Homeಕರ್ನಾಟಕ'ರಾಜಭವನ'ಗಳನ್ನು 'ಲೋಕಭವನ'ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

- Advertisement -
- Advertisement -

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ. ಜೊತೆಗೆ ಕರ್ನಾಟಕದಲ್ಲಿ ಅದನ್ನು ರಾಜ್ಯಭವನ ಎಂದು ಬದಲಿಸಬೇಕೆಂದೂ ಆಗ್ರಹಿಸಿದೆ. 

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಪ್ರಕಟಿಸಿರುವ ಜಾಗೃತ ಕರ್ನಾಟಕವು ‘ಭಾರತದ ರಾಜಕೀಯ ವ್ಯವಸ್ಥೆಯನ್ನು ಸಂವಿಧಾನಾತ್ಮಕ ಮೌಲ್ಯಗಳ ತಳಹದಿಯ ಮೇಲೆ ಮರುನಿರ್ಮಿಸಲು ಬದ್ಧವಾಗಿರುವ ರಾಜಕೀಯ ಸಂಘಟನೆಯಾದ ಜಾಗೃತ ಕರ್ನಾಟಕ, ‘ರಾಜಭವನ’ ಎಂಬ ಸ್ಥಾಪಿತ ಸಂವಿಧಾನಾತ್ಮಕ ಪದವನ್ನು ‘ಲೋಕಭವನ’ ಎಂದು ಮರುನಾಮಕರಣ ಮಾಡುವ ಕೇಂದ್ರ ಸರ್ಕಾರದ ಪ್ರಯತ್ನಗಳನ್ನು ತೀವ್ರವಾಗಿ ವಿರೋಧಿಸುತ್ತದೆ’ ಎಂದು ಹೇಳಿದೆ.

ಕೇಂದ್ರ ಸರ್ಕಾರದಿಂದ ಬಂದಿರುವ ಸೂಚನೆಗಳ ಹಿನ್ನೆಲೆಯಲ್ಲಿ ನಡೆಯುತ್ತಿರುವ ಈ ಕ್ರಮಗಳು ಸಾಂಕೇತಿಕ ಅಥವಾ ಆಡಳಿತಾತ್ಮಕವೆಂದು ತೋರಿಸಲ್ಪಟ್ಟರೂ, ಅದರ ಒಟ್ಟು ಪರಿಣಾಮ ಅಧಿಕೃತ ಸಾರ್ವಜನಿಕ ವಲಯದಲ್ಲಿ ವಿಶೇಷವಾಗಿ ಹಿಂದಿ ಆಡಳಿತ ಭಾಷೆಯಾಗಿರದ ರಾಜ್ಯಗಳಲ್ಲಿ ಹಿಂದಿಯ ಪರೋಕ್ಷ ಹೇರಿಕೆಯಾಗುತ್ತದೆ. ಇದು ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ತತ್ತ್ವ ಗಳಿಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಭಾರತೀಯ ಸಂವಿಧಾನವು ಬಹುಭಾಷಾತ್ಮಕ ಸ್ವರೂಪವನ್ನು ಸ್ಪಷ್ಟವಾಗಿ ಒಪ್ಪಿಕೊಂಡಿದೆ. ವಿಧಿ 343 ಹಿಂದಿ ಮತ್ತು ಇಂಗ್ಲಿಷ್ ಅನ್ನು ವ್ಯವಹಾರಿಕ ಭಾಷೆಗಳಾಗಿ ಗುರುತಿಸಿದರೂ, 345 ಮತ್ತು 346 ವಿಧಿಗಳು ಭಾಷಾ ವಿಚಾರದಲ್ಲಿ ರಾಜ್ಯಗಳಿಗೆ ಸ್ವಾಯತ್ತತೆಯನ್ನು ನೀಡುತ್ತವೆ. ಈ ಸಮತೋಲನವೇ ಭಾರತದ ಒಕ್ಕೂಟ ವ್ಯವಸ್ಥೆಯ ಮೂಲಾಧಾರವಾಗಿದೆ.

‘ರಾಜಭವನ’ಗಳನ್ನು ‘ಲೋಕಭವನ’ಗಳಾಗಿ ಮರುನಾಮಕರಣ ಮಾಡುವುದು ಪ್ರತ್ಯೇಕ ಕ್ರಮವಲ್ಲ ಕ್ರಮವಲ್ಲ; ಇದು ಇತ್ತೀಚಿನ ವರ್ಷಗಳಲ್ಲಿ ಕಾಣಿಸುತ್ತಿರುವ ಒಕ್ಕೂಟ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಪ್ರವೃತ್ತಿಯ ಭಾಗವಾಗಿದೆ ಎಂದಿರುವ ಜಾಗೃತ ಕರ್ನಾಟಕ ‘ದೀರ್ಘಕಾಲದ ಇಂಗ್ಲಿಷ್ ಶಾಸನಾತ್ಮಕ ಶೀರ್ಷಿಕೆಗಳನ್ನು ಹಿಂದಿ ಪದಗಳಿಂದ ಬದಲಾಯಿಸುವುದು, ಇಡೀ ದೇಶಕ್ಕೆ ಅನ್ವಯವಾಗುವ ಪ್ರಮುಖ ಕಾನೂನುಗಳನ್ನು ಮುಖ್ಯವಾಗಿ ಹಿಂದಿ ಶೀರ್ಷಿಕೆಗಳಡಿ ಜಾರಿಗೆ ತರುವುದು, ಮತ್ತು ಅಧಿಕೃತ ಪತ್ರವ್ಯವಹಾರಗಳಲ್ಲಿ ಹಿಂದಿಗೆ ಹೆಚ್ಚುತ್ತಿರುವ ಆದ್ಯತೆ-ಇವೆಲ್ಲವೂ ಭಾಷಾ ಸಮಾನತೆಯನ್ನು ದುರ್ಬಲಗೊಳಿಸುತ್ತವೆ’ ಎಂದು ಎಚ್ಚರಿಸಿದೆ.

ಕರ್ನಾಟಕದಲ್ಲಿ, ‘ರಾಜಭವನ’ವನ್ನು ‘ರಾಜ್ಯಭವನ’ ಎಂದು ಮರುನಾಮಕರಣ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿರುವ ಜಾಗೃತ ಕರ್ನಾಟಕ ಸಂಘಟನೆ, ರಾಜ್ಯಪಾಲರ ನಿವಾಸ ಮತ್ತು ಕಚೇರಿ ಸಂಕೀರ್ಣವು ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿದ್ದು, ಅದರ ನಿರ್ವಹಣೆ ಮತ್ತು ವೆಚ್ಚವನ್ನು ರಾಜ್ಯವೇ ಭರಿಸುತ್ತದೆ. ಆದ್ದರಿಂದ ಅದರ ಹೆಸರು ರಾಜ್ಯದ ಭಾಷೆ ಮತ್ತು ಗುರುತನ್ನು ಪ್ರತಿಬಿಂಬಿಸಬೇಕು ಎಂದು ಆಗ್ರಹಿಸಿದೆ. .

ಆಕ್ಷೇಪಾರ್ಹವಾಗಿರುವುದು ಮರುನಾಮಕರಣವಲ್ಲ, ಆದರೆ ಕೇಂದ್ರದಿಂದ ಹೇರಲಾಗುತ್ತಿರುವ ಏಕಸ್ವರೂಪದ ಹಿಂದಿ ನಾಮಕರಣವಾಗಿದೆ. ರಾಜ್ಯಗಳು ತಮ್ಮದೇ ಭಾಷೆಯಲ್ಲಿ ಸೂಕ್ತ ಹೆಸರನ್ನು ಆಯ್ಕೆಮಾಡುವ ಸಂವಿಧಾನಾತ್ಮಕ ಹಕ್ಕು ಹೊಂದಿವೆ ಎಂದಿರುವ ಸಂಘಟನೆ ಮೂರು ಆಗ್ರಹಗಳನ್ನು ರಾಜ್ಯ ಸರ್ಕಾರಗಳ ಮುಂದಿಟ್ಟಿದೆ. 

ಜಾಗೃತ ಕರ್ನಾಟಕ ಸಂಘಟನೆಯ ಆಗ್ರಹಗಳು: 

1. ‘ರಾಜಭವನ’ವನ್ನು ‘ಲೋಕಭವನ’ವಾಗಿ ಮರುನಾಮಕರಣ ಮಾಡುವ ಯಾವುದೇ ಕ್ರಮವನ್ನು ತಡೆಯಬೇಕು.

2. ಮರುನಾಮಕರಣ ಅಗತ್ಯವಿದ್ದಲ್ಲಿ, ರಾಜ್ಯದ ಭಾಷೆಯಲ್ಲೇ ಸೂಕ್ತ ಹೆಸರನ್ನು ಆಯ್ಕೆಮಾಡಬೇಕು.

3. ಭಾಷಾ ಹೇರಿಕೆಗೆ ವಿರುದ್ಧವಾಗಿ ಕೇಂದ್ರ ಸರ್ಕಾರಕ್ಕೆ ತಮ್ಮ ಆಕ್ಷೇಪಣೆಯನ್ನು ಅಧಿಕೃತವಾಗಿ ತಿಳಿಸಬೇಕು.

ಭಾರತದ ಐಕ್ಯತೆ ಏಕರೂಪತೆಯಲ್ಲಿ ಅಲ್ಲ, ಹೊಂದಾಣಿಕೆಯಲ್ಲಿ ನೆಲಸಿದೆ. ಭಾಷಾ ಬಹುತ್ವವನ್ನು ರಕ್ಷಿಸುವುದು ಸಂವಿಧಾನದ ಆಶಯವನ್ನು ನಿಜಾರ್ಥದಲ್ಲಿ ಎತ್ತಿ ಹಿಡಿಯುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...