Homeಮುಖಪುಟಕಲಾಂ ಪ್ರಶಸ್ತಿಗೆ ಮರುನಾಮಕರಣ ಮಾಡಲೊರಟ ಜಗನ್‌.. ತೀವ್ರ ವಿರೋಧ

ಕಲಾಂ ಪ್ರಶಸ್ತಿಗೆ ಮರುನಾಮಕರಣ ಮಾಡಲೊರಟ ಜಗನ್‌.. ತೀವ್ರ ವಿರೋಧ

- Advertisement -
- Advertisement -

ಆಂಧ್ರಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ಸರ್ವಾಧಿಕಾರಿ ಆಡಳಿತ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾರಣ ಡಾ.ಎಪಿಜೆ ಅಬ್ದುಲ್ ಕಲಾಂ ಹೆಸರಲ್ಲಿ ನೀಡುತ್ತಿರುವ ಪ್ರತಿಭಾ ಪುರಸ್ಕಾರದ ಹೆಸರನ್ನೇ ಬದಲಾಯಿಸಲು ಹೊರಟಿದ್ದಾರೆ. ಜಗನ್‌ ಪ್ರತಿವರ್ಷ ಮಕ್ಕಳಿಗೆ ನೀಡಲಾಗುವ ಅಬ್ದುಲ್ ಕಲಾಂ ಪ್ರತಿಭಾ ಪುರಸ್ಕಾರವನ್ನು ವೈಎಸ್‌ಆರ್ ವಿದ್ಯಾ ಪುರಸ್ಕಾರ ಎಂದು ಬದಲಾಯಿಸಲು ಸೂಚಿಸಿದ್ದರು. ಆದರೆ ಸಾಕಷ್ಟು ವಾದ-ವಿವಾದದ ನಂತರ ಈ ಪ್ರಯತ್ನವನ್ನು ಕೈ ಬಿಟ್ಟಿದ್ದಾರೆ.

ಪ್ರಶಸ್ತಿಯ ಹೆಸರು ಬದಲಿಸಿ, ಮರುನಾಮಕರಣ ಮಾಡುವುದಾಗಿ ಆಂಧ್ರಪ್ರದೇಶ ಸರ್ಕಾರ ಘೋಷಿಸಿತ್ತು. ಸಿಎಂ ಜಗನ್ ಮೋಹನ್ ಅವರು ತಮ್ಮ ತಂದೆ ರಾಜಶೇಖರ್ ರೆಡ್ಡಿ ಅವರ ಹೆಸರನ್ನು ಪ್ರಶಸ್ತಿಗೆ ಮರುನಾಮಕರಣ ಮಾಡುವುದಾಗಿ ಹೇಳಿದ್ದರು. ಜಗನ್ ತಂದೆ ವೈಎಸ್ಆರ್ 2009ರಲ್ಲಿ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದರು.

ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಸ್ಮರಣಾರ್ಥ ರಾಷ್ಟ್ರೀಯ ಶೈಕ್ಷಣಿಕ ದಿನ ನವೆಂಬರ್ 11ರಂದು ನೀಡಲಾಗುವ ಡಾ. ಎಪಿಜೆ ಅಬ್ದುಲ್ ಕಲಾಂ ಹೆಸರಿನ ಪ್ರಶಸ್ತಿಗೆ ವೈಎಸ್ ಆರ್ ವಿದ್ಯಾ ಪುರಸ್ಕಾರವೆಂದು ಹೆಸರು ಬದಲಾಯಿಸಿ, 2019ರ ಶೈಕ್ಷಣಿಕ ಸಾಲಿನಲ್ಲಿ ಪ್ರಶಸ್ತಿ ನೀಡುವುದಾಗಿ ತಿಳಿಸಿತ್ತು. ಆದರೆ ಜಗನ್ ಅವರ ಈ ಇಚ್ಛೆ ಈಡೇರಿಲ್ಲ.

ಪ್ರಶಸ್ತಿ ಹೆಸರನ್ನು ಬದಲಾಯಿಸುತ್ತಿರುವ ಬಗ್ಗೆ ಟಿಡಿಪಿ ಕಿಡಿಕಾರಿದೆ. ಸಿಎಂ ಜಗನ್ ಅವರು ವಂಶಾವಳಿ ಆಡಳಿತ ನಡೆಸುತ್ತಿದ್ದಾರೆ. ಜಗತ್ತೇ ಮೆಚ್ಚಿಕೊಂಡ ಕಲಾಂ ಅವರ ಹೆಸರನ್ನು ಬದಲಾಯಿಸಲು ಹುನ್ನಾರ ನಡೆಸಿದೆ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಶಸ್ತಿಗೆ ಮರುನಾಮಕರಣ ಮಾಡುತ್ತಿರುವ ವಿಚಾರ ವಿವಾದಕ್ಕೀಡಾಗುತ್ತಿದ್ದಂತೆ ಎಚ್ಚೆತ್ತ ಜಗನ್ ಹೆಜ್ಜೆ ಹಿಂದಿಟ್ಟಿದ್ದು, ಸೂಚನೆ ಹಿಂಪಡೆದಿದ್ದಾರೆ.

ಬಿಜೆಪಿ ನಾಯಕ ಲಂಕಾ ದಿನಕರ್, ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ. ನಿಜವಾದ ರಾಷ್ಟ್ರೀಯ ನಾಯಕರ ಹೆಸರನ್ನು ವಂಶಾವಳಿ ರಾಜಕೀಯಕ್ಕೆ ತಳುಕು ಹಾಕುತ್ತಿರುವ ಕ್ರಮ ಖಂಡನೀಯ ಎಂದರು.

ಇನ್ನು ಡಾ.ಎಪಿಜೆ ಅಬ್ದುಲ್ ಕಲಾಂ ಪ್ರಶಸ್ತಿಯನ್ನು 10 ನೇ ತರಗತಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ತರಗತಿಯಲ್ಲಿ ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳಿಗೆ, ಕಲಾಂ ಅವರ ಜನ್ಮದಿನಾಚರಣೆಯಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಅದಾಗ್ಯೂ ಜಗನ್ ಮೋಹನ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಸರ್ಕಾರಿ ಮಟ್ಟದ ಹಲವು ಯೋಜನೆಗಳ ಹೆಸರನ್ನು ಬದಲಾಯಿಸಲಾಗಿದೆ. ಎನ್.ಟಿ.ಆರ್ ಭರೋಸಾ ಯೋಜನೆಗೆ ವೈಎಸ್ಆರ್ ಪೆನ್ಶನ್ ಕನುಕಾ ಎಂದು, ಅಣ್ಣಾ ಕ್ಯಾಂಟೀನ್ಸ್ ಯೋಜನೆ ಹೆಸರನ್ನು ರಾಜಣ್ಣ ಕ್ಯಾಂಟೀನ್ಸ್ ಎಂದು, ಮಧ್ಯಾಹ್ನ ಊಟದ ಯೋಜನೆಯನ್ನು ವೈಎಸ್ಆರ್ ಅಕ್ಷಯ ಪಾತ್ರಾ ಎಂದು ಮರುನಾಮಕರಣ ಮಾಡಿದ್ದಾರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...