖ್ಯಾನಕ್ಕೆ ಒಳಪಡುವುದಿಲ್ಲ ಎಂದು ಬಾಂಬೇ ಹೈಕೋರ್ಟ್ ಆದೇಶ ನೀಡಿದೆ ಎಂದು ಗುರುವಾರ ಲೈವ್ ಲಾ ವರದಿ ಮಾಡಿದೆ.

ಐದು ವರ್ಷದ ಬಾಲಕಿಯನ್ನು ಕಿರುಕುಳ ಮಾಡಿದ್ದಕ್ಕಾಗಿ 50 ವರ್ಷದ ವ್ಯಕ್ತಿಗೆ ನೀಡಲಾದ ಶಿಕ್ಷೆಯ ವಿರುದ್ಧ ಸಲ್ಲಿಸಲಾದ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರ ನ್ಯಾಯಪೀಠ ವಿಚಾರಣೆ ನಡೆಸಿತು.

ಪ್ರಕರಣದ ಹಿನ್ನೆಲೆ

ನಾಗಪುರದ ಸೆಷನ್ ಕೋರ್ಟು ಪ್ರಸ್ತುತ ಪ್ರಕರಣದಲ್ಲಿ ಅಪರಾಧವು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವಿನ ವಿರುದ್ಧವಾಗಿರುವುದರಿಂದ, ಪೋಕ್ಸೋ ಸೆಕ್ಷನ್ 10 ರ ಅಡಿಯಲ್ಲಿ ಶಿಕ್ಷಾರ್ಹವಾಗಿದೆ ಎಂದು ವಿವರಿಸಿ, ಅರೋಪಿಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿತ್ತು.

ಆರೋಪಿ ತನ್ನ ಪ್ಯಾಂಟ್ ಜಿಪ್ ತೆಗೆದು, ಮಗಳ ಕೈಗಳನ್ನು ಹಿಡಿದಿರುವುದನ್ನು ತಾನು ನೋಡಿದ್ದಾಗಿ ಮಗುವಿನ ತಾಯಿ ದೂರು ದಾಖಲಿಸಿದ್ದರು. ಆ ವ್ಯಕ್ತಿ ತನ್ನ ಜೊತೆಗೆ ಮಲಗಲು ಹೇಳಿದ್ದಾಗಿ ಮಗು ತಿಳಿಸಿದೆ ಎಂದು ತಾಯಿ ದೂರಿನಲ್ಲಿ ತಿಳಿಸಿದ್ದರು.

ಬಾಂಬೆ ಹೈಕೋರ್ಟು ಹೇಳಿದ್ದೇನು?

ಈ ಪ್ರಕರಣವು ಪೋಕ್ಸೋ ಕಾಯ್ದೆ ಅಡಿ ಲೈಂಗಿಕ ಅಪರಾಧಗಳ ವ್ಯಾಖ್ಯಾನಕ್ಕೆ ಒಳಪಡುವುದಿಲ್ಲ ಎಂದು ಬಾಂಬೇ ಹೈಕೋರ್ಟ್ ಆದೇಶ ನೀಡಿದೆ.

“ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ” ಸ್ಪರ್ಶಿಸುವುದು ಲೈಂಗಿಕ ದೌರ್ಜನ್ಯವಲ್ಲ ಎಂಬ ಕಾರಣಕ್ಕೆ ಪೋಕ್ಸೋ ಅಡಿಯಲ್ಲಿ ವ್ಯಕ್ತಿಯನ್ನು ಖುಲಾಸೆಗೊಳಿಸಿದ್ದ ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರೇ ಈ ಆದೇಶವನ್ನೂ ನೀಡಿದ್ದಾರೆ.

ಮೊದಲ ಪ್ರಕರಣದಲ್ಲಿ, ಪೇರಲ ಹಣ್ಣನ್ನು ನೀಡುವ ಆಮಿಷವೊಡ್ಡಿ 12 ವರ್ಷ ವಯಸ್ಸಿನ ಮಗುವನ್ನು ಆರೋಪಿ ತನ್ನ ಮನೆಗೆ ಕರೆದೊಯ್ದಿದ್ದಾನೆ. ಆಕೆಯ ಸ್ತನವನ್ನು ಒತ್ತಿ ಮತ್ತು ಅವಳ ಬಟ್ಟೆಗಳನ್ನು ತೆಗೆಯಲು ಪ್ರಯತ್ನಿಸಿದ್ದ. ಆತನಿಗೆ ಕೆಳ ಕೋರ್ಟಿನಲ್ಲಿ ಶಿಕ್ಷೆ ಆಗಿತ್ತು. ಆದರೆ ಬಾಂಬೇ ಹೈಕೋರ್ಟಿನ ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರು, “ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ” ಅದು ಲೈಂಗಿಕ ಅಪರಾಧ ಆಗುವುದಿಲ್ಲ ಎಂದು ಆರೋಪಿಯನ್ನು ಖುಲಾಸೆಗೊಳಿಸಿದ್ದರು.

ಸದ್ಯದ ಪ್ರಕರಣ

ನ್ಯಾಯಮೂರ್ತಿ ಗಣದೇವಾಲಾ ಹಿಂದಿನ ಆದೇಶದಂತೆ ಈ ಆದೇಶದಲ್ಲೂ ಪೋಕ್ಸೋ ಕಾಯ್ದೆಯ ಸೆಕ್ಷನ್ 7 ಅನ್ನು ಉಲ್ಲೇಖಿಸಿದ್ದಾರೆ. ಆದರೆ ಸೆಕ್ಷನ್ 7 ಪ್ರಕಾರ, “ಯಾರು, ಲೈಂಗಿಕ ಉದ್ದೇಶದಿಂದ ಮಗುವಿನ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸುತ್ತಾರೆ ಅಥವಾ ಮಗು ತಮ್ಮ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸುವಂತೆ ಒತ್ತಾಯಿಸುತ್ತಾರೋ ಅಂಥವರು ಅಲ್ಲಿ ಲೈಂಗಿಕ ಕ್ರಿಯೆ ನಡೆಸದೇ ಇದ್ದರೂ ಕೂಡ ಅದನ್ನು ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಬೆಕು…..’

ಸೆಕ್ಷನ್ 7 ಉಲ್ಲೇಖಿಸಿದ ನ್ಯಾಯಾಧೀಶೆ, “ಲೈಂಗಿಕ ಉದ್ದೇಶದೊಂದಿಗೆ ದೈಹಿಕ ಸಂಪರ್ಕ, ಸ್ಪರ್ಶ ಮಾಡುವುದು (ಲೈಂಗಿಕ ಕ್ರಿಯೆ ನಡೆಸದೇ ಇದ್ದರೂ) ಅಪರಾಧಕ್ಕೆ ಅತ್ಯಗತ್ಯ ಅಂಶವಾಗಿದೆ’ ಎಂದು ಹೇಳಿದರಾದರೂ, ಆರೋಪಿ ಬಾಲಕಿಯ ಖಾಸಗಿ ಭಾಗಗಳನ್ನು ಮುಟ್ಟದ ಕಾರಣ ಈ ಪ್ರಕರಣ ಲೈಂಗಿಕ ದೌರ್ಜನ್ಯದ ಅಡಿ ಬರುವುದಿಲ್ಲ ಎಂದು ಆದೇಶ ನೀಡಿದ್ದಾರೆ.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ಸುಪ್ರಿಂ ಕೋರ್ಟಿನಲ್ಲಿ ಗಣದೇವಾಲಾ ಅವರ ಜನೆವರಿ 19ರ ತೀರ್ಪನ್ನು ವಿಶೇಷವಾಗಿ ಪ್ರಸ್ತಾಪ ಮಾಡಿದ ನಂತರ ಆ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ.

ಬಾಂಬೆ ಹೈಕೋರ್ಟ್‌ನ ವ್ಯಾಖ್ಯಾನದ ವಿರುದ್ಧ ತುರ್ತು ಮೇಲ್ಮನವಿ ಸಲ್ಲಿಸುವಂತೆ ಜನವರಿ 25 ರಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ ಮಹಾರಾಷ್ಟ್ರ ಸರ್ಕಾರವನ್ನು ಕೋರಿತ್ತು. ಹಲವಾರು ಮಕ್ಕಳ ಹಕ್ಕುಗಳ ಸಂಸ್ಥೆಗಳು ಈ ತೀರ್ಪನ್ನು “ಸಂಪೂರ್ಣ ಸ್ವೀಕಾರಾರ್ಹವಲ್ಲದ ತೀರ್ಪಿದು. ಅತಿರೇಕದ ಮತ್ತು ಅಸಹ್ಯಕರ ತೀರ್ಪು” ಎಂದು ಟೀಕಿಸಿವೆ.


ಇದನ್ನೂ ಓದಿ: 10 ಲಕ್ಷ ರೂ. ‘ಶಾಂತಿ ಉಲ್ಲಂಘನೆ’ ಬಾಂಡ್ ನೀಡಲು ರೈತರಿಗೆ ನೋಟಿಸ್! ಯುಪಿ ಸರ್ಕಾರಕ್ಕೆ ವಿವರಣೆ ಕೇಳಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...