Homeಮುಖಪುಟಕಲಾಂ ಪ್ರಶಸ್ತಿಗೆ ಮರುನಾಮಕರಣ ಮಾಡಲೊರಟ ಜಗನ್‌.. ತೀವ್ರ ವಿರೋಧ

ಕಲಾಂ ಪ್ರಶಸ್ತಿಗೆ ಮರುನಾಮಕರಣ ಮಾಡಲೊರಟ ಜಗನ್‌.. ತೀವ್ರ ವಿರೋಧ

- Advertisement -
- Advertisement -

ಆಂಧ್ರಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ಸರ್ವಾಧಿಕಾರಿ ಆಡಳಿತ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾರಣ ಡಾ.ಎಪಿಜೆ ಅಬ್ದುಲ್ ಕಲಾಂ ಹೆಸರಲ್ಲಿ ನೀಡುತ್ತಿರುವ ಪ್ರತಿಭಾ ಪುರಸ್ಕಾರದ ಹೆಸರನ್ನೇ ಬದಲಾಯಿಸಲು ಹೊರಟಿದ್ದಾರೆ. ಜಗನ್‌ ಪ್ರತಿವರ್ಷ ಮಕ್ಕಳಿಗೆ ನೀಡಲಾಗುವ ಅಬ್ದುಲ್ ಕಲಾಂ ಪ್ರತಿಭಾ ಪುರಸ್ಕಾರವನ್ನು ವೈಎಸ್‌ಆರ್ ವಿದ್ಯಾ ಪುರಸ್ಕಾರ ಎಂದು ಬದಲಾಯಿಸಲು ಸೂಚಿಸಿದ್ದರು. ಆದರೆ ಸಾಕಷ್ಟು ವಾದ-ವಿವಾದದ ನಂತರ ಈ ಪ್ರಯತ್ನವನ್ನು ಕೈ ಬಿಟ್ಟಿದ್ದಾರೆ.

ಪ್ರಶಸ್ತಿಯ ಹೆಸರು ಬದಲಿಸಿ, ಮರುನಾಮಕರಣ ಮಾಡುವುದಾಗಿ ಆಂಧ್ರಪ್ರದೇಶ ಸರ್ಕಾರ ಘೋಷಿಸಿತ್ತು. ಸಿಎಂ ಜಗನ್ ಮೋಹನ್ ಅವರು ತಮ್ಮ ತಂದೆ ರಾಜಶೇಖರ್ ರೆಡ್ಡಿ ಅವರ ಹೆಸರನ್ನು ಪ್ರಶಸ್ತಿಗೆ ಮರುನಾಮಕರಣ ಮಾಡುವುದಾಗಿ ಹೇಳಿದ್ದರು. ಜಗನ್ ತಂದೆ ವೈಎಸ್ಆರ್ 2009ರಲ್ಲಿ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದರು.

ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಸ್ಮರಣಾರ್ಥ ರಾಷ್ಟ್ರೀಯ ಶೈಕ್ಷಣಿಕ ದಿನ ನವೆಂಬರ್ 11ರಂದು ನೀಡಲಾಗುವ ಡಾ. ಎಪಿಜೆ ಅಬ್ದುಲ್ ಕಲಾಂ ಹೆಸರಿನ ಪ್ರಶಸ್ತಿಗೆ ವೈಎಸ್ ಆರ್ ವಿದ್ಯಾ ಪುರಸ್ಕಾರವೆಂದು ಹೆಸರು ಬದಲಾಯಿಸಿ, 2019ರ ಶೈಕ್ಷಣಿಕ ಸಾಲಿನಲ್ಲಿ ಪ್ರಶಸ್ತಿ ನೀಡುವುದಾಗಿ ತಿಳಿಸಿತ್ತು. ಆದರೆ ಜಗನ್ ಅವರ ಈ ಇಚ್ಛೆ ಈಡೇರಿಲ್ಲ.

ಪ್ರಶಸ್ತಿ ಹೆಸರನ್ನು ಬದಲಾಯಿಸುತ್ತಿರುವ ಬಗ್ಗೆ ಟಿಡಿಪಿ ಕಿಡಿಕಾರಿದೆ. ಸಿಎಂ ಜಗನ್ ಅವರು ವಂಶಾವಳಿ ಆಡಳಿತ ನಡೆಸುತ್ತಿದ್ದಾರೆ. ಜಗತ್ತೇ ಮೆಚ್ಚಿಕೊಂಡ ಕಲಾಂ ಅವರ ಹೆಸರನ್ನು ಬದಲಾಯಿಸಲು ಹುನ್ನಾರ ನಡೆಸಿದೆ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಶಸ್ತಿಗೆ ಮರುನಾಮಕರಣ ಮಾಡುತ್ತಿರುವ ವಿಚಾರ ವಿವಾದಕ್ಕೀಡಾಗುತ್ತಿದ್ದಂತೆ ಎಚ್ಚೆತ್ತ ಜಗನ್ ಹೆಜ್ಜೆ ಹಿಂದಿಟ್ಟಿದ್ದು, ಸೂಚನೆ ಹಿಂಪಡೆದಿದ್ದಾರೆ.

ಬಿಜೆಪಿ ನಾಯಕ ಲಂಕಾ ದಿನಕರ್, ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ. ನಿಜವಾದ ರಾಷ್ಟ್ರೀಯ ನಾಯಕರ ಹೆಸರನ್ನು ವಂಶಾವಳಿ ರಾಜಕೀಯಕ್ಕೆ ತಳುಕು ಹಾಕುತ್ತಿರುವ ಕ್ರಮ ಖಂಡನೀಯ ಎಂದರು.

ಇನ್ನು ಡಾ.ಎಪಿಜೆ ಅಬ್ದುಲ್ ಕಲಾಂ ಪ್ರಶಸ್ತಿಯನ್ನು 10 ನೇ ತರಗತಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ತರಗತಿಯಲ್ಲಿ ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳಿಗೆ, ಕಲಾಂ ಅವರ ಜನ್ಮದಿನಾಚರಣೆಯಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಅದಾಗ್ಯೂ ಜಗನ್ ಮೋಹನ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಸರ್ಕಾರಿ ಮಟ್ಟದ ಹಲವು ಯೋಜನೆಗಳ ಹೆಸರನ್ನು ಬದಲಾಯಿಸಲಾಗಿದೆ. ಎನ್.ಟಿ.ಆರ್ ಭರೋಸಾ ಯೋಜನೆಗೆ ವೈಎಸ್ಆರ್ ಪೆನ್ಶನ್ ಕನುಕಾ ಎಂದು, ಅಣ್ಣಾ ಕ್ಯಾಂಟೀನ್ಸ್ ಯೋಜನೆ ಹೆಸರನ್ನು ರಾಜಣ್ಣ ಕ್ಯಾಂಟೀನ್ಸ್ ಎಂದು, ಮಧ್ಯಾಹ್ನ ಊಟದ ಯೋಜನೆಯನ್ನು ವೈಎಸ್ಆರ್ ಅಕ್ಷಯ ಪಾತ್ರಾ ಎಂದು ಮರುನಾಮಕರಣ ಮಾಡಿದ್ದಾರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...