Homeಕರ್ನಾಟಕ'ರಾಜಭವನ'ಗಳನ್ನು 'ಲೋಕಭವನ'ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

- Advertisement -
- Advertisement -

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ. ಜೊತೆಗೆ ಕರ್ನಾಟಕದಲ್ಲಿ ಅದನ್ನು ರಾಜ್ಯಭವನ ಎಂದು ಬದಲಿಸಬೇಕೆಂದೂ ಆಗ್ರಹಿಸಿದೆ. 

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಪ್ರಕಟಿಸಿರುವ ಜಾಗೃತ ಕರ್ನಾಟಕವು ‘ಭಾರತದ ರಾಜಕೀಯ ವ್ಯವಸ್ಥೆಯನ್ನು ಸಂವಿಧಾನಾತ್ಮಕ ಮೌಲ್ಯಗಳ ತಳಹದಿಯ ಮೇಲೆ ಮರುನಿರ್ಮಿಸಲು ಬದ್ಧವಾಗಿರುವ ರಾಜಕೀಯ ಸಂಘಟನೆಯಾದ ಜಾಗೃತ ಕರ್ನಾಟಕ, ‘ರಾಜಭವನ’ ಎಂಬ ಸ್ಥಾಪಿತ ಸಂವಿಧಾನಾತ್ಮಕ ಪದವನ್ನು ‘ಲೋಕಭವನ’ ಎಂದು ಮರುನಾಮಕರಣ ಮಾಡುವ ಕೇಂದ್ರ ಸರ್ಕಾರದ ಪ್ರಯತ್ನಗಳನ್ನು ತೀವ್ರವಾಗಿ ವಿರೋಧಿಸುತ್ತದೆ’ ಎಂದು ಹೇಳಿದೆ.

ಕೇಂದ್ರ ಸರ್ಕಾರದಿಂದ ಬಂದಿರುವ ಸೂಚನೆಗಳ ಹಿನ್ನೆಲೆಯಲ್ಲಿ ನಡೆಯುತ್ತಿರುವ ಈ ಕ್ರಮಗಳು ಸಾಂಕೇತಿಕ ಅಥವಾ ಆಡಳಿತಾತ್ಮಕವೆಂದು ತೋರಿಸಲ್ಪಟ್ಟರೂ, ಅದರ ಒಟ್ಟು ಪರಿಣಾಮ ಅಧಿಕೃತ ಸಾರ್ವಜನಿಕ ವಲಯದಲ್ಲಿ ವಿಶೇಷವಾಗಿ ಹಿಂದಿ ಆಡಳಿತ ಭಾಷೆಯಾಗಿರದ ರಾಜ್ಯಗಳಲ್ಲಿ ಹಿಂದಿಯ ಪರೋಕ್ಷ ಹೇರಿಕೆಯಾಗುತ್ತದೆ. ಇದು ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ತತ್ತ್ವ ಗಳಿಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಭಾರತೀಯ ಸಂವಿಧಾನವು ಬಹುಭಾಷಾತ್ಮಕ ಸ್ವರೂಪವನ್ನು ಸ್ಪಷ್ಟವಾಗಿ ಒಪ್ಪಿಕೊಂಡಿದೆ. ವಿಧಿ 343 ಹಿಂದಿ ಮತ್ತು ಇಂಗ್ಲಿಷ್ ಅನ್ನು ವ್ಯವಹಾರಿಕ ಭಾಷೆಗಳಾಗಿ ಗುರುತಿಸಿದರೂ, 345 ಮತ್ತು 346 ವಿಧಿಗಳು ಭಾಷಾ ವಿಚಾರದಲ್ಲಿ ರಾಜ್ಯಗಳಿಗೆ ಸ್ವಾಯತ್ತತೆಯನ್ನು ನೀಡುತ್ತವೆ. ಈ ಸಮತೋಲನವೇ ಭಾರತದ ಒಕ್ಕೂಟ ವ್ಯವಸ್ಥೆಯ ಮೂಲಾಧಾರವಾಗಿದೆ.

