Homeಕರ್ನಾಟಕ'ರಾಜಭವನ'ಗಳನ್ನು 'ಲೋಕಭವನ'ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

- Advertisement -
- Advertisement -

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ. ಜೊತೆಗೆ ಕರ್ನಾಟಕದಲ್ಲಿ ಅದನ್ನು ರಾಜ್ಯಭವನ ಎಂದು ಬದಲಿಸಬೇಕೆಂದೂ ಆಗ್ರಹಿಸಿದೆ. 

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಪ್ರಕಟಿಸಿರುವ ಜಾಗೃತ ಕರ್ನಾಟಕವು ‘ಭಾರತದ ರಾಜಕೀಯ ವ್ಯವಸ್ಥೆಯನ್ನು ಸಂವಿಧಾನಾತ್ಮಕ ಮೌಲ್ಯಗಳ ತಳಹದಿಯ ಮೇಲೆ ಮರುನಿರ್ಮಿಸಲು ಬದ್ಧವಾಗಿರುವ ರಾಜಕೀಯ ಸಂಘಟನೆಯಾದ ಜಾಗೃತ ಕರ್ನಾಟಕ, ‘ರಾಜಭವನ’ ಎಂಬ ಸ್ಥಾಪಿತ ಸಂವಿಧಾನಾತ್ಮಕ ಪದವನ್ನು ‘ಲೋಕಭವನ’ ಎಂದು ಮರುನಾಮಕರಣ ಮಾಡುವ ಕೇಂದ್ರ ಸರ್ಕಾರದ ಪ್ರಯತ್ನಗಳನ್ನು ತೀವ್ರವಾಗಿ ವಿರೋಧಿಸುತ್ತದೆ’ ಎಂದು ಹೇಳಿದೆ.

ಕೇಂದ್ರ ಸರ್ಕಾರದಿಂದ ಬಂದಿರುವ ಸೂಚನೆಗಳ ಹಿನ್ನೆಲೆಯಲ್ಲಿ ನಡೆಯುತ್ತಿರುವ ಈ ಕ್ರಮಗಳು ಸಾಂಕೇತಿಕ ಅಥವಾ ಆಡಳಿತಾತ್ಮಕವೆಂದು ತೋರಿಸಲ್ಪಟ್ಟರೂ, ಅದರ ಒಟ್ಟು ಪರಿಣಾಮ ಅಧಿಕೃತ ಸಾರ್ವಜನಿಕ ವಲಯದಲ್ಲಿ ವಿಶೇಷವಾಗಿ ಹಿಂದಿ ಆಡಳಿತ ಭಾಷೆಯಾಗಿರದ ರಾಜ್ಯಗಳಲ್ಲಿ ಹಿಂದಿಯ ಪರೋಕ್ಷ ಹೇರಿಕೆಯಾಗುತ್ತದೆ. ಇದು ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ತತ್ತ್ವ ಗಳಿಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಭಾರತೀಯ ಸಂವಿಧಾನವು ಬಹುಭಾಷಾತ್ಮಕ ಸ್ವರೂಪವನ್ನು ಸ್ಪಷ್ಟವಾಗಿ ಒಪ್ಪಿಕೊಂಡಿದೆ. ವಿಧಿ 343 ಹಿಂದಿ ಮತ್ತು ಇಂಗ್ಲಿಷ್ ಅನ್ನು ವ್ಯವಹಾರಿಕ ಭಾಷೆಗಳಾಗಿ ಗುರುತಿಸಿದರೂ, 345 ಮತ್ತು 346 ವಿಧಿಗಳು ಭಾಷಾ ವಿಚಾರದಲ್ಲಿ ರಾಜ್ಯಗಳಿಗೆ ಸ್ವಾಯತ್ತತೆಯನ್ನು ನೀಡುತ್ತವೆ. ಈ ಸಮತೋಲನವೇ ಭಾರತದ ಒಕ್ಕೂಟ ವ್ಯವಸ್ಥೆಯ ಮೂಲಾಧಾರವಾಗಿದೆ.

‘ರಾಜಭವನ’ಗಳನ್ನು ‘ಲೋಕಭವನ’ಗಳಾಗಿ ಮರುನಾಮಕರಣ ಮಾಡುವುದು ಪ್ರತ್ಯೇಕ ಕ್ರಮವಲ್ಲ ಕ್ರಮವಲ್ಲ; ಇದು ಇತ್ತೀಚಿನ ವರ್ಷಗಳಲ್ಲಿ ಕಾಣಿಸುತ್ತಿರುವ ಒಕ್ಕೂಟ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಪ್ರವೃತ್ತಿಯ ಭಾಗವಾಗಿದೆ ಎಂದಿರುವ ಜಾಗೃತ ಕರ್ನಾಟಕ ‘ದೀರ್ಘಕಾಲದ ಇಂಗ್ಲಿಷ್ ಶಾಸನಾತ್ಮಕ ಶೀರ್ಷಿಕೆಗಳನ್ನು ಹಿಂದಿ ಪದಗಳಿಂದ ಬದಲಾಯಿಸುವುದು, ಇಡೀ ದೇಶಕ್ಕೆ ಅನ್ವಯವಾಗುವ ಪ್ರಮುಖ ಕಾನೂನುಗಳನ್ನು ಮುಖ್ಯವಾಗಿ ಹಿಂದಿ ಶೀರ್ಷಿಕೆಗಳಡಿ ಜಾರಿಗೆ ತರುವುದು, ಮತ್ತು ಅಧಿಕೃತ ಪತ್ರವ್ಯವಹಾರಗಳಲ್ಲಿ ಹಿಂದಿಗೆ ಹೆಚ್ಚುತ್ತಿರುವ ಆದ್ಯತೆ-ಇವೆಲ್ಲವೂ ಭಾಷಾ ಸಮಾನತೆಯನ್ನು ದುರ್ಬಲಗೊಳಿಸುತ್ತವೆ’ ಎಂದು ಎಚ್ಚರಿಸಿದೆ.

ಕರ್ನಾಟಕದಲ್ಲಿ, ‘ರಾಜಭವನ’ವನ್ನು ‘ರಾಜ್ಯಭವನ’ ಎಂದು ಮರುನಾಮಕರಣ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿರುವ ಜಾಗೃತ ಕರ್ನಾಟಕ ಸಂಘಟನೆ, ರಾಜ್ಯಪಾಲರ ನಿವಾಸ ಮತ್ತು ಕಚೇರಿ ಸಂಕೀರ್ಣವು ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿದ್ದು, ಅದರ ನಿರ್ವಹಣೆ ಮತ್ತು ವೆಚ್ಚವನ್ನು ರಾಜ್ಯವೇ ಭರಿಸುತ್ತದೆ. ಆದ್ದರಿಂದ ಅದರ ಹೆಸರು ರಾಜ್ಯದ ಭಾಷೆ ಮತ್ತು ಗುರುತನ್ನು ಪ್ರತಿಬಿಂಬಿಸಬೇಕು ಎಂದು ಆಗ್ರಹಿಸಿದೆ. .

ಆಕ್ಷೇಪಾರ್ಹವಾಗಿರುವುದು ಮರುನಾಮಕರಣವಲ್ಲ, ಆದರೆ ಕೇಂದ್ರದಿಂದ ಹೇರಲಾಗುತ್ತಿರುವ ಏಕಸ್ವರೂಪದ ಹಿಂದಿ ನಾಮಕರಣವಾಗಿದೆ. ರಾಜ್ಯಗಳು ತಮ್ಮದೇ ಭಾಷೆಯಲ್ಲಿ ಸೂಕ್ತ ಹೆಸರನ್ನು ಆಯ್ಕೆಮಾಡುವ ಸಂವಿಧಾನಾತ್ಮಕ ಹಕ್ಕು ಹೊಂದಿವೆ ಎಂದಿರುವ ಸಂಘಟನೆ ಮೂರು ಆಗ್ರಹಗಳನ್ನು ರಾಜ್ಯ ಸರ್ಕಾರಗಳ ಮುಂದಿಟ್ಟಿದೆ. 

ಜಾಗೃತ ಕರ್ನಾಟಕ ಸಂಘಟನೆಯ ಆಗ್ರಹಗಳು: 

1. ‘ರಾಜಭವನ’ವನ್ನು ‘ಲೋಕಭವನ’ವಾಗಿ ಮರುನಾಮಕರಣ ಮಾಡುವ ಯಾವುದೇ ಕ್ರಮವನ್ನು ತಡೆಯಬೇಕು.

2. ಮರುನಾಮಕರಣ ಅಗತ್ಯವಿದ್ದಲ್ಲಿ, ರಾಜ್ಯದ ಭಾಷೆಯಲ್ಲೇ ಸೂಕ್ತ ಹೆಸರನ್ನು ಆಯ್ಕೆಮಾಡಬೇಕು.

3. ಭಾಷಾ ಹೇರಿಕೆಗೆ ವಿರುದ್ಧವಾಗಿ ಕೇಂದ್ರ ಸರ್ಕಾರಕ್ಕೆ ತಮ್ಮ ಆಕ್ಷೇಪಣೆಯನ್ನು ಅಧಿಕೃತವಾಗಿ ತಿಳಿಸಬೇಕು.

ಭಾರತದ ಐಕ್ಯತೆ ಏಕರೂಪತೆಯಲ್ಲಿ ಅಲ್ಲ, ಹೊಂದಾಣಿಕೆಯಲ್ಲಿ ನೆಲಸಿದೆ. ಭಾಷಾ ಬಹುತ್ವವನ್ನು ರಕ್ಷಿಸುವುದು ಸಂವಿಧಾನದ ಆಶಯವನ್ನು ನಿಜಾರ್ಥದಲ್ಲಿ ಎತ್ತಿ ಹಿಡಿಯುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...