Homeಮುಖಪುಟಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

- Advertisement -
- Advertisement -

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ ಮಗ ಸಿದ್ಧಾರ್ಥ ಗಾಡ್ಗೀಳ್ ಗುರುವಾರ (ಜನವರಿ 8, 2026) ಮಾಹಿತಿ ಹಂಚಿಕೊಂಡಿದ್ದಾರೆ.

ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ತಂಡಕ್ಕೆ ಅಧ್ಯಕ್ಷತೆ ವಹಿಸಿದ್ದಕ್ಕೆ ಹೆಚ್ಚು ಪ್ರಸಿದ್ಧರಾಗಿದ್ದ ಮಾಧವ ಗಾಡ್ಗೀಳ್, ಭಾರತದ ಪ್ರಮುಖ ಪರಿಸರ ಚಿಂತಕರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿದ್ದರು. ಅವರು ಪರಿಸರ ಸಂರಕ್ಷಣೆಗೆ ಸ್ಥಳೀಯ ಸಮುದಾಯಗಳನ್ನು ಕೇಂದ್ರ ಬಿಂದುವಾಗಿಟ್ಟುಕೊಂಡ ವಿಧಾನವನ್ನು ಬಲವಾಗಿ ಪ್ರತಿಪಾದಿಸುತ್ತಿದ್ದರು.

2010ರಲ್ಲಿ, ಕೇಂದ್ರ ಸರ್ಕಾರ ಗಾಡ್ಗೀಳ್ ಅವರನ್ನು ಪಶ್ಚಿಮ ಘಟ್ಟಗಳ ಪರಿಸರ ವಿಜ್ಞಾನ ತಜ್ಞರ ಸಮಿತಿಯ (WGEEP) ಮುಖ್ಯಸ್ಥರನ್ನಾಗಿ ನೇಮಿಸಿತ್ತು. ಈ ಸಮಿತಿ ಗಾಡ್ಗೀಳ್ ಆಯೋಗ ಎಂದೇ ಪ್ರಸಿದ್ದಿ ಪಡೆದಿತ್ತು.

ಪರಿಸರ ವಿಜ್ಞಾನದ ದೃಷ್ಟಿಯಿಂದ ದುರ್ಬಲವಾಗಿರುವ ಪಶ್ಚಿಮ ಘಟ್ಟಗಳಲ್ಲಿ ಕಟ್ಟುನಿಟ್ಟಿನ ಪರಿಸರ ಸುರಕ್ಷತೆಯನ್ನು ಕಾಯ್ದುಕೊಳ್ಳುವಂತೆ ಸಮಿತಿಯ ವರದಿಯು ಕರೆ ನೀಡಿತ್ತು. ಈ ವರದಿಯು ಆರು ರಾಜ್ಯಗಳಲ್ಲಿ ತೀವ್ರ ರಾಜಕೀಯ ಮತ್ತು ಸಾರ್ವಜನಿಕ ಚರ್ಚೆಗೆ ನಾಂದಿ ಹಾಡಿತ್ತು.

2024ರಲ್ಲಿ ಡಾ. ಗಾಡ್ಗೀಳ್ ಅವರಿಗೆ, ಪರಿಸರ ವಿಜ್ಞಾನ ಮತ್ತು ಸಮುದಾಯ ನೇತೃತ್ವದ ಸಂರಕ್ಷಣೆಗೆ ಅವರ ಜೀವಮಾನದ ಕೊಡುಗೆಯನ್ನು ಗುರುತಿಸಿ ವಿಶ್ವಸಂಸ್ಥೆಯು ಪರಿಸರ ಕಾರ್ಯಕ್ರಮದ ‘ಚಾಂಪಿಯನ್ಸ್ ಆಫ್ ದಿ ಅರ್ಥ್’ ಪ್ರಶಸ್ತಿ ನೀಡಿ ಗೌರವಿಸಿತ್ತು. ಇದು ವಿಶ್ವಸಂಸ್ಥೆಯ ಅತ್ಯುನ್ನತ ಪರಿಸರ ಗೌರವವಾಗಿದೆ. 2024ರ ಸಮೂಹದ ಆರು ಪ್ರಶಸ್ತಿ ವಿಜೇತರಲ್ಲಿ ಗಾಡ್ಗೀಳ್ ಅವರು ಒಬ್ಬರು.

ಪರಿಸರ ಕ್ಷೇತ್ರಕ್ಕೆ ನೀಡಿದ ಸೇವೆಗಾಗಿ ಅವರಿಗೆ ವೋಲ್ವೋ ಪರಿಸರ ಪ್ರಶಸ್ತಿ, ಪರಿಸರ ಸಾಧನೆಗಾಗಿ ಟೈಲರ್ ಪ್ರಶಸ್ತಿ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಗೌರವಗಳು ಕೂಡ ಗಾಡ್ಗೀಳ್ ಅವರಿಗೆ ಲಭಿಸಿದ್ದವು. 1981ರಲ್ಲಿ ಪದ್ಮಶ್ರೀ ಮತ್ತು 2006ರಲ್ಲಿ ಪದ್ಮಭೂಷಣ ಪ್ರಶಸ್ತಿಗಳನ್ನು ಗಾಡ್ಗೀಳ್ ಪಡೆದಿದ್ದರು. 

ಗಾಡ್ಗೀಳ್ ಅವರು ಭಾರತದ ಮೊಟ್ಟ ಮೊದಲ ಜೈವಿಕ ಮೀಸಲು ಪ್ರದೇಶವಾಗಿ (ಬಯೋಸ್ಫಿಯರ್ ರಿಸರ್ವ್) ನೀಲಗಿರಿ ಅರಣ್ಯ ಪ್ರದೇಶವನ್ನು ಗುರುತಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪಶ್ಚಿಮ ಘಟ್ಟಗಳಲ್ಲಿ ಕಾಲ್ನಡಿಗೆಯಲ್ಲಿ ಸುತ್ತಿ, ಅಲ್ಲಿನ ಆದಿವಾಸಿ ಮತ್ತು ಅರಣ್ಯ ನಿವಾಸಿ ಸಮುದಾಯಗಳೊಂದಿಗೆ ಬೆರೆತು, ಅವರ ಪವಿತ್ರ ಕಾಡುಗಳಲ್ಲಿ ವಾಸಿಸುತ್ತಾ ಪರಿಸರದ ಬಗ್ಗೆ ಆಳವಾದ ಅಧ್ಯಯನವನ್ನು ಗಾಡ್ಗೀಳ್ ಅವರು ಮಾಡಿದ್ದರು. ಈ ಮೂಲಕ ಅರಣ್ಯ ಸಂರಕ್ಷಣೆಗೆ ಮೂಲ ಅಥವಾ ಸ್ಥಳೀಯ ನಿವಾಸಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು, ಅವರ ಹಕ್ಕುಗಳನ್ನು ರಕ್ಷಿಸುವುದು ಮುಖ್ಯ ಎಂದು ಗಾಡ್ಗೀಳ್ ಕಂಡುಕೊಂಡಿದ್ದರು.

ಪ್ರಧಾನ ಮಂತ್ರಿಯವರ ವೈಜ್ಞಾನಿಕ ಸಲಹಾ ಮಂಡಳಿ ಸೇರಿದಂತೆ ಹಲವಾರು ಸರ್ಕಾರಿ ಸಂಸ್ಥೆಗಳ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಗಾಡ್ಗೀಳ್ ಅವರು, ಭಾರತದ ಜೈವಿಕ ವೈವಿಧ್ಯತೆ ಕಾಯ್ದೆಯ ಪ್ರಮುಖ ಶಿಲ್ಪಿಗಳಲ್ಲಿ ಒಬ್ಬರಾಗಿದ್ದರು ಮತ್ತು ಅರಣ್ಯ ಹಕ್ಕುಗಳ ಕಾಯ್ದೆಯ ಅನುಷ್ಠಾನಕ್ಕೆ ಕೊಡುಗೆ ನೀಡಿದ್ದರು.

ಗಾಡ್ಗೀಳ್ ಭಾರತೀಯ ವಿಜ್ಞಾನ ಸಂಸ್ಥೆಯ ಪರಿಸರ ವಿಜ್ಞಾನ ಕೇಂದ್ರದ ಸ್ಥಾಪಕರೂ ಹೌದು, ಈ ಕೇಂದ್ರವು ದೇಶದ ಪ್ರಮುಖ ಪರಿಸರ ಸಂಶೋಧನಾ ಕೇಂದ್ರಗಳಲ್ಲಿ ಒಂದಾಗಿ ರೂಪುಗೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...