Homeಮುಖಪುಟಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

- Advertisement -
- Advertisement -

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ ಮಗ ಸಿದ್ಧಾರ್ಥ ಗಾಡ್ಗೀಳ್ ಗುರುವಾರ (ಜನವರಿ 8, 2026) ಮಾಹಿತಿ ಹಂಚಿಕೊಂಡಿದ್ದಾರೆ.

ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ತಂಡಕ್ಕೆ ಅಧ್ಯಕ್ಷತೆ ವಹಿಸಿದ್ದಕ್ಕೆ ಹೆಚ್ಚು ಪ್ರಸಿದ್ಧರಾಗಿದ್ದ ಮಾಧವ ಗಾಡ್ಗೀಳ್, ಭಾರತದ ಪ್ರಮುಖ ಪರಿಸರ ಚಿಂತಕರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿದ್ದರು. ಅವರು ಪರಿಸರ ಸಂರಕ್ಷಣೆಗೆ ಸ್ಥಳೀಯ ಸಮುದಾಯಗಳನ್ನು ಕೇಂದ್ರ ಬಿಂದುವಾಗಿಟ್ಟುಕೊಂಡ ವಿಧಾನವನ್ನು ಬಲವಾಗಿ ಪ್ರತಿಪಾದಿಸುತ್ತಿದ್ದರು.

2010ರಲ್ಲಿ, ಕೇಂದ್ರ ಸರ್ಕಾರ ಗಾಡ್ಗೀಳ್ ಅವರನ್ನು ಪಶ್ಚಿಮ ಘಟ್ಟಗಳ ಪರಿಸರ ವಿಜ್ಞಾನ ತಜ್ಞರ ಸಮಿತಿಯ (WGEEP) ಮುಖ್ಯಸ್ಥರನ್ನಾಗಿ ನೇಮಿಸಿತ್ತು. ಈ ಸಮಿತಿ ಗಾಡ್ಗೀಳ್ ಆಯೋಗ ಎಂದೇ ಪ್ರಸಿದ್ದಿ ಪಡೆದಿತ್ತು.

ಪರಿಸರ ವಿಜ್ಞಾನದ ದೃಷ್ಟಿಯಿಂದ ದುರ್ಬಲವಾಗಿರುವ ಪಶ್ಚಿಮ ಘಟ್ಟಗಳಲ್ಲಿ ಕಟ್ಟುನಿಟ್ಟಿನ ಪರಿಸರ ಸುರಕ್ಷತೆಯನ್ನು ಕಾಯ್ದುಕೊಳ್ಳುವಂತೆ ಸಮಿತಿಯ ವರದಿಯು ಕರೆ ನೀಡಿತ್ತು. ಈ ವರದಿಯು ಆರು ರಾಜ್ಯಗಳಲ್ಲಿ ತೀವ್ರ ರಾಜಕೀಯ ಮತ್ತು ಸಾರ್ವಜನಿಕ ಚರ್ಚೆಗೆ ನಾಂದಿ ಹಾಡಿತ್ತು.

2024ರಲ್ಲಿ ಡಾ. ಗಾಡ್ಗೀಳ್ ಅವರಿಗೆ, ಪರಿಸರ ವಿಜ್ಞಾನ ಮತ್ತು ಸಮುದಾಯ ನೇತೃತ್ವದ ಸಂರಕ್ಷಣೆಗೆ ಅವರ ಜೀವಮಾನದ ಕೊಡುಗೆಯನ್ನು ಗುರುತಿಸಿ ವಿಶ್ವಸಂಸ್ಥೆಯು ಪರಿಸರ ಕಾರ್ಯಕ್ರಮದ ‘ಚಾಂಪಿಯನ್ಸ್ ಆಫ್ ದಿ ಅರ್ಥ್’ ಪ್ರಶಸ್ತಿ ನೀಡಿ ಗೌರವಿಸಿತ್ತು. ಇದು ವಿಶ್ವಸಂಸ್ಥೆಯ ಅತ್ಯುನ್ನತ ಪರಿಸರ ಗೌರವವಾಗಿದೆ. 2024ರ ಸಮೂಹದ ಆರು ಪ್ರಶಸ್ತಿ ವಿಜೇತರಲ್ಲಿ ಗಾಡ್ಗೀಳ್ ಅವರು ಒಬ್ಬರು.

ಪರಿಸರ ಕ್ಷೇತ್ರಕ್ಕೆ ನೀಡಿದ ಸೇವೆಗಾಗಿ ಅವರಿಗೆ ವೋಲ್ವೋ ಪರಿಸರ ಪ್ರಶಸ್ತಿ, ಪರಿಸರ ಸಾಧನೆಗಾಗಿ ಟೈಲರ್ ಪ್ರಶಸ್ತಿ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಗೌರವಗಳು ಕೂಡ ಗಾಡ್ಗೀಳ್ ಅವರಿಗೆ ಲಭಿಸಿದ್ದವು. 1981ರಲ್ಲಿ ಪದ್ಮಶ್ರೀ ಮತ್ತು 2006ರಲ್ಲಿ ಪದ್ಮಭೂಷಣ ಪ್ರಶಸ್ತಿಗಳನ್ನು ಗಾಡ್ಗೀಳ್ ಪಡೆದಿದ್ದರು. 

ಗಾಡ್ಗೀಳ್ ಅವರು ಭಾರತದ ಮೊಟ್ಟ ಮೊದಲ ಜೈವಿಕ ಮೀಸಲು ಪ್ರದೇಶವಾಗಿ (ಬಯೋಸ್ಫಿಯರ್ ರಿಸರ್ವ್) ನೀಲಗಿರಿ ಅರಣ್ಯ ಪ್ರದೇಶವನ್ನು ಗುರುತಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪಶ್ಚಿಮ ಘಟ್ಟಗಳಲ್ಲಿ ಕಾಲ್ನಡಿಗೆಯಲ್ಲಿ ಸುತ್ತಿ, ಅಲ್ಲಿನ ಆದಿವಾಸಿ ಮತ್ತು ಅರಣ್ಯ ನಿವಾಸಿ ಸಮುದಾಯಗಳೊಂದಿಗೆ ಬೆರೆತು, ಅವರ ಪವಿತ್ರ ಕಾಡುಗಳಲ್ಲಿ ವಾಸಿಸುತ್ತಾ ಪರಿಸರದ ಬಗ್ಗೆ ಆಳವಾದ ಅಧ್ಯಯನವನ್ನು ಗಾಡ್ಗೀಳ್ ಅವರು ಮಾಡಿದ್ದರು. ಈ ಮೂಲಕ ಅರಣ್ಯ ಸಂರಕ್ಷಣೆಗೆ ಮೂಲ ಅಥವಾ ಸ್ಥಳೀಯ ನಿವಾಸಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು, ಅವರ ಹಕ್ಕುಗಳನ್ನು ರಕ್ಷಿಸುವುದು ಮುಖ್ಯ ಎಂದು ಗಾಡ್ಗೀಳ್ ಕಂಡುಕೊಂಡಿದ್ದರು.

ಪ್ರಧಾನ ಮಂತ್ರಿಯವರ ವೈಜ್ಞಾನಿಕ ಸಲಹಾ ಮಂಡಳಿ ಸೇರಿದಂತೆ ಹಲವಾರು ಸರ್ಕಾರಿ ಸಂಸ್ಥೆಗಳ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಗಾಡ್ಗೀಳ್ ಅವರು, ಭಾರತದ ಜೈವಿಕ ವೈವಿಧ್ಯತೆ ಕಾಯ್ದೆಯ ಪ್ರಮುಖ ಶಿಲ್ಪಿಗಳಲ್ಲಿ ಒಬ್ಬರಾಗಿದ್ದರು ಮತ್ತು ಅರಣ್ಯ ಹಕ್ಕುಗಳ ಕಾಯ್ದೆಯ ಅನುಷ್ಠಾನಕ್ಕೆ ಕೊಡುಗೆ ನೀಡಿದ್ದರು.

ಗಾಡ್ಗೀಳ್ ಭಾರತೀಯ ವಿಜ್ಞಾನ ಸಂಸ್ಥೆಯ ಪರಿಸರ ವಿಜ್ಞಾನ ಕೇಂದ್ರದ ಸ್ಥಾಪಕರೂ ಹೌದು, ಈ ಕೇಂದ್ರವು ದೇಶದ ಪ್ರಮುಖ ಪರಿಸರ ಸಂಶೋಧನಾ ಕೇಂದ್ರಗಳಲ್ಲಿ ಒಂದಾಗಿ ರೂಪುಗೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...