Homeಮುಖಪುಟಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಗಾಯಕಿ ಪ್ರಭಾ ಅತ್ರೆ ನಿಧನ

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಗಾಯಕಿ ಪ್ರಭಾ ಅತ್ರೆ ನಿಧನ

- Advertisement -
ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕಿ ಡಾ. ಪ್ರಭಾ ಅತ್ರೆ ಅವರು ಇಂದು ಮುಂಜಾನೆ ಮಹಾರಾಷ್ಟ್ರದ ಪುಣೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಪ್ರಭಾ ಅವರಿಗೆ ಮುಂಜಾನೆ 3 ಗಂಟೆಯ ಸುಮಾರಿಗೆ ಹೃದಯಾಘಾತ ಆಗಿತ್ತು. ಅವರನ್ನು ನಗರದ ಕೊತ್ರುಡ್ ಪ್ರದೇಶದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, 5:30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಹಿಂದುಸ್ತಾನಿ ಶಾಸ್ತ್ರೀಯ ಸಂಗೀತದ ಕಿರಾನ ಘರಾನದವರಾಗಿದ್ದ ಪ್ರಭಾ ಅವರು, ಭಾರತ ಸರ್ಕಾರದ ಮೂರೂ ಪದ್ಮ ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಅವರಿಗೆ 1990ರಲ್ಲಿ ಪದ್ಮಶ್ರೀ ಪ್ರಶಸ್ತಿ, 2002ರಲ್ಲಿ ಪದ್ಮ ಭೂಷಣ ಪ್ರಶಸ್ತಿ ಮತ್ತು  2022ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. 1991ರಲ್ಲಿ ಪ್ರಭಾ ಅವರು ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು.
1932ರ ಸೆಪ್ಟೆಂಬರ್ 13ರಂದು ಜನಿಸಿದ ಪ್ರಭಾ ಅವರು, ಬಹುಮುಖ ಪ್ರತಿಭೆಯಿಂದ ಗುರುತಿಸಿಕೊಂಡಿದ್ದರು. ಶಾಸ್ತ್ರೀಯ ಗಾಯಕಿಯಾಗುವುದರ ಜೊತೆಗೆ, ಅವರು ಶಿಕ್ಷಣತಜ್ಞೆ, ಸಂಶೋಧಕಿ, ಸಂಯೋಜಕಿ ಮತ್ತು ಲೇಖಕಿಯೂ ಆಗಿದ್ದರು. ವಿಜ್ಞಾನ ಮತ್ತು ಕಾನೂನು ಪದವೀಧರರಾಗಿದ್ದ ಅವರು, ಸಂಗೀತದಲ್ಲಿ ಡಾಕ್ಟರೇಟ್ ಪಡೆದಿದ್ದರು.
ಪ್ರಭಾ ಅವರ ಕೆಲ ಸಂಬಂಧಿಕರು ವಿದೇಶದಲ್ಲಿದ್ದು, ಅವರು ಬಂದ ಬಳಿಕ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ವರದಿಗಳು ತಿಳಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಬಿಲ್ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ‘ರಾಮ್ ಕಾ ನಾಮ್ ಬದ್ನಾಮ್ ನ ಕರೋ’ ಎಂದು ಟೀಕಿಸಿದ ಶಶಿ ತರೂರ್ 

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಲೋಕಸಭೆಯಲ್ಲಿ ವಿಬಿ-ಜಿ ರಾಮ್ ಜಿ ಮಸೂದೆಯನ್ನು ವಿರೋಧಿಸುವ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ, 1971 ರ ಜನಪ್ರಿಯ ಬಾಲಿವುಡ್...

ಸ್ಪೀಕರ್ ತನಿಖಾ ಸಮಿತಿ ರಚಿಸಿರುವುದನ್ನು ಪ್ರಶ್ನಿಸಿ ನ್ಯಾ. ಯಶವಂತ್ ವರ್ಮಾ ಅರ್ಜಿ : ಲೋಕಸಭೆ, ರಾಜ್ಯಸಭೆಗೆ ಸುಪ್ರೀಂ ಕೋರ್ಟ್ ನೋಟಿಸ್

ತನ್ನ ವಿರುದ್ಧ ವಾಗ್ದಂಡನೆ (ಮಹಾಭಿಯೋಗ) ವಿಧಿಸುವುದಕ್ಕಾಗಿ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯಡಿ ತ್ರಿಸದಸ್ಯ ಸಮಿತಿ ರಚಿಸಿರುವ ಲೋಕಸಭಾ ಸ್ಪೀಕರ್‌ ನಿರ್ಧಾರ ರದ್ದುಗೊಳಿಸುವಂತೆ ಕೋರಿ ಅಲಾಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರು ಸುಪ್ರೀಂ ಕೋರ್ಟ್‌ಗೆ...

ಪ್ರಯಾಣಿಕರಿಗೆ 200, 500 ರೂಪಾಯಿ ಮುಖಬೆಲೆಯ ಭಾರತೀಯ ನೋಟು ಕೊಂಡೊಯ್ಯಲು ಅನುಮತಿಸಿದ ನೇಪಾಳ

ಗಡಿಯಾಚೆಗಿನ ಪ್ರಯಾಣ ಮತ್ತು ವ್ಯಾಪಾರವನ್ನು ಸರಾಗಗೊಳಿಸುವ ಸಲುವಾಗಿ, ನೇಪಾಳ ಸರ್ಕಾರವು ರೂ.200 ಮತ್ತು ರೂ.500 ಮೌಲ್ಯದ ಭಾರತೀಯ ಕರೆನ್ಸಿ ನೋಟುಗಳನ್ನು ಹೊಂದುವ ಮೇಲಿದ್ದ ನಿರ್ಬಂಧಗಳನ್ನು ತೆಗೆದುಹಾಕಿದೆ. ಸೋಮವಾರ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರವು,...

ಮತದಾರರ ತೀರ್ಪಿನೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಬರಲು ಬಿಡುತ್ತೇವೆ; ಕಾಂಗ್ರೆಸ್‌ ಜೊತೆಗೆ ಮೈತ್ರಿ ಇಲ್ಲ: ಕೇರಳ ಸಿಪಿಐ(ಎಂ) ಮುಖ್ಯಸ್ಥ

ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಂದು ಕಾರ್ಪೊರೇಷನ್ ಮತ್ತು ಪುರಸಭೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ, ಎರಡು ಪ್ರತಿಸ್ಪರ್ಧಿ ರಂಗಗಳಾದ ಯುಡಿಎಫ್ ಮತ್ತು ಎಲ್‌ಡಿಎಫ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು...

ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ...

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್...

ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಗಳಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಅಭ್ಯಾಸ ಹೆಚ್ಚುತ್ತಿದೆ. ಈ ಪ್ರವೃತ್ತಿಯಿಂದ ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯವಾಗಿದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದರು. ಈ...

ಸಿಡ್ನಿ ಶೂಟೌಟ್‌: ಭಾರತೀಯ ಪಾಸ್‌ಪೋರ್ಟ್‌ ಬಳಸಿ ಫಿಲಿಪೈನ್ಸ್‌ಗೆ ಪ್ರಯಾಣಿಸಿದ್ದ ತಂದೆ-ಮಗ?

ಸಿಡ್ನಿಯಲ್ಲಿ ಹದಿನೈದು ಜನರನ್ನು ಗುಂಡಿಕ್ಕಿ ಕೊಂದ ತಂದೆ ಮತ್ತು ಮಗನನ್ನು ಪಾಕಿಸ್ತಾನಿ ಪ್ರಜೆಗಳು ಎಂದು ಈಗಾಗಲೇ ಗುರುತಿಸಲಾಗಿದೆ ಎಂಬ ಹಿಂದಿನ ವರದಿಗಳಿಗೆ ವಿರುದ್ಧವಾಗಿ, ಇಬ್ಬರೂ ಕಳೆದ ತಿಂಗಳು ನವೆಂಬರ್‌ನಲ್ಲಿ ಭಾರತೀಯ ಪಾಸ್‌ಪೋರ್ಟ್‌ಗಳನ್ನು ಬಳಸಿ...