Homeಮುಖಪುಟಕಲಾಂ ಪ್ರಶಸ್ತಿಗೆ ಮರುನಾಮಕರಣ ಮಾಡಲೊರಟ ಜಗನ್‌.. ತೀವ್ರ ವಿರೋಧ

ಕಲಾಂ ಪ್ರಶಸ್ತಿಗೆ ಮರುನಾಮಕರಣ ಮಾಡಲೊರಟ ಜಗನ್‌.. ತೀವ್ರ ವಿರೋಧ

- Advertisement -
- Advertisement -

ಆಂಧ್ರಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ಸರ್ವಾಧಿಕಾರಿ ಆಡಳಿತ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾರಣ ಡಾ.ಎಪಿಜೆ ಅಬ್ದುಲ್ ಕಲಾಂ ಹೆಸರಲ್ಲಿ ನೀಡುತ್ತಿರುವ ಪ್ರತಿಭಾ ಪುರಸ್ಕಾರದ ಹೆಸರನ್ನೇ ಬದಲಾಯಿಸಲು ಹೊರಟಿದ್ದಾರೆ. ಜಗನ್‌ ಪ್ರತಿವರ್ಷ ಮಕ್ಕಳಿಗೆ ನೀಡಲಾಗುವ ಅಬ್ದುಲ್ ಕಲಾಂ ಪ್ರತಿಭಾ ಪುರಸ್ಕಾರವನ್ನು ವೈಎಸ್‌ಆರ್ ವಿದ್ಯಾ ಪುರಸ್ಕಾರ ಎಂದು ಬದಲಾಯಿಸಲು ಸೂಚಿಸಿದ್ದರು. ಆದರೆ ಸಾಕಷ್ಟು ವಾದ-ವಿವಾದದ ನಂತರ ಈ ಪ್ರಯತ್ನವನ್ನು ಕೈ ಬಿಟ್ಟಿದ್ದಾರೆ.

ಪ್ರಶಸ್ತಿಯ ಹೆಸರು ಬದಲಿಸಿ, ಮರುನಾಮಕರಣ ಮಾಡುವುದಾಗಿ ಆಂಧ್ರಪ್ರದೇಶ ಸರ್ಕಾರ ಘೋಷಿಸಿತ್ತು. ಸಿಎಂ ಜಗನ್ ಮೋಹನ್ ಅವರು ತಮ್ಮ ತಂದೆ ರಾಜಶೇಖರ್ ರೆಡ್ಡಿ ಅವರ ಹೆಸರನ್ನು ಪ್ರಶಸ್ತಿಗೆ ಮರುನಾಮಕರಣ ಮಾಡುವುದಾಗಿ ಹೇಳಿದ್ದರು. ಜಗನ್ ತಂದೆ ವೈಎಸ್ಆರ್ 2009ರಲ್ಲಿ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದರು.

ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಸ್ಮರಣಾರ್ಥ ರಾಷ್ಟ್ರೀಯ ಶೈಕ್ಷಣಿಕ ದಿನ ನವೆಂಬರ್ 11ರಂದು ನೀಡಲಾಗುವ ಡಾ. ಎಪಿಜೆ ಅಬ್ದುಲ್ ಕಲಾಂ ಹೆಸರಿನ ಪ್ರಶಸ್ತಿಗೆ ವೈಎಸ್ ಆರ್ ವಿದ್ಯಾ ಪುರಸ್ಕಾರವೆಂದು ಹೆಸರು ಬದಲಾಯಿಸಿ, 2019ರ ಶೈಕ್ಷಣಿಕ ಸಾಲಿನಲ್ಲಿ ಪ್ರಶಸ್ತಿ ನೀಡುವುದಾಗಿ ತಿಳಿಸಿತ್ತು. ಆದರೆ ಜಗನ್ ಅವರ ಈ ಇಚ್ಛೆ ಈಡೇರಿಲ್ಲ.

ಪ್ರಶಸ್ತಿ ಹೆಸರನ್ನು ಬದಲಾಯಿಸುತ್ತಿರುವ ಬಗ್ಗೆ ಟಿಡಿಪಿ ಕಿಡಿಕಾರಿದೆ. ಸಿಎಂ ಜಗನ್ ಅವರು ವಂಶಾವಳಿ ಆಡಳಿತ ನಡೆಸುತ್ತಿದ್ದಾರೆ. ಜಗತ್ತೇ ಮೆಚ್ಚಿಕೊಂಡ ಕಲಾಂ ಅವರ ಹೆಸರನ್ನು ಬದಲಾಯಿಸಲು ಹುನ್ನಾರ ನಡೆಸಿದೆ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಶಸ್ತಿಗೆ ಮರುನಾಮಕರಣ ಮಾಡುತ್ತಿರುವ ವಿಚಾರ ವಿವಾದಕ್ಕೀಡಾಗುತ್ತಿದ್ದಂತೆ ಎಚ್ಚೆತ್ತ ಜಗನ್ ಹೆಜ್ಜೆ ಹಿಂದಿಟ್ಟಿದ್ದು, ಸೂಚನೆ ಹಿಂಪಡೆದಿದ್ದಾರೆ.

ಬಿಜೆಪಿ ನಾಯಕ ಲಂಕಾ ದಿನಕರ್, ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ. ನಿಜವಾದ ರಾಷ್ಟ್ರೀಯ ನಾಯಕರ ಹೆಸರನ್ನು ವಂಶಾವಳಿ ರಾಜಕೀಯಕ್ಕೆ ತಳುಕು ಹಾಕುತ್ತಿರುವ ಕ್ರಮ ಖಂಡನೀಯ ಎಂದರು.

ಇನ್ನು ಡಾ.ಎಪಿಜೆ ಅಬ್ದುಲ್ ಕಲಾಂ ಪ್ರಶಸ್ತಿಯನ್ನು 10 ನೇ ತರಗತಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ತರಗತಿಯಲ್ಲಿ ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳಿಗೆ, ಕಲಾಂ ಅವರ ಜನ್ಮದಿನಾಚರಣೆಯಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಅದಾಗ್ಯೂ ಜಗನ್ ಮೋಹನ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಸರ್ಕಾರಿ ಮಟ್ಟದ ಹಲವು ಯೋಜನೆಗಳ ಹೆಸರನ್ನು ಬದಲಾಯಿಸಲಾಗಿದೆ. ಎನ್.ಟಿ.ಆರ್ ಭರೋಸಾ ಯೋಜನೆಗೆ ವೈಎಸ್ಆರ್ ಪೆನ್ಶನ್ ಕನುಕಾ ಎಂದು, ಅಣ್ಣಾ ಕ್ಯಾಂಟೀನ್ಸ್ ಯೋಜನೆ ಹೆಸರನ್ನು ರಾಜಣ್ಣ ಕ್ಯಾಂಟೀನ್ಸ್ ಎಂದು, ಮಧ್ಯಾಹ್ನ ಊಟದ ಯೋಜನೆಯನ್ನು ವೈಎಸ್ಆರ್ ಅಕ್ಷಯ ಪಾತ್ರಾ ಎಂದು ಮರುನಾಮಕರಣ ಮಾಡಿದ್ದಾರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...