‘ರಾಜಭವನ’ಗಳನ್ನು ‘ಲೋಕಭವನ’ಗಳಾಗಿ ಮರುನಾಮಕರಣ ಮಾಡುವುದು ಪ್ರತ್ಯೇಕ ಕ್ರಮವಲ್ಲ ಕ್ರಮವಲ್ಲ; ಇದು ಇತ್ತೀಚಿನ ವರ್ಷಗಳಲ್ಲಿ ಕಾಣಿಸುತ್ತಿರುವ ಒಕ್ಕೂಟ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಪ್ರವೃತ್ತಿಯ ಭಾಗವಾಗಿದೆ ಎಂದಿರುವ ಜಾಗೃತ ಕರ್ನಾಟಕ ‘ದೀರ್ಘಕಾಲದ ಇಂಗ್ಲಿಷ್ ಶಾಸನಾತ್ಮಕ ಶೀರ್ಷಿಕೆಗಳನ್ನು ಹಿಂದಿ ಪದಗಳಿಂದ ಬದಲಾಯಿಸುವುದು, ಇಡೀ ದೇಶಕ್ಕೆ ಅನ್ವಯವಾಗುವ ಪ್ರಮುಖ ಕಾನೂನುಗಳನ್ನು ಮುಖ್ಯವಾಗಿ ಹಿಂದಿ ಶೀರ್ಷಿಕೆಗಳಡಿ ಜಾರಿಗೆ ತರುವುದು, ಮತ್ತು ಅಧಿಕೃತ ಪತ್ರವ್ಯವಹಾರಗಳಲ್ಲಿ ಹಿಂದಿಗೆ ಹೆಚ್ಚುತ್ತಿರುವ ಆದ್ಯತೆ-ಇವೆಲ್ಲವೂ ಭಾಷಾ ಸಮಾನತೆಯನ್ನು ದುರ್ಬಲಗೊಳಿಸುತ್ತವೆ’ ಎಂದು ಎಚ್ಚರಿಸಿದೆ.

ಕರ್ನಾಟಕದಲ್ಲಿ, ‘ರಾಜಭವನ’ವನ್ನು ‘ರಾಜ್ಯಭವನ’ ಎಂದು ಮರುನಾಮಕರಣ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿರುವ ಜಾಗೃತ ಕರ್ನಾಟಕ ಸಂಘಟನೆ, ರಾಜ್ಯಪಾಲರ ನಿವಾಸ ಮತ್ತು ಕಚೇರಿ ಸಂಕೀರ್ಣವು ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿದ್ದು, ಅದರ ನಿರ್ವಹಣೆ ಮತ್ತು ವೆಚ್ಚವನ್ನು ರಾಜ್ಯವೇ ಭರಿಸುತ್ತದೆ. ಆದ್ದರಿಂದ ಅದರ ಹೆಸರು ರಾಜ್ಯದ ಭಾಷೆ ಮತ್ತು ಗುರುತನ್ನು ಪ್ರತಿಬಿಂಬಿಸಬೇಕು ಎಂದು ಆಗ್ರಹಿಸಿದೆ. .

ಆಕ್ಷೇಪಾರ್ಹವಾಗಿರುವುದು ಮರುನಾಮಕರಣವಲ್ಲ, ಆದರೆ ಕೇಂದ್ರದಿಂದ ಹೇರಲಾಗುತ್ತಿರುವ ಏಕಸ್ವರೂಪದ ಹಿಂದಿ ನಾಮಕರಣವಾಗಿದೆ. ರಾಜ್ಯಗಳು ತಮ್ಮದೇ ಭಾಷೆಯಲ್ಲಿ ಸೂಕ್ತ ಹೆಸರನ್ನು ಆಯ್ಕೆಮಾಡುವ ಸಂವಿಧಾನಾತ್ಮಕ ಹಕ್ಕು ಹೊಂದಿವೆ ಎಂದಿರುವ ಸಂಘಟನೆ ಮೂರು ಆಗ್ರಹಗಳನ್ನು ರಾಜ್ಯ ಸರ್ಕಾರಗಳ ಮುಂದಿಟ್ಟಿದೆ. 

ಜಾಗೃತ ಕರ್ನಾಟಕ ಸಂಘಟನೆಯ ಆಗ್ರಹಗಳು: 

1. ‘ರಾಜಭವನ’ವನ್ನು ‘ಲೋಕಭವನ’ವಾಗಿ ಮರುನಾಮಕರಣ ಮಾಡುವ ಯಾವುದೇ ಕ್ರಮವನ್ನು ತಡೆಯಬೇಕು.

2. ಮರುನಾಮಕರಣ ಅಗತ್ಯವಿದ್ದಲ್ಲಿ, ರಾಜ್ಯದ ಭಾಷೆಯಲ್ಲೇ ಸೂಕ್ತ ಹೆಸರನ್ನು ಆಯ್ಕೆಮಾಡಬೇಕು.

3. ಭಾಷಾ ಹೇರಿಕೆಗೆ ವಿರುದ್ಧವಾಗಿ ಕೇಂದ್ರ ಸರ್ಕಾರಕ್ಕೆ ತಮ್ಮ ಆಕ್ಷೇಪಣೆಯನ್ನು ಅಧಿಕೃತವಾಗಿ ತಿಳಿಸಬೇಕು.

ಭಾರತದ ಐಕ್ಯತೆ ಏಕರೂಪತೆಯಲ್ಲಿ ಅಲ್ಲ, ಹೊಂದಾಣಿಕೆಯಲ್ಲಿ ನೆಲಸಿದೆ. ಭಾಷಾ ಬಹುತ್ವವನ್ನು ರಕ್ಷಿಸುವುದು ಸಂವಿಧಾನದ ಆಶಯವನ್ನು ನಿಜಾರ್ಥದಲ್ಲಿ ಎತ್ತಿ ಹಿಡಿಯುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...