Homeಮುಖಪುಟಕಲಾಂ ಪ್ರಶಸ್ತಿಗೆ ಮರುನಾಮಕರಣ ಮಾಡಲೊರಟ ಜಗನ್‌.. ತೀವ್ರ ವಿರೋಧ

ಕಲಾಂ ಪ್ರಶಸ್ತಿಗೆ ಮರುನಾಮಕರಣ ಮಾಡಲೊರಟ ಜಗನ್‌.. ತೀವ್ರ ವಿರೋಧ

- Advertisement -
- Advertisement -

ಆಂಧ್ರಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ಸರ್ವಾಧಿಕಾರಿ ಆಡಳಿತ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾರಣ ಡಾ.ಎಪಿಜೆ ಅಬ್ದುಲ್ ಕಲಾಂ ಹೆಸರಲ್ಲಿ ನೀಡುತ್ತಿರುವ ಪ್ರತಿಭಾ ಪುರಸ್ಕಾರದ ಹೆಸರನ್ನೇ ಬದಲಾಯಿಸಲು ಹೊರಟಿದ್ದಾರೆ. ಜಗನ್‌ ಪ್ರತಿವರ್ಷ ಮಕ್ಕಳಿಗೆ ನೀಡಲಾಗುವ ಅಬ್ದುಲ್ ಕಲಾಂ ಪ್ರತಿಭಾ ಪುರಸ್ಕಾರವನ್ನು ವೈಎಸ್‌ಆರ್ ವಿದ್ಯಾ ಪುರಸ್ಕಾರ ಎಂದು ಬದಲಾಯಿಸಲು ಸೂಚಿಸಿದ್ದರು. ಆದರೆ ಸಾಕಷ್ಟು ವಾದ-ವಿವಾದದ ನಂತರ ಈ ಪ್ರಯತ್ನವನ್ನು ಕೈ ಬಿಟ್ಟಿದ್ದಾರೆ.

ಪ್ರಶಸ್ತಿಯ ಹೆಸರು ಬದಲಿಸಿ, ಮರುನಾಮಕರಣ ಮಾಡುವುದಾಗಿ ಆಂಧ್ರಪ್ರದೇಶ ಸರ್ಕಾರ ಘೋಷಿಸಿತ್ತು. ಸಿಎಂ ಜಗನ್ ಮೋಹನ್ ಅವರು ತಮ್ಮ ತಂದೆ ರಾಜಶೇಖರ್ ರೆಡ್ಡಿ ಅವರ ಹೆಸರನ್ನು ಪ್ರಶಸ್ತಿಗೆ ಮರುನಾಮಕರಣ ಮಾಡುವುದಾಗಿ ಹೇಳಿದ್ದರು. ಜಗನ್ ತಂದೆ ವೈಎಸ್ಆರ್ 2009ರಲ್ಲಿ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದರು.

ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಸ್ಮರಣಾರ್ಥ ರಾಷ್ಟ್ರೀಯ ಶೈಕ್ಷಣಿಕ ದಿನ ನವೆಂಬರ್ 11ರಂದು ನೀಡಲಾಗುವ ಡಾ. ಎಪಿಜೆ ಅಬ್ದುಲ್ ಕಲಾಂ ಹೆಸರಿನ ಪ್ರಶಸ್ತಿಗೆ ವೈಎಸ್ ಆರ್ ವಿದ್ಯಾ ಪುರಸ್ಕಾರವೆಂದು ಹೆಸರು ಬದಲಾಯಿಸಿ, 2019ರ ಶೈಕ್ಷಣಿಕ ಸಾಲಿನಲ್ಲಿ ಪ್ರಶಸ್ತಿ ನೀಡುವುದಾಗಿ ತಿಳಿಸಿತ್ತು. ಆದರೆ ಜಗನ್ ಅವರ ಈ ಇಚ್ಛೆ ಈಡೇರಿಲ್ಲ.

ಪ್ರಶಸ್ತಿ ಹೆಸರನ್ನು ಬದಲಾಯಿಸುತ್ತಿರುವ ಬಗ್ಗೆ ಟಿಡಿಪಿ ಕಿಡಿಕಾರಿದೆ. ಸಿಎಂ ಜಗನ್ ಅವರು ವಂಶಾವಳಿ ಆಡಳಿತ ನಡೆಸುತ್ತಿದ್ದಾರೆ. ಜಗತ್ತೇ ಮೆಚ್ಚಿಕೊಂಡ ಕಲಾಂ ಅವರ ಹೆಸರನ್ನು ಬದಲಾಯಿಸಲು ಹುನ್ನಾರ ನಡೆಸಿದೆ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಶಸ್ತಿಗೆ ಮರುನಾಮಕರಣ ಮಾಡುತ್ತಿರುವ ವಿಚಾರ ವಿವಾದಕ್ಕೀಡಾಗುತ್ತಿದ್ದಂತೆ ಎಚ್ಚೆತ್ತ ಜಗನ್ ಹೆಜ್ಜೆ ಹಿಂದಿಟ್ಟಿದ್ದು, ಸೂಚನೆ ಹಿಂಪಡೆದಿದ್ದಾರೆ.

ಬಿಜೆಪಿ ನಾಯಕ ಲಂಕಾ ದಿನಕರ್, ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ. ನಿಜವಾದ ರಾಷ್ಟ್ರೀಯ ನಾಯಕರ ಹೆಸರನ್ನು ವಂಶಾವಳಿ ರಾಜಕೀಯಕ್ಕೆ ತಳುಕು ಹಾಕುತ್ತಿರುವ ಕ್ರಮ ಖಂಡನೀಯ ಎಂದರು.

ಇನ್ನು ಡಾ.ಎಪಿಜೆ ಅಬ್ದುಲ್ ಕಲಾಂ ಪ್ರಶಸ್ತಿಯನ್ನು 10 ನೇ ತರಗತಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ತರಗತಿಯಲ್ಲಿ ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳಿಗೆ, ಕಲಾಂ ಅವರ ಜನ್ಮದಿನಾಚರಣೆಯಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಅದಾಗ್ಯೂ ಜಗನ್ ಮೋಹನ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಸರ್ಕಾರಿ ಮಟ್ಟದ ಹಲವು ಯೋಜನೆಗಳ ಹೆಸರನ್ನು ಬದಲಾಯಿಸಲಾಗಿದೆ. ಎನ್.ಟಿ.ಆರ್ ಭರೋಸಾ ಯೋಜನೆಗೆ ವೈಎಸ್ಆರ್ ಪೆನ್ಶನ್ ಕನುಕಾ ಎಂದು, ಅಣ್ಣಾ ಕ್ಯಾಂಟೀನ್ಸ್ ಯೋಜನೆ ಹೆಸರನ್ನು ರಾಜಣ್ಣ ಕ್ಯಾಂಟೀನ್ಸ್ ಎಂದು, ಮಧ್ಯಾಹ್ನ ಊಟದ ಯೋಜನೆಯನ್ನು ವೈಎಸ್ಆರ್ ಅಕ್ಷಯ ಪಾತ್ರಾ ಎಂದು ಮರುನಾಮಕರಣ ಮಾಡಿದ್ದಾರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...