ಕನ್ನಡದ ಹಿರಿಯ ವಿಮರ್ಶಕ ಡಾ. ಜಿ ಎಸ್ ಅಮೂರ (96) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಬೆಳಗಿನ ಜಾವ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಮೂರು ವಾರಗಳ ಹಿಂದೆಯಷ್ಟೇ ನೃಪತುಂಗ ಪ್ರಶಸ್ತಿಗೆ ಭಾಜನರಾಗಿದ್ದರು.
1925ರ ಮೇ 8 ರಂದು ಧಾರವಾಡ ಜಿಲ್ಲೆಯ ಬೊಮ್ಮನಹಳ್ಳಿಯಲ್ಲಿ ಜನಿಸಿದ ಇವರು ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ಕನ್ನಡ, ಇಂಗ್ಲಿಷ್, ಸಂಸ್ಕೃತ, ಮರಾಠಿ ಭಾಷೆ ಸಾಹಿತ್ಯ ಬಲ್ಲವರಾಗಿದ್ದರು. ಕನ್ನಡ ಸಾಹಿತ್ಯ ವಿಮರ್ಶೆ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಜನಮನ್ನಣೆ ಗಳಿಸಿದ್ದರು. ಜಿ.ಎಸ್. ಆಮೂರ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿ, ಬೇಂದ್ರೆ ಪ್ರಶಸ್ತಿ, ರಾಜ್ಯೋತ್ಸವ ಪುರಸ್ಕಾರ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಲಭಿಸಿವೆ.
ಇದನ್ನೂ ಓದಿ: ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಗಣ್ಯರ ಕಂಬನಿ
ವಿಮರ್ಶಕ ಅಮೂರರವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಕಸಾಪ ಅಧ್ಯಕ್ಷ ಮನು ಬಳಿಗಾರ್ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.
ಕನ್ನಡದ ಖ್ಯಾತ ಸಾಹಿತಿ, ವಿಮರ್ಶಕ ಡಾ ಜಿ.ಎಸ್.ಅಮೂರ ಅವರ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
'ಆಧುನಿಕ ಕನ್ನಡ ಸಾಹಿತ್ಯ ವಿಮರ್ಶಕರಲ್ಲಿ ಅಗ್ರಮಾನ್ಯರೆಂದು ಪರಿಗಣಿಸಲ್ಪಟ್ಟಿರುವ ಡಾ: ಅಮೂರ ಅವರು ಪಂಪ ಪ್ರಶಸ್ತಿ, ಕೇಂದ್ರ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದರು. (1/2)
— CM of Karnataka (@CMofKarnataka) September 28, 2020
ಸರಣಿ ಟ್ವೀಟ್ಗಳನ್ನು ಮಾಡಿರುವ ಮುಖ್ಯಮಂತ್ರಿಗಳು, ಇತ್ತೀಚೆಗಷ್ಟೆ ಅವರಿಗೆ ನೃಪತುಂಗ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಪ್ರಶಸ್ತಿಯನ್ನು ಸ್ವೀಕರಿಸುವ ಮುನ್ನವೇ ಅವರು ಇಹಲೋಕ ತ್ಯಜಿಸಿರುವುದು ದು:ಖವನ್ನುಂಟು ಮಾಡಿದೆ. ಅವರ ನಿಧನದಿಂದ ಕನ್ನಡ ಸಾಹಿತ್ಯಲೋಕದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ, ಅವರ ಅಭಿಮಾನಿಗಳಿಗೆ ಮತ್ತು ಶಿಷ್ಯವೃಂದಕ್ಕೆ ಭಗವಂತ ನೋವು ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
ಅವರ ಆತ್ಮಕ್ಕೆ ಶಾಂತಿ ದೊರೆಯಲಿ, ಅವರ ಅಭಿಮಾನಿಗಳು ಮತ್ತು ಶಿಷ್ಯವೃಂದಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. (3/3)
— CM of Karnataka (@CMofKarnataka) September 28, 2020
ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಸಂತಾಪ ಸೂಚಿಸಿದ್ದು, ಹಿರಿಯ ವಿಮರ್ಶಕ ಡಾ.ಜಿ.ಎಸ್.ಅಮೂರ ಅವರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರ ನಿಜಕ್ಕೂ ಬಡವಾಗಿದೆ. ಎಲೆಮರೆ ಕಾಯಿಯಂತೆ ಸದ್ದುಗದ್ದಲ ಇಲ್ಲದೆ ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದ ಡಾ.ಅಮೂರ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು. ಅವರ ಅಗಲಿಕೆಯಿಂದ ನೊಂದಿರುವ ಬಂಧು ಮಿತ್ರರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದಿದ್ದಾರೆ.
ಹಿರಿಯ ವಿಮರ್ಶಕ ಡಾ.ಜಿ.ಎಸ್.ಅಮೂರ ಅವರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರ ನಿಜಕ್ಕೂ ಬಡವಾಗಿದೆ.
ಎಲೆಮರೆ ಕಾಯಿಯಂತೆ ಸದ್ದುಗದ್ದಲ ಇಲ್ಲದೆ ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದ ಡಾ.ಅಮೂರ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು.
ಅವರ ಅಗಲಿಕೆಯಿಂದ ನೊಂದಿರುವ ಬಂಧು ಮಿತ್ರರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/C8HGQHZTQX
— Siddaramaiah (@siddaramaiah) September 28, 2020