Homeಮುಖಪುಟಅಪ್ರಾಪ್ತರ ಎದುರು ಪ್ಯಾಂಟ್ ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

ಅಪ್ರಾಪ್ತರ ಎದುರು ಪ್ಯಾಂಟ್ ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

‘ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ’ ಅಪ್ರಾಪ್ತ ವಯಸ್ಕನನ್ನು ಸ್ಪರ್ಶಿಸುವುದು ಲೈಂಗಿಕ ದೌರ್ಜನ್ಯವಲ್ಲ ಎಂದು ಆದೇಶ ನೀಡಿದ್ದ ಅದೇ ನ್ಯಾಯಾಧೀಶರು ಈ ತೀರ್ಪನ್ನು ಅಂಗೀಕರಿಸಿದ್ದಾರೆ.

- Advertisement -
- Advertisement -

ಅಪ್ರಾಪ್ತ ವಯಸ್ಕನ (ಬಾಲಕ/ಬಾಲಕಿ) ಕೈಗಳನ್ನು ಹಿಡಿದುಕೊಳ್ಳುವುದು ಮತ್ತು ಪ್ಯಾಂಟ್ ಜಿಪ್ ಅನ್ನು ಅಪ್ರಾಪ್ತ ವಯಸ್ಕನ ಮುಂದೆ ತೆಗೆಯುವುದು ಮಾಡುವುದು ಪೋಕ್ಸೋ ಕಾಯ್ದೆ ಅಡಿ ಲೈಂಗಿಕ ಅಪರಾಧಗಳ ವ್ಯಾಖ್ಯಾನಕ್ಕೆ ಒಳಪಡುವುದಿಲ್ಲ ಎಂದು ಬಾಂಬೇ ಹೈಕೋರ್ಟ್ ಆದೇಶ ನೀಡಿದೆ ಎಂದು ಗುರುವಾರ ಲೈವ್ ಲಾ ವರದಿ ಮಾಡಿದೆ.

ಐದು ವರ್ಷದ ಬಾಲಕಿಯನ್ನು ಕಿರುಕುಳ ಮಾಡಿದ್ದಕ್ಕಾಗಿ 50 ವರ್ಷದ ವ್ಯಕ್ತಿಗೆ ನೀಡಲಾದ ಶಿಕ್ಷೆಯ ವಿರುದ್ಧ ಸಲ್ಲಿಸಲಾದ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರ ನ್ಯಾಯಪೀಠ ವಿಚಾರಣೆ ನಡೆಸಿತು.

ಪ್ರಕರಣದ ಹಿನ್ನೆಲೆ

ನಾಗಪುರದ ಸೆಷನ್ ಕೋರ್ಟು ಪ್ರಸ್ತುತ ಪ್ರಕರಣದಲ್ಲಿ ಅಪರಾಧವು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವಿನ ವಿರುದ್ಧವಾಗಿರುವುದರಿಂದ, ಪೋಕ್ಸೋ ಸೆಕ್ಷನ್ 10 ರ ಅಡಿಯಲ್ಲಿ ಶಿಕ್ಷಾರ್ಹವಾಗಿದೆ ಎಂದು ವಿವರಿಸಿ, ಅರೋಪಿಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿತ್ತು.

ಆರೋಪಿ ತನ್ನ ಪ್ಯಾಂಟ್ ಜಿಪ್ ತೆಗೆದು, ಮಗಳ ಕೈಗಳನ್ನು ಹಿಡಿದಿರುವುದನ್ನು ತಾನು ನೋಡಿದ್ದಾಗಿ ಮಗುವಿನ ತಾಯಿ ದೂರು ದಾಖಲಿಸಿದ್ದರು. ಆ ವ್ಯಕ್ತಿ ತನ್ನ ಜೊತೆಗೆ ಮಲಗಲು ಹೇಳಿದ್ದಾಗಿ ಮಗು ತಿಳಿಸಿದೆ ಎಂದು ತಾಯಿ ದೂರಿನಲ್ಲಿ ತಿಳಿಸಿದ್ದರು.

ಬಾಂಬೆ ಹೈಕೋರ್ಟು ಹೇಳಿದ್ದೇನು?

ಈ ಪ್ರಕರಣವು ಪೋಕ್ಸೋ ಕಾಯ್ದೆ ಅಡಿ ಲೈಂಗಿಕ ಅಪರಾಧಗಳ ವ್ಯಾಖ್ಯಾನಕ್ಕೆ ಒಳಪಡುವುದಿಲ್ಲ ಎಂದು ಬಾಂಬೇ ಹೈಕೋರ್ಟ್ ಆದೇಶ ನೀಡಿದೆ.

“ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ” ಸ್ಪರ್ಶಿಸುವುದು ಲೈಂಗಿಕ ದೌರ್ಜನ್ಯವಲ್ಲ ಎಂಬ ಕಾರಣಕ್ಕೆ ಪೋಕ್ಸೋ ಅಡಿಯಲ್ಲಿ ವ್ಯಕ್ತಿಯನ್ನು ಖುಲಾಸೆಗೊಳಿಸಿದ್ದ ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರೇ ಈ ಆದೇಶವನ್ನೂ ನೀಡಿದ್ದಾರೆ.

ಮೊದಲ ಪ್ರಕರಣದಲ್ಲಿ, ಪೇರಲ ಹಣ್ಣನ್ನು ನೀಡುವ ಆಮಿಷವೊಡ್ಡಿ 12 ವರ್ಷ ವಯಸ್ಸಿನ ಮಗುವನ್ನು ಆರೋಪಿ ತನ್ನ ಮನೆಗೆ ಕರೆದೊಯ್ದಿದ್ದಾನೆ. ಆಕೆಯ ಸ್ತನವನ್ನು ಒತ್ತಿ ಮತ್ತು ಅವಳ ಬಟ್ಟೆಗಳನ್ನು ತೆಗೆಯಲು ಪ್ರಯತ್ನಿಸಿದ್ದ. ಆತನಿಗೆ ಕೆಳ ಕೋರ್ಟಿನಲ್ಲಿ ಶಿಕ್ಷೆ ಆಗಿತ್ತು. ಆದರೆ ಬಾಂಬೇ ಹೈಕೋರ್ಟಿನ ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರು, “ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ” ಅದು ಲೈಂಗಿಕ ಅಪರಾಧ ಆಗುವುದಿಲ್ಲ ಎಂದು ಆರೋಪಿಯನ್ನು ಖುಲಾಸೆಗೊಳಿಸಿದ್ದರು.

ಸದ್ಯದ ಪ್ರಕರಣ

ನ್ಯಾಯಮೂರ್ತಿ ಗಣದೇವಾಲಾ ಹಿಂದಿನ ಆದೇಶದಂತೆ ಈ ಆದೇಶದಲ್ಲೂ ಪೋಕ್ಸೋ ಕಾಯ್ದೆಯ ಸೆಕ್ಷನ್ 7 ಅನ್ನು ಉಲ್ಲೇಖಿಸಿದ್ದಾರೆ. ಆದರೆ ಸೆಕ್ಷನ್ 7 ಪ್ರಕಾರ, “ಯಾರು, ಲೈಂಗಿಕ ಉದ್ದೇಶದಿಂದ ಮಗುವಿನ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸುತ್ತಾರೆ ಅಥವಾ ಮಗು ತಮ್ಮ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸುವಂತೆ ಒತ್ತಾಯಿಸುತ್ತಾರೋ ಅಂಥವರು ಅಲ್ಲಿ ಲೈಂಗಿಕ ಕ್ರಿಯೆ ನಡೆಸದೇ ಇದ್ದರೂ ಕೂಡ ಅದನ್ನು ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಬೆಕು…..’

ಸೆಕ್ಷನ್ 7 ಉಲ್ಲೇಖಿಸಿದ ನ್ಯಾಯಾಧೀಶೆ, “ಲೈಂಗಿಕ ಉದ್ದೇಶದೊಂದಿಗೆ ದೈಹಿಕ ಸಂಪರ್ಕ, ಸ್ಪರ್ಶ ಮಾಡುವುದು (ಲೈಂಗಿಕ ಕ್ರಿಯೆ ನಡೆಸದೇ ಇದ್ದರೂ) ಅಪರಾಧಕ್ಕೆ ಅತ್ಯಗತ್ಯ ಅಂಶವಾಗಿದೆ’ ಎಂದು ಹೇಳಿದರಾದರೂ, ಆರೋಪಿ ಬಾಲಕಿಯ ಖಾಸಗಿ ಭಾಗಗಳನ್ನು ಮುಟ್ಟದ ಕಾರಣ ಈ ಪ್ರಕರಣ ಲೈಂಗಿಕ ದೌರ್ಜನ್ಯದ ಅಡಿ ಬರುವುದಿಲ್ಲ ಎಂದು ಆದೇಶ ನೀಡಿದ್ದಾರೆ.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ಸುಪ್ರಿಂ ಕೋರ್ಟಿನಲ್ಲಿ ಗಣದೇವಾಲಾ ಅವರ ಜನೆವರಿ 19ರ ತೀರ್ಪನ್ನು ವಿಶೇಷವಾಗಿ ಪ್ರಸ್ತಾಪ ಮಾಡಿದ ನಂತರ ಆ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ.

ಬಾಂಬೆ ಹೈಕೋರ್ಟ್‌ನ ವ್ಯಾಖ್ಯಾನದ ವಿರುದ್ಧ ತುರ್ತು ಮೇಲ್ಮನವಿ ಸಲ್ಲಿಸುವಂತೆ ಜನವರಿ 25 ರಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ ಮಹಾರಾಷ್ಟ್ರ ಸರ್ಕಾರವನ್ನು ಕೋರಿತ್ತು. ಹಲವಾರು ಮಕ್ಕಳ ಹಕ್ಕುಗಳ ಸಂಸ್ಥೆಗಳು ಈ ತೀರ್ಪನ್ನು “ಸಂಪೂರ್ಣ ಸ್ವೀಕಾರಾರ್ಹವಲ್ಲದ ತೀರ್ಪಿದು. ಅತಿರೇಕದ ಮತ್ತು ಅಸಹ್ಯಕರ ತೀರ್ಪು” ಎಂದು ಟೀಕಿಸಿವೆ.


ಇದನ್ನೂ ಓದಿ: 10 ಲಕ್ಷ ರೂ. ‘ಶಾಂತಿ ಉಲ್ಲಂಘನೆ’ ಬಾಂಡ್ ನೀಡಲು ರೈತರಿಗೆ ನೋಟಿಸ್! ಯುಪಿ ಸರ್ಕಾರಕ್ಕೆ ವಿವರಣೆ ಕೇಳಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